Homeಮುಖಪುಟಪಾದ್ರಿಯಿಂದ ಮುಸ್ಲಿಂ ವಿರೋಧಿ ಭಾಷಣ - ಪ್ರಾರ್ಥನಾ ಸಭೆಯಿಂದ ಹೊರನಡೆದ ಕ್ರೈಸ್ತ ಸನ್ಯಾಸಿನಿಯರು!

ಪಾದ್ರಿಯಿಂದ ಮುಸ್ಲಿಂ ವಿರೋಧಿ ಭಾಷಣ – ಪ್ರಾರ್ಥನಾ ಸಭೆಯಿಂದ ಹೊರನಡೆದ ಕ್ರೈಸ್ತ ಸನ್ಯಾಸಿನಿಯರು!

- Advertisement -
- Advertisement -

ಕೇರಳದ ಪಾಲಾ ಬಿಷಪ್‌ ಜೋಸೆಫ್‌‌‌ ಕಲ್ಲರಂಗಟ್ ಅವರ ಮುಸ್ಲಿಂ ವಿರೋಧಿ ಹೇಳಿಕೆ ರಾಜ್ಯದಾದ್ಯಂತ ಚರ್ಚೆಯಾಗುತ್ತಿರುವ ಸಮಯದಲ್ಲೆ, ಕೊಟ್ಟಾಯಂನ ಕುರವಿಲಂಗಾಡ್‌‌ನ ಮತ್ತೊಬ್ಬ ಕ್ರಿಶ್ಚಿಯನ್ ಧರ್ಮಗುರುವೊಬ್ಬರು ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ್ದಾರೆಂದು ಅಲ್ಲಿನ ನಾಲ್ವರು ಕ್ರೈಸ್ತ ಸನ್ಯಾಸಿನಿಯರು ಆರೋಪಿಸಿದ್ದಾರೆ. ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಸನ್ಯಾಸಿನಿಯರು ಪಾರ್ಥನಾ ಸಭೆಯಿಂದ ಹೊರ ನಡೆದ ಘಟನೆ ನಡೆದಿದೆ.

ಸೆಪ್ಟೆಂಬರ್ 13 ರ ಭಾನುವಾರದಂದು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸನ್ಯಾಸಿನಿಯರು, “ಸೈಂಟ್‌ ಪ್ರಾನ್ಸಿಸ್‌‌ ಚರ್ಚಿನ ಪ್ರಾರ್ಥನಾ ಸಭೆಯಲ್ಲಿ ಅಲ್ಲಿನ ಪಾದ್ರಿಯಾದ ರಾಜೀವ್, ಮುಸ್ಲಿಮರ ವಿರುದ್ದ ದ್ವೇಷ ಭಾಷಣ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಕೋಮುದ್ವೇಷ ಬಿತ್ತುವ ವರದಿಗಳಿಂದ ದೇಶಕ್ಕೆ ಕೆಟ್ಟ ಹೆಸರು: ಸುಪ್ರೀಂ ಆತಂಕ

