Homeಮುಖಪುಟಪಾದ್ರಿಯಿಂದ ಮುಸ್ಲಿಂ ವಿರೋಧಿ ಭಾಷಣ - ಪ್ರಾರ್ಥನಾ ಸಭೆಯಿಂದ ಹೊರನಡೆದ ಕ್ರೈಸ್ತ ಸನ್ಯಾಸಿನಿಯರು!

ಪಾದ್ರಿಯಿಂದ ಮುಸ್ಲಿಂ ವಿರೋಧಿ ಭಾಷಣ – ಪ್ರಾರ್ಥನಾ ಸಭೆಯಿಂದ ಹೊರನಡೆದ ಕ್ರೈಸ್ತ ಸನ್ಯಾಸಿನಿಯರು!

- Advertisement -
- Advertisement -

ಕೇರಳದ ಪಾಲಾ ಬಿಷಪ್‌ ಜೋಸೆಫ್‌‌‌ ಕಲ್ಲರಂಗಟ್ ಅವರ ಮುಸ್ಲಿಂ ವಿರೋಧಿ ಹೇಳಿಕೆ ರಾಜ್ಯದಾದ್ಯಂತ ಚರ್ಚೆಯಾಗುತ್ತಿರುವ ಸಮಯದಲ್ಲೆ, ಕೊಟ್ಟಾಯಂನ ಕುರವಿಲಂಗಾಡ್‌‌ನ ಮತ್ತೊಬ್ಬ ಕ್ರಿಶ್ಚಿಯನ್ ಧರ್ಮಗುರುವೊಬ್ಬರು ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ್ದಾರೆಂದು ಅಲ್ಲಿನ ನಾಲ್ವರು ಕ್ರೈಸ್ತ ಸನ್ಯಾಸಿನಿಯರು ಆರೋಪಿಸಿದ್ದಾರೆ. ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಸನ್ಯಾಸಿನಿಯರು ಪಾರ್ಥನಾ ಸಭೆಯಿಂದ ಹೊರ ನಡೆದ ಘಟನೆ ನಡೆದಿದೆ.

ಸೆಪ್ಟೆಂಬರ್ 13 ರ ಭಾನುವಾರದಂದು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸನ್ಯಾಸಿನಿಯರು, “ಸೈಂಟ್‌ ಪ್ರಾನ್ಸಿಸ್‌‌ ಚರ್ಚಿನ ಪ್ರಾರ್ಥನಾ ಸಭೆಯಲ್ಲಿ ಅಲ್ಲಿನ ಪಾದ್ರಿಯಾದ ರಾಜೀವ್, ಮುಸ್ಲಿಮರ ವಿರುದ್ದ ದ್ವೇಷ ಭಾಷಣ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಕೋಮುದ್ವೇಷ ಬಿತ್ತುವ ವರದಿಗಳಿಂದ ದೇಶಕ್ಕೆ ಕೆಟ್ಟ ಹೆಸರು: ಸುಪ್ರೀಂ ಆತಂಕ

