Homeಕರ್ನಾಟಕಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

- Advertisement -
- Advertisement -

“ಅವರೊಂದಿಗೆ ನಾನು ಎರಡು ಸಿನಿಮಾಗಳಲ್ಲಿ ಅಭಿನಯಿಸಿದ್ದೇನೆ. ಒಬ್ಬ ಮನುಷ್ಯ ಎಷ್ಟೊಂದು ಆಕರ್ಷಕ ಗುಣವನ್ನು ಹೊಂದಿರಬಲ್ಲ ಎಂಬುದನ್ನು ನೋಡಿದ್ದೇನೆ” ಎಂದು ಬಹುಭಾಷಾ ನಟಿ ಪಾರ್ವತಿ ತಿರುವೊತು ಹೇಳಿದ್ದಾರೆ.

ಮಿಲನ ಹಾಗೂ ಪೃಥ್ವಿ ಸಿನಿಮಾಗಳಲ್ಲಿ ಅಪ್ಪು ಅವರೊಂದಿಗೆ ನಾಯಕಿಯಾಗಿ ಅಭಿನಯಿಸಿದ್ದ ಮಲಯಾಳಂ ಚಿತ್ರರಂಗದ ಪ್ರಖ್ಯಾತ ನಟಿ ಪಾರ್ವತಿ ಅವರು ಅಪ್ಪು ಅವರೊಂದಿಗಿನ ಒಡನಾಟವನ್ನು ‘ದಿ ನ್ಯೂಸ್‌ ಮಿನಿಟ್‌’ನೊಂದಿಗೆ ಹಂಚಿಕೊಂಡಿದ್ದಾರೆ.

ಚಿತ್ರರಂಗದಲ್ಲಿ ಅಷ್ಟೇ ಅಲ್ಲದೆ ಜನಸಾಮಾನ್ಯರ ನಡುವೆ ವಿನಯವಂತರಾಗಿ ಬದುಕಿದ ಪುನೀತ್ ರಾಜ್‌ಕುಮಾರ್‌ ಅವರ ನೆನಪುಗಳು ಅಜರಾಮರವಾಗಿವೆ. ಅವರು ನಿಧನರಾದಾಗಿನಿಂದಲೂ ಅಭಿಮಾನಿಗಳು, ಕನ್ನಡ ಚಿತ್ರರಂಗ, ಬಹುಭಾಷೆಗಳ ನಟರು ದುಃಖ ತಪ್ತರಾಗಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ಮಲಯಾಳಂ ಚಿತ್ರರಂಗದ ಬಹುತೇಕ ನಟ, ನಟಿಯರು ತೀವ್ರ ಸಂತಾಪ ಸೂಚಿಸಿದ್ದು, ‘ದಿ ನ್ಯೂಸ್ ಮಿನಿಟ್‌’ ಜೊತೆ ಮಾತನಾಡಿರುವ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಪಾರ್ವತಿ ತಿರುವೊತು ಅವರು, ಪುನೀತ್‌ ರಾಜ್‌ಕುಮಾರ್‌ ಅವರನ್ನು ಮೊದಲ ಬಾರಿಗೆ ಭೇಟಿಯಾದ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ಸುಮಾರು 18 ವರ್ಷದವರಾಗಿದ್ದಾಗ ಮಿಲನ ಸಿನಿಮಾದ ಫೋಟೋಶೂಟ್‌ನಲ್ಲಿ ಪಾಲ್ಗೊಳ್ಳಲು ಹೋಗಿದ್ದಾಗ ಮೊದಲ ಬಾರಿಗೆ ಪುನೀತ್‌ ರಾಜ್‌ಕುಮಾರ್‌ ಅವರನ್ನು ಭೇಟಿಯಾದೆ ಎಂದಿದ್ದಾರೆ.

“ಸುಮಾರು 18-19 ವರ್ಷದವಳಾಗಿದ್ದಾಗ ಅವರನ್ನು ಮೊದಲ ಬಾರಿಗೆ ಭೇಟಿಯಾದೆ. ಮಿಲನ ಸಿನಿಮಾದ ಫೋಟೋ ಶೂಟ್‌ಗಾಗಿ ತೆರಳಿದ್ದಾಗ ಅವರು ಪರಿಚಯವಾದರು. ದಿಢೀರನೇ ಅವರು ಬಂದಾಗ, ‘ಅಪ್ಪು ಬಂದರು’, ‘ಅಪ್ಪು ಅಣ್ಣ ಬಂದರು’ ಎಂದರು. ಫೋಟೋಶೂಟ್‌ಗಾಗಿ ನನ್ನನ್ನು ಅವರು ಎಷ್ಟೊಂದು ಆರಾಮವಾಗಿಸಿದ್ದರು, ಸಿದ್ಧವಾಗಿಸಿದ್ದರು ಎಂಬುದನ್ನು ಈಗಲೂ ನೆನಪಿಸಿಕೊಳ್ಳಬಲ್ಲೆ” ಎಂದು ತಿಳಿಸಿದ್ದಾರೆ.

