Homeಕರ್ನಾಟಕಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

- Advertisement -
- Advertisement -

“ಅವರೊಂದಿಗೆ ನಾನು ಎರಡು ಸಿನಿಮಾಗಳಲ್ಲಿ ಅಭಿನಯಿಸಿದ್ದೇನೆ. ಒಬ್ಬ ಮನುಷ್ಯ ಎಷ್ಟೊಂದು ಆಕರ್ಷಕ ಗುಣವನ್ನು ಹೊಂದಿರಬಲ್ಲ ಎಂಬುದನ್ನು ನೋಡಿದ್ದೇನೆ” ಎಂದು ಬಹುಭಾಷಾ ನಟಿ ಪಾರ್ವತಿ ತಿರುವೊತು ಹೇಳಿದ್ದಾರೆ.

ಮಿಲನ ಹಾಗೂ ಪೃಥ್ವಿ ಸಿನಿಮಾಗಳಲ್ಲಿ ಅಪ್ಪು ಅವರೊಂದಿಗೆ ನಾಯಕಿಯಾಗಿ ಅಭಿನಯಿಸಿದ್ದ ಮಲಯಾಳಂ ಚಿತ್ರರಂಗದ ಪ್ರಖ್ಯಾತ ನಟಿ ಪಾರ್ವತಿ ಅವರು ಅಪ್ಪು ಅವರೊಂದಿಗಿನ ಒಡನಾಟವನ್ನು ‘ದಿ ನ್ಯೂಸ್‌ ಮಿನಿಟ್‌’ನೊಂದಿಗೆ ಹಂಚಿಕೊಂಡಿದ್ದಾರೆ.

ಚಿತ್ರರಂಗದಲ್ಲಿ ಅಷ್ಟೇ ಅಲ್ಲದೆ ಜನಸಾಮಾನ್ಯರ ನಡುವೆ ವಿನಯವಂತರಾಗಿ ಬದುಕಿದ ಪುನೀತ್ ರಾಜ್‌ಕುಮಾರ್‌ ಅವರ ನೆನಪುಗಳು ಅಜರಾಮರವಾಗಿವೆ. ಅವರು ನಿಧನರಾದಾಗಿನಿಂದಲೂ ಅಭಿಮಾನಿಗಳು, ಕನ್ನಡ ಚಿತ್ರರಂಗ, ಬಹುಭಾಷೆಗಳ ನಟರು ದುಃಖ ತಪ್ತರಾಗಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ಮಲಯಾಳಂ ಚಿತ್ರರಂಗದ ಬಹುತೇಕ ನಟ, ನಟಿಯರು ತೀವ್ರ ಸಂತಾಪ ಸೂಚಿಸಿದ್ದು, ‘ದಿ ನ್ಯೂಸ್ ಮಿನಿಟ್‌’ ಜೊತೆ ಮಾತನಾಡಿರುವ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಪಾರ್ವತಿ ತಿರುವೊತು ಅವರು, ಪುನೀತ್‌ ರಾಜ್‌ಕುಮಾರ್‌ ಅವರನ್ನು ಮೊದಲ ಬಾರಿಗೆ ಭೇಟಿಯಾದ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ಸುಮಾರು 18 ವರ್ಷದವರಾಗಿದ್ದಾಗ ಮಿಲನ ಸಿನಿಮಾದ ಫೋಟೋಶೂಟ್‌ನಲ್ಲಿ ಪಾಲ್ಗೊಳ್ಳಲು ಹೋಗಿದ್ದಾಗ ಮೊದಲ ಬಾರಿಗೆ ಪುನೀತ್‌ ರಾಜ್‌ಕುಮಾರ್‌ ಅವರನ್ನು ಭೇಟಿಯಾದೆ ಎಂದಿದ್ದಾರೆ.

“ಸುಮಾರು 18-19 ವರ್ಷದವಳಾಗಿದ್ದಾಗ ಅವರನ್ನು ಮೊದಲ ಬಾರಿಗೆ ಭೇಟಿಯಾದೆ. ಮಿಲನ ಸಿನಿಮಾದ ಫೋಟೋ ಶೂಟ್‌ಗಾಗಿ ತೆರಳಿದ್ದಾಗ ಅವರು ಪರಿಚಯವಾದರು. ದಿಢೀರನೇ ಅವರು ಬಂದಾಗ, ‘ಅಪ್ಪು ಬಂದರು’, ‘ಅಪ್ಪು ಅಣ್ಣ ಬಂದರು’ ಎಂದರು. ಫೋಟೋಶೂಟ್‌ಗಾಗಿ ನನ್ನನ್ನು ಅವರು ಎಷ್ಟೊಂದು ಆರಾಮವಾಗಿಸಿದ್ದರು, ಸಿದ್ಧವಾಗಿಸಿದ್ದರು ಎಂಬುದನ್ನು ಈಗಲೂ ನೆನಪಿಸಿಕೊಳ್ಳಬಲ್ಲೆ” ಎಂದು ತಿಳಿಸಿದ್ದಾರೆ.

ಮಿಲನ ಸಿನಿಮಾದಲ್ಲಿ ಅಭಿನಯಿಸುವಾಗಿನ ಮತ್ತೊಂದು ಅನುಭವವನ್ನು ಹಂಚಿಕೊಂಡಿರುವ ಪಾರ್ವತಿ ಅವರು, “ಅವರು ತುಂಬಾ ನಗುತ್ತಿದ್ದರು. ಸಂಗತಿಗಳನ್ನು ಹಗುರಗೊಳಿಸಲು ಹೊಸ ದಾರಿಗಳನ್ನು ಹುಡುಕುತ್ತಿದ್ದರು. ಕಡಲು ಮತ್ತು ಶೀತಮಯ ಪ್ರದೇಶವಾದ ಸ್ವಿಡ್ಜರ್‌ಲ್ಯಾಂಡ್‌ನಲ್ಲಿ ಚಿತ್ರೀಕರಣ ನಡೆದಿತ್ತು. ಮತ್ತೊಂದು ಸಿನಿಮಾ ಪೃಥ್ವಿಯಲ್ಲಿ ನಾವು ಅಭಿನಯಿಸಿದೆವು” ಎಂದು ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿರಿ: ಪುನೀತ್‌ ಫಿಟ್‌ನೆಟ್‌‌: ಡಾ.ದೇವಿ ಶೆಟ್ಟಿ ಹೆಸರಲ್ಲಿ ಫೇಕ್‌ ನ್ಯೂಸ್‌ ಹರಿದಾಟ

ಸಿನಿಮಾ ಹಾಗೂ ನಿಜ ಜೀವನದ ಆತ್ಮೀಯನ್ನು ಸ್ಮರಿಸಿರುವ ಪಾರ್ವತಿ ಅವರು, “ಕನ್ನಡದೊಂದಿಗೆ ಅವರು ನನಗೆ ಅನೇಕ ಸಲ ಸಹಾಯ ಮಾಡುತ್ತಿದ್ದರು. ಆದರೆ ನಾವು ಬಹುತೇಕ ಸಮಯ ಸಿನಿಮಾ ಹಾಗೂ ನಿಜ ಜೀವನದ ಕುರಿತು ಮಾತುನಾಡುತ್ತಿದ್ದೆವು. ಸೆಟ್‌‌ನಲ್ಲಿ ಎಲ್ಲರಿಗೂ ಅವಕಾಶ ನೀಡಲು ಅವರು ಎಚ್ಚರಿಕೆ ವಹಿಸುತ್ತಿದ್ದರು. ಅವರು ಸಮಯಪ್ರಜ್ಞೆಗೆ ಆದ್ಯತೆ ನೀಡುತ್ತಿದ್ದರು.  ಇತರರನ್ನು ಪ್ರಾಮಾಣಿಕವಾಗಿ ಪರಿಶೀಲಿಸುತ್ತಿದ್ದರು. ಹಾಸ್ಯ ಚಟಾಕಿಗಳನ್ನು ಸಿಡಿಸುತ್ತಿದ್ದರು. ಹಾಡುಗಳು ಮತ್ತು ನೃತ್ಯಗಳನ್ನು ಪ್ರದರ್ಶಿಸಲು ನನಗೆ ತುಂಬಾ ಸಹಾಯ ಮಾಡಿದರು” ಎಂದಿದ್ದಾರೆ.

“ಅತ್ಯುತ್ತಮ ಮನುಷ್ಯ ಇಷ್ಟೊಂದು ಕ್ರಿಯಾಶೀಲವಾಗಿರಲು, ಪ್ರೀತಿಯಿಂದ ಕೂಡಿರಲು, ಸರಳವಾಗಿರಲು ಸಾಧ್ಯವೆಂದು ನನಗೆ ತಿಳಿಯದು. ಕೆಲವು ಕಾರಣಗಳಿಂದಾಗಿ ನಮ್ಮ ಚಿತ್ರಗಳ ಕೆಲವು ಹಾಡುಗಳನ್ನು Instagram ನಲ್ಲಿ ಹಂಚಿಕೊಳ್ಳಬೇಕು ಅನಿಸಿತು. ಅವರ ಜೊತೆ ಮತ್ತೆ ಕೆಲಸ ಮಾಡುವುದು ಎಷ್ಟು ಅದ್ಭುತ ಎಂದು ನಾಲ್ಕು ದಿನಗಳ ಹಿಂದೆ ಅನಿಸಿತು” ಎಂದು ಅವರು ಹೇಳಿದ್ದಾರೆ.

“ರಾಜ್‌ಕುಮಾರ್‌ ಅವರ ಕುಟುಂಬ ಪ್ರೇಕ್ಷಕರಿಂದ ಸಂಪಾದಿಸಿದ ಪ್ರೀತಿ ಇದೆಯಲ್ಲ- ಪ್ರೀತಿ, ಗೌರವ, ಅಭಿಮಾನ ಮತ್ತು ಎಲ್ಲರೂ ನಮ್ಮವರೆಂಬ ಭಾವನೆ- ನಾನು ಅದನ್ನು ಅರ್ಥಮಾಡಿಕೊಂಡೆ. ಪುನೀತ್‌ ಅವರೊಂದಿಗೆ ಎರಡು ಸಿನಿಮಾಗಳಲ್ಲಿ ನಾನು ಅಭಿನಯಿಸಿದ್ದೇನೆ. ಒಬ್ಬ ಮನುಷ್ಯ ಎಷ್ಟೊಂದು ಆಕರ್ಷಕ ವ್ಯಕ್ತಿಯಾಗಿರಬಲ್ಲ ಎಂದು ತಿಳಿದುಕೊಂಡೆ” ಎಂದಿದ್ದಾರೆ.

“ಕಲೆ, ಪ್ರಸಿದ್ಧಿ ಎಲ್ಲವನ್ನು ಸಹಜವಾಗಿ ಸ್ವೀಕರಿಸಿ ಪುನೀತ್ ರಾಜ್‌ಕುಮಾರ್‌ ನಡೆದರು” ಎಂದು ಪಾರ್ವತಿ ತಿಳಿಸಿದ್ದಾರೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...