Homeಎಕಾನಮಿಅಕ್ಟೋಬರ್ ನಲ್ಲಿ ಪ್ರಯಾಣಿಕರ ವಾಹನ ಮಾರಾಟದಲ್ಲಿ ಚೇತರಿಕೆ: ಶೇ. 0.28 ರಷ್ಟು ಹೆಚ್ಚಳ SIAM ಮಾಹಿತಿ

ಅಕ್ಟೋಬರ್ ನಲ್ಲಿ ಪ್ರಯಾಣಿಕರ ವಾಹನ ಮಾರಾಟದಲ್ಲಿ ಚೇತರಿಕೆ: ಶೇ. 0.28 ರಷ್ಟು ಹೆಚ್ಚಳ SIAM ಮಾಹಿತಿ

- Advertisement -
- Advertisement -

ಪ್ರಯಾಣಕ್ಕೆ ಬಳಸುವ ಮತ್ತು ವಾಣಿಜ್ಯ ವಾಹನಗಳು ಸೇರಿದಂತೆ ಒಟ್ಟು ದೇಶೀಯ ವಾಹನ ಮಾರಾಟ ಶೇ. 12.76 ರಷ್ಟು ಕುಸಿದಿದೆ. ಆದರೆ ದೇಶೀಯ ಮಾರುಕಟ್ಟೆಯಲ್ಲಿ ಒಟ್ಟು ಪ್ರಯಾಣಿಕರ ವಾಹನಗಳ ಮಾರಾಟವು, ಅಕ್ಟೋಬರ್ ನಲ್ಲಿ ಶೇ.0.28 ರಷ್ಟು ಹೆಚ್ಚಾಗಿದೆ ಎಂದು ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ತಯಾರಕರ ಮಾಹಿತಿ ಸಂಸ್ಥೆ (ಎಸ್‍ಐಎಎಂ) ಮಾಹಿತಿ ನೀಡಿದೆ.

ದೇಶೀಯ ಮಾರುಕಟ್ಟೆಯಲ್ಲಿ ಒಟ್ಟು ಪ್ರಯಾಣಿಕರ ವಾಹನಗಳ ಮಾರಾಟವು, ಶೇ.0.28 ರಷ್ಟು ಹೆಚ್ಚಾಗಿದೆ ಎಂದು ಇಂಡಸ್ಟ್ರಿ ಬಾಡಿ ಎಸ್‍ಐಎಎಂ ಹೇಳಿದೆ. ಅಕ್ಟೋಬರ್‌ನಲ್ಲಿ ಒಟ್ಟು 2,85,027 ಪ್ರಯಾಣಿಕ ವಾಹನಗಳು ಮಾರಾಟವಾಗಿದ್ದು, ವರ್ಷದ ಹಿಂದೆ ಇದೇ ಅವಧಿಯಲ್ಲಿ 2,84,223 ರಷ್ಟು ವಾಹನ ಮಾರಾಟವಿತ್ತು ಎಂದು ಉದ್ಯಮ ಸಂಸ್ಥೆ ವರದಿಯಲ್ಲಿ ತಿಳಿಸಿದೆ.

ಪ್ರಯಾಣಿಕರ ವಾಹನಗಳ ಮಾರಾಟದಲ್ಲಿ ಉಂಟಾಗಿದ್ದ ಏರಿಕೆ, ಉದ್ಯೋಗ ಕಡಿತ ಭೀತಿ ದೂರಗೊಳಿಸಿ, ವಾಹನ ವಲಯದಲ್ಲಿ ಚೇತರಿಕೆಯುಂಟಾಗುವ ಭರವಸೆ ಮೂಡಿಸಿತ್ತು. ಆದರೆ, ವರ್ಷಾಂತ್ಯಕ್ಕೆ ವಾಹನ ಮಾರಾಟ ಕುಸಿತದ ಪ್ರಮಾಣ 12.76 ರಷ್ಟಿದ್ದು, ಆತಂಕ ಮನೆ ಮಾಡಿದೆ.

ಪ್ರಯಾಣಿಕರ ವಾಹನ ಮಾರಾಟ ವಿಭಾಗದಲ್ಲಿ ಉತ್ಪಾದನೆ ಕಳೆದ ತಿಂಗಳು ಶೇ. 21.14ಕ್ಕೆ ಇಳಿಯುವ ಮೂಲಕ 2, 69, 186ಕ್ಕೆ ತಲುಪಿತ್ತು. ರಫ್ತು ಪ್ರಮಾಣ ಶೇ. 2.18ರಷ್ಟು ಕುಸಿದಿದೆ. ಈ ತಿಂಗಳ ಒಟ್ಟು ಯುನಿಟ್‍ಗಳ 2,85,027 ಮಾರಾಟದ ಪೈಕಿ , 1,73,549 ಪ್ರಯಾಣಿಕರ ಕಾರುಗಳೇ ಆಗಿದ್ದು, ಶೇ. 6.34 ರಷ್ಟು ಕುಸಿತ ಕಂಡಿದೆ. ಕಾರುಗಳ ಉತ್ಪಾದನೆ 1,62,343 ವಾಹನಗಳಾಗಿದ್ದು, ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ. 30.22ರಷ್ಟು ಕುಸಿತ ಕಂಡಿದೆ. ಪ್ರಯಾಣಿಕರ ಕಾರಿನ ಬಹುಪಾಲು ಪ್ರಯಾಣಿಕ ವಾಹನಗಳನ್ನೇ ತಯಾರಿಸಲಾಗುತ್ತದೆ. ಇದರಲ್ಲಿ ಯುಟಿಲಿಟಿ ಮತ್ತು ವ್ಯಾನ್ ಗಳು ಸೇರಿವೆ.

ಇನ್ನು ಪ್ರಯಾಣಿಕರ ವಾಹನ, ವಾಣಿಜ್ಯ ವಾಹನ, ದ್ವಿಚಕ್ತರ ವಾಹನ, ತ್ರಿಚಕ್ರ ವಾಹನಗಳು ಸೇರಿ ಒಟ್ಟು ದೇಶೀಯ ಮಾರಾಟ ವರ್ಷದಿಂದ ವರ್ಷಕ್ಕೆ ಶೇ. 12.76ರಷ್ಟು ಕುಸಿದಿದೆ. ಒಟ್ಟು ಉತ್ಪಾದನೆ ಶೇ. 26.22 ರಷ್ಟು ಕುಸಿದಿದ್ದು, ರಫ್ತು ಶೇ. 2.72ರಷ್ಟು ಏರಿಕೆಯಾಗಿದೆ. ಅಕ್ಟೋಬರ್ ನಲ್ಲಿ ಒಟ್ಟು 17,57,264 ದ್ವಿಚಕ್ರ ವಾಹನಗಳು ಮಾರಾಟವಾಗಿದ್ದು, ಹಿಂದಿನ ಅವಧಿಗೆ ಹೋಲಿಸಿದರೆ ಶೇ. 14.43 ರಷ್ಟು ಕುಸಿದಿದೆ. ದ್ವಿಚಕ್ರ ವಾಹನ ರಫ್ತು ಶೇ. 8.03ರಷ್ಟು ಏರಿಕೆಯಾಗಿದ್ದರೂ, ಉತ್ಪಾದನೆ ಶೇ. 26.57ರಷ್ಟು ನೆಲಕಚ್ಚಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...