Homeಎಕಾನಮಿಅಕ್ಟೋಬರ್ ನಲ್ಲಿ ಪ್ರಯಾಣಿಕರ ವಾಹನ ಮಾರಾಟದಲ್ಲಿ ಚೇತರಿಕೆ: ಶೇ. 0.28 ರಷ್ಟು ಹೆಚ್ಚಳ SIAM ಮಾಹಿತಿ

ಅಕ್ಟೋಬರ್ ನಲ್ಲಿ ಪ್ರಯಾಣಿಕರ ವಾಹನ ಮಾರಾಟದಲ್ಲಿ ಚೇತರಿಕೆ: ಶೇ. 0.28 ರಷ್ಟು ಹೆಚ್ಚಳ SIAM ಮಾಹಿತಿ

- Advertisement -
- Advertisement -

ಪ್ರಯಾಣಕ್ಕೆ ಬಳಸುವ ಮತ್ತು ವಾಣಿಜ್ಯ ವಾಹನಗಳು ಸೇರಿದಂತೆ ಒಟ್ಟು ದೇಶೀಯ ವಾಹನ ಮಾರಾಟ ಶೇ. 12.76 ರಷ್ಟು ಕುಸಿದಿದೆ. ಆದರೆ ದೇಶೀಯ ಮಾರುಕಟ್ಟೆಯಲ್ಲಿ ಒಟ್ಟು ಪ್ರಯಾಣಿಕರ ವಾಹನಗಳ ಮಾರಾಟವು, ಅಕ್ಟೋಬರ್ ನಲ್ಲಿ ಶೇ.0.28 ರಷ್ಟು ಹೆಚ್ಚಾಗಿದೆ ಎಂದು ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ತಯಾರಕರ ಮಾಹಿತಿ ಸಂಸ್ಥೆ (ಎಸ್‍ಐಎಎಂ) ಮಾಹಿತಿ ನೀಡಿದೆ.

ದೇಶೀಯ ಮಾರುಕಟ್ಟೆಯಲ್ಲಿ ಒಟ್ಟು ಪ್ರಯಾಣಿಕರ ವಾಹನಗಳ ಮಾರಾಟವು, ಶೇ.0.28 ರಷ್ಟು ಹೆಚ್ಚಾಗಿದೆ ಎಂದು ಇಂಡಸ್ಟ್ರಿ ಬಾಡಿ ಎಸ್‍ಐಎಎಂ ಹೇಳಿದೆ. ಅಕ್ಟೋಬರ್‌ನಲ್ಲಿ ಒಟ್ಟು 2,85,027 ಪ್ರಯಾಣಿಕ ವಾಹನಗಳು ಮಾರಾಟವಾಗಿದ್ದು, ವರ್ಷದ ಹಿಂದೆ ಇದೇ ಅವಧಿಯಲ್ಲಿ 2,84,223 ರಷ್ಟು ವಾಹನ ಮಾರಾಟವಿತ್ತು ಎಂದು ಉದ್ಯಮ ಸಂಸ್ಥೆ ವರದಿಯಲ್ಲಿ ತಿಳಿಸಿದೆ.

ಪ್ರಯಾಣಿಕರ ವಾಹನಗಳ ಮಾರಾಟದಲ್ಲಿ ಉಂಟಾಗಿದ್ದ ಏರಿಕೆ, ಉದ್ಯೋಗ ಕಡಿತ ಭೀತಿ ದೂರಗೊಳಿಸಿ, ವಾಹನ ವಲಯದಲ್ಲಿ ಚೇತರಿಕೆಯುಂಟಾಗುವ ಭರವಸೆ ಮೂಡಿಸಿತ್ತು. ಆದರೆ, ವರ್ಷಾಂತ್ಯಕ್ಕೆ ವಾಹನ ಮಾರಾಟ ಕುಸಿತದ ಪ್ರಮಾಣ 12.76 ರಷ್ಟಿದ್ದು, ಆತಂಕ ಮನೆ ಮಾಡಿದೆ.

ಪ್ರಯಾಣಿಕರ ವಾಹನ ಮಾರಾಟ ವಿಭಾಗದಲ್ಲಿ ಉತ್ಪಾದನೆ ಕಳೆದ ತಿಂಗಳು ಶೇ. 21.14ಕ್ಕೆ ಇಳಿಯುವ ಮೂಲಕ 2, 69, 186ಕ್ಕೆ ತಲುಪಿತ್ತು. ರಫ್ತು ಪ್ರಮಾಣ ಶೇ. 2.18ರಷ್ಟು ಕುಸಿದಿದೆ. ಈ ತಿಂಗಳ ಒಟ್ಟು ಯುನಿಟ್‍ಗಳ 2,85,027 ಮಾರಾಟದ ಪೈಕಿ , 1,73,549 ಪ್ರಯಾಣಿಕರ ಕಾರುಗಳೇ ಆಗಿದ್ದು, ಶೇ. 6.34 ರಷ್ಟು ಕುಸಿತ ಕಂಡಿದೆ. ಕಾರುಗಳ ಉತ್ಪಾದನೆ 1,62,343 ವಾಹನಗಳಾಗಿದ್ದು, ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ. 30.22ರಷ್ಟು ಕುಸಿತ ಕಂಡಿದೆ. ಪ್ರಯಾಣಿಕರ ಕಾರಿನ ಬಹುಪಾಲು ಪ್ರಯಾಣಿಕ ವಾಹನಗಳನ್ನೇ ತಯಾರಿಸಲಾಗುತ್ತದೆ. ಇದರಲ್ಲಿ ಯುಟಿಲಿಟಿ ಮತ್ತು ವ್ಯಾನ್ ಗಳು ಸೇರಿವೆ.

ಇನ್ನು ಪ್ರಯಾಣಿಕರ ವಾಹನ, ವಾಣಿಜ್ಯ ವಾಹನ, ದ್ವಿಚಕ್ತರ ವಾಹನ, ತ್ರಿಚಕ್ರ ವಾಹನಗಳು ಸೇರಿ ಒಟ್ಟು ದೇಶೀಯ ಮಾರಾಟ ವರ್ಷದಿಂದ ವರ್ಷಕ್ಕೆ ಶೇ. 12.76ರಷ್ಟು ಕುಸಿದಿದೆ. ಒಟ್ಟು ಉತ್ಪಾದನೆ ಶೇ. 26.22 ರಷ್ಟು ಕುಸಿದಿದ್ದು, ರಫ್ತು ಶೇ. 2.72ರಷ್ಟು ಏರಿಕೆಯಾಗಿದೆ. ಅಕ್ಟೋಬರ್ ನಲ್ಲಿ ಒಟ್ಟು 17,57,264 ದ್ವಿಚಕ್ರ ವಾಹನಗಳು ಮಾರಾಟವಾಗಿದ್ದು, ಹಿಂದಿನ ಅವಧಿಗೆ ಹೋಲಿಸಿದರೆ ಶೇ. 14.43 ರಷ್ಟು ಕುಸಿದಿದೆ. ದ್ವಿಚಕ್ರ ವಾಹನ ರಫ್ತು ಶೇ. 8.03ರಷ್ಟು ಏರಿಕೆಯಾಗಿದ್ದರೂ, ಉತ್ಪಾದನೆ ಶೇ. 26.57ರಷ್ಟು ನೆಲಕಚ್ಚಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...