Homeಮುಖಪುಟಕೊರೊನಾ ಸೋಂಕಿತ ವ್ಯಕ್ತಿಯ ಜೊತೆಗೆ ಸಂಪರ್ಕಕ್ಕೆ ಬಂದವರಿಗೆ ಮುಂಬೈಗೆ ಪ್ರಯಣಿಸಲು ಪಾಸ್‌: ಬಿಜೆಪಿ ಮುಖಂಡನ ವಿರುದ್ಧ...

ಕೊರೊನಾ ಸೋಂಕಿತ ವ್ಯಕ್ತಿಯ ಜೊತೆಗೆ ಸಂಪರ್ಕಕ್ಕೆ ಬಂದವರಿಗೆ ಮುಂಬೈಗೆ ಪ್ರಯಣಿಸಲು ಪಾಸ್‌: ಬಿಜೆಪಿ ಮುಖಂಡನ ವಿರುದ್ಧ ದೂರು 

- Advertisement -
- Advertisement -

ಕೊರೊನಾ ಸೋಂಕಿತ ವ್ಯಕ್ತಿಯ ಜೊತೆಗೆ ಸಂಪರ್ಕಕ್ಕೆ ಬಂದ ಮಹಿಳೆಗೆ ಮುಂಬೈಗೆ ಪ್ರಯಣಿಸಲು ಪಾಸ್‌ ಕೊಡಿಸಲು ಮುಂದಾದ ಕೊಪ್ಪಳದ ಗುರುಬಸವ ಹೊಳಗುಂದಿ ಎಂಬ ವ್ಯಕ್ತಿ ವಿರುದ್ಧ ದೂರು ದಾಖಲಾಗಿದೆ. ಈ ಕುರಿತು ಕೊಪ್ಪಳ ಜಿಲ್ಲಾಧಿಕಾರಿಗಳು ಪತ್ರಿಕಾ ಹೇಳಿಕೆಯೊಂದನ್ನು ನೀಡಿದ್ದಾರೆ.

ಆರೋಪಿಯು ಕೊಪ್ಪಳದ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾಗಿದ್ದು, ಬಿಜೆಪಿ ಮುಖಂಡರಾಗಿದ್ದಾರೆ. ತಮ್ಮ ರಾಜಕೀಯ ಪ್ರಭಾವ ಬಳಸಿ ಪಾಸ್‌ ಪಡೆಯಲು ಹೋಗಿ ಈ ಪ್ರಕರಣದಲ್ಲಿ ಸಿಲುಕಿಹಾಕಿಕೊಂಡಿದ್ದಾರೆ.

ಹೇಳಿಕೆಯಂತೆ ಕೊರೋನಾವೈರಾಣು ಸೊಂಕು ದೃಡಪಟ್ಟಿರುವ KA – P194 ಇವರು ಮಾರ್ಚ್‌ 19 ರಂದು VRL ಟ್ರಾವೆಲ್ಸ್ ಬಸ್ ಮೂಲಕ ಮುಂಬೈಯಿಂದ ಹುಬ್ಬಳ್ಳಿಗೆ ಪ್ರಯಾಣ ಮಾಡಿರುತ್ತಾರೆ. ಅದೇ ದಿನ, ಅದೇ ಬಸ್‌ನಲ್ಲಿ  ಶಿಖಾ ಶೇಖ್ ಎಂಬುವವರು ಕೂಡ ಪ್ರಯಾಣಿಸಿದ್ದಾರೆ. ಅಂದರೆ ಶಿಖಾ ಶೇಕ್ ಇವರು ಸೋಂಕಿತರಾದ KA – P194 ಇವರೊಡನೆ ಪ್ರಾಥಮಿಕ ಸಂಪರ್ಕವನ್ನು (Primary Coolict ) ಹೊಂದಿರುತ್ತಾರೆ.

ಇದೇ ಶಿಖಾ ಶೇಖ್‌ರವರು ಮಾರ್ಚ್‌ 20 ರಂದು ಆಟೋ ಮೂಲಕ ಹುಬ್ಬಳ್ಳಿಯಲ್ಲಿ ಪರಿಚಯಸ್ಥರ ಮನೆಗೆ ತಲುಪಿ ಅಲ್ಲಿಯೇ ತಂಗಿದ್ದಾರೆ. ಆದರೆ ಅವರು ಮತ್ತೆ ಮುಂಬೈಗೆ ಹೋಗಬೇಕೆಂದುಕೊಂಡು ಏಪ್ರಿಲ್‌ 13ರಂದು ಸಾಯಂಕಾಲ 5–30ರ ಸಮಯದಲ್ಲಿ ತಮ್ಮ ಸ್ಕೂಟರ್ ವಾಹನದ ಜೊತೆಗೆ ಹಾಲಿನ ಡೈರಿ ವಾಹನದಲ್ಲಿ ಹುಬ್ಬಳಿಯಿಂದ ಪ್ರಯಾಣಿಸಿ, ರಾತ್ರಿ ಸುಮಾರು 08–30 ಗಂಟೆಗೆ ಕೊಪ್ಪಳಕ್ಕೆ ತಲುಪಿ ಶಾಂತಾರಾಮ, ಕದಂಬ ನಗರ, ಭಾಗ್ಯನಗರ ಇವರ ಮನೆಯಲ್ಲಿ ವಾಸ್ತವ್ಯ ಹೂಡಿರುತ್ತಾರೆ.