‘ಮುಸ್ಲಿಂ ವಿರೋಧಿ ಭಾಷಣ ಈ ಹಿಂದೆಯು ಮಾಡಿದ್ದರು’- ಸನ್ಯಾಸಿನಿಯರ ಆರೋಪ

ಪಾದ್ರಿ ರಾಜೀವ್ ಅವರು ಈ ಹಿಂದೆ ಕೂಡಾ ಮುಸ್ಲಿಂ ವಿರೋಧಿ ಬಾಷಣ ಮಾಡಿದ್ದರು ಎಂದು ಸನ್ಯಾಸಿನಿಯರು ಹೇಳಿದ್ದಾರೆ. ಜೊತೆಗೆ, ‘ಲವ್ ಜಿಹಾದ್’ ಮತ್ತು ‘ಮಾದಕದ್ರವ್ಯ ಜಿಹಾದ್’ ಕುರಿತ ಮಾರ್ ಜೋಸೆಫ್ ಕಲ್ಲರಂಗಟ್ ಅವರ ಹೇಳಿಕೆಗಳನ್ನು ಬೆಂಬಲಿಸದಂತೆ ಜನರನ್ನು ಅವರು ಕೇಳಿಕೊಂಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಸನ್ಯಾಸಿನಿ ಅನುಪಮಾ, “ಇಂದಿನ (ಸೆಪ್ಟೆಂಬರ್ 12) ಪ್ರಾರ್ಥನೆಯ ಸಮಯದಲ್ಲಿ ಕೋಮುವಾದದ ಬೀಜ ಬಿತ್ತಿದ್ದ ಪಾಲ ಬಿಷಪ್ ಅವರನ್ನು ಬೆಂಬಲಿಸಿ ರಾಜೀವ್‌ ಭಾಷಣ ಮಾಡಿದ್ದಾರೆ. ರಾಜೀವ್ ತಮ್ಮ ಭಾಷಣದಲ್ಲಿ ಮುಸ್ಲಿಮರು ಓಡಿಸುವ ಆಟೋಗಳಲ್ಲಿ ಓಡಾಡದಂತೆ ಮತ್ತು ಅವರಿಂದ ತರಕಾರಿಗಳಂತಹ ವಸ್ತುಗಳನ್ನು ಕೊಳ್ಳದಂತೆ ಹೇಳಿದರು. ಅವರು ಇಂತಹ ಹೇಳಿಕೆಗಳನ್ನು ನೀಡುವುದು ಇದೇ ಮೊದಲಲ್ಲ. ಈ ಹಿಂದೆಯೂ ಅವರು ಮುಸ್ಲಿಮರ ಬಗ್ಗೆ ಇದೇ ರೀತಿಯ ಹೇಳಿಕೆ ನೀಡಿದ್ದರು. ಆದರೆ ಇಂದು, ನಾವು ಪ್ರತಿಕ್ರಿಯಿಸದೇ ಇರಲು ಸಾಧ್ಯವಿಲ್ಲ. ಅದಕ್ಕಾಗಿ ನಾವು ಅಲ್ಲಿಂದ ಹೊರಬಂದೆವು” ಎಂದು ಹೇಳಿದ್ದಾರೆ.

“ಕ್ರಿಸ್ತ ನಮಗೆ ಕಲಿಸಿದ ವಿಷಯವೇನೆಂದರೆ ಎಲ್ಲರನ್ನೂ ಪ್ರೀತಿಸುವುದಾಗಿದೆಯೆ ಹೊರತು ಕೋಮುವಾದವನ್ನು ಬಿತ್ತುವುದಲ್ಲ. ಕ್ರಿಸ್ತ ನಮಗೆ ಏನನ್ನು ಬೋಧಿಸಿದ್ದಾರೋ ಅದಕ್ಕೆ ವಿರುದ್ಧವಾದ ವಿಷಯಗಳನ್ನು ಪಾದ್ರಿ ಹೇಳುತ್ತಿದ್ದಾಗ ನಮಗೆ ಅದನ್ನು ನೋಡಿ ಸುಮ್ಮನಿರಲಾಗಿಲ್ಲ, ಅದಕ್ಕಾಗಿ ನಾವು ಪ್ರತಿಕ್ರಿಯಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಹುಜನ ಭಾರತ; ದಲಿತ ದ್ವೇಷವನ್ನು ಪ್ರತಿಭೆಯಿಂದ ಗೆದ್ದವರು ಪಲ್ವಂಕರ್ ಸೋದರರು

ಮುಸ್ಲಿಂ ವಿರೋಧಿ ಮತ್ತು ಕೋಮುವಾದಿ ಹೇಳಿಕೆ ನೀಡಿದ್ದಕ್ಕಾಗಿ ಪಾದ್ರಿ ರಾಜೀವ್ ಅವರ ವಿರುದ್ದ ಪ್ರಕರಣ ದಾಖಲಾಗಿರುವುದು ಇನ್ನೂ ವರದಿಯಾಗಿಲ್ಲ.

ವಿಶೇಷವೇನೆಂದರೆ, ಇದೇ ಸನ್ಯಾಸಿನಿಯರು ಈ ಹಿಂದೆ ಅತ್ಯಾಚಾರ ಪ್ರಕರಣದ ಆರೋಪಿ ಬಿಷಪ್ ಫ್ರಾಂಕೊ ಮುಲಕ್ಕಲ್ ಅವರನ್ನು ಬಂಧಿಸುವಂತೆ ಬಹಿರಂಗವಾಗಿ ಪ್ರತಿಭಟನೆ ನಡೆಸಿದ್ದರು.

2018 ರಲ್ಲಿ ಕೊಚ್ಚಿಯಲ್ಲಿ ಬಿಷಪ್ ಫ್ರಾಂಕೊ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಸನ್ಯಾಸಿನಿಯರು ಬಹಿರಂಗ ಪ್ರತಿಭಟನೆ ನಡೆಸಿದ್ದರು. ಅತ್ಯಾಚಾರ ಸಂತ್ರಸ್ತೆಯ ಬೆಂಬಲಕ್ಕೆ ನಿಂತಿದ್ದ ಇವರು ಐತಿಹಾಸಿಕ ಪ್ರತಿಭಟನೆ ನಡೆಸಿದ್ದರು. ಇದರ ಪರಿಣಾಮವಾಗಿ, ಮೂರು ದಿನಗಳ ವಿಚಾರಣೆಯ ನಂತರ 2018 ರ ಸೆಪ್ಟೆಂಬರ್‌ನಲ್ಲಿ ಬಿಷಪ್‌ ಫ್ರಾಂಕೊ ಅವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ದ್ವೇಷ ಭಾಷಣ ಆರೋಪ: ಜಾಮಿಯಾ ಶೂಟರ್ ಬಂಧನ

ವಿವಾದಕ್ಕೆ ಕಾರಣವಾದ ಪಾಲಾ ಬಿಷಪ್‌ ಜೋಸೆಫ್‌‌‌ ಕಲ್ಲರಂಗಟ್ ಹೇಳಿಕೆ

ಸೆಪ್ಟೆಂಬರ್ 9 ರ ಬುಧವಾರದಂದು ಪಾಲಾ ಬಿಷಪ್‌ ಜೋಸೆಫ್‌‌‌ ಕಲ್ಲರಂಗಟ್ ಅವರು ಚರ್ಚ್‌ನಲ್ಲಿನ ಸಭೆಯೊಂದನ್ನು ಉದ್ದೇಶಿಸಿ ಮಾತನಾಡುತ್ತಾ, “ಕೇರಳದಲ್ಲಿ ಮುಸ್ಲಿಮೇತರರು ರಾಜ್ಯದಲ್ಲಿ ‘ಮಾದಕ ದ್ರವ್ಯ ಜಿಹಾದ್‌‌’ಗೆ ಒಳಗಾಗುತ್ತಿದ್ದಾರೆ. ‘ಮಾದಕದ್ರವ್ಯ ಜಿಹಾದ್’ ಮಾಡುವ ಮೂಲಕ ಮುಸ್ಲಿಮರಲ್ಲದವರ, ವಿಶೇಷವಾಗಿ ಯುವಜನರನ್ನು ಮಾದಕ ವ್ಯಸನಕ್ಕೆ ತುತ್ತಾಗುವಂತೆ ಮಾಡಿ ಅವರ ಜೀವನವನ್ನು ಹಾಳುಮಾಡಲಾಗುತ್ತಿದೆ” ಎಂದು ಅವರು ಹೇಳಿದ್ದರು.

ಆದರೆ ಈ ಹೇಳಿಕೆಗೆ ಅವರು ಯಾವುದೇ ಪುರಾವೆಗಳನ್ನು ನೀಡಿರಲಿಲ್ಲ. ಇವರ ಹೇಳಿಕೆ ವರದಿಯಾಗುತ್ತಿದ್ದಂತೆ ರಾಜ್ಯದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಕೇರಳದ ಅನೇಕ ಗಣ್ಯರು ಬಿಷಪ್ ಅವರ ಹೇಳಿಕೆಯನ್ನು ವಿರೋಧಿಸಿದ್ದರು ಮತ್ತು ಅವರ ವಿರುದ್ದ ಪ್ರಕರಣವು ದಾಖಲಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, “ಮಾದಕದ್ರವ್ಯಕ್ಕೆ ಧಾರ್ಮಿಕ ಬಣ್ಣ ನೀಡುವ ಅಗತ್ಯವಿಲ್ಲ ಮತ್ತು ಜವಾಬ್ದಾರಿಯುತ ಸ್ಥಾನದಲ್ಲಿರುವ ಜನರು ಧಾರ್ಮಿಕ ವಿಭಜನೆಯನ್ನು ಮಾಡಬಾರದು” ಎಂದು ಹೇಳಿದ್ದರು.

ಪ್ರತಿಪಕ್ಷದ ನಾಯಕ ವಿಡಿ ಸತೀಶನ್ ಅವರು ಕೂಡಾ ಬಿಷಪ್ ಅವರ ಈ ಹೇಳಿಕೆಯನ್ನು ಖಂಡಿಸಿದ್ದರು. “ಅಪರಾಧಗಳಿಗೆ ಧರ್ಮ, ಜಾತಿ ಅಥವಾ ಲಿಂಗವಿಲ್ಲ ಮತ್ತು ಇದಕ್ಕಾಗಿ ಒಂದು ನಿರ್ದಿಷ್ಟ ಧರ್ಮವನ್ನು ಆರೋಪಿಸುವುದು ತಪ್ಪು” ಎಂದು ಅವರು ಹೇಳಿದ್ದರು.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...