Homeಅಂಕಣಗಳುಪತಂಜಲಿ ಕೊರೊನಾ ಔಷಧಿ: ಆಯುರ್ವೇದ ವೈದ್ಯಶಾಸ್ತ್ರಕ್ಕೆ ಮಸಿ ಬಳಿಯುವ ಪ್ರಯತ್ನ

ಪತಂಜಲಿ ಕೊರೊನಾ ಔಷಧಿ: ಆಯುರ್ವೇದ ವೈದ್ಯಶಾಸ್ತ್ರಕ್ಕೆ ಮಸಿ ಬಳಿಯುವ ಪ್ರಯತ್ನ

ಆರೋಗ್ಯವನ್ನು ಸಮಗ್ರ ದೃಷ್ಟಿಯಿಂದ ಕಾಣುವ ವಿಜ್ಞಾನ ಆಯುರ್ವೇದ. ಅದು ವ್ಯಕ್ತಿಯ ಸಮಷ್ಟಿಹಿತಕ್ಕಾಗಿ ದೈಹಿಕ, ಮಾನಸಿಕ, ತಾತ್ವಿಕ ಮತ್ತು ಆಧ್ಯಾತ್ಮಿಕ ಅಂಶಗಳ ಮೇಲೆ ಒತ್ತು ನೀಡುವ ಒಂದು ಪರಿಪೂರ್ಣ ವೈದ್ಯಕೀಯ ಪದ್ಧತಿಯಾಗಿದೆ.

- Advertisement -
- Advertisement -

ಯೋಗ ಗುರು ಮತ್ತು ಪತಂಜಲಿ ಆಯುರ್ವೇದ ಫಾರ್ಮಾ ಸಂಸ್ಥೆಯ ಸ್ಥಾಪಕ ಬಾಬಾ ರಾಮ್‍ದೇವ್, ಕೊರೊನಾಕ್ಕೆ ಒಂದು ಔಷಧಿ ಕಂಡುಹಿಡಿದಿರುವುದಾಗಿಯೂ, ವೈದ್ಯಕೀಯ ಪ್ರಯೋಗದ ವೇಳೆ ಅದು ಭಾರೀ ಯಶಸ್ಸು ಕಂಡಿರುವುದಾಗಿಯೂ ಹೇಳಿಕೊಂಡು ಮತ್ತೆ ಮುನ್ನಲೆಗೆ ಬಂದಿದ್ದಾರೆ. ಕೋವಿಡ್-19ಗೆ ‘ಕೊರೋನಿಲ್’ ಎಂಬ ಔಷಧಿಯನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಿರುವ ಪತಂಜಲಿ ಆಯುರ್ವೇದದ ಸ್ಟಂಟ್ ಹಿನ್ನಡೆಯಾಗಿ ಪರಿಣಮಿಸಿದೆ. ಪತಂಜಲಿಯು ಮಾಡಿರುವ ಪ್ರತಿಪಾದನೆಯನ್ನು ಅವಧಿಗೆ ಮುನ್ನ ಅವಸರವಾಗಿ ಬಹಿರಂಗಗೊಳಿಸಲಾಗಿದ್ದು, ಸುರಕ್ಷತೆಯ ಮತ್ತು ಈ ಔಷಧಿ ಎಷ್ಟು ಪರಿಣಾಮಕಾರಿ ಎಂಬ ಬಗ್ಗೆ ಪ್ರಯೋಗ ಮಾಹಿತಿ, ಆಧಾರಗಳನ್ನು ಎಳ್ಳಷ್ಟೂ ಒದಗಿಸಲಾಗಿಲ್ಲ.

ಈ ಔಷಧಿ ಮತ್ತು ಪ್ರತಿಪಾದನೆಯಯಲ್ಲಿ ತಪ್ಪೇನು? ಆಯುರ್ವೇದವು ಈ ರೋಗ ಚಿಕಿತ್ಸೆಯಲ್ಲಿ ಪರಿಣಾಮಕಾರಿಯಲ್ಲವೆ?

