Homeಎಕಾನಮಿಅಕ್ಟೋಬರ್ ನಲ್ಲಿ ಪ್ರಯಾಣಿಕರ ವಾಹನ ಮಾರಾಟದಲ್ಲಿ ಚೇತರಿಕೆ: ಶೇ. 0.28 ರಷ್ಟು ಹೆಚ್ಚಳ SIAM ಮಾಹಿತಿ

ಅಕ್ಟೋಬರ್ ನಲ್ಲಿ ಪ್ರಯಾಣಿಕರ ವಾಹನ ಮಾರಾಟದಲ್ಲಿ ಚೇತರಿಕೆ: ಶೇ. 0.28 ರಷ್ಟು ಹೆಚ್ಚಳ SIAM ಮಾಹಿತಿ

- Advertisement -
- Advertisement -

ಪ್ರಯಾಣಕ್ಕೆ ಬಳಸುವ ಮತ್ತು ವಾಣಿಜ್ಯ ವಾಹನಗಳು ಸೇರಿದಂತೆ ಒಟ್ಟು ದೇಶೀಯ ವಾಹನ ಮಾರಾಟ ಶೇ. 12.76 ರಷ್ಟು ಕುಸಿದಿದೆ. ಆದರೆ ದೇಶೀಯ ಮಾರುಕಟ್ಟೆಯಲ್ಲಿ ಒಟ್ಟು ಪ್ರಯಾಣಿಕರ ವಾಹನಗಳ ಮಾರಾಟವು, ಅಕ್ಟೋಬರ್ ನಲ್ಲಿ ಶೇ.0.28 ರಷ್ಟು ಹೆಚ್ಚಾಗಿದೆ ಎಂದು ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ತಯಾರಕರ ಮಾಹಿತಿ ಸಂಸ್ಥೆ (ಎಸ್‍ಐಎಎಂ) ಮಾಹಿತಿ ನೀಡಿದೆ.

ದೇಶೀಯ ಮಾರುಕಟ್ಟೆಯಲ್ಲಿ ಒಟ್ಟು ಪ್ರಯಾಣಿಕರ ವಾಹನಗಳ ಮಾರಾಟವು, ಶೇ.0.28 ರಷ್ಟು ಹೆಚ್ಚಾಗಿದೆ ಎಂದು ಇಂಡಸ್ಟ್ರಿ ಬಾಡಿ ಎಸ್‍ಐಎಎಂ ಹೇಳಿದೆ. ಅಕ್ಟೋಬರ್‌ನಲ್ಲಿ ಒಟ್ಟು 2,85,027 ಪ್ರಯಾಣಿಕ ವಾಹನಗಳು ಮಾರಾಟವಾಗಿದ್ದು, ವರ್ಷದ ಹಿಂದೆ ಇದೇ ಅವಧಿಯಲ್ಲಿ 2,84,223 ರಷ್ಟು ವಾಹನ ಮಾರಾಟವಿತ್ತು ಎಂದು ಉದ್ಯಮ ಸಂಸ್ಥೆ ವರದಿಯಲ್ಲಿ ತಿಳಿಸಿದೆ.

ಪ್ರಯಾಣಿಕರ ವಾಹನಗಳ ಮಾರಾಟದಲ್ಲಿ ಉಂಟಾಗಿದ್ದ ಏರಿಕೆ, ಉದ್ಯೋಗ ಕಡಿತ ಭೀತಿ ದೂರಗೊಳಿಸಿ, ವಾಹನ ವಲಯದಲ್ಲಿ ಚೇತರಿಕೆಯುಂಟಾಗುವ ಭರವಸೆ ಮೂಡಿಸಿತ್ತು. ಆದರೆ, ವರ್ಷಾಂತ್ಯಕ್ಕೆ ವಾಹನ ಮಾರಾಟ ಕುಸಿತದ ಪ್ರಮಾಣ 12.76 ರಷ್ಟಿದ್ದು, ಆತಂಕ ಮನೆ ಮಾಡಿದೆ.

ಪ್ರಯಾಣಿಕರ ವಾಹನ ಮಾರಾಟ ವಿಭಾಗದಲ್ಲಿ ಉತ್ಪಾದನೆ ಕಳೆದ ತಿಂಗಳು ಶೇ. 21.14ಕ್ಕೆ ಇಳಿಯುವ ಮೂಲಕ 2, 69, 186ಕ್ಕೆ ತಲುಪಿತ್ತು. ರಫ್ತು ಪ್ರಮಾಣ ಶೇ. 2.18ರಷ್ಟು ಕುಸಿದಿದೆ. ಈ ತಿಂಗಳ ಒಟ್ಟು ಯುನಿಟ್‍ಗಳ 2,85,027 ಮಾರಾಟದ ಪೈಕಿ , 1,73,549 ಪ್ರಯಾಣಿಕರ ಕಾರುಗಳೇ ಆಗಿದ್ದು, ಶೇ. 6.34 ರಷ್ಟು ಕುಸಿತ ಕಂಡಿದೆ. ಕಾರುಗಳ ಉತ್ಪಾದನೆ 1,62,343 ವಾಹನಗಳಾಗಿದ್ದು, ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ. 30.22ರಷ್ಟು ಕುಸಿತ ಕಂಡಿದೆ. ಪ್ರಯಾಣಿಕರ ಕಾರಿನ ಬಹುಪಾಲು ಪ್ರಯಾಣಿಕ ವಾಹನಗಳನ್ನೇ ತಯಾರಿಸಲಾಗುತ್ತದೆ. ಇದರಲ್ಲಿ ಯುಟಿಲಿಟಿ ಮತ್ತು ವ್ಯಾನ್ ಗಳು ಸೇರಿವೆ.

ಇನ್ನು ಪ್ರಯಾಣಿಕರ ವಾಹನ, ವಾಣಿಜ್ಯ ವಾಹನ, ದ್ವಿಚಕ್ತರ ವಾಹನ, ತ್ರಿಚಕ್ರ ವಾಹನಗಳು ಸೇರಿ ಒಟ್ಟು ದೇಶೀಯ ಮಾರಾಟ ವರ್ಷದಿಂದ ವರ್ಷಕ್ಕೆ ಶೇ. 12.76ರಷ್ಟು ಕುಸಿದಿದೆ. ಒಟ್ಟು ಉತ್ಪಾದನೆ ಶೇ. 26.22 ರಷ್ಟು ಕುಸಿದಿದ್ದು, ರಫ್ತು ಶೇ. 2.72ರಷ್ಟು ಏರಿಕೆಯಾಗಿದೆ. ಅಕ್ಟೋಬರ್ ನಲ್ಲಿ ಒಟ್ಟು 17,57,264 ದ್ವಿಚಕ್ರ ವಾಹನಗಳು ಮಾರಾಟವಾಗಿದ್ದು, ಹಿಂದಿನ ಅವಧಿಗೆ ಹೋಲಿಸಿದರೆ ಶೇ. 14.43 ರಷ್ಟು ಕುಸಿದಿದೆ. ದ್ವಿಚಕ್ರ ವಾಹನ ರಫ್ತು ಶೇ. 8.03ರಷ್ಟು ಏರಿಕೆಯಾಗಿದ್ದರೂ, ಉತ್ಪಾದನೆ ಶೇ. 26.57ರಷ್ಟು ನೆಲಕಚ್ಚಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...