Homeಎಕಾನಮಿಅಕ್ಟೋಬರ್ ನಲ್ಲಿ ಪ್ರಯಾಣಿಕರ ವಾಹನ ಮಾರಾಟದಲ್ಲಿ ಚೇತರಿಕೆ: ಶೇ. 0.28 ರಷ್ಟು ಹೆಚ್ಚಳ SIAM ಮಾಹಿತಿ

ಅಕ್ಟೋಬರ್ ನಲ್ಲಿ ಪ್ರಯಾಣಿಕರ ವಾಹನ ಮಾರಾಟದಲ್ಲಿ ಚೇತರಿಕೆ: ಶೇ. 0.28 ರಷ್ಟು ಹೆಚ್ಚಳ SIAM ಮಾಹಿತಿ

- Advertisement -
- Advertisement -

ಪ್ರಯಾಣಕ್ಕೆ ಬಳಸುವ ಮತ್ತು ವಾಣಿಜ್ಯ ವಾಹನಗಳು ಸೇರಿದಂತೆ ಒಟ್ಟು ದೇಶೀಯ ವಾಹನ ಮಾರಾಟ ಶೇ. 12.76 ರಷ್ಟು ಕುಸಿದಿದೆ. ಆದರೆ ದೇಶೀಯ ಮಾರುಕಟ್ಟೆಯಲ್ಲಿ ಒಟ್ಟು ಪ್ರಯಾಣಿಕರ ವಾಹನಗಳ ಮಾರಾಟವು, ಅಕ್ಟೋಬರ್ ನಲ್ಲಿ ಶೇ.0.28 ರಷ್ಟು ಹೆಚ್ಚಾಗಿದೆ ಎಂದು ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ತಯಾರಕರ ಮಾಹಿತಿ ಸಂಸ್ಥೆ (ಎಸ್‍ಐಎಎಂ) ಮಾಹಿತಿ ನೀಡಿದೆ.

ದೇಶೀಯ ಮಾರುಕಟ್ಟೆಯಲ್ಲಿ ಒಟ್ಟು ಪ್ರಯಾಣಿಕರ ವಾಹನಗಳ ಮಾರಾಟವು, ಶೇ.0.28 ರಷ್ಟು ಹೆಚ್ಚಾಗಿದೆ ಎಂದು ಇಂಡಸ್ಟ್ರಿ ಬಾಡಿ ಎಸ್‍ಐಎಎಂ ಹೇಳಿದೆ. ಅಕ್ಟೋಬರ್‌ನಲ್ಲಿ ಒಟ್ಟು 2,85,027 ಪ್ರಯಾಣಿಕ ವಾಹನಗಳು ಮಾರಾಟವಾಗಿದ್ದು, ವರ್ಷದ ಹಿಂದೆ ಇದೇ ಅವಧಿಯಲ್ಲಿ 2,84,223 ರಷ್ಟು ವಾಹನ ಮಾರಾಟವಿತ್ತು ಎಂದು ಉದ್ಯಮ ಸಂಸ್ಥೆ ವರದಿಯಲ್ಲಿ ತಿಳಿಸಿದೆ.

ಪ್ರಯಾಣಿಕರ ವಾಹನಗಳ ಮಾರಾಟದಲ್ಲಿ ಉಂಟಾಗಿದ್ದ ಏರಿಕೆ, ಉದ್ಯೋಗ ಕಡಿತ ಭೀತಿ ದೂರಗೊಳಿಸಿ, ವಾಹನ ವಲಯದಲ್ಲಿ ಚೇತರಿಕೆಯುಂಟಾಗುವ ಭರವಸೆ ಮೂಡಿಸಿತ್ತು. ಆದರೆ, ವರ್ಷಾಂತ್ಯಕ್ಕೆ ವಾಹನ ಮಾರಾಟ ಕುಸಿತದ ಪ್ರಮಾಣ 12.76 ರಷ್ಟಿದ್ದು, ಆತಂಕ ಮನೆ ಮಾಡಿದೆ.

ಪ್ರಯಾಣಿಕರ ವಾಹನ ಮಾರಾಟ ವಿಭಾಗದಲ್ಲಿ ಉತ್ಪಾದನೆ ಕಳೆದ ತಿಂಗಳು ಶೇ. 21.14ಕ್ಕೆ ಇಳಿಯುವ ಮೂಲಕ 2, 69, 186ಕ್ಕೆ ತಲುಪಿತ್ತು. ರಫ್ತು ಪ್ರಮಾಣ ಶೇ. 2.18ರಷ್ಟು ಕುಸಿದಿದೆ. ಈ ತಿಂಗಳ ಒಟ್ಟು ಯುನಿಟ್‍ಗಳ 2,85,027 ಮಾರಾಟದ ಪೈಕಿ , 1,73,549 ಪ್ರಯಾಣಿಕರ ಕಾರುಗಳೇ ಆಗಿದ್ದು, ಶೇ. 6.34 ರಷ್ಟು ಕುಸಿತ ಕಂಡಿದೆ. ಕಾರುಗಳ ಉತ್ಪಾದನೆ 1,62,343 ವಾಹನಗಳಾಗಿದ್ದು, ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ. 30.22ರಷ್ಟು ಕುಸಿತ ಕಂಡಿದೆ. ಪ್ರಯಾಣಿಕರ ಕಾರಿನ ಬಹುಪಾಲು ಪ್ರಯಾಣಿಕ ವಾಹನಗಳನ್ನೇ ತಯಾರಿಸಲಾಗುತ್ತದೆ. ಇದರಲ್ಲಿ ಯುಟಿಲಿಟಿ ಮತ್ತು ವ್ಯಾನ್ ಗಳು ಸೇರಿವೆ.

ಇನ್ನು ಪ್ರಯಾಣಿಕರ ವಾಹನ, ವಾಣಿಜ್ಯ ವಾಹನ, ದ್ವಿಚಕ್ತರ ವಾಹನ, ತ್ರಿಚಕ್ರ ವಾಹನಗಳು ಸೇರಿ ಒಟ್ಟು ದೇಶೀಯ ಮಾರಾಟ ವರ್ಷದಿಂದ ವರ್ಷಕ್ಕೆ ಶೇ. 12.76ರಷ್ಟು ಕುಸಿದಿದೆ. ಒಟ್ಟು ಉತ್ಪಾದನೆ ಶೇ. 26.22 ರಷ್ಟು ಕುಸಿದಿದ್ದು, ರಫ್ತು ಶೇ. 2.72ರಷ್ಟು ಏರಿಕೆಯಾಗಿದೆ. ಅಕ್ಟೋಬರ್ ನಲ್ಲಿ ಒಟ್ಟು 17,57,264 ದ್ವಿಚಕ್ರ ವಾಹನಗಳು ಮಾರಾಟವಾಗಿದ್ದು, ಹಿಂದಿನ ಅವಧಿಗೆ ಹೋಲಿಸಿದರೆ ಶೇ. 14.43 ರಷ್ಟು ಕುಸಿದಿದೆ. ದ್ವಿಚಕ್ರ ವಾಹನ ರಫ್ತು ಶೇ. 8.03ರಷ್ಟು ಏರಿಕೆಯಾಗಿದ್ದರೂ, ಉತ್ಪಾದನೆ ಶೇ. 26.57ರಷ್ಟು ನೆಲಕಚ್ಚಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...