ಪತಂಜಲಿ ಬಿಡುಗಡೆ ಮಾಡಿರುವ ಪ್ರಯೋಗ ವರದಿಯನ್ನು ನಾವು ಪರೀಕ್ಷಿಸಿದರೆ, ಅದು 10 ವರ್ಷ ಕೆಳಗಿನವರನ್ನು ಮತ್ತು 59 ವರ್ಷ ಮೇಲ್ಪಟ್ಟವರನ್ನು ಹೊರತುಪಡಿಸಿದೆ. ಅದು ಮಧುಮೇಹ ಅಥವಾ ಡಯಾಬಿಟಿಸ್, ರಕ್ತದೊತ್ತಡ, ತೀವ್ರವಾದ ಉಸಿರಾಟ ಅಥವಾ ಶ್ವಾಸಕೋಶದ ತೊಂದರೆ ಇರುವವರನ್ನು, ಕ್ಯಾನ್ಸರ್ ಮತ್ತು ಅಂತರ್ಗತ ರೋಗ ನಿರೋಧಕ ವ್ಯವಸ್ಥೆ ಹೊಂದಿರದ ಎಲ್ಲರನ್ನೂ ಹೊರತುಪಡಿಸಿದೆ.

ಅನ್ಯರೋಗ ಉಲ್ಬಣಗೊಂಡ ಸ್ಥಿತಿಯಲ್ಲಿರುವ ಎಲ್ಲರಿಗೂ ಪರಿಣಾಮಕಾರಿಯಾದ ಚಿಕಿತ್ಸೆಯ ಅಗತ್ಯವಿದೆ ಆದರೆ ರೋಗಲಕ್ಷಣಗಳು ಕಾಣಿಸಿಕೊಳ್ಳದ ಅಥವಾ ಅಲ್ಪ ಮತ್ತು ಮಧ್ಯಮ ಮಟ್ಟದರೋಗಲಕ್ಷಣಗಳು ಇರುವ ಕೋವಿಡ್ ಸೋಂಕಿತ ರೋಗಿಗಳಿಗೆ ಕಡಿಮೆ ವೈದ್ಯಕೀಯ ಶುಶ್ರೂಷೆಯ ಅಗತ್ಯವಿರುತ್ತದೆ. ಅವರಿಗೆ ಸಾಮಾನ್ಯ ಶೀತ ಜ್ವರದ (ಇನ್ಫ್ಲೂಯೆನ್ಝಾ  ಅಥವಾ ಫ್ಲೂ) ಮಾದರಿಯಲ್ಲಿಯೇ ಚಿಕಿತ್ಸೆ ನೀಡಬಹುದು. ಇಂತಹ ರೋಗಿಗಳ ನಡುವೆಯೇ ಪತಂಜಲಿಯು ತನ್ನ ಔಷಧಿ ಪರಿಣಾಮಕಾರಿಯೆಂದು ಸಾರಿರುವುದು. ಈ ರೋಗಿಗಳ ಗುಂಪಿನಲ್ಲಿ ಈಗಾಗಲೇ ಅಲ್ಪ ಪ್ರಮಾಣದಚಿಕಿತ್ಸೆಯಿಂದಲೇ ಗುಣಮುಖರಾಗುತ್ತಿರುವ ಪ್ರಮಾಣ ಶೇಕಡಾ 95-97 ಇದೆ. ಆದುದರಿಂದ ಈ ಆಯುರ್ವೇದ ಔಷಧಿಯಿಂದ ಹೊಸದಾಗಿ ಏನು ಅನುಕೂಲ ಸಿಕ್ಕಿದೆ ಎಂದು ಎಂದು ಎಲ್ಲಾ ವೈದ್ಯಕೀಯ ವೃತ್ತಿಪರರು ಕೇಳುತ್ತಿದ್ದಾರೆ.

ಆಲೋಪಥಿ, ಆಯುರ್ವೇದ, ಮತ್ತು ಹೋಮಿಯೋಪತಿ ವೈದ್ಯಕೀಯ ಪದ್ಧತಿಗಳ ಅನೇಕ ತಜ್ಞರು ಗೊಂದಲಕ್ಕೀಡಾಗಿದ್ದಾರೆ. ಈ ಗೊಂದಲ ಏನೆಂದರೆ, ಪತಂಜಲಿಯು ಒಂದು ಔಷಧಿಯನ್ನು ಆಯುಷ್ ಸಚಿವಾಲಯದ ಪರವಾನಿಗೆ ಇಲ್ಲದೇ ಅಭಿವೃದ್ಧಿಪಡಿಸಿ, ಅದಕ್ಕೊಂದು ಹೆಸರು ನೀಡಿ, ಜಾಹೀರಾತು ನೀಡಿ ಅದನ್ನು ಸಾರ್ವಜನಿಕವಾಗಿ ಬಿಡುಗಡೆಗೊಳಿಸುವುದು ಹೇಗೆ ಸಾಧ್ಯವಾಯಿತು ಎಂಬುದು.

ಈ ತಥಾಕಥಿತ ವೈದ್ಯಕೀಯ ಪ್ರಯೋಗವನ್ನು ಜೈಪುರದ ಎನ್ಐಎಂಎಸ್‍ನ ಕೇವಲ 100 ರೋಗಿಗಳ ಮೇಲೆ ಮಾತ್ರ ನಡೆಸಲಾಗಿತ್ತು. ಮತ್ತು ಅವರಲ್ಲಿ 69 ಶೇಕಡಾ ರೋಗಿಗಳು ಮೂರು ದಿನಗಳಲ್ಲಿ ಮತ್ತು 100 ಶೇಕಡಾ ರೋಗಿಗಳು ಏಳು ದಿನಗಳಲ್ಲಿ ಗುಣಮುಖರಾದರು ಎಂದು ವರದಿಯಲ್ಲಿ ಬಣ್ಣಿಸಲಾಗಿದೆ. ಈ ಔಷಧವನ್ನು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಸಲುವಾಗಿ ನೀಡಲಾಗಿದೆಯೋ ಅಥವಾ ರೋಗಶಮನಕ್ಕಾಗಿ ನೀಡಲಾಗಿದೆಯೋ ಎಂಬುದು ಸ್ಪಷ್ಟವಿಲ್ಲ.

ಪತಂಜಲಿ ಆಯುರ್ವೇದವು ದೀರ್ಘಕಾಲಿಕ ಖಾಯಿಲೆಗಳನ್ನು ಗುಣಪಡಿಸುತ್ತೇವೆ ಎಂದು ಈ ರೀತಿಯ ಅವೈಜ್ಞಾನಿಕ ಪ್ರತಿಪಾದನೆಯನ್ನು ಮಾಡುತ್ತಿರುವುದು ಇದು ಮೊದಲ ಬಾರಿ ಏನಲ್ಲ. ಅವರು ಹಿಂದೆಯೂ ಇಂತವುಗಳನ್ನು ಮಾಡಿದ್ದಾರೆ. ಆದುದರಿಂದ, ಸಂಶೋಧನೆಯ ಪ್ರತಿಯೊಂದು ಹಂತದಲ್ಲೂ ಅವರ ವೈದ್ಯಕೀಯ ಪ್ರಯೋಗ, ವೈದ್ಯಕೀಯ ನೈತಿಕತೆ ಪ್ರಶ್ನಾರ್ಹವಾಗಿದೆ.


ಯಾವುದೇ ಒಂದು ಔಷಧಿ ತಯಾರಿಕಾ ಸಂಸ್ಥೆ ಈ ರೀತಿಯ ಸುಳ್ಳು ಪ್ರತಿಪಾದಗನೆಳನ್ನು ಮಾಡಿದರೆ, ಅದು ಜನರ ಜೀವವನ್ನು ಅಪಾಯಕ್ಕೆ ಗುರಿ ಮಾಡುವುದು ಮಾತ್ರವಲ್ಲ, ಪುರಾತನವಾದ ಆಯುರ್ವೇದ ವೈದ್ಯ ಶಾಸ್ತ್ರವನ್ನೇ ಸಂಶಯದಿಂದ ನೋಡುವಂತೆ ಮಾಡುತ್ತದೆ.

ಆರೋಗ್ಯವನ್ನು ಸಮಗ್ರ ದೃಷ್ಟಿಯಿಂದ ಕಾಣುವ ವಿಜ್ಞಾನ ಆಯುರ್ವೇದ. ಅದು ವ್ಯಕ್ತಿಯ ಸಮಷ್ಟಿಹಿತಕ್ಕಾಗಿ ದೈಹಿಕ, ಮಾನಸಿಕ, ತಾತ್ವಿಕ ಮತ್ತು ಆಧ್ಯಾತ್ಮಿಕ ಅಂಶಗಳ ಮೇಲೆ ಒತ್ತು ನೀಡುವ ಒಂದು ಪರಿಪೂರ್ಣ ವೈದ್ಯಕೀಯ ಪದ್ಧತಿಯಾಗಿದೆ. ಅದು ಹಲವಾರು ದೀರ್ಘಕಾಲಿಕ ರೋಗಗಳಾದ ಮಧುಮೇಹ, ಉಬ್ಬಸ, ಚರ್ಮರೋಗ, ಆರ್ಥರೈಟಿಸ್, ಮುಂತಾದ ತೀವ್ರತರದ ಆರೋಗ್ಯ ಸಮಸ್ಯೆಗಳನ್ನು ಗುಣಪಡಿಸುವ ಸಾಮಥ್ರ್ಯ ಹೊಂದಿದೆ. ಇವುಗಳಿಗೆ ಪ್ರಸ್ತುತ ಆಧುನಿಕ ವೈದ್ಯಕೀಯ ಪದ್ಧತಿಗಳಲ್ಲಿ ಪರಿಣಾಮಕಾರಿ ಚಿಕಿತ್ಸೆಗಳಿಲ್ಲ.

ಪ್ರಪಂಚದ ಪ್ರತಿಯೊಂದು ದೇಶವೂ ಸಾವಿರಾರು ವರ್ಷಗಳಿಂದ ಅವರದ್ದೇ ಆದ ಸ್ಥಳೀಯ ಜನಜಾತ ವೈದ್ಯಕೀಯ ಪದ್ಧತಿಗಳನ್ನು ಹೊಂದಿವೆ. ಪಾಶ್ಚಿಮಾತ್ಯರ ವಸಾಹತುಶಾಹೀಕರಣದ ಬಳಿಕ, ಉಂಟಾದ ತೀವ್ರ ಕೈಗಾರಿಕೀಕರಣದ ಬಳಿಕ ನಮಗೆ ರೋಗಗಳಿಂದ ತ್ವರಿತವಾಗಿ ಮುಕ್ತಿ ಬೇಕಾಗಿದೆ. ಆದುದರಿಂದಲೇ ಆಧುನಿಕ ವೈದ್ಯ ಪದ್ಧತಿ ಇಷ್ಟು ಜನಪ್ರಿಯತೆ ಗಳಿಸಿದ್ದು.

ಆಲೋಪಥಿ ಔಷಧಿಗಳ ವಿಷಕಾರಿ ಗುಣ, ಆರೋಗ್ಯ ಸೇವೆಯ ವಿಪರೀತ ಖರ್ಚು,  ಜಾಗತಿಕ ಜನ ಸಮುದಾಯದಲ್ಲಿ ಔಷಧಿಗಳಿಗೆ ತಕ್ಕಂತೆ ರೋಗಾಣುಗಳು ಬದಲಾಗುವುದು ಇತ್ಯಾದಿ ಕಾರಣಗಳಿಗೆಇಂದು ಹೆಚ್ಚುಹೆಚ್ಚು ಜನರು ಪುರಾತನವಾದ ಆಯುರ್ವೇದ, ಯೋಗ, ಯುನಾನಿ ಮತ್ತು ಸಿಧ್ಧ ಔಷಧಿ ಪದ್ಧತಿಗಳಿಂದ ಪರಿಹಾರಕಂಡುಕೊಳ್ಳಲು ಮುಂದಾಗುವಂತೆ ಮಾಡಿವೆ.

ಹಾಗಾದರೆ, ಆಯುರ್ವೇದ ಹಿಂದುಳಿದಿರುವುದೇಕೆ?

ನಾವು ಕೆಲವು ಅಂಶಗಳನ್ನು ಗಮನಿಸುವ:

ಆಯುರ್ವೇದದಲ್ಲಿ ಸಂಶೋಧನೆ ಮಾಡಬಲ್ಲ ಕೆಲವೇ ಕೆಲವು ಅನುಭವಿ ಮತ್ತು ಉತ್ತಮ ಮೂಲಸೌಕರ್ಯಗಳುಳ್ಳ ಸಂಸ್ಥೆಗಳಿವೆ.
ಪ್ರತೀ ವರ್ಷ ಉತ್ತೀರ್ಣರಾಗಿ ಹೊರಬರುವ ಆಯುರ್ವೇದ ಪರಿಣಿತರು ಉನ್ನತ ಶಿಕ್ಷಣ ಅಥವಾ ವೈದ್ಯಕೀಯ ಸೇವೆಗೆ ಮುಂದಾಗುತ್ತಾರೆ. ಅವರಲ್ಲಿ ಕೆಲವೇ ಕೆಲವರು ಆಯುರ್ವೇದ ಸಂಶೋಧನೆಗೆ ಮುಂದಾಗುತ್ತಾರೆ.

ಇದಕ್ಕೇನು ಮಾಡಬಹುದು?

ಆಯುರ್ವೇದದಿಂದ ಔಷಧಿಗಳ ಗುಣಶಕ್ತಿಗಾಗಿ ಕ್ಲಿನಿಕಲ್ ಪ್ರಯೋಗಗಳನ್ನು ಪ್ರೋತ್ಸಾಹಿಸಿ ವಿವರಗಳನ್ನು ನಿಖರವಾಗಿ ದಾಖಲಿಸಬೇಕು.

ಸರ್ಕಾರ ಆಯುರ್ವೇದ ಸಂಶೋಧನೆಯನ್ನು ಪ್ರೋತ್ಸಾಹಿಸಬೇಕು. ಸರ್ಕಾರ ಅದನ್ನು ಪರ್ಯಾಯ ಆರೋಗ್ಯ ವ್ಯವಸ್ಥೆ ಎಂದು ತಿಳಿದುಕೊಳ್ಳದೆ, ಮುಖ್ಯವಾಹಿನಿಯ ಆರೋಗ್ಯ ಪದ್ಧತಿ ಎಂದು ಪರಿಗಣಸಿ ಬೆಂಬಲ ನೀಡಬೇಕು.

ಪಾಶ್ಚಾತ್ಯ ವೈದ್ಯಕೀಯ ಪದ್ಧತಿಗಳು ಮತ್ತು ಆಯುರ್ವೇದವನ್ನು ಒಳಗೊಂಡ ಜಂಟಿ ಸಂಶೋಧನೆಗಳು ಮತ್ತು ಕ್ಲಿನಿಕಲ್ ಪ್ರಯೋಗಗಳನ್ನು ಒಂದೇ ಸೂರಿನಡಿ ನಡೆಯುವ ಬಗ್ಗೆ ಯೋಚಿಸಬಹುದು.

ಇಂದು ಆರೋಗ್ಯ ಸೇವೆಗಳ ವೆಚ್ಚ ದಿನೇದಿನೇ ಹೆಚ್ಚುತ್ತಿದ್ದು, ಜನರ ಸಂಪೂರ್ಣ ಆರೋಗ್ಯವನ್ನು ಖಾತರಿಪಡಿಸುವಂತಹ ಸಾಮರ್ಥ್ಯ ಗಣನೀಯವಾಗಿ ಕುಗ್ಗಿದೆ. ಇಲ್ಲಿಯೇ ಹಲವಾರು ರೋಗಗಳಿಗೆ ಸಮಗ್ರದೃಷ್ಟಿಯ ಚಿಕಿತ್ಸೆ ನೀಡಬಹುದಾದ ಆಯುರ್ವೇದ ಔಷಧಿಗಳು ಮತ್ತು ಕಷಾಯಗಳು ಪ್ರಮುಖವಾದ ಪಾತ್ರಗಳನ್ನು ವಹಿಸಲು ಸಾಧ್ಯವಿದೆ.

ಆಯುರ್ವೇದದ ವಿವೇಕವನ್ನು ವಿಶಾಲವಾದ ಕ್ಲಿನಿಕಲ್ ಪ್ರಯೋಗಗಳ ಸಂಶೋಧನೆಯೊಂದಿಗೆ ಪರಿಶೀಲಿಸಿ ಸಾಬೀತುಪಡಿಸಲು ಸಾಧ್ಯವಾದರೆ, ಕೋವಿಡ್-19 ನಂತಹ ರೋಗಗಳನ್ನು ಮುಂದಿನ ದಿನಗಳಲ್ಲಿ ಸಮಗ್ರತೆಯ ದೃಷ್ಟಿಯಿಂದ, ಹಲವು ಸಾಕ್ಷ್ಯಾಧಾರಗಳ ಮೂಲಕ ಮತ್ತು ಧೈರ್ಯದಿಂದ ನಿಭಾಯಿಸಲು ಭರವಸೆಯ ಕಿರಣವಾಗಬಹುದು

ಡಾ. ಸಾಮ್ನಾ, ಆಯುರ್ವೇದ ವೈದ್ಯರು

ಅನುವಾದ: ನಿಖಿಲ್ ಕೋಲ್ಪೆ


ಇದನ್ನೂ ಓದಿ: ಪತಂಜಲಿಯಿಂದ ಕೊರೊನಾ ಗುಣಪಡಿಸಬಹುದೆಂದು ನಾವು ಹೇಳಿಲ್ಲ: ಸಿಇಒ ಆಚಾರ್ಯ ಬಾಲಕೃಷ್ಣ

ವಿಡಿಯೋ ನೋಡಿ:

ಸರೋವರ್ ಬೆಂಕಿಕೆರೆಯವರ ಚಿಲ್ ಮಾಡಿ ವಿಡಿಯೋ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...