Homeಕರ್ನಾಟಕಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

- Advertisement -
- Advertisement -

“ಅವರೊಂದಿಗೆ ನಾನು ಎರಡು ಸಿನಿಮಾಗಳಲ್ಲಿ ಅಭಿನಯಿಸಿದ್ದೇನೆ. ಒಬ್ಬ ಮನುಷ್ಯ ಎಷ್ಟೊಂದು ಆಕರ್ಷಕ ಗುಣವನ್ನು ಹೊಂದಿರಬಲ್ಲ ಎಂಬುದನ್ನು ನೋಡಿದ್ದೇನೆ” ಎಂದು ಬಹುಭಾಷಾ ನಟಿ ಪಾರ್ವತಿ ತಿರುವೊತು ಹೇಳಿದ್ದಾರೆ.

ಮಿಲನ ಹಾಗೂ ಪೃಥ್ವಿ ಸಿನಿಮಾಗಳಲ್ಲಿ ಅಪ್ಪು ಅವರೊಂದಿಗೆ ನಾಯಕಿಯಾಗಿ ಅಭಿನಯಿಸಿದ್ದ ಮಲಯಾಳಂ ಚಿತ್ರರಂಗದ ಪ್ರಖ್ಯಾತ ನಟಿ ಪಾರ್ವತಿ ಅವರು ಅಪ್ಪು ಅವರೊಂದಿಗಿನ ಒಡನಾಟವನ್ನು ‘ದಿ ನ್ಯೂಸ್‌ ಮಿನಿಟ್‌’ನೊಂದಿಗೆ ಹಂಚಿಕೊಂಡಿದ್ದಾರೆ.

ಚಿತ್ರರಂಗದಲ್ಲಿ ಅಷ್ಟೇ ಅಲ್ಲದೆ ಜನಸಾಮಾನ್ಯರ ನಡುವೆ ವಿನಯವಂತರಾಗಿ ಬದುಕಿದ ಪುನೀತ್ ರಾಜ್‌ಕುಮಾರ್‌ ಅವರ ನೆನಪುಗಳು ಅಜರಾಮರವಾಗಿವೆ. ಅವರು ನಿಧನರಾದಾಗಿನಿಂದಲೂ ಅಭಿಮಾನಿಗಳು, ಕನ್ನಡ ಚಿತ್ರರಂಗ, ಬಹುಭಾಷೆಗಳ ನಟರು ದುಃಖ ತಪ್ತರಾಗಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ಮಲಯಾಳಂ ಚಿತ್ರರಂಗದ ಬಹುತೇಕ ನಟ, ನಟಿಯರು ತೀವ್ರ ಸಂತಾಪ ಸೂಚಿಸಿದ್ದು, ‘ದಿ ನ್ಯೂಸ್ ಮಿನಿಟ್‌’ ಜೊತೆ ಮಾತನಾಡಿರುವ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಪಾರ್ವತಿ ತಿರುವೊತು ಅವರು, ಪುನೀತ್‌ ರಾಜ್‌ಕುಮಾರ್‌ ಅವರನ್ನು ಮೊದಲ ಬಾರಿಗೆ ಭೇಟಿಯಾದ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ಸುಮಾರು 18 ವರ್ಷದವರಾಗಿದ್ದಾಗ ಮಿಲನ ಸಿನಿಮಾದ ಫೋಟೋಶೂಟ್‌ನಲ್ಲಿ ಪಾಲ್ಗೊಳ್ಳಲು ಹೋಗಿದ್ದಾಗ ಮೊದಲ ಬಾರಿಗೆ ಪುನೀತ್‌ ರಾಜ್‌ಕುಮಾರ್‌ ಅವರನ್ನು ಭೇಟಿಯಾದೆ ಎಂದಿದ್ದಾರೆ.

“ಸುಮಾರು 18-19 ವರ್ಷದವಳಾಗಿದ್ದಾಗ ಅವರನ್ನು ಮೊದಲ ಬಾರಿಗೆ ಭೇಟಿಯಾದೆ. ಮಿಲನ ಸಿನಿಮಾದ ಫೋಟೋ ಶೂಟ್‌ಗಾಗಿ ತೆರಳಿದ್ದಾಗ ಅವರು ಪರಿಚಯವಾದರು. ದಿಢೀರನೇ ಅವರು ಬಂದಾಗ, ‘ಅಪ್ಪು ಬಂದರು’, ‘ಅಪ್ಪು ಅಣ್ಣ ಬಂದರು’ ಎಂದರು. ಫೋಟೋಶೂಟ್‌ಗಾಗಿ ನನ್ನನ್ನು ಅವರು ಎಷ್ಟೊಂದು ಆರಾಮವಾಗಿಸಿದ್ದರು, ಸಿದ್ಧವಾಗಿಸಿದ್ದರು ಎಂಬುದನ್ನು ಈಗಲೂ ನೆನಪಿಸಿಕೊಳ್ಳಬಲ್ಲೆ” ಎಂದು ತಿಳಿಸಿದ್ದಾರೆ.

ಮಿಲನ ಸಿನಿಮಾದಲ್ಲಿ ಅಭಿನಯಿಸುವಾಗಿನ ಮತ್ತೊಂದು ಅನುಭವವನ್ನು ಹಂಚಿಕೊಂಡಿರುವ ಪಾರ್ವತಿ ಅವರು, “ಅವರು ತುಂಬಾ ನಗುತ್ತಿದ್ದರು. ಸಂಗತಿಗಳನ್ನು ಹಗುರಗೊಳಿಸಲು ಹೊಸ ದಾರಿಗಳನ್ನು ಹುಡುಕುತ್ತಿದ್ದರು. ಕಡಲು ಮತ್ತು ಶೀತಮಯ ಪ್ರದೇಶವಾದ ಸ್ವಿಡ್ಜರ್‌ಲ್ಯಾಂಡ್‌ನಲ್ಲಿ ಚಿತ್ರೀಕರಣ ನಡೆದಿತ್ತು. ಮತ್ತೊಂದು ಸಿನಿಮಾ ಪೃಥ್ವಿಯಲ್ಲಿ ನಾವು ಅಭಿನಯಿಸಿದೆವು” ಎಂದು ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿರಿ: ಪುನೀತ್‌ ಫಿಟ್‌ನೆಟ್‌‌: ಡಾ.ದೇವಿ ಶೆಟ್ಟಿ ಹೆಸರಲ್ಲಿ ಫೇಕ್‌ ನ್ಯೂಸ್‌ ಹರಿದಾಟ

ಸಿನಿಮಾ ಹಾಗೂ ನಿಜ ಜೀವನದ ಆತ್ಮೀಯನ್ನು ಸ್ಮರಿಸಿರುವ ಪಾರ್ವತಿ ಅವರು, “ಕನ್ನಡದೊಂದಿಗೆ ಅವರು ನನಗೆ ಅನೇಕ ಸಲ ಸಹಾಯ ಮಾಡುತ್ತಿದ್ದರು. ಆದರೆ ನಾವು ಬಹುತೇಕ ಸಮಯ ಸಿನಿಮಾ ಹಾಗೂ ನಿಜ ಜೀವನದ ಕುರಿತು ಮಾತುನಾಡುತ್ತಿದ್ದೆವು. ಸೆಟ್‌‌ನಲ್ಲಿ ಎಲ್ಲರಿಗೂ ಅವಕಾಶ ನೀಡಲು ಅವರು ಎಚ್ಚರಿಕೆ ವಹಿಸುತ್ತಿದ್ದರು. ಅವರು ಸಮಯಪ್ರಜ್ಞೆಗೆ ಆದ್ಯತೆ ನೀಡುತ್ತಿದ್ದರು.  ಇತರರನ್ನು ಪ್ರಾಮಾಣಿಕವಾಗಿ ಪರಿಶೀಲಿಸುತ್ತಿದ್ದರು. ಹಾಸ್ಯ ಚಟಾಕಿಗಳನ್ನು ಸಿಡಿಸುತ್ತಿದ್ದರು. ಹಾಡುಗಳು ಮತ್ತು ನೃತ್ಯಗಳನ್ನು ಪ್ರದರ್ಶಿಸಲು ನನಗೆ ತುಂಬಾ ಸಹಾಯ ಮಾಡಿದರು” ಎಂದಿದ್ದಾರೆ.

“ಅತ್ಯುತ್ತಮ ಮನುಷ್ಯ ಇಷ್ಟೊಂದು ಕ್ರಿಯಾಶೀಲವಾಗಿರಲು, ಪ್ರೀತಿಯಿಂದ ಕೂಡಿರಲು, ಸರಳವಾಗಿರಲು ಸಾಧ್ಯವೆಂದು ನನಗೆ ತಿಳಿಯದು. ಕೆಲವು ಕಾರಣಗಳಿಂದಾಗಿ ನಮ್ಮ ಚಿತ್ರಗಳ ಕೆಲವು ಹಾಡುಗಳನ್ನು Instagram ನಲ್ಲಿ ಹಂಚಿಕೊಳ್ಳಬೇಕು ಅನಿಸಿತು. ಅವರ ಜೊತೆ ಮತ್ತೆ ಕೆಲಸ ಮಾಡುವುದು ಎಷ್ಟು ಅದ್ಭುತ ಎಂದು ನಾಲ್ಕು ದಿನಗಳ ಹಿಂದೆ ಅನಿಸಿತು” ಎಂದು ಅವರು ಹೇಳಿದ್ದಾರೆ.

“ರಾಜ್‌ಕುಮಾರ್‌ ಅವರ ಕುಟುಂಬ ಪ್ರೇಕ್ಷಕರಿಂದ ಸಂಪಾದಿಸಿದ ಪ್ರೀತಿ ಇದೆಯಲ್ಲ- ಪ್ರೀತಿ, ಗೌರವ, ಅಭಿಮಾನ ಮತ್ತು ಎಲ್ಲರೂ ನಮ್ಮವರೆಂಬ ಭಾವನೆ- ನಾನು ಅದನ್ನು ಅರ್ಥಮಾಡಿಕೊಂಡೆ. ಪುನೀತ್‌ ಅವರೊಂದಿಗೆ ಎರಡು ಸಿನಿಮಾಗಳಲ್ಲಿ ನಾನು ಅಭಿನಯಿಸಿದ್ದೇನೆ. ಒಬ್ಬ ಮನುಷ್ಯ ಎಷ್ಟೊಂದು ಆಕರ್ಷಕ ವ್ಯಕ್ತಿಯಾಗಿರಬಲ್ಲ ಎಂದು ತಿಳಿದುಕೊಂಡೆ” ಎಂದಿದ್ದಾರೆ.

“ಕಲೆ, ಪ್ರಸಿದ್ಧಿ ಎಲ್ಲವನ್ನು ಸಹಜವಾಗಿ ಸ್ವೀಕರಿಸಿ ಪುನೀತ್ ರಾಜ್‌ಕುಮಾರ್‌ ನಡೆದರು” ಎಂದು ಪಾರ್ವತಿ ತಿಳಿಸಿದ್ದಾರೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...