Homeಕರ್ನಾಟಕಪತಂಜಲಿ ಜಟಾಪಟಿ: ಆರ್‌.ಅಶೋಕ್‌ಗೆ ಸವಾಲ್ ಹಾಕಿದ ದಿನೇಶ್ ಗುಂಡೂರಾವ್

ಪತಂಜಲಿ ಜಟಾಪಟಿ: ಆರ್‌.ಅಶೋಕ್‌ಗೆ ಸವಾಲ್ ಹಾಕಿದ ದಿನೇಶ್ ಗುಂಡೂರಾವ್

- Advertisement -
- Advertisement -

ಬಾಬಾ ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಮಾಲಕತ್ವದ ‘ಪತಂಜಲಿ ಕಂಪನಿಯ’ ಉತ್ಪನ್ನಗಳ ವಿಚಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತು ಪ್ರತಿಪಕ್ಷ ನಾಯಕ ಆರ್‌. ಅಶೋಕ್ ನಡುವೆ ಜಟಾಪಟಿ ಜೋರಾಗಿದೆ.

ಸುಪ್ರೀಂ ಕೋರ್ಟ್ ಪತಂಜಲಿ ಉತ್ಪನ್ನಗಳ ಗುಣಮಟ್ಟಕ್ಕೆ ಸಂಬಂಧಪಟ್ಟಂತೆ ಬಾಬಾ ರಾಮ್‌ದೇವ್‌ ಮತ್ತು ಆಚಾರ್ಯ ಬಾಲಕೃಷ್ಣ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಹಿನ್ನೆಲೆ, ಕರ್ನಾಟಕದಲ್ಲಿ ಎಲ್ಲಾ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದರು.

ಸಚಿವರ ಈ ಹೇಳಿಕೆಯ ವರದಿಯನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಪ್ರತಿಪಕ್ಷ ನಾಯಕ ಆರ್‌. ಅಶೋಕ್, “ಈ ಹಲಾಲ್ ಕಟ್ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು, ಬಿಸಿನೆಸ್ ಗಳು ಬೆಳೆದರೆ ಸಹಿಸೋದೇ ಇಲ್ಲ. ಸಮಸ್ತ ಭಾರತೀಯರ ಅಚ್ಚುಮೆಚ್ಚಿನ ಬ್ರ್ಯಾಂಡ್ ಆಗಿ ಬೆಳೆಯುತ್ತಿರುವ ಬಾಬಾ ರಾಮದೇವ್ ಅವರ ಪತಂಜಲಿ ಮೇಲೆ ಈಗ ಕಾಂಗ್ರೆಸ್ ಸರ್ಕಾರದ ವಕ್ರದೃಷ್ಟಿ ಬಿದ್ದಿದೆ. ಮಾನ್ಯ ದಿನೇಶ್ ಗುಂಡೂರಾವ್ ಅವರೇ, ಪತಂಜಲಿ ಉತ್ಪನ್ನಗಳ ಮೇಲೆ ನಿಮಗೇಕಿಷ್ಟು ದ್ವೇಷ?” ಎಂದು ಪ್ರಶ್ನಿಸಿದ್ದರು.

“ಪತಂಜಲಿ ಹಲಾಲ್ ಅಲ್ಲ ಅಂತಲೇ? ಪತಂಜಲಿ ಕೇಸರಿ ಬಟ್ಟೆ ತೊಡುವ ಯೋಗಗುರು ಶ್ರೀ ಬಾಬಾ ರಾಮ್ ದೇವ್ ಅವರದ್ದು ಅಂತಲೇ? ಪತಂಜಲಿ ಆತ್ಮನಿರ್ಭರ ಭಾರತದ ಪ್ರತೀಕ ಅಂತಲೇ? ಈ ದ್ವೇಷ ರಾಜಕಾರಣವೇ ಕಾಂಗ್ರೆಸ್ ಪಕ್ಷವನ್ನ ಸುಡಲಿದೆ. ಈ ನಿಮ್ಮ ಹಲಾಲ್ ಮಮಕಾರವೇ ನಿಮ್ಮನ್ನ ನಾಶ ಮಾಡಲಿದೆ” ಎಂದಿದ್ದರು.

ಅಶೋಕ್ ