Homeಕರ್ನಾಟಕಪತಂಜಲಿ ಜಟಾಪಟಿ: ಆರ್‌.ಅಶೋಕ್‌ಗೆ ಸವಾಲ್ ಹಾಕಿದ ದಿನೇಶ್ ಗುಂಡೂರಾವ್

ಪತಂಜಲಿ ಜಟಾಪಟಿ: ಆರ್‌.ಅಶೋಕ್‌ಗೆ ಸವಾಲ್ ಹಾಕಿದ ದಿನೇಶ್ ಗುಂಡೂರಾವ್

- Advertisement -
- Advertisement -

ಬಾಬಾ ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಮಾಲಕತ್ವದ ‘ಪತಂಜಲಿ ಕಂಪನಿಯ’ ಉತ್ಪನ್ನಗಳ ವಿಚಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತು ಪ್ರತಿಪಕ್ಷ ನಾಯಕ ಆರ್‌. ಅಶೋಕ್ ನಡುವೆ ಜಟಾಪಟಿ ಜೋರಾಗಿದೆ.

ಸುಪ್ರೀಂ ಕೋರ್ಟ್ ಪತಂಜಲಿ ಉತ್ಪನ್ನಗಳ ಗುಣಮಟ್ಟಕ್ಕೆ ಸಂಬಂಧಪಟ್ಟಂತೆ ಬಾಬಾ ರಾಮ್‌ದೇವ್‌ ಮತ್ತು ಆಚಾರ್ಯ ಬಾಲಕೃಷ್ಣ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಹಿನ್ನೆಲೆ, ಕರ್ನಾಟಕದಲ್ಲಿ ಎಲ್ಲಾ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದರು.

ಸಚಿವರ ಈ ಹೇಳಿಕೆಯ ವರದಿಯನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಪ್ರತಿಪಕ್ಷ ನಾಯಕ ಆರ್‌. ಅಶೋಕ್, “ಈ ಹಲಾಲ್ ಕಟ್ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು, ಬಿಸಿನೆಸ್ ಗಳು ಬೆಳೆದರೆ ಸಹಿಸೋದೇ ಇಲ್ಲ. ಸಮಸ್ತ ಭಾರತೀಯರ ಅಚ್ಚುಮೆಚ್ಚಿನ ಬ್ರ್ಯಾಂಡ್ ಆಗಿ ಬೆಳೆಯುತ್ತಿರುವ ಬಾಬಾ ರಾಮದೇವ್ ಅವರ ಪತಂಜಲಿ ಮೇಲೆ ಈಗ ಕಾಂಗ್ರೆಸ್ ಸರ್ಕಾರದ ವಕ್ರದೃಷ್ಟಿ ಬಿದ್ದಿದೆ. ಮಾನ್ಯ ದಿನೇಶ್ ಗುಂಡೂರಾವ್ ಅವರೇ, ಪತಂಜಲಿ ಉತ್ಪನ್ನಗಳ ಮೇಲೆ ನಿಮಗೇಕಿಷ್ಟು ದ್ವೇಷ?” ಎಂದು ಪ್ರಶ್ನಿಸಿದ್ದರು.

“ಪತಂಜಲಿ ಹಲಾಲ್ ಅಲ್ಲ ಅಂತಲೇ? ಪತಂಜಲಿ ಕೇಸರಿ ಬಟ್ಟೆ ತೊಡುವ ಯೋಗಗುರು ಶ್ರೀ ಬಾಬಾ ರಾಮ್ ದೇವ್ ಅವರದ್ದು ಅಂತಲೇ? ಪತಂಜಲಿ ಆತ್ಮನಿರ್ಭರ ಭಾರತದ ಪ್ರತೀಕ ಅಂತಲೇ? ಈ ದ್ವೇಷ ರಾಜಕಾರಣವೇ ಕಾಂಗ್ರೆಸ್ ಪಕ್ಷವನ್ನ ಸುಡಲಿದೆ. ಈ ನಿಮ್ಮ ಹಲಾಲ್ ಮಮಕಾರವೇ ನಿಮ್ಮನ್ನ ನಾಶ ಮಾಡಲಿದೆ” ಎಂದಿದ್ದರು.

ಅಶೋಕ್ ಅವರ ಪೋಸ್ಟ್‌ಗೆ ತಿರುಗೇಟು ಕೊಟ್ಟಿರುವ ಸಚಿವ ದಿನೇಶ್ ಗುಡೂರಾವ್, “ತಪ್ಪು ಜಾಹೀರಾತು ಮೂಲಕ ದೇಶದ ಜನರ ಆರೋಗ್ಯದ ಜೊತೆ ಚೆಲ್ಲಾಟವಾಡಿದ್ದ ಪತಂಜಲಿಯ ಬಾಬಾ ರಾಮ್‌ದೇವ್ ಹಾಗೂ ಬಾಲಕೃಷ್ಣರವರಿಗೆ ಸುಪ್ರೀಂ ಕೋರ್ಟ್ ತೆರೆದ ನ್ಯಾಯಾಲಯದಲ್ಲಿ ಛೀಮಾರಿ ಹಾಕಿ ನೀರಿಳಿಸಿದೆ. ಜೊತೆಗೆ ಈ ಇಬ್ಬರೂ ತಾವು ಮಾಡಿದ್ದ ತಪ್ಪಿಗೆ ಬೇಷರತ್ ಕ್ಷಮೆ ಯಾಚಿಸಿದ್ದರೂ ಸುಪ್ರೀಂ ಅವರ ಕ್ಷಮೆಯನ್ನು ಮಾನ್ಯ ಮಾಡಿಲ್ಲ. ಅದರರ್ಥ, ಪತಂಜಲಿ ಎಂಬ ಸಂಸ್ಥೆ ಜನರ ಅರೋಗ್ಯದ ಜೊತೆ ಆಡಿರುವ ಚೆಲ್ಲಾಟ ಕ್ಷಮೆಗೂ ಅರ್ಹವಲ್ಲ ಎಂಬುದು ಸುಪ್ರೀಂ ಅಭಿಪ್ರಾಯ ಎಂದು ಹೇಳಿದ್ದಾರೆ.

“ಇದೇ ಕಾರಣಕ್ಕಾಗಿ ರಾಜ್ಯದಲ್ಲಿ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷಿಸಲು ಆದೇಶಿಸಿದ್ದೇನೆ.
ಇಷ್ಟಕ್ಕೇ ತುರಿಕೆ ರೋಗ ಬಂದಂತೆ ವರ್ತಿಸುತ್ತಿರುವ ವಿಪಕ್ಷ ನಾಯಕ ಆರ್‌.ಅಶೋಕ್‌ ಅವರೇ, ನನಗೆ ಪತಂಜಲಿ ಉತ್ಪನ್ನಗಳ ಬಗ್ಗೆ ಯಾಕಿಷ್ಟು ದ್ವೇಷ ಎಂದು ಪ್ರಶ್ನಿಸಿದ್ದಾರೆ. ಅವರ ಪ್ರಶ್ನೆಗೆ ನಾನು ಉತ್ತರಿಸುವೆ, ನನ್ನ ಪ್ರಶ್ನೆಗಳಿಗೆ ಅವರು ಉತ್ತರಿಸಲಿ. ಇದು ಸವಾಲು‌.! ಎಂದಿದ್ದಾರೆ.

ಏನಿದು ಪತಂಜಲಿ ಪ್ರಕರಣ?

ಪತಂಜಲಿಯ ದಾರಿ ತಪ್ಪಿಸುವ ಜಾಹೀರಾತುಗಳಿಗಾಗಿ ಕಂಪನಿಯ ಸಂಸ್ಥಾಪಕರಾದ ಬಾಬಾ ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರು ಸಲ್ಲಿಸಿದ ಮತ್ತೊಂದು ಕ್ಷಮಾ ಅರ್ಜಿಯನ್ನೂ ತಿರಸ್ಕರಿಸಿದ ಸುಪ್ರೀಂ ಕೋರ್ಟ್, “ನಾವು ಕುರುಡರಲ್ಲ, ಈ ಪ್ರಕರಣದಲ್ಲಿ ಉದಾರವಾಗಿರಲು ಬಯಸುವುದಿಲ್ಲ” ಎಂದು ಇತ್ತೀಚೆಗೆ ಹೇಳಿದೆ.

ಇಷ್ಟು ದಿನ ಪತಂಜಲಿ ವಿರುದ್ಧ ಕ್ರಮಕೈಗೊಳ್ಳದ ಉತ್ತರಾಖಂಡ್ ರಾಜ್ಯದ ಔಷಧಿ ಪರವಾನಿಗಿ ಪ್ರಾಧಿಕಾರವನ್ನು ಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು, ಈ ವಿಷಯದಲ್ಲಿ ಕೇಂದ್ರದ ಉತ್ತರದಿಂದ ತೃಪ್ತರಾಗಿಲ್ಲ ಎಂದು ಅಸಮಾಧಾನ ಹೊರ ಹಾಕಿದೆ.

ಇದನ್ನೂ ಓದಿ : ರಾಜ್ಯದಲ್ಲಿ ‘ಆಪರೇಷನ್ ಕಮಲ’ಕ್ಕೆ ಯತ್ನ: ಸಿಎಂ ಸಿದ್ದರಾಮಯ್ಯ; ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿಯಿಂದ 50ಕೋಟಿ ರೂ. ಆಫರ್‌?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...