Homeಮುಖಪುಟಕೊರೊನಾ ಸೋಂಕಿತ ವ್ಯಕ್ತಿಯ ಜೊತೆಗೆ ಸಂಪರ್ಕಕ್ಕೆ ಬಂದವರಿಗೆ ಮುಂಬೈಗೆ ಪ್ರಯಣಿಸಲು ಪಾಸ್‌: ಬಿಜೆಪಿ ಮುಖಂಡನ ವಿರುದ್ಧ...

ಕೊರೊನಾ ಸೋಂಕಿತ ವ್ಯಕ್ತಿಯ ಜೊತೆಗೆ ಸಂಪರ್ಕಕ್ಕೆ ಬಂದವರಿಗೆ ಮುಂಬೈಗೆ ಪ್ರಯಣಿಸಲು ಪಾಸ್‌: ಬಿಜೆಪಿ ಮುಖಂಡನ ವಿರುದ್ಧ ದೂರು 

- Advertisement -
- Advertisement -

ಕೊರೊನಾ ಸೋಂಕಿತ ವ್ಯಕ್ತಿಯ ಜೊತೆಗೆ ಸಂಪರ್ಕಕ್ಕೆ ಬಂದ ಮಹಿಳೆಗೆ ಮುಂಬೈಗೆ ಪ್ರಯಣಿಸಲು ಪಾಸ್‌ ಕೊಡಿಸಲು ಮುಂದಾದ ಕೊಪ್ಪಳದ ಗುರುಬಸವ ಹೊಳಗುಂದಿ ಎಂಬ ವ್ಯಕ್ತಿ ವಿರುದ್ಧ ದೂರು ದಾಖಲಾಗಿದೆ. ಈ ಕುರಿತು ಕೊಪ್ಪಳ ಜಿಲ್ಲಾಧಿಕಾರಿಗಳು ಪತ್ರಿಕಾ ಹೇಳಿಕೆಯೊಂದನ್ನು ನೀಡಿದ್ದಾರೆ.

ಆರೋಪಿಯು ಕೊಪ್ಪಳದ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾಗಿದ್ದು, ಬಿಜೆಪಿ ಮುಖಂಡರಾಗಿದ್ದಾರೆ. ತಮ್ಮ ರಾಜಕೀಯ ಪ್ರಭಾವ ಬಳಸಿ ಪಾಸ್‌ ಪಡೆಯಲು ಹೋಗಿ ಈ ಪ್ರಕರಣದಲ್ಲಿ ಸಿಲುಕಿಹಾಕಿಕೊಂಡಿದ್ದಾರೆ.

ಹೇಳಿಕೆಯಂತೆ ಕೊರೋನಾವೈರಾಣು ಸೊಂಕು ದೃಡಪಟ್ಟಿರುವ KA – P194 ಇವರು ಮಾರ್ಚ್‌ 19 ರಂದು VRL ಟ್ರಾವೆಲ್ಸ್ ಬಸ್ ಮೂಲಕ ಮುಂಬೈಯಿಂದ ಹುಬ್ಬಳ್ಳಿಗೆ ಪ್ರಯಾಣ ಮಾಡಿರುತ್ತಾರೆ. ಅದೇ ದಿನ, ಅದೇ ಬಸ್‌ನಲ್ಲಿ  ಶಿಖಾ ಶೇಖ್ ಎಂಬುವವರು ಕೂಡ ಪ್ರಯಾಣಿಸಿದ್ದಾರೆ. ಅಂದರೆ ಶಿಖಾ ಶೇಕ್ ಇವರು ಸೋಂಕಿತರಾದ KA – P194 ಇವರೊಡನೆ ಪ್ರಾಥಮಿಕ ಸಂಪರ್ಕವನ್ನು (Primary Coolict ) ಹೊಂದಿರುತ್ತಾರೆ.

ಇದೇ ಶಿಖಾ ಶೇಖ್‌ರವರು ಮಾರ್ಚ್‌ 20 ರಂದು ಆಟೋ ಮೂಲಕ ಹುಬ್ಬಳ್ಳಿಯಲ್ಲಿ ಪರಿಚಯಸ್ಥರ ಮನೆಗೆ ತಲುಪಿ ಅಲ್ಲಿಯೇ ತಂಗಿದ್ದಾರೆ. ಆದರೆ ಅವರು ಮತ್ತೆ ಮುಂಬೈಗೆ ಹೋಗಬೇಕೆಂದುಕೊಂಡು ಏಪ್ರಿಲ್‌ 13ರಂದು ಸಾಯಂಕಾಲ 5–30ರ ಸಮಯದಲ್ಲಿ ತಮ್ಮ ಸ್ಕೂಟರ್ ವಾಹನದ ಜೊತೆಗೆ ಹಾಲಿನ ಡೈರಿ ವಾಹನದಲ್ಲಿ ಹುಬ್ಬಳಿಯಿಂದ ಪ್ರಯಾಣಿಸಿ, ರಾತ್ರಿ ಸುಮಾರು 08–30 ಗಂಟೆಗೆ ಕೊಪ್ಪಳಕ್ಕೆ ತಲುಪಿ ಶಾಂತಾರಾಮ, ಕದಂಬ ನಗರ, ಭಾಗ್ಯನಗರ ಇವರ ಮನೆಯಲ್ಲಿ ವಾಸ್ತವ್ಯ ಹೂಡಿರುತ್ತಾರೆ.

ಆನಂತರ ಏಪ್ರಿಲ್‌ 14ರಂದು ಸದ್ಯ ಆರೋಪಿಯಾಗಿರುವ ಗುರುಬಸವ ಹೊಳಗುಂದಿಯವರು ಶಿಖಾ ಶೇಖ್‌ ಇವರನ್ನು ಸ್ಕೂಟಿ ವಾಹನದಲ್ಲಿ ಕರೆದುಕೊಂಡು ಪೊಲೀಸ್ ಕೇಂದ್ರ ಕಛೇರಿಗೆ ಬಂದಿರುತ್ತಾರೆ . ಈ ಕುರಿತು ಶಿಖಾ ಶೇಖ್ ಇವರನ್ನು ವಿಚಾರಿಸಲಾಗಿ ಗುರುಬಸವ ಹೊಳಗುಂದಿ ಇವರು ಮುಂಬೈಗೆ ಹೋಗಲು ಪಾಸ್ ಕೊಡಿಸುವುದಾಗಿ ತಿಳಿಸಿರುವ ಹಿನ್ನಲೆಯಲ್ಲಿ ಕೊಪ್ಪಳಕ್ಕೆ ಬರುವಂತಾಯಿತು ಎಂದಿದ್ದಾರೆ.

ಪಾಸ್‌ ಕೊಡಲು ನಿರಾಕರಿಸಿದ ಪೊಲೀಸರು ಅವರಿಬ್ಬರನ್ನು ಆಸ್ಪತ್ರೆಗೆ ತೆರಳಲು ತಿಳಿಸಿರುತ್ತಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದ ಅಭಿಪ್ರಾಯದಂತೆ ಶಿಖಾ ಶೇಖ್‌ರವರ್‍ನು Institutional Quaintine ಕೇಂದ್ರದಲ್ಲಿ ಇಡಲಾಗಿದೆ. ಶಾಂತಾರಾಮ ಹಾಗೂ ಅವರ ಕುಟುಂಬದ ಸದಸ್ಯರನ್ನು ಸಹ Institutional Quarantirve ಮಾಡಲಾಗಿದೆ. ಆದರೆ ಗುರುಬಸವ ಹೊಳಗುಂದಿ ಇವರನ್ನು Institutional QUAurantine ಮಾಡಲು ಹೋದಾಗ ಪ್ರತಿರೋಧಿಸಿರುತ್ತಾರೆ. ಆದ್ದರಿಂದ ಇವರನ್ನು Institutional Quarantine ಮಾಡಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಪತ್ರಿಕಾ ಹೇಳಿಕೆ ತಿಳಿಸಿದೆ.

ಲಾಕ್‌ಡೌನ್ ಸಂದರ್ಭದಲ್ಲಿ ಅನುಮತಿ ಪಡೆಯದೇ Primary Contact ಸಂಪರ್ಕವಿರುವ ವ್ಯಕ್ತಿಗಳನ್ನು ಕೊಪ್ಪಳಕ್ಕೆ ಕರೆತಂದಿರುವುದು ಅಪರಾಧವಾಗಿದ್ದು, ಈ ಬಗ್ಗೆ ಗುರುಬಸವ ಹೊಳಗುಂದಿ ಇವರ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಲು ತಹಶೀಲ್ದಾರ ಕೊಪ್ಪಳ / ವೈದ್ಯಾಧಿಕಾರಿಗಳಿಗೆ ತಿಳಿಸಲಾಗಿದೆ. ಹೆಚ್ಚಿನ ತನಿಖೆಗೆ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಲಾಗಿದೆ.

ಕಾರಣ ಮೇಲ್ಕಾಣಿಸಿದ ಸದಸ್ಯರ ಹಾಗೂ ಅವರ ಕುಟುಂಬದ ಸದಸ್ಯರ ಜೊತೆಗೆ ಯಾವುದೇ ಸಂಪರ್ಕ ಹೊಂದಿದ್ದಲ್ಲಿ ಅಂತಹ ವ್ಯಕ್ತಿಗಳು ತಮ್ಮ ಮನೆಯಿಂದ ಹೊರಗೆ ಬಾರದೇ ಕಡ್ಡಾಯವಾಗಿ ಮನೆಯಲ್ಲಿಯೇ ಇರತಕ್ಕದ್ದು, ಹಾಗೂ ಕೆಮ್ಮು, ನೆಗಡಿ, ಉಸಿರಾಟ ಸಂಬಂಧಿ ಖಾಯಿಲೆಗಳ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಚಿಕಿತ್ಸೆಯನ್ನು ಪಡೆಯತಕ್ಕದ್ದು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್‌ ತಿಳಿಸಿದ್ದಾರೆ.

ಕೊರೊನಾಗೆ ಪ್ರಸ್ತುತ ಭಾರತದಲ್ಲಿ 414 ಬಲಿಯಾಗಿದ್ದು 10 ಸಾವಿರಕ್ಕೂ ಹೆಚ್ಚು ಜನರಿಗೆ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗಾಗಿ ಯಾರೂ ಕೂಡ ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸದೇ ಎಚ್ಚರಿಕೆಯಿಂದಿರಬೇಕಾಗಿದೆ.


ಇದನ್ನೂ ಓದಿ: ಮೋದಿ ಭಾಷಣದಲ್ಲಿದ್ದ ಮೂರು ಮಹಾ ಸುಳ್ಳುಗಳು : ಶಿವಸುಂದರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...