Homeಮುಖಪುಟಕೊರೊನಾ ಸೋಂಕಿತ ವ್ಯಕ್ತಿಯ ಜೊತೆಗೆ ಸಂಪರ್ಕಕ್ಕೆ ಬಂದವರಿಗೆ ಮುಂಬೈಗೆ ಪ್ರಯಣಿಸಲು ಪಾಸ್‌: ಬಿಜೆಪಿ ಮುಖಂಡನ ವಿರುದ್ಧ...

ಕೊರೊನಾ ಸೋಂಕಿತ ವ್ಯಕ್ತಿಯ ಜೊತೆಗೆ ಸಂಪರ್ಕಕ್ಕೆ ಬಂದವರಿಗೆ ಮುಂಬೈಗೆ ಪ್ರಯಣಿಸಲು ಪಾಸ್‌: ಬಿಜೆಪಿ ಮುಖಂಡನ ವಿರುದ್ಧ ದೂರು 

- Advertisement -
- Advertisement -

ಕೊರೊನಾ ಸೋಂಕಿತ ವ್ಯಕ್ತಿಯ ಜೊತೆಗೆ ಸಂಪರ್ಕಕ್ಕೆ ಬಂದ ಮಹಿಳೆಗೆ ಮುಂಬೈಗೆ ಪ್ರಯಣಿಸಲು ಪಾಸ್‌ ಕೊಡಿಸಲು ಮುಂದಾದ ಕೊಪ್ಪಳದ ಗುರುಬಸವ ಹೊಳಗುಂದಿ ಎಂಬ ವ್ಯಕ್ತಿ ವಿರುದ್ಧ ದೂರು ದಾಖಲಾಗಿದೆ. ಈ ಕುರಿತು ಕೊಪ್ಪಳ ಜಿಲ್ಲಾಧಿಕಾರಿಗಳು ಪತ್ರಿಕಾ ಹೇಳಿಕೆಯೊಂದನ್ನು ನೀಡಿದ್ದಾರೆ.

ಆರೋಪಿಯು ಕೊಪ್ಪಳದ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾಗಿದ್ದು, ಬಿಜೆಪಿ ಮುಖಂಡರಾಗಿದ್ದಾರೆ. ತಮ್ಮ ರಾಜಕೀಯ ಪ್ರಭಾವ ಬಳಸಿ ಪಾಸ್‌ ಪಡೆಯಲು ಹೋಗಿ ಈ ಪ್ರಕರಣದಲ್ಲಿ ಸಿಲುಕಿಹಾಕಿಕೊಂಡಿದ್ದಾರೆ.

ಹೇಳಿಕೆಯಂತೆ ಕೊರೋನಾವೈರಾಣು ಸೊಂಕು ದೃಡಪಟ್ಟಿರುವ KA – P194 ಇವರು ಮಾರ್ಚ್‌ 19 ರಂದು VRL ಟ್ರಾವೆಲ್ಸ್ ಬಸ್ ಮೂಲಕ ಮುಂಬೈಯಿಂದ ಹುಬ್ಬಳ್ಳಿಗೆ ಪ್ರಯಾಣ ಮಾಡಿರುತ್ತಾರೆ. ಅದೇ ದಿನ, ಅದೇ ಬಸ್‌ನಲ್ಲಿ  ಶಿಖಾ ಶೇಖ್ ಎಂಬುವವರು ಕೂಡ ಪ್ರಯಾಣಿಸಿದ್ದಾರೆ. ಅಂದರೆ ಶಿಖಾ ಶೇಕ್ ಇವರು ಸೋಂಕಿತರಾದ KA – P194 ಇವರೊಡನೆ ಪ್ರಾಥಮಿಕ ಸಂಪರ್ಕವನ್ನು (Primary Coolict ) ಹೊಂದಿರುತ್ತಾರೆ.

ಇದೇ ಶಿಖಾ ಶೇಖ್‌ರವರು ಮಾರ್ಚ್‌ 20 ರಂದು ಆಟೋ ಮೂಲಕ ಹುಬ್ಬಳ್ಳಿಯಲ್ಲಿ ಪರಿಚಯಸ್ಥರ ಮನೆಗೆ ತಲುಪಿ ಅಲ್ಲಿಯೇ ತಂಗಿದ್ದಾರೆ. ಆದರೆ ಅವರು ಮತ್ತೆ ಮುಂಬೈಗೆ ಹೋಗಬೇಕೆಂದುಕೊಂಡು ಏಪ್ರಿಲ್‌ 13ರಂದು ಸಾಯಂಕಾಲ 5–30ರ ಸಮಯದಲ್ಲಿ ತಮ್ಮ ಸ್ಕೂಟರ್ ವಾಹನದ ಜೊತೆಗೆ ಹಾಲಿನ ಡೈರಿ ವಾಹನದಲ್ಲಿ ಹುಬ್ಬಳಿಯಿಂದ ಪ್ರಯಾಣಿಸಿ, ರಾತ್ರಿ ಸುಮಾರು 08–30 ಗಂಟೆಗೆ ಕೊಪ್ಪಳಕ್ಕೆ ತಲುಪಿ ಶಾಂತಾರಾಮ, ಕದಂಬ ನಗರ, ಭಾಗ್ಯನಗರ ಇವರ ಮನೆಯಲ್ಲಿ ವಾಸ್ತವ್ಯ ಹೂಡಿರುತ್ತಾರೆ.

ಆನಂತರ ಏಪ್ರಿಲ್‌ 14ರಂದು ಸದ್ಯ ಆರೋಪಿಯಾಗಿರುವ ಗುರುಬಸವ ಹೊಳಗುಂದಿಯವರು ಶಿಖಾ ಶೇಖ್‌ ಇವರನ್ನು ಸ್ಕೂಟಿ ವಾಹನದಲ್ಲಿ ಕರೆದುಕೊಂಡು ಪೊಲೀಸ್ ಕೇಂದ್ರ ಕಛೇರಿಗೆ ಬಂದಿರುತ್ತಾರೆ . ಈ ಕುರಿತು ಶಿಖಾ ಶೇಖ್ ಇವರನ್ನು ವಿಚಾರಿಸಲಾಗಿ ಗುರುಬಸವ ಹೊಳಗುಂದಿ ಇವರು ಮುಂಬೈಗೆ ಹೋಗಲು ಪಾಸ್ ಕೊಡಿಸುವುದಾಗಿ ತಿಳಿಸಿರುವ ಹಿನ್ನಲೆಯಲ್ಲಿ ಕೊಪ್ಪಳಕ್ಕೆ ಬರುವಂತಾಯಿತು ಎಂದಿದ್ದಾರೆ.

ಪಾಸ್‌ ಕೊಡಲು ನಿರಾಕರಿಸಿದ ಪೊಲೀಸರು ಅವರಿಬ್ಬರನ್ನು ಆಸ್ಪತ್ರೆಗೆ ತೆರಳಲು ತಿಳಿಸಿರುತ್ತಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದ ಅಭಿಪ್ರಾಯದಂತೆ ಶಿಖಾ ಶೇಖ್‌ರವರ್‍ನು Institutional Quaintine ಕೇಂದ್ರದಲ್ಲಿ ಇಡಲಾಗಿದೆ. ಶಾಂತಾರಾಮ ಹಾಗೂ ಅವರ ಕುಟುಂಬದ ಸದಸ್ಯರನ್ನು ಸಹ Institutional Quarantirve ಮಾಡಲಾಗಿದೆ. ಆದರೆ ಗುರುಬಸವ ಹೊಳಗುಂದಿ ಇವರನ್ನು Institutional QUAurantine ಮಾಡಲು ಹೋದಾಗ ಪ್ರತಿರೋಧಿಸಿರುತ್ತಾರೆ. ಆದ್ದರಿಂದ ಇವರನ್ನು Institutional Quarantine ಮಾಡಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಪತ್ರಿಕಾ ಹೇಳಿಕೆ ತಿಳಿಸಿದೆ.

ಲಾಕ್‌ಡೌನ್ ಸಂದರ್ಭದಲ್ಲಿ ಅನುಮತಿ ಪಡೆಯದೇ Primary Contact ಸಂಪರ್ಕವಿರುವ ವ್ಯಕ್ತಿಗಳನ್ನು ಕೊಪ್ಪಳಕ್ಕೆ ಕರೆತಂದಿರುವುದು ಅಪರಾಧವಾಗಿದ್ದು, ಈ ಬಗ್ಗೆ ಗುರುಬಸವ ಹೊಳಗುಂದಿ ಇವರ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಲು ತಹಶೀಲ್ದಾರ ಕೊಪ್ಪಳ / ವೈದ್ಯಾಧಿಕಾರಿಗಳಿಗೆ ತಿಳಿಸಲಾಗಿದೆ. ಹೆಚ್ಚಿನ ತನಿಖೆಗೆ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಲಾಗಿದೆ.

ಕಾರಣ ಮೇಲ್ಕಾಣಿಸಿದ ಸದಸ್ಯರ ಹಾಗೂ ಅವರ ಕುಟುಂಬದ ಸದಸ್ಯರ ಜೊತೆಗೆ ಯಾವುದೇ ಸಂಪರ್ಕ ಹೊಂದಿದ್ದಲ್ಲಿ ಅಂತಹ ವ್ಯಕ್ತಿಗಳು ತಮ್ಮ ಮನೆಯಿಂದ ಹೊರಗೆ ಬಾರದೇ ಕಡ್ಡಾಯವಾಗಿ ಮನೆಯಲ್ಲಿಯೇ ಇರತಕ್ಕದ್ದು, ಹಾಗೂ ಕೆಮ್ಮು, ನೆಗಡಿ, ಉಸಿರಾಟ ಸಂಬಂಧಿ ಖಾಯಿಲೆಗಳ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಚಿಕಿತ್ಸೆಯನ್ನು ಪಡೆಯತಕ್ಕದ್ದು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್‌ ತಿಳಿಸಿದ್ದಾರೆ.

ಕೊರೊನಾಗೆ ಪ್ರಸ್ತುತ ಭಾರತದಲ್ಲಿ 414 ಬಲಿಯಾಗಿದ್ದು 10 ಸಾವಿರಕ್ಕೂ ಹೆಚ್ಚು ಜನರಿಗೆ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗಾಗಿ ಯಾರೂ ಕೂಡ ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸದೇ ಎಚ್ಚರಿಕೆಯಿಂದಿರಬೇಕಾಗಿದೆ.


ಇದನ್ನೂ ಓದಿ: ಮೋದಿ ಭಾಷಣದಲ್ಲಿದ್ದ ಮೂರು ಮಹಾ ಸುಳ್ಳುಗಳು : ಶಿವಸುಂದರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...