‘ಮುಸ್ಲಿಂ ವಿರೋಧಿ ಭಾಷಣ ಈ ಹಿಂದೆಯು ಮಾಡಿದ್ದರು’- ಸನ್ಯಾಸಿನಿಯರ ಆರೋಪ

ಪಾದ್ರಿ ರಾಜೀವ್ ಅವರು ಈ ಹಿಂದೆ ಕೂಡಾ ಮುಸ್ಲಿಂ ವಿರೋಧಿ ಬಾಷಣ ಮಾಡಿದ್ದರು ಎಂದು ಸನ್ಯಾಸಿನಿಯರು ಹೇಳಿದ್ದಾರೆ. ಜೊತೆಗೆ, ‘ಲವ್ ಜಿಹಾದ್’ ಮತ್ತು ‘ಮಾದಕದ್ರವ್ಯ ಜಿಹಾದ್’ ಕುರಿತ ಮಾರ್ ಜೋಸೆಫ್ ಕಲ್ಲರಂಗಟ್ ಅವರ ಹೇಳಿಕೆಗಳನ್ನು ಬೆಂಬಲಿಸದಂತೆ ಜನರನ್ನು ಅವರು ಕೇಳಿಕೊಂಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಸನ್ಯಾಸಿನಿ ಅನುಪಮಾ, “ಇಂದಿನ (ಸೆಪ್ಟೆಂಬರ್ 12) ಪ್ರಾರ್ಥನೆಯ ಸಮಯದಲ್ಲಿ ಕೋಮುವಾದದ ಬೀಜ ಬಿತ್ತಿದ್ದ ಪಾಲ ಬಿಷಪ್ ಅವರನ್ನು ಬೆಂಬಲಿಸಿ ರಾಜೀವ್‌ ಭಾಷಣ ಮಾಡಿದ್ದಾರೆ. ರಾಜೀವ್ ತಮ್ಮ ಭಾಷಣದಲ್ಲಿ ಮುಸ್ಲಿಮರು ಓಡಿಸುವ ಆಟೋಗಳಲ್ಲಿ ಓಡಾಡದಂತೆ ಮತ್ತು ಅವರಿಂದ ತರಕಾರಿಗಳಂತಹ ವಸ್ತುಗಳನ್ನು ಕೊಳ್ಳದಂತೆ ಹೇಳಿದರು. ಅವರು ಇಂತಹ ಹೇಳಿಕೆಗಳನ್ನು ನೀಡುವುದು ಇದೇ ಮೊದಲಲ್ಲ. ಈ ಹಿಂದೆಯೂ ಅವರು ಮುಸ್ಲಿಮರ ಬಗ್ಗೆ ಇದೇ ರೀತಿಯ ಹೇಳಿಕೆ ನೀಡಿದ್ದರು. ಆದರೆ ಇಂದು, ನಾವು ಪ್ರತಿಕ್ರಿಯಿಸದೇ ಇರಲು ಸಾಧ್ಯವಿಲ್ಲ. ಅದಕ್ಕಾಗಿ ನಾವು ಅಲ್ಲಿಂದ ಹೊರಬಂದೆವು” ಎಂದು ಹೇಳಿದ್ದಾರೆ.

“ಕ್ರಿಸ್ತ ನಮಗೆ ಕಲಿಸಿದ ವಿಷಯವೇನೆಂದರೆ ಎಲ್ಲರನ್ನೂ ಪ್ರೀತಿಸುವುದಾಗಿದೆಯೆ ಹೊರತು ಕೋಮುವಾದವನ್ನು ಬಿತ್ತುವುದಲ್ಲ. ಕ್ರಿಸ್ತ ನಮಗೆ ಏನನ್ನು ಬೋಧಿಸಿದ್ದಾರೋ ಅದಕ್ಕೆ ವಿರುದ್ಧವಾದ ವಿಷಯಗಳನ್ನು ಪಾದ್ರಿ ಹೇಳುತ್ತಿದ್ದಾಗ ನಮಗೆ ಅದನ್ನು ನೋಡಿ ಸುಮ್ಮನಿರಲಾಗಿಲ್ಲ, ಅದಕ್ಕಾಗಿ ನಾವು ಪ್ರತಿಕ್ರಿಯಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಹುಜನ ಭಾರತ; ದಲಿತ ದ್ವೇಷವನ್ನು ಪ್ರತಿಭೆಯಿಂದ ಗೆದ್ದವರು ಪಲ್ವಂಕರ್ ಸೋದರರು

ಮುಸ್ಲಿಂ ವಿರೋಧಿ ಮತ್ತು ಕೋಮುವಾದಿ ಹೇಳಿಕೆ ನೀಡಿದ್ದಕ್ಕಾಗಿ ಪಾದ್ರಿ ರಾಜೀವ್ ಅವರ ವಿರುದ್ದ ಪ್ರಕರಣ ದಾಖಲಾಗಿರುವುದು ಇನ್ನೂ ವರದಿಯಾಗಿಲ್ಲ.

ವಿಶೇಷವೇನೆಂದರೆ, ಇದೇ ಸನ್ಯಾಸಿನಿಯರು ಈ ಹಿಂದೆ ಅತ್ಯಾಚಾರ ಪ್ರಕರಣದ ಆರೋಪಿ ಬಿಷಪ್ ಫ್ರಾಂಕೊ ಮುಲಕ್ಕಲ್ ಅವರನ್ನು ಬಂಧಿಸುವಂತೆ ಬಹಿರಂಗವಾಗಿ ಪ್ರತಿಭಟನೆ ನಡೆಸಿದ್ದರು.

2018 ರಲ್ಲಿ ಕೊಚ್ಚಿಯಲ್ಲಿ ಬಿಷಪ್ ಫ್ರಾಂಕೊ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಸನ್ಯಾಸಿನಿಯರು ಬಹಿರಂಗ ಪ್ರತಿಭಟನೆ ನಡೆಸಿದ್ದರು. ಅತ್ಯಾಚಾರ ಸಂತ್ರಸ್ತೆಯ ಬೆಂಬಲಕ್ಕೆ ನಿಂತಿದ್ದ ಇವರು ಐತಿಹಾಸಿಕ ಪ್ರತಿಭಟನೆ ನಡೆಸಿದ್ದರು. ಇದರ ಪರಿಣಾಮವಾಗಿ, ಮೂರು ದಿನಗಳ ವಿಚಾರಣೆಯ ನಂತರ 2018 ರ ಸೆಪ್ಟೆಂಬರ್‌ನಲ್ಲಿ ಬಿಷಪ್‌ ಫ್ರಾಂಕೊ ಅವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ದ್ವೇಷ ಭಾಷಣ ಆರೋಪ: ಜಾಮಿಯಾ ಶೂಟರ್ ಬಂಧನ

ವಿವಾದಕ್ಕೆ ಕಾರಣವಾದ ಪಾಲಾ ಬಿಷಪ್‌ ಜೋಸೆಫ್‌‌‌ ಕಲ್ಲರಂಗಟ್ ಹೇಳಿಕೆ

ಸೆಪ್ಟೆಂಬರ್ 9 ರ ಬುಧವಾರದಂದು ಪಾಲಾ ಬಿಷಪ್‌ ಜೋಸೆಫ್‌‌‌ ಕಲ್ಲರಂಗಟ್ ಅವರು ಚರ್ಚ್‌ನಲ್ಲಿನ ಸಭೆಯೊಂದನ್ನು ಉದ್ದೇಶಿಸಿ ಮಾತನಾಡುತ್ತಾ, “ಕೇರಳದಲ್ಲಿ ಮುಸ್ಲಿಮೇತರರು ರಾಜ್ಯದಲ್ಲಿ ‘ಮಾದಕ ದ್ರವ್ಯ ಜಿಹಾದ್‌‌’ಗೆ ಒಳಗಾಗುತ್ತಿದ್ದಾರೆ. ‘ಮಾದಕದ್ರವ್ಯ ಜಿಹಾದ್’ ಮಾಡುವ ಮೂಲಕ ಮುಸ್ಲಿಮರಲ್ಲದವರ, ವಿಶೇಷವಾಗಿ ಯುವಜನರನ್ನು ಮಾದಕ ವ್ಯಸನಕ್ಕೆ ತುತ್ತಾಗುವಂತೆ ಮಾಡಿ ಅವರ ಜೀವನವನ್ನು ಹಾಳುಮಾಡಲಾಗುತ್ತಿದೆ” ಎಂದು ಅವರು ಹೇಳಿದ್ದರು.

ಆದರೆ ಈ ಹೇಳಿಕೆಗೆ ಅವರು ಯಾವುದೇ ಪುರಾವೆಗಳನ್ನು ನೀಡಿರಲಿಲ್ಲ. ಇವರ ಹೇಳಿಕೆ ವರದಿಯಾಗುತ್ತಿದ್ದಂತೆ ರಾಜ್ಯದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಕೇರಳದ ಅನೇಕ ಗಣ್ಯರು ಬಿಷಪ್ ಅವರ ಹೇಳಿಕೆಯನ್ನು ವಿರೋಧಿಸಿದ್ದರು ಮತ್ತು ಅವರ ವಿರುದ್ದ ಪ್ರಕರಣವು ದಾಖಲಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, “ಮಾದಕದ್ರವ್ಯಕ್ಕೆ ಧಾರ್ಮಿಕ ಬಣ್ಣ ನೀಡುವ ಅಗತ್ಯವಿಲ್ಲ ಮತ್ತು ಜವಾಬ್ದಾರಿಯುತ ಸ್ಥಾನದಲ್ಲಿರುವ ಜನರು ಧಾರ್ಮಿಕ ವಿಭಜನೆಯನ್ನು ಮಾಡಬಾರದು” ಎಂದು ಹೇಳಿದ್ದರು.

ಪ್ರತಿಪಕ್ಷದ ನಾಯಕ ವಿಡಿ ಸತೀಶನ್ ಅವರು ಕೂಡಾ ಬಿಷಪ್ ಅವರ ಈ ಹೇಳಿಕೆಯನ್ನು ಖಂಡಿಸಿದ್ದರು. “ಅಪರಾಧಗಳಿಗೆ ಧರ್ಮ, ಜಾತಿ ಅಥವಾ ಲಿಂಗವಿಲ್ಲ ಮತ್ತು ಇದಕ್ಕಾಗಿ ಒಂದು ನಿರ್ದಿಷ್ಟ ಧರ್ಮವನ್ನು ಆರೋಪಿಸುವುದು ತಪ್ಪು” ಎಂದು ಅವರು ಹೇಳಿದ್ದರು.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...