Homeಕರ್ನಾಟಕಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

- Advertisement -
- Advertisement -

“ಅವರೊಂದಿಗೆ ನಾನು ಎರಡು ಸಿನಿಮಾಗಳಲ್ಲಿ ಅಭಿನಯಿಸಿದ್ದೇನೆ. ಒಬ್ಬ ಮನುಷ್ಯ ಎಷ್ಟೊಂದು ಆಕರ್ಷಕ ಗುಣವನ್ನು ಹೊಂದಿರಬಲ್ಲ ಎಂಬುದನ್ನು ನೋಡಿದ್ದೇನೆ” ಎಂದು ಬಹುಭಾಷಾ ನಟಿ ಪಾರ್ವತಿ ತಿರುವೊತು ಹೇಳಿದ್ದಾರೆ.

ಮಿಲನ ಹಾಗೂ ಪೃಥ್ವಿ ಸಿನಿಮಾಗಳಲ್ಲಿ ಅಪ್ಪು ಅವರೊಂದಿಗೆ ನಾಯಕಿಯಾಗಿ ಅಭಿನಯಿಸಿದ್ದ ಮಲಯಾಳಂ ಚಿತ್ರರಂಗದ ಪ್ರಖ್ಯಾತ ನಟಿ ಪಾರ್ವತಿ ಅವರು ಅಪ್ಪು ಅವರೊಂದಿಗಿನ ಒಡನಾಟವನ್ನು ‘ದಿ ನ್ಯೂಸ್‌ ಮಿನಿಟ್‌’ನೊಂದಿಗೆ ಹಂಚಿಕೊಂಡಿದ್ದಾರೆ.

ಚಿತ್ರರಂಗದಲ್ಲಿ ಅಷ್ಟೇ ಅಲ್ಲದೆ ಜನಸಾಮಾನ್ಯರ ನಡುವೆ ವಿನಯವಂತರಾಗಿ ಬದುಕಿದ ಪುನೀತ್ ರಾಜ್‌ಕುಮಾರ್‌ ಅವರ ನೆನಪುಗಳು ಅಜರಾಮರವಾಗಿವೆ. ಅವರು ನಿಧನರಾದಾಗಿನಿಂದಲೂ ಅಭಿಮಾನಿಗಳು, ಕನ್ನಡ ಚಿತ್ರರಂಗ, ಬಹುಭಾಷೆಗಳ ನಟರು ದುಃಖ ತಪ್ತರಾಗಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ಮಲಯಾಳಂ ಚಿತ್ರರಂಗದ ಬಹುತೇಕ ನಟ, ನಟಿಯರು ತೀವ್ರ ಸಂತಾಪ ಸೂಚಿಸಿದ್ದು, ‘ದಿ ನ್ಯೂಸ್ ಮಿನಿಟ್‌’ ಜೊತೆ ಮಾತನಾಡಿರುವ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಪಾರ್ವತಿ ತಿರುವೊತು ಅವರು, ಪುನೀತ್‌ ರಾಜ್‌ಕುಮಾರ್‌ ಅವರನ್ನು ಮೊದಲ ಬಾರಿಗೆ ಭೇಟಿಯಾದ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ಸುಮಾರು 18 ವರ್ಷದವರಾಗಿದ್ದಾಗ ಮಿಲನ ಸಿನಿಮಾದ ಫೋಟೋಶೂಟ್‌ನಲ್ಲಿ ಪಾಲ್ಗೊಳ್ಳಲು ಹೋಗಿದ್ದಾಗ ಮೊದಲ ಬಾರಿಗೆ ಪುನೀತ್‌ ರಾಜ್‌ಕುಮಾರ್‌ ಅವರನ್ನು ಭೇಟಿಯಾದೆ ಎಂದಿದ್ದಾರೆ.

“ಸುಮಾರು 18-19 ವರ್ಷದವಳಾಗಿದ್ದಾಗ ಅವರನ್ನು ಮೊದಲ ಬಾರಿಗೆ ಭೇಟಿಯಾದೆ. ಮಿಲನ ಸಿನಿಮಾದ ಫೋಟೋ ಶೂಟ್‌ಗಾಗಿ ತೆರಳಿದ್ದಾಗ ಅವರು ಪರಿಚಯವಾದರು. ದಿಢೀರನೇ ಅವರು ಬಂದಾಗ, ‘ಅಪ್ಪು ಬಂದರು’, ‘ಅಪ್ಪು ಅಣ್ಣ ಬಂದರು’ ಎಂದರು. ಫೋಟೋಶೂಟ್‌ಗಾಗಿ ನನ್ನನ್ನು ಅವರು ಎಷ್ಟೊಂದು ಆರಾಮವಾಗಿಸಿದ್ದರು, ಸಿದ್ಧವಾಗಿಸಿದ್ದರು ಎಂಬುದನ್ನು ಈಗಲೂ ನೆನಪಿಸಿಕೊಳ್ಳಬಲ್ಲೆ” ಎಂದು ತಿಳಿಸಿದ್ದಾರೆ.

ಮಿಲನ ಸಿನಿಮಾದಲ್ಲಿ ಅಭಿನಯಿಸುವಾಗಿನ ಮತ್ತೊಂದು ಅನುಭವವನ್ನು ಹಂಚಿಕೊಂಡಿರುವ ಪಾರ್ವತಿ ಅವರು, “ಅವರು ತುಂಬಾ ನಗುತ್ತಿದ್ದರು. ಸಂಗತಿಗಳನ್ನು ಹಗುರಗೊಳಿಸಲು ಹೊಸ ದಾರಿಗಳನ್ನು ಹುಡುಕುತ್ತಿದ್ದರು. ಕಡಲು ಮತ್ತು ಶೀತಮಯ ಪ್ರದೇಶವಾದ ಸ್ವಿಡ್ಜರ್‌ಲ್ಯಾಂಡ್‌ನಲ್ಲಿ ಚಿತ್ರೀಕರಣ ನಡೆದಿತ್ತು. ಮತ್ತೊಂದು ಸಿನಿಮಾ ಪೃಥ್ವಿಯಲ್ಲಿ ನಾವು ಅಭಿನಯಿಸಿದೆವು” ಎಂದು ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿರಿ: ಪುನೀತ್‌ ಫಿಟ್‌ನೆಟ್‌‌: ಡಾ.ದೇವಿ ಶೆಟ್ಟಿ ಹೆಸರಲ್ಲಿ ಫೇಕ್‌ ನ್ಯೂಸ್‌ ಹರಿದಾಟ

ಸಿನಿಮಾ ಹಾಗೂ ನಿಜ ಜೀವನದ ಆತ್ಮೀಯನ್ನು ಸ್ಮರಿಸಿರುವ ಪಾರ್ವತಿ ಅವರು, “ಕನ್ನಡದೊಂದಿಗೆ ಅವರು ನನಗೆ ಅನೇಕ ಸಲ ಸಹಾಯ ಮಾಡುತ್ತಿದ್ದರು. ಆದರೆ ನಾವು ಬಹುತೇಕ ಸಮಯ ಸಿನಿಮಾ ಹಾಗೂ ನಿಜ ಜೀವನದ ಕುರಿತು ಮಾತುನಾಡುತ್ತಿದ್ದೆವು. ಸೆಟ್‌‌ನಲ್ಲಿ ಎಲ್ಲರಿಗೂ ಅವಕಾಶ ನೀಡಲು ಅವರು ಎಚ್ಚರಿಕೆ ವಹಿಸುತ್ತಿದ್ದರು. ಅವರು ಸಮಯಪ್ರಜ್ಞೆಗೆ ಆದ್ಯತೆ ನೀಡುತ್ತಿದ್ದರು.  ಇತರರನ್ನು ಪ್ರಾಮಾಣಿಕವಾಗಿ ಪರಿಶೀಲಿಸುತ್ತಿದ್ದರು. ಹಾಸ್ಯ ಚಟಾಕಿಗಳನ್ನು ಸಿಡಿಸುತ್ತಿದ್ದರು. ಹಾಡುಗಳು ಮತ್ತು ನೃತ್ಯಗಳನ್ನು ಪ್ರದರ್ಶಿಸಲು ನನಗೆ ತುಂಬಾ ಸಹಾಯ ಮಾಡಿದರು” ಎಂದಿದ್ದಾರೆ.

“ಅತ್ಯುತ್ತಮ ಮನುಷ್ಯ ಇಷ್ಟೊಂದು ಕ್ರಿಯಾಶೀಲವಾಗಿರಲು, ಪ್ರೀತಿಯಿಂದ ಕೂಡಿರಲು, ಸರಳವಾಗಿರಲು ಸಾಧ್ಯವೆಂದು ನನಗೆ ತಿಳಿಯದು. ಕೆಲವು ಕಾರಣಗಳಿಂದಾಗಿ ನಮ್ಮ ಚಿತ್ರಗಳ ಕೆಲವು ಹಾಡುಗಳನ್ನು Instagram ನಲ್ಲಿ ಹಂಚಿಕೊಳ್ಳಬೇಕು ಅನಿಸಿತು. ಅವರ ಜೊತೆ ಮತ್ತೆ ಕೆಲಸ ಮಾಡುವುದು ಎಷ್ಟು ಅದ್ಭುತ ಎಂದು ನಾಲ್ಕು ದಿನಗಳ ಹಿಂದೆ ಅನಿಸಿತು” ಎಂದು ಅವರು ಹೇಳಿದ್ದಾರೆ.

“ರಾಜ್‌ಕುಮಾರ್‌ ಅವರ ಕುಟುಂಬ ಪ್ರೇಕ್ಷಕರಿಂದ ಸಂಪಾದಿಸಿದ ಪ್ರೀತಿ ಇದೆಯಲ್ಲ- ಪ್ರೀತಿ, ಗೌರವ, ಅಭಿಮಾನ ಮತ್ತು ಎಲ್ಲರೂ ನಮ್ಮವರೆಂಬ ಭಾವನೆ- ನಾನು ಅದನ್ನು ಅರ್ಥಮಾಡಿಕೊಂಡೆ. ಪುನೀತ್‌ ಅವರೊಂದಿಗೆ ಎರಡು ಸಿನಿಮಾಗಳಲ್ಲಿ ನಾನು ಅಭಿನಯಿಸಿದ್ದೇನೆ. ಒಬ್ಬ ಮನುಷ್ಯ ಎಷ್ಟೊಂದು ಆಕರ್ಷಕ ವ್ಯಕ್ತಿಯಾಗಿರಬಲ್ಲ ಎಂದು ತಿಳಿದುಕೊಂಡೆ” ಎಂದಿದ್ದಾರೆ.

“ಕಲೆ, ಪ್ರಸಿದ್ಧಿ ಎಲ್ಲವನ್ನು ಸಹಜವಾಗಿ ಸ್ವೀಕರಿಸಿ ಪುನೀತ್ ರಾಜ್‌ಕುಮಾರ್‌ ನಡೆದರು” ಎಂದು ಪಾರ್ವತಿ ತಿಳಿಸಿದ್ದಾರೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...