Homeಕರ್ನಾಟಕಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

- Advertisement -
- Advertisement -

“ಅವರೊಂದಿಗೆ ನಾನು ಎರಡು ಸಿನಿಮಾಗಳಲ್ಲಿ ಅಭಿನಯಿಸಿದ್ದೇನೆ. ಒಬ್ಬ ಮನುಷ್ಯ ಎಷ್ಟೊಂದು ಆಕರ್ಷಕ ಗುಣವನ್ನು ಹೊಂದಿರಬಲ್ಲ ಎಂಬುದನ್ನು ನೋಡಿದ್ದೇನೆ” ಎಂದು ಬಹುಭಾಷಾ ನಟಿ ಪಾರ್ವತಿ ತಿರುವೊತು ಹೇಳಿದ್ದಾರೆ.

ಮಿಲನ ಹಾಗೂ ಪೃಥ್ವಿ ಸಿನಿಮಾಗಳಲ್ಲಿ ಅಪ್ಪು ಅವರೊಂದಿಗೆ ನಾಯಕಿಯಾಗಿ ಅಭಿನಯಿಸಿದ್ದ ಮಲಯಾಳಂ ಚಿತ್ರರಂಗದ ಪ್ರಖ್ಯಾತ ನಟಿ ಪಾರ್ವತಿ ಅವರು ಅಪ್ಪು ಅವರೊಂದಿಗಿನ ಒಡನಾಟವನ್ನು ‘ದಿ ನ್ಯೂಸ್‌ ಮಿನಿಟ್‌’ನೊಂದಿಗೆ ಹಂಚಿಕೊಂಡಿದ್ದಾರೆ.

ಚಿತ್ರರಂಗದಲ್ಲಿ ಅಷ್ಟೇ ಅಲ್ಲದೆ ಜನಸಾಮಾನ್ಯರ ನಡುವೆ ವಿನಯವಂತರಾಗಿ ಬದುಕಿದ ಪುನೀತ್ ರಾಜ್‌ಕುಮಾರ್‌ ಅವರ ನೆನಪುಗಳು ಅಜರಾಮರವಾಗಿವೆ. ಅವರು ನಿಧನರಾದಾಗಿನಿಂದಲೂ ಅಭಿಮಾನಿಗಳು, ಕನ್ನಡ ಚಿತ್ರರಂಗ, ಬಹುಭಾಷೆಗಳ ನಟರು ದುಃಖ ತಪ್ತರಾಗಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ಮಲಯಾಳಂ ಚಿತ್ರರಂಗದ ಬಹುತೇಕ ನಟ, ನಟಿಯರು ತೀವ್ರ ಸಂತಾಪ ಸೂಚಿಸಿದ್ದು, ‘ದಿ ನ್ಯೂಸ್ ಮಿನಿಟ್‌’ ಜೊತೆ ಮಾತನಾಡಿರುವ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಪಾರ್ವತಿ ತಿರುವೊತು ಅವರು, ಪುನೀತ್‌ ರಾಜ್‌ಕುಮಾರ್‌ ಅವರನ್ನು ಮೊದಲ ಬಾರಿಗೆ ಭೇಟಿಯಾದ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ಸುಮಾರು 18 ವರ್ಷದವರಾಗಿದ್ದಾಗ ಮಿಲನ ಸಿನಿಮಾದ ಫೋಟೋಶೂಟ್‌ನಲ್ಲಿ ಪಾಲ್ಗೊಳ್ಳಲು ಹೋಗಿದ್ದಾಗ ಮೊದಲ ಬಾರಿಗೆ ಪುನೀತ್‌ ರಾಜ್‌ಕುಮಾರ್‌ ಅವರನ್ನು ಭೇಟಿಯಾದೆ ಎಂದಿದ್ದಾರೆ.

“ಸುಮಾರು 18-19 ವರ್ಷದವಳಾಗಿದ್ದಾಗ ಅವರನ್ನು ಮೊದಲ ಬಾರಿಗೆ ಭೇಟಿಯಾದೆ. ಮಿಲನ ಸಿನಿಮಾದ ಫೋಟೋ ಶೂಟ್‌ಗಾಗಿ ತೆರಳಿದ್ದಾಗ ಅವರು ಪರಿಚಯವಾದರು. ದಿಢೀರನೇ ಅವರು ಬಂದಾಗ, ‘ಅಪ್ಪು ಬಂದರು’, ‘ಅಪ್ಪು ಅಣ್ಣ ಬಂದರು’ ಎಂದರು. ಫೋಟೋಶೂಟ್‌ಗಾಗಿ ನನ್ನನ್ನು ಅವರು ಎಷ್ಟೊಂದು ಆರಾಮವಾಗಿಸಿದ್ದರು, ಸಿದ್ಧವಾಗಿಸಿದ್ದರು ಎಂಬುದನ್ನು ಈಗಲೂ ನೆನಪಿಸಿಕೊಳ್ಳಬಲ್ಲೆ” ಎಂದು ತಿಳಿಸಿದ್ದಾರೆ.

ಮಿಲನ ಸಿನಿಮಾದಲ್ಲಿ ಅಭಿನಯಿಸುವಾಗಿನ ಮತ್ತೊಂದು ಅನುಭವವನ್ನು ಹಂಚಿಕೊಂಡಿರುವ ಪಾರ್ವತಿ ಅವರು, “ಅವರು ತುಂಬಾ ನಗುತ್ತಿದ್ದರು. ಸಂಗತಿಗಳನ್ನು ಹಗುರಗೊಳಿಸಲು ಹೊಸ ದಾರಿಗಳನ್ನು ಹುಡುಕುತ್ತಿದ್ದರು. ಕಡಲು ಮತ್ತು ಶೀತಮಯ ಪ್ರದೇಶವಾದ ಸ್ವಿಡ್ಜರ್‌ಲ್ಯಾಂಡ್‌ನಲ್ಲಿ ಚಿತ್ರೀಕರಣ ನಡೆದಿತ್ತು. ಮತ್ತೊಂದು ಸಿನಿಮಾ ಪೃಥ್ವಿಯಲ್ಲಿ ನಾವು ಅಭಿನಯಿಸಿದೆವು” ಎಂದು ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿರಿ: ಪುನೀತ್‌ ಫಿಟ್‌ನೆಟ್‌‌: ಡಾ.ದೇವಿ ಶೆಟ್ಟಿ ಹೆಸರಲ್ಲಿ ಫೇಕ್‌ ನ್ಯೂಸ್‌ ಹರಿದಾಟ

ಸಿನಿಮಾ ಹಾಗೂ ನಿಜ ಜೀವನದ ಆತ್ಮೀಯನ್ನು ಸ್ಮರಿಸಿರುವ ಪಾರ್ವತಿ ಅವರು, “ಕನ್ನಡದೊಂದಿಗೆ ಅವರು ನನಗೆ ಅನೇಕ ಸಲ ಸಹಾಯ ಮಾಡುತ್ತಿದ್ದರು. ಆದರೆ ನಾವು ಬಹುತೇಕ ಸಮಯ ಸಿನಿಮಾ ಹಾಗೂ ನಿಜ ಜೀವನದ ಕುರಿತು ಮಾತುನಾಡುತ್ತಿದ್ದೆವು. ಸೆಟ್‌‌ನಲ್ಲಿ ಎಲ್ಲರಿಗೂ ಅವಕಾಶ ನೀಡಲು ಅವರು ಎಚ್ಚರಿಕೆ ವಹಿಸುತ್ತಿದ್ದರು. ಅವರು ಸಮಯಪ್ರಜ್ಞೆಗೆ ಆದ್ಯತೆ ನೀಡುತ್ತಿದ್ದರು.  ಇತರರನ್ನು ಪ್ರಾಮಾಣಿಕವಾಗಿ ಪರಿಶೀಲಿಸುತ್ತಿದ್ದರು. ಹಾಸ್ಯ ಚಟಾಕಿಗಳನ್ನು ಸಿಡಿಸುತ್ತಿದ್ದರು. ಹಾಡುಗಳು ಮತ್ತು ನೃತ್ಯಗಳನ್ನು ಪ್ರದರ್ಶಿಸಲು ನನಗೆ ತುಂಬಾ ಸಹಾಯ ಮಾಡಿದರು” ಎಂದಿದ್ದಾರೆ.

“ಅತ್ಯುತ್ತಮ ಮನುಷ್ಯ ಇಷ್ಟೊಂದು ಕ್ರಿಯಾಶೀಲವಾಗಿರಲು, ಪ್ರೀತಿಯಿಂದ ಕೂಡಿರಲು, ಸರಳವಾಗಿರಲು ಸಾಧ್ಯವೆಂದು ನನಗೆ ತಿಳಿಯದು. ಕೆಲವು ಕಾರಣಗಳಿಂದಾಗಿ ನಮ್ಮ ಚಿತ್ರಗಳ ಕೆಲವು ಹಾಡುಗಳನ್ನು Instagram ನಲ್ಲಿ ಹಂಚಿಕೊಳ್ಳಬೇಕು ಅನಿಸಿತು. ಅವರ ಜೊತೆ ಮತ್ತೆ ಕೆಲಸ ಮಾಡುವುದು ಎಷ್ಟು ಅದ್ಭುತ ಎಂದು ನಾಲ್ಕು ದಿನಗಳ ಹಿಂದೆ ಅನಿಸಿತು” ಎಂದು ಅವರು ಹೇಳಿದ್ದಾರೆ.

“ರಾಜ್‌ಕುಮಾರ್‌ ಅವರ ಕುಟುಂಬ ಪ್ರೇಕ್ಷಕರಿಂದ ಸಂಪಾದಿಸಿದ ಪ್ರೀತಿ ಇದೆಯಲ್ಲ- ಪ್ರೀತಿ, ಗೌರವ, ಅಭಿಮಾನ ಮತ್ತು ಎಲ್ಲರೂ ನಮ್ಮವರೆಂಬ ಭಾವನೆ- ನಾನು ಅದನ್ನು ಅರ್ಥಮಾಡಿಕೊಂಡೆ. ಪುನೀತ್‌ ಅವರೊಂದಿಗೆ ಎರಡು ಸಿನಿಮಾಗಳಲ್ಲಿ ನಾನು ಅಭಿನಯಿಸಿದ್ದೇನೆ. ಒಬ್ಬ ಮನುಷ್ಯ ಎಷ್ಟೊಂದು ಆಕರ್ಷಕ ವ್ಯಕ್ತಿಯಾಗಿರಬಲ್ಲ ಎಂದು ತಿಳಿದುಕೊಂಡೆ” ಎಂದಿದ್ದಾರೆ.

“ಕಲೆ, ಪ್ರಸಿದ್ಧಿ ಎಲ್ಲವನ್ನು ಸಹಜವಾಗಿ ಸ್ವೀಕರಿಸಿ ಪುನೀತ್ ರಾಜ್‌ಕುಮಾರ್‌ ನಡೆದರು” ಎಂದು ಪಾರ್ವತಿ ತಿಳಿಸಿದ್ದಾರೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...