Homeಕರ್ನಾಟಕಪತಂಜಲಿ ಜಟಾಪಟಿ: ಆರ್‌.ಅಶೋಕ್‌ಗೆ ಸವಾಲ್ ಹಾಕಿದ ದಿನೇಶ್ ಗುಂಡೂರಾವ್

ಪತಂಜಲಿ ಜಟಾಪಟಿ: ಆರ್‌.ಅಶೋಕ್‌ಗೆ ಸವಾಲ್ ಹಾಕಿದ ದಿನೇಶ್ ಗುಂಡೂರಾವ್

- Advertisement -
- Advertisement -

ಬಾಬಾ ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಮಾಲಕತ್ವದ ‘ಪತಂಜಲಿ ಕಂಪನಿಯ’ ಉತ್ಪನ್ನಗಳ ವಿಚಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತು ಪ್ರತಿಪಕ್ಷ ನಾಯಕ ಆರ್‌. ಅಶೋಕ್ ನಡುವೆ ಜಟಾಪಟಿ ಜೋರಾಗಿದೆ.

ಸುಪ್ರೀಂ ಕೋರ್ಟ್ ಪತಂಜಲಿ ಉತ್ಪನ್ನಗಳ ಗುಣಮಟ್ಟಕ್ಕೆ ಸಂಬಂಧಪಟ್ಟಂತೆ ಬಾಬಾ ರಾಮ್‌ದೇವ್‌ ಮತ್ತು ಆಚಾರ್ಯ ಬಾಲಕೃಷ್ಣ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಹಿನ್ನೆಲೆ, ಕರ್ನಾಟಕದಲ್ಲಿ ಎಲ್ಲಾ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದರು.

ಸಚಿವರ ಈ ಹೇಳಿಕೆಯ ವರದಿಯನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಪ್ರತಿಪಕ್ಷ ನಾಯಕ ಆರ್‌. ಅಶೋಕ್, “ಈ ಹಲಾಲ್ ಕಟ್ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು, ಬಿಸಿನೆಸ್ ಗಳು ಬೆಳೆದರೆ ಸಹಿಸೋದೇ ಇಲ್ಲ. ಸಮಸ್ತ ಭಾರತೀಯರ ಅಚ್ಚುಮೆಚ್ಚಿನ ಬ್ರ್ಯಾಂಡ್ ಆಗಿ ಬೆಳೆಯುತ್ತಿರುವ ಬಾಬಾ ರಾಮದೇವ್ ಅವರ ಪತಂಜಲಿ ಮೇಲೆ ಈಗ ಕಾಂಗ್ರೆಸ್ ಸರ್ಕಾರದ ವಕ್ರದೃಷ್ಟಿ ಬಿದ್ದಿದೆ. ಮಾನ್ಯ ದಿನೇಶ್ ಗುಂಡೂರಾವ್ ಅವರೇ, ಪತಂಜಲಿ ಉತ್ಪನ್ನಗಳ ಮೇಲೆ ನಿಮಗೇಕಿಷ್ಟು ದ್ವೇಷ?” ಎಂದು ಪ್ರಶ್ನಿಸಿದ್ದರು.

“ಪತಂಜಲಿ ಹಲಾಲ್ ಅಲ್ಲ ಅಂತಲೇ? ಪತಂಜಲಿ ಕೇಸರಿ ಬಟ್ಟೆ ತೊಡುವ ಯೋಗಗುರು ಶ್ರೀ ಬಾಬಾ ರಾಮ್ ದೇವ್ ಅವರದ್ದು ಅಂತಲೇ? ಪತಂಜಲಿ ಆತ್ಮನಿರ್ಭರ ಭಾರತದ ಪ್ರತೀಕ ಅಂತಲೇ? ಈ ದ್ವೇಷ ರಾಜಕಾರಣವೇ ಕಾಂಗ್ರೆಸ್ ಪಕ್ಷವನ್ನ ಸುಡಲಿದೆ. ಈ ನಿಮ್ಮ ಹಲಾಲ್ ಮಮಕಾರವೇ ನಿಮ್ಮನ್ನ ನಾಶ ಮಾಡಲಿದೆ” ಎಂದಿದ್ದರು.

ಅಶೋಕ್ ಅವರ ಪೋಸ್ಟ್‌ಗೆ ತಿರುಗೇಟು ಕೊಟ್ಟಿರುವ ಸಚಿವ ದಿನೇಶ್ ಗುಡೂರಾವ್, “ತಪ್ಪು ಜಾಹೀರಾತು ಮೂಲಕ ದೇಶದ ಜನರ ಆರೋಗ್ಯದ ಜೊತೆ ಚೆಲ್ಲಾಟವಾಡಿದ್ದ ಪತಂಜಲಿಯ ಬಾಬಾ ರಾಮ್‌ದೇವ್ ಹಾಗೂ ಬಾಲಕೃಷ್ಣರವರಿಗೆ ಸುಪ್ರೀಂ ಕೋರ್ಟ್ ತೆರೆದ ನ್ಯಾಯಾಲಯದಲ್ಲಿ ಛೀಮಾರಿ ಹಾಕಿ ನೀರಿಳಿಸಿದೆ. ಜೊತೆಗೆ ಈ ಇಬ್ಬರೂ ತಾವು ಮಾಡಿದ್ದ ತಪ್ಪಿಗೆ ಬೇಷರತ್ ಕ್ಷಮೆ ಯಾಚಿಸಿದ್ದರೂ ಸುಪ್ರೀಂ ಅವರ ಕ್ಷಮೆಯನ್ನು ಮಾನ್ಯ ಮಾಡಿಲ್ಲ. ಅದರರ್ಥ, ಪತಂಜಲಿ ಎಂಬ ಸಂಸ್ಥೆ ಜನರ ಅರೋಗ್ಯದ ಜೊತೆ ಆಡಿರುವ ಚೆಲ್ಲಾಟ ಕ್ಷಮೆಗೂ ಅರ್ಹವಲ್ಲ ಎಂಬುದು ಸುಪ್ರೀಂ ಅಭಿಪ್ರಾಯ ಎಂದು ಹೇಳಿದ್ದಾರೆ.

“ಇದೇ ಕಾರಣಕ್ಕಾಗಿ ರಾಜ್ಯದಲ್ಲಿ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷಿಸಲು ಆದೇಶಿಸಿದ್ದೇನೆ.
ಇಷ್ಟಕ್ಕೇ ತುರಿಕೆ ರೋಗ ಬಂದಂತೆ ವರ್ತಿಸುತ್ತಿರುವ ವಿಪಕ್ಷ ನಾಯಕ ಆರ್‌.ಅಶೋಕ್‌ ಅವರೇ, ನನಗೆ ಪತಂಜಲಿ ಉತ್ಪನ್ನಗಳ ಬಗ್ಗೆ ಯಾಕಿಷ್ಟು ದ್ವೇಷ ಎಂದು ಪ್ರಶ್ನಿಸಿದ್ದಾರೆ. ಅವರ ಪ್ರಶ್ನೆಗೆ ನಾನು ಉತ್ತರಿಸುವೆ, ನನ್ನ ಪ್ರಶ್ನೆಗಳಿಗೆ ಅವರು ಉತ್ತರಿಸಲಿ. ಇದು ಸವಾಲು‌.! ಎಂದಿದ್ದಾರೆ.

ಏನಿದು ಪತಂಜಲಿ ಪ್ರಕರಣ?

ಪತಂಜಲಿಯ ದಾರಿ ತಪ್ಪಿಸುವ ಜಾಹೀರಾತುಗಳಿಗಾಗಿ ಕಂಪನಿಯ ಸಂಸ್ಥಾಪಕರಾದ ಬಾಬಾ ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರು ಸಲ್ಲಿಸಿದ ಮತ್ತೊಂದು ಕ್ಷಮಾ ಅರ್ಜಿಯನ್ನೂ ತಿರಸ್ಕರಿಸಿದ ಸುಪ್ರೀಂ ಕೋರ್ಟ್, “ನಾವು ಕುರುಡರಲ್ಲ, ಈ ಪ್ರಕರಣದಲ್ಲಿ ಉದಾರವಾಗಿರಲು ಬಯಸುವುದಿಲ್ಲ” ಎಂದು ಇತ್ತೀಚೆಗೆ ಹೇಳಿದೆ.

ಇಷ್ಟು ದಿನ ಪತಂಜಲಿ ವಿರುದ್ಧ ಕ್ರಮಕೈಗೊಳ್ಳದ ಉತ್ತರಾಖಂಡ್ ರಾಜ್ಯದ ಔಷಧಿ ಪರವಾನಿಗಿ ಪ್ರಾಧಿಕಾರವನ್ನು ಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು, ಈ ವಿಷಯದಲ್ಲಿ ಕೇಂದ್ರದ ಉತ್ತರದಿಂದ ತೃಪ್ತರಾಗಿಲ್ಲ ಎಂದು ಅಸಮಾಧಾನ ಹೊರ ಹಾಕಿದೆ.

ಇದನ್ನೂ ಓದಿ : ರಾಜ್ಯದಲ್ಲಿ ‘ಆಪರೇಷನ್ ಕಮಲ’ಕ್ಕೆ ಯತ್ನ: ಸಿಎಂ ಸಿದ್ದರಾಮಯ್ಯ; ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿಯಿಂದ 50ಕೋಟಿ ರೂ. ಆಫರ್‌?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...