Homeಕರ್ನಾಟಕಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

- Advertisement -
- Advertisement -

“ಅವರೊಂದಿಗೆ ನಾನು ಎರಡು ಸಿನಿಮಾಗಳಲ್ಲಿ ಅಭಿನಯಿಸಿದ್ದೇನೆ. ಒಬ್ಬ ಮನುಷ್ಯ ಎಷ್ಟೊಂದು ಆಕರ್ಷಕ ಗುಣವನ್ನು ಹೊಂದಿರಬಲ್ಲ ಎಂಬುದನ್ನು ನೋಡಿದ್ದೇನೆ” ಎಂದು ಬಹುಭಾಷಾ ನಟಿ ಪಾರ್ವತಿ ತಿರುವೊತು ಹೇಳಿದ್ದಾರೆ.

ಮಿಲನ ಹಾಗೂ ಪೃಥ್ವಿ ಸಿನಿಮಾಗಳಲ್ಲಿ ಅಪ್ಪು ಅವರೊಂದಿಗೆ ನಾಯಕಿಯಾಗಿ ಅಭಿನಯಿಸಿದ್ದ ಮಲಯಾಳಂ ಚಿತ್ರರಂಗದ ಪ್ರಖ್ಯಾತ ನಟಿ ಪಾರ್ವತಿ ಅವರು ಅಪ್ಪು ಅವರೊಂದಿಗಿನ ಒಡನಾಟವನ್ನು ‘ದಿ ನ್ಯೂಸ್‌ ಮಿನಿಟ್‌’ನೊಂದಿಗೆ ಹಂಚಿಕೊಂಡಿದ್ದಾರೆ.

ಚಿತ್ರರಂಗದಲ್ಲಿ ಅಷ್ಟೇ ಅಲ್ಲದೆ ಜನಸಾಮಾನ್ಯರ ನಡುವೆ ವಿನಯವಂತರಾಗಿ ಬದುಕಿದ ಪುನೀತ್ ರಾಜ್‌ಕುಮಾರ್‌ ಅವರ ನೆನಪುಗಳು ಅಜರಾಮರವಾಗಿವೆ. ಅವರು ನಿಧನರಾದಾಗಿನಿಂದಲೂ ಅಭಿಮಾನಿಗಳು, ಕನ್ನಡ ಚಿತ್ರರಂಗ, ಬಹುಭಾಷೆಗಳ ನಟರು ದುಃಖ ತಪ್ತರಾಗಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ಮಲಯಾಳಂ ಚಿತ್ರರಂಗದ ಬಹುತೇಕ ನಟ, ನಟಿಯರು ತೀವ್ರ ಸಂತಾಪ ಸೂಚಿಸಿದ್ದು, ‘ದಿ ನ್ಯೂಸ್ ಮಿನಿಟ್‌’ ಜೊತೆ ಮಾತನಾಡಿರುವ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಪಾರ್ವತಿ ತಿರುವೊತು ಅವರು, ಪುನೀತ್‌ ರಾಜ್‌ಕುಮಾರ್‌ ಅವರನ್ನು ಮೊದಲ ಬಾರಿಗೆ ಭೇಟಿಯಾದ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ಸುಮಾರು 18 ವರ್ಷದವರಾಗಿದ್ದಾಗ ಮಿಲನ ಸಿನಿಮಾದ ಫೋಟೋಶೂಟ್‌ನಲ್ಲಿ ಪಾಲ್ಗೊಳ್ಳಲು ಹೋಗಿದ್ದಾಗ ಮೊದಲ ಬಾರಿಗೆ ಪುನೀತ್‌ ರಾಜ್‌ಕುಮಾರ್‌ ಅವರನ್ನು ಭೇಟಿಯಾದೆ ಎಂದಿದ್ದಾರೆ.

“ಸುಮಾರು 18-19 ವರ್ಷದವಳಾಗಿದ್ದಾಗ ಅವರನ್ನು ಮೊದಲ ಬಾರಿಗೆ ಭೇಟಿಯಾದೆ. ಮಿಲನ ಸಿನಿಮಾದ ಫೋಟೋ ಶೂಟ್‌ಗಾಗಿ ತೆರಳಿದ್ದಾಗ ಅವರು ಪರಿಚಯವಾದರು. ದಿಢೀರನೇ ಅವರು ಬಂದಾಗ, ‘ಅಪ್ಪು ಬಂದರು’, ‘ಅಪ್ಪು ಅಣ್ಣ ಬಂದರು’ ಎಂದರು. ಫೋಟೋಶೂಟ್‌ಗಾಗಿ ನನ್ನನ್ನು ಅವರು ಎಷ್ಟೊಂದು ಆರಾಮವಾಗಿಸಿದ್ದರು, ಸಿದ್ಧವಾಗಿಸಿದ್ದರು ಎಂಬುದನ್ನು ಈಗಲೂ ನೆನಪಿಸಿಕೊಳ್ಳಬಲ್ಲೆ” ಎಂದು ತಿಳಿಸಿದ್ದಾರೆ.

ಮಿಲನ ಸಿನಿಮಾದಲ್ಲಿ ಅಭಿನಯಿಸುವಾಗಿನ ಮತ್ತೊಂದು ಅನುಭವವನ್ನು ಹಂಚಿಕೊಂಡಿರುವ ಪಾರ್ವತಿ ಅವರು, “ಅವರು ತುಂಬಾ ನಗುತ್ತಿದ್ದರು. ಸಂಗತಿಗಳನ್ನು ಹಗುರಗೊಳಿಸಲು ಹೊಸ ದಾರಿಗಳನ್ನು ಹುಡುಕುತ್ತಿದ್ದರು. ಕಡಲು ಮತ್ತು ಶೀತಮಯ ಪ್ರದೇಶವಾದ ಸ್ವಿಡ್ಜರ್‌ಲ್ಯಾಂಡ್‌ನಲ್ಲಿ ಚಿತ್ರೀಕರಣ ನಡೆದಿತ್ತು. ಮತ್ತೊಂದು ಸಿನಿಮಾ ಪೃಥ್ವಿಯಲ್ಲಿ ನಾವು ಅಭಿನಯಿಸಿದೆವು” ಎಂದು ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿರಿ: ಪುನೀತ್‌ ಫಿಟ್‌ನೆಟ್‌‌: ಡಾ.ದೇವಿ ಶೆಟ್ಟಿ ಹೆಸರಲ್ಲಿ ಫೇಕ್‌ ನ್ಯೂಸ್‌ ಹರಿದಾಟ

ಸಿನಿಮಾ ಹಾಗೂ ನಿಜ ಜೀವನದ ಆತ್ಮೀಯನ್ನು ಸ್ಮರಿಸಿರುವ ಪಾರ್ವತಿ ಅವರು, “ಕನ್ನಡದೊಂದಿಗೆ ಅವರು ನನಗೆ ಅನೇಕ ಸಲ ಸಹಾಯ ಮಾಡುತ್ತಿದ್ದರು. ಆದರೆ ನಾವು ಬಹುತೇಕ ಸಮಯ ಸಿನಿಮಾ ಹಾಗೂ ನಿಜ ಜೀವನದ ಕುರಿತು ಮಾತುನಾಡುತ್ತಿದ್ದೆವು. ಸೆಟ್‌‌ನಲ್ಲಿ ಎಲ್ಲರಿಗೂ ಅವಕಾಶ ನೀಡಲು ಅವರು ಎಚ್ಚರಿಕೆ ವಹಿಸುತ್ತಿದ್ದರು. ಅವರು ಸಮಯಪ್ರಜ್ಞೆಗೆ ಆದ್ಯತೆ ನೀಡುತ್ತಿದ್ದರು.  ಇತರರನ್ನು ಪ್ರಾಮಾಣಿಕವಾಗಿ ಪರಿಶೀಲಿಸುತ್ತಿದ್ದರು. ಹಾಸ್ಯ ಚಟಾಕಿಗಳನ್ನು ಸಿಡಿಸುತ್ತಿದ್ದರು. ಹಾಡುಗಳು ಮತ್ತು ನೃತ್ಯಗಳನ್ನು ಪ್ರದರ್ಶಿಸಲು ನನಗೆ ತುಂಬಾ ಸಹಾಯ ಮಾಡಿದರು” ಎಂದಿದ್ದಾರೆ.

“ಅತ್ಯುತ್ತಮ ಮನುಷ್ಯ ಇಷ್ಟೊಂದು ಕ್ರಿಯಾಶೀಲವಾಗಿರಲು, ಪ್ರೀತಿಯಿಂದ ಕೂಡಿರಲು, ಸರಳವಾಗಿರಲು ಸಾಧ್ಯವೆಂದು ನನಗೆ ತಿಳಿಯದು. ಕೆಲವು ಕಾರಣಗಳಿಂದಾಗಿ ನಮ್ಮ ಚಿತ್ರಗಳ ಕೆಲವು ಹಾಡುಗಳನ್ನು Instagram ನಲ್ಲಿ ಹಂಚಿಕೊಳ್ಳಬೇಕು ಅನಿಸಿತು. ಅವರ ಜೊತೆ ಮತ್ತೆ ಕೆಲಸ ಮಾಡುವುದು ಎಷ್ಟು ಅದ್ಭುತ ಎಂದು ನಾಲ್ಕು ದಿನಗಳ ಹಿಂದೆ ಅನಿಸಿತು” ಎಂದು ಅವರು ಹೇಳಿದ್ದಾರೆ.

“ರಾಜ್‌ಕುಮಾರ್‌ ಅವರ ಕುಟುಂಬ ಪ್ರೇಕ್ಷಕರಿಂದ ಸಂಪಾದಿಸಿದ ಪ್ರೀತಿ ಇದೆಯಲ್ಲ- ಪ್ರೀತಿ, ಗೌರವ, ಅಭಿಮಾನ ಮತ್ತು ಎಲ್ಲರೂ ನಮ್ಮವರೆಂಬ ಭಾವನೆ- ನಾನು ಅದನ್ನು ಅರ್ಥಮಾಡಿಕೊಂಡೆ. ಪುನೀತ್‌ ಅವರೊಂದಿಗೆ ಎರಡು ಸಿನಿಮಾಗಳಲ್ಲಿ ನಾನು ಅಭಿನಯಿಸಿದ್ದೇನೆ. ಒಬ್ಬ ಮನುಷ್ಯ ಎಷ್ಟೊಂದು ಆಕರ್ಷಕ ವ್ಯಕ್ತಿಯಾಗಿರಬಲ್ಲ ಎಂದು ತಿಳಿದುಕೊಂಡೆ” ಎಂದಿದ್ದಾರೆ.

“ಕಲೆ, ಪ್ರಸಿದ್ಧಿ ಎಲ್ಲವನ್ನು ಸಹಜವಾಗಿ ಸ್ವೀಕರಿಸಿ ಪುನೀತ್ ರಾಜ್‌ಕುಮಾರ್‌ ನಡೆದರು” ಎಂದು ಪಾರ್ವತಿ ತಿಳಿಸಿದ್ದಾರೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...