Homeಕರ್ನಾಟಕಪತಂಜಲಿ ಜಟಾಪಟಿ: ಆರ್‌.ಅಶೋಕ್‌ಗೆ ಸವಾಲ್ ಹಾಕಿದ ದಿನೇಶ್ ಗುಂಡೂರಾವ್

ಪತಂಜಲಿ ಜಟಾಪಟಿ: ಆರ್‌.ಅಶೋಕ್‌ಗೆ ಸವಾಲ್ ಹಾಕಿದ ದಿನೇಶ್ ಗುಂಡೂರಾವ್

- Advertisement -
- Advertisement -

ಬಾಬಾ ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಮಾಲಕತ್ವದ ‘ಪತಂಜಲಿ ಕಂಪನಿಯ’ ಉತ್ಪನ್ನಗಳ ವಿಚಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತು ಪ್ರತಿಪಕ್ಷ ನಾಯಕ ಆರ್‌. ಅಶೋಕ್ ನಡುವೆ ಜಟಾಪಟಿ ಜೋರಾಗಿದೆ.

ಸುಪ್ರೀಂ ಕೋರ್ಟ್ ಪತಂಜಲಿ ಉತ್ಪನ್ನಗಳ ಗುಣಮಟ್ಟಕ್ಕೆ ಸಂಬಂಧಪಟ್ಟಂತೆ ಬಾಬಾ ರಾಮ್‌ದೇವ್‌ ಮತ್ತು ಆಚಾರ್ಯ ಬಾಲಕೃಷ್ಣ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಹಿನ್ನೆಲೆ, ಕರ್ನಾಟಕದಲ್ಲಿ ಎಲ್ಲಾ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದರು.

ಸಚಿವರ ಈ ಹೇಳಿಕೆಯ ವರದಿಯನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಪ್ರತಿಪಕ್ಷ ನಾಯಕ ಆರ್‌. ಅಶೋಕ್, “ಈ ಹಲಾಲ್ ಕಟ್ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು, ಬಿಸಿನೆಸ್ ಗಳು ಬೆಳೆದರೆ ಸಹಿಸೋದೇ ಇಲ್ಲ. ಸಮಸ್ತ ಭಾರತೀಯರ ಅಚ್ಚುಮೆಚ್ಚಿನ ಬ್ರ್ಯಾಂಡ್ ಆಗಿ ಬೆಳೆಯುತ್ತಿರುವ ಬಾಬಾ ರಾಮದೇವ್ ಅವರ ಪತಂಜಲಿ ಮೇಲೆ ಈಗ ಕಾಂಗ್ರೆಸ್ ಸರ್ಕಾರದ ವಕ್ರದೃಷ್ಟಿ ಬಿದ್ದಿದೆ. ಮಾನ್ಯ ದಿನೇಶ್ ಗುಂಡೂರಾವ್ ಅವರೇ, ಪತಂಜಲಿ ಉತ್ಪನ್ನಗಳ ಮೇಲೆ ನಿಮಗೇಕಿಷ್ಟು ದ್ವೇಷ?” ಎಂದು ಪ್ರಶ್ನಿಸಿದ್ದರು.

“ಪತಂಜಲಿ ಹಲಾಲ್ ಅಲ್ಲ ಅಂತಲೇ? ಪತಂಜಲಿ ಕೇಸರಿ ಬಟ್ಟೆ ತೊಡುವ ಯೋಗಗುರು ಶ್ರೀ ಬಾಬಾ ರಾಮ್ ದೇವ್ ಅವರದ್ದು ಅಂತಲೇ? ಪತಂಜಲಿ ಆತ್ಮನಿರ್ಭರ ಭಾರತದ ಪ್ರತೀಕ ಅಂತಲೇ? ಈ ದ್ವೇಷ ರಾಜಕಾರಣವೇ ಕಾಂಗ್ರೆಸ್ ಪಕ್ಷವನ್ನ ಸುಡಲಿದೆ. ಈ ನಿಮ್ಮ ಹಲಾಲ್ ಮಮಕಾರವೇ ನಿಮ್ಮನ್ನ ನಾಶ ಮಾಡಲಿದೆ” ಎಂದಿದ್ದರು.