ಆನಂತರ ಏಪ್ರಿಲ್‌ 14ರಂದು ಸದ್ಯ ಆರೋಪಿಯಾಗಿರುವ ಗುರುಬಸವ ಹೊಳಗುಂದಿಯವರು ಶಿಖಾ ಶೇಖ್‌ ಇವರನ್ನು ಸ್ಕೂಟಿ ವಾಹನದಲ್ಲಿ ಕರೆದುಕೊಂಡು ಪೊಲೀಸ್ ಕೇಂದ್ರ ಕಛೇರಿಗೆ ಬಂದಿರುತ್ತಾರೆ . ಈ ಕುರಿತು ಶಿಖಾ ಶೇಖ್ ಇವರನ್ನು ವಿಚಾರಿಸಲಾಗಿ ಗುರುಬಸವ ಹೊಳಗುಂದಿ ಇವರು ಮುಂಬೈಗೆ ಹೋಗಲು ಪಾಸ್ ಕೊಡಿಸುವುದಾಗಿ ತಿಳಿಸಿರುವ ಹಿನ್ನಲೆಯಲ್ಲಿ ಕೊಪ್ಪಳಕ್ಕೆ ಬರುವಂತಾಯಿತು ಎಂದಿದ್ದಾರೆ.

ಪಾಸ್‌ ಕೊಡಲು ನಿರಾಕರಿಸಿದ ಪೊಲೀಸರು ಅವರಿಬ್ಬರನ್ನು ಆಸ್ಪತ್ರೆಗೆ ತೆರಳಲು ತಿಳಿಸಿರುತ್ತಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದ ಅಭಿಪ್ರಾಯದಂತೆ ಶಿಖಾ ಶೇಖ್‌ರವರ್‍ನು Institutional Quaintine ಕೇಂದ್ರದಲ್ಲಿ ಇಡಲಾಗಿದೆ. ಶಾಂತಾರಾಮ ಹಾಗೂ ಅವರ ಕುಟುಂಬದ ಸದಸ್ಯರನ್ನು ಸಹ Institutional Quarantirve ಮಾಡಲಾಗಿದೆ. ಆದರೆ ಗುರುಬಸವ ಹೊಳಗುಂದಿ ಇವರನ್ನು Institutional QUAurantine ಮಾಡಲು ಹೋದಾಗ ಪ್ರತಿರೋಧಿಸಿರುತ್ತಾರೆ. ಆದ್ದರಿಂದ ಇವರನ್ನು Institutional Quarantine ಮಾಡಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಪತ್ರಿಕಾ ಹೇಳಿಕೆ ತಿಳಿಸಿದೆ.

ಲಾಕ್‌ಡೌನ್ ಸಂದರ್ಭದಲ್ಲಿ ಅನುಮತಿ ಪಡೆಯದೇ Primary Contact ಸಂಪರ್ಕವಿರುವ ವ್ಯಕ್ತಿಗಳನ್ನು ಕೊಪ್ಪಳಕ್ಕೆ ಕರೆತಂದಿರುವುದು ಅಪರಾಧವಾಗಿದ್ದು, ಈ ಬಗ್ಗೆ ಗುರುಬಸವ ಹೊಳಗುಂದಿ ಇವರ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಲು ತಹಶೀಲ್ದಾರ ಕೊಪ್ಪಳ / ವೈದ್ಯಾಧಿಕಾರಿಗಳಿಗೆ ತಿಳಿಸಲಾಗಿದೆ. ಹೆಚ್ಚಿನ ತನಿಖೆಗೆ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಲಾಗಿದೆ.

ಕಾರಣ ಮೇಲ್ಕಾಣಿಸಿದ ಸದಸ್ಯರ ಹಾಗೂ ಅವರ ಕುಟುಂಬದ ಸದಸ್ಯರ ಜೊತೆಗೆ ಯಾವುದೇ ಸಂಪರ್ಕ ಹೊಂದಿದ್ದಲ್ಲಿ ಅಂತಹ ವ್ಯಕ್ತಿಗಳು ತಮ್ಮ ಮನೆಯಿಂದ ಹೊರಗೆ ಬಾರದೇ ಕಡ್ಡಾಯವಾಗಿ ಮನೆಯಲ್ಲಿಯೇ ಇರತಕ್ಕದ್ದು, ಹಾಗೂ ಕೆಮ್ಮು, ನೆಗಡಿ, ಉಸಿರಾಟ ಸಂಬಂಧಿ ಖಾಯಿಲೆಗಳ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಚಿಕಿತ್ಸೆಯನ್ನು ಪಡೆಯತಕ್ಕದ್ದು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್‌ ತಿಳಿಸಿದ್ದಾರೆ.

ಕೊರೊನಾಗೆ ಪ್ರಸ್ತುತ ಭಾರತದಲ್ಲಿ 414 ಬಲಿಯಾಗಿದ್ದು 10 ಸಾವಿರಕ್ಕೂ ಹೆಚ್ಚು ಜನರಿಗೆ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗಾಗಿ ಯಾರೂ ಕೂಡ ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸದೇ ಎಚ್ಚರಿಕೆಯಿಂದಿರಬೇಕಾಗಿದೆ.


ಇದನ್ನೂ ಓದಿ: ಮೋದಿ ಭಾಷಣದಲ್ಲಿದ್ದ ಮೂರು ಮಹಾ ಸುಳ್ಳುಗಳು : ಶಿವಸುಂದರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...