Homeಮುಖಪುಟಟಿಕೆಟ್‌ ಕೈತಪ್ಪಿದಕ್ಕೆ 'ಮತದಾನ' ಮಾಡದ ಬಿಜೆಪಿ ಸಂಸದ: ಶೋಕಾಸ್ ನೋಟಿಸ್ ಜಾರಿ

ಟಿಕೆಟ್‌ ಕೈತಪ್ಪಿದಕ್ಕೆ ‘ಮತದಾನ’ ಮಾಡದ ಬಿಜೆಪಿ ಸಂಸದ: ಶೋಕಾಸ್ ನೋಟಿಸ್ ಜಾರಿ

- Advertisement -
- Advertisement -

ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಜಯಂತ್ ಸಿನ್ಹಾ ಮತದಾನ ಮಾಡಲು ವಿಫಲರಾದ ಹಿನ್ನೆಲೆಯಲ್ಲಿ ಬಿಜೆಪಿ ಅವರ ವಿರುದ್ಧ ಕ್ರಮ ಕೈಗೊಂಡಿದ್ದು, ಎರಡು ದಿನಗಳಲ್ಲಿ ಉತ್ತರ ನೀಡುವಂತೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಜಾರ್ಖಂಡ್‌ನ ಹಜಾರಿಬಾಗ್ ಕ್ಷೇತ್ರದ ಹಾಲಿ ಸಂಸದರಾಗಿರುವ ಜಯಂತ್ ಸಿನ್ಹಾ ಬದಲಿಗೆ ಈ ಬಾರಿ ಮನೀಷ್ ಜೈಸ್ವಾಲ್ ಅವರಿಗೆ ಟಿಕೆಟ್‌ ನೀಡಲಾಗಿತ್ತು. ಇದರಿಂದ ಮುನಿಸಿಕೊಂಡಿದ್ದ ಜಯಂತ್ ಸಿನ್ಹಾ ಸಂಘಟನಾ ಕೆಲಸ ಮತ್ತು ಚುನಾವಣಾ ಪ್ರಚಾರದಲ್ಲಿ ಭಾಗವಹಿಸದೆ ದೂರ ಉಳಿದುಕೊಂಡು ಅಸಮಾಧಾನವನ್ನು ಹೊರಹಾಕಿದ್ದರು. ನಿನ್ನೆ ನಡೆದ ಚುನಾವಣೆಯಲ್ಲಿ ಕನಿಷ್ಠ ಪಕ್ಷ ಮತದಾನವನ್ನು ಕೂಡ ಅವರು ಮಾಡಿರಲಿಲ್ಲ. ಇದರಿಂದ ಬಿಜೆಪಿ ಇದೀಗ ಜಯಂತ್ ಸಿನ್ಹಾ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿ ನೊಟೀಸ್‌ ನೀಡಿದೆ.

‘ಹಜಾರಿಬಾಗ್ ಲೋಕಸಭಾ ಕ್ಷೇತ್ರದಿಂದ ಮನೀಶ್ ಜೈಸ್ವಾಲ್ ಅವರನ್ನು ಅಭ್ಯರ್ಥಿಯಾಗಿ ಪಕ್ಷ ಘೋಷಿಸಿದಾಗಿನಿಂದ ನೀವು ಸಂಘಟನಾ ಕೆಲಸ ಮತ್ತು ಚುನಾವಣಾ ಪ್ರಚಾರದಲ್ಲಿ ಆಸಕ್ತಿ ವಹಿಸಿಲ್ಲ. ನಿಮ್ಮ ಮತವನ್ನು ಚಲಾಯಿಸಬೇಕು ಎಂದು ನಿಮಗೆ ಅನಿಸಲಿಲ್ಲ. ನಿಮ್ಮ ನಡವಳಿಕೆಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದೆ’ ಎಂದು ಬಿಜೆಪಿ ಜಯಂತ್ ಸಿನ್ಹಾ ಅವರಿಗೆ ಕಳುಹಿಸಿದ ನೋಟಿಸ್‌ನಲ್ಲಿ ಹೇಳಿದೆ. ಈ ಬಗ್ಗೆ ಜಯಂತ್ ಸಿನ್ಹಾ ಅವರು ತಮ್ಮ ನಿಲುವನ್ನು ಎರಡು ದಿನಗಳಲ್ಲಿ ವಿವರಿಸುವಂತೆ ಸೂಚಿಸಲಾಗಿದೆ.

ಮಾರ್ಚ್ 2ರಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಜಯಂತ್ ಸಿನ್ಹಾ, ಭಾರತ ಮತ್ತು ವಿಶ್ವಾದ್ಯಂತ ಜಾಗತಿಕ ಹವಾಮಾನ ಬದಲಾವಣೆ ವಿರುದ್ಧದ ಹೋರಾಟದ ಬಗ್ಗೆ ಗಮನ ಹರಿಸಲು ಬಯಸಿರುವುದರಿಂದ ತಮ್ಮನ್ನು ಚುನಾವಣೆಗೆ ಸಂಬಂಧಿಸಿದ ನೇರ ಕರ್ತವ್ಯಗಳಿಂದ ಬಿಡುಗಡೆ ಮಾಡಬೇಕು ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಆಗ್ರಹಿಸಿದ್ದರು.

ಇದರ ಬೆನ್ನಲ್ಲಿ ಬಿಜೆಪಿ ಜೈಸ್ವಾಲ್ ಅವರನ್ನು ಜಾರ್ಖಂಡ್ ನ ಹಝಾರಿಬಾಗ್ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿ ಘೋಷಿಸಿತ್ತು. ಯಶ್ವಂತ್ ಸಿನ್ಹಾ ಹಾಗೂ ಅವರ ಪುತ್ರ ಜಯಂತ್ ಸಿನ್ಹಾ ಈ ಕ್ಷೇತ್ರಗಳನ್ನು ಮೊದಲು ಪ್ರತಿನಿಧಿಸಿದ್ದರು.

ನಿನ್ನೆ (ಮೇ 20) ಐದನೇ ಹಂತದ ಲೋಕಸಭಾ ಚುನಾವಣೆಯ ವೇಳೆ ಜಾರ್ಖಂಡ್‌ನ ಮೂರು ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಹಜಾರಿಬಾಗ್‌ನಲ್ಲಿ ಅತಿ ಹೆಚ್ಚು ಶೇಕಡಾ 64.32 ಮತದಾನವಾಗಿದೆ, ನಂತರ ಚತ್ರಾದಲ್ಲಿ 62.96 ಶೇಕಡಾ ಮತದಾನವಾಗಿದೆ ಮತ್ತು ಕೊಡೆರ್ಮಾದಲ್ಲಿ 61.86 ಶೇಕಡಾ ಮತದಾನವಾಗಿದೆ.

ಇದನ್ನು ಓದಿ: ಬಿಜೆಪಿ ವಿರುದ್ಧ ಕ್ರಮ ತೆಗೆದುಕೊಳ್ಳಲು ವಿಫಲ; ಚು.ಆಯೋಗವನ್ನು ತರಾಟೆಗೆ ತೆಗೆದುಕೊಂಡ ಕಲ್ಕತ್ತಾ ಹೈಕೋರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...