ಮಿಲನ ಸಿನಿಮಾದಲ್ಲಿ ಅಭಿನಯಿಸುವಾಗಿನ ಮತ್ತೊಂದು ಅನುಭವವನ್ನು ಹಂಚಿಕೊಂಡಿರುವ ಪಾರ್ವತಿ ಅವರು, “ಅವರು ತುಂಬಾ ನಗುತ್ತಿದ್ದರು. ಸಂಗತಿಗಳನ್ನು ಹಗುರಗೊಳಿಸಲು ಹೊಸ ದಾರಿಗಳನ್ನು ಹುಡುಕುತ್ತಿದ್ದರು. ಕಡಲು ಮತ್ತು ಶೀತಮಯ ಪ್ರದೇಶವಾದ ಸ್ವಿಡ್ಜರ್‌ಲ್ಯಾಂಡ್‌ನಲ್ಲಿ ಚಿತ್ರೀಕರಣ ನಡೆದಿತ್ತು. ಮತ್ತೊಂದು ಸಿನಿಮಾ ಪೃಥ್ವಿಯಲ್ಲಿ ನಾವು ಅಭಿನಯಿಸಿದೆವು” ಎಂದು ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿರಿ: ಪುನೀತ್‌ ಫಿಟ್‌ನೆಟ್‌‌: ಡಾ.ದೇವಿ ಶೆಟ್ಟಿ ಹೆಸರಲ್ಲಿ ಫೇಕ್‌ ನ್ಯೂಸ್‌ ಹರಿದಾಟ

ಸಿನಿಮಾ ಹಾಗೂ ನಿಜ ಜೀವನದ ಆತ್ಮೀಯನ್ನು ಸ್ಮರಿಸಿರುವ ಪಾರ್ವತಿ ಅವರು, “ಕನ್ನಡದೊಂದಿಗೆ ಅವರು ನನಗೆ ಅನೇಕ ಸಲ ಸಹಾಯ ಮಾಡುತ್ತಿದ್ದರು. ಆದರೆ ನಾವು ಬಹುತೇಕ ಸಮಯ ಸಿನಿಮಾ ಹಾಗೂ ನಿಜ ಜೀವನದ ಕುರಿತು ಮಾತುನಾಡುತ್ತಿದ್ದೆವು. ಸೆಟ್‌‌ನಲ್ಲಿ ಎಲ್ಲರಿಗೂ ಅವಕಾಶ ನೀಡಲು ಅವರು ಎಚ್ಚರಿಕೆ ವಹಿಸುತ್ತಿದ್ದರು. ಅವರು ಸಮಯಪ್ರಜ್ಞೆಗೆ ಆದ್ಯತೆ ನೀಡುತ್ತಿದ್ದರು.  ಇತರರನ್ನು ಪ್ರಾಮಾಣಿಕವಾಗಿ ಪರಿಶೀಲಿಸುತ್ತಿದ್ದರು. ಹಾಸ್ಯ ಚಟಾಕಿಗಳನ್ನು ಸಿಡಿಸುತ್ತಿದ್ದರು. ಹಾಡುಗಳು ಮತ್ತು ನೃತ್ಯಗಳನ್ನು ಪ್ರದರ್ಶಿಸಲು ನನಗೆ ತುಂಬಾ ಸಹಾಯ ಮಾಡಿದರು” ಎಂದಿದ್ದಾರೆ.

“ಅತ್ಯುತ್ತಮ ಮನುಷ್ಯ ಇಷ್ಟೊಂದು ಕ್ರಿಯಾಶೀಲವಾಗಿರಲು, ಪ್ರೀತಿಯಿಂದ ಕೂಡಿರಲು, ಸರಳವಾಗಿರಲು ಸಾಧ್ಯವೆಂದು ನನಗೆ ತಿಳಿಯದು. ಕೆಲವು ಕಾರಣಗಳಿಂದಾಗಿ ನಮ್ಮ ಚಿತ್ರಗಳ ಕೆಲವು ಹಾಡುಗಳನ್ನು Instagram ನಲ್ಲಿ ಹಂಚಿಕೊಳ್ಳಬೇಕು ಅನಿಸಿತು. ಅವರ ಜೊತೆ ಮತ್ತೆ ಕೆಲಸ ಮಾಡುವುದು ಎಷ್ಟು ಅದ್ಭುತ ಎಂದು ನಾಲ್ಕು ದಿನಗಳ ಹಿಂದೆ ಅನಿಸಿತು” ಎಂದು ಅವರು ಹೇಳಿದ್ದಾರೆ.

“ರಾಜ್‌ಕುಮಾರ್‌ ಅವರ ಕುಟುಂಬ ಪ್ರೇಕ್ಷಕರಿಂದ ಸಂಪಾದಿಸಿದ ಪ್ರೀತಿ ಇದೆಯಲ್ಲ- ಪ್ರೀತಿ, ಗೌರವ, ಅಭಿಮಾನ ಮತ್ತು ಎಲ್ಲರೂ ನಮ್ಮವರೆಂಬ ಭಾವನೆ- ನಾನು ಅದನ್ನು ಅರ್ಥಮಾಡಿಕೊಂಡೆ. ಪುನೀತ್‌ ಅವರೊಂದಿಗೆ ಎರಡು ಸಿನಿಮಾಗಳಲ್ಲಿ ನಾನು ಅಭಿನಯಿಸಿದ್ದೇನೆ. ಒಬ್ಬ ಮನುಷ್ಯ ಎಷ್ಟೊಂದು ಆಕರ್ಷಕ ವ್ಯಕ್ತಿಯಾಗಿರಬಲ್ಲ ಎಂದು ತಿಳಿದುಕೊಂಡೆ” ಎಂದಿದ್ದಾರೆ.

“ಕಲೆ, ಪ್ರಸಿದ್ಧಿ ಎಲ್ಲವನ್ನು ಸಹಜವಾಗಿ ಸ್ವೀಕರಿಸಿ ಪುನೀತ್ ರಾಜ್‌ಕುಮಾರ್‌ ನಡೆದರು” ಎಂದು ಪಾರ್ವತಿ ತಿಳಿಸಿದ್ದಾರೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...