ಅಶೋಕ್ ಅವರ ಪೋಸ್ಟ್‌ಗೆ ತಿರುಗೇಟು ಕೊಟ್ಟಿರುವ ಸಚಿವ ದಿನೇಶ್ ಗುಡೂರಾವ್, “ತಪ್ಪು ಜಾಹೀರಾತು ಮೂಲಕ ದೇಶದ ಜನರ ಆರೋಗ್ಯದ ಜೊತೆ ಚೆಲ್ಲಾಟವಾಡಿದ್ದ ಪತಂಜಲಿಯ ಬಾಬಾ ರಾಮ್‌ದೇವ್ ಹಾಗೂ ಬಾಲಕೃಷ್ಣರವರಿಗೆ ಸುಪ್ರೀಂ ಕೋರ್ಟ್ ತೆರೆದ ನ್ಯಾಯಾಲಯದಲ್ಲಿ ಛೀಮಾರಿ ಹಾಕಿ ನೀರಿಳಿಸಿದೆ. ಜೊತೆಗೆ ಈ ಇಬ್ಬರೂ ತಾವು ಮಾಡಿದ್ದ ತಪ್ಪಿಗೆ ಬೇಷರತ್ ಕ್ಷಮೆ ಯಾಚಿಸಿದ್ದರೂ ಸುಪ್ರೀಂ ಅವರ ಕ್ಷಮೆಯನ್ನು ಮಾನ್ಯ ಮಾಡಿಲ್ಲ. ಅದರರ್ಥ, ಪತಂಜಲಿ ಎಂಬ ಸಂಸ್ಥೆ ಜನರ ಅರೋಗ್ಯದ ಜೊತೆ ಆಡಿರುವ ಚೆಲ್ಲಾಟ ಕ್ಷಮೆಗೂ ಅರ್ಹವಲ್ಲ ಎಂಬುದು ಸುಪ್ರೀಂ ಅಭಿಪ್ರಾಯ ಎಂದು ಹೇಳಿದ್ದಾರೆ.

“ಇದೇ ಕಾರಣಕ್ಕಾಗಿ ರಾಜ್ಯದಲ್ಲಿ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷಿಸಲು ಆದೇಶಿಸಿದ್ದೇನೆ.
ಇಷ್ಟಕ್ಕೇ ತುರಿಕೆ ರೋಗ ಬಂದಂತೆ ವರ್ತಿಸುತ್ತಿರುವ ವಿಪಕ್ಷ ನಾಯಕ ಆರ್‌.ಅಶೋಕ್‌ ಅವರೇ, ನನಗೆ ಪತಂಜಲಿ ಉತ್ಪನ್ನಗಳ ಬಗ್ಗೆ ಯಾಕಿಷ್ಟು ದ್ವೇಷ ಎಂದು ಪ್ರಶ್ನಿಸಿದ್ದಾರೆ. ಅವರ ಪ್ರಶ್ನೆಗೆ ನಾನು ಉತ್ತರಿಸುವೆ, ನನ್ನ ಪ್ರಶ್ನೆಗಳಿಗೆ ಅವರು ಉತ್ತರಿಸಲಿ. ಇದು ಸವಾಲು‌.! ಎಂದಿದ್ದಾರೆ.

ಏನಿದು ಪತಂಜಲಿ ಪ್ರಕರಣ?

ಪತಂಜಲಿಯ ದಾರಿ ತಪ್ಪಿಸುವ ಜಾಹೀರಾತುಗಳಿಗಾಗಿ ಕಂಪನಿಯ ಸಂಸ್ಥಾಪಕರಾದ ಬಾಬಾ ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರು ಸಲ್ಲಿಸಿದ ಮತ್ತೊಂದು ಕ್ಷಮಾ ಅರ್ಜಿಯನ್ನೂ ತಿರಸ್ಕರಿಸಿದ ಸುಪ್ರೀಂ ಕೋರ್ಟ್, “ನಾವು ಕುರುಡರಲ್ಲ, ಈ ಪ್ರಕರಣದಲ್ಲಿ ಉದಾರವಾಗಿರಲು ಬಯಸುವುದಿಲ್ಲ” ಎಂದು ಇತ್ತೀಚೆಗೆ ಹೇಳಿದೆ.

ಇಷ್ಟು ದಿನ ಪತಂಜಲಿ ವಿರುದ್ಧ ಕ್ರಮಕೈಗೊಳ್ಳದ ಉತ್ತರಾಖಂಡ್ ರಾಜ್ಯದ ಔಷಧಿ ಪರವಾನಿಗಿ ಪ್ರಾಧಿಕಾರವನ್ನು ಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು, ಈ ವಿಷಯದಲ್ಲಿ ಕೇಂದ್ರದ ಉತ್ತರದಿಂದ ತೃಪ್ತರಾಗಿಲ್ಲ ಎಂದು ಅಸಮಾಧಾನ ಹೊರ ಹಾಕಿದೆ.

ಇದನ್ನೂ ಓದಿ : ರಾಜ್ಯದಲ್ಲಿ ‘ಆಪರೇಷನ್ ಕಮಲ’ಕ್ಕೆ ಯತ್ನ: ಸಿಎಂ ಸಿದ್ದರಾಮಯ್ಯ; ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿಯಿಂದ 50ಕೋಟಿ ರೂ. ಆಫರ್‌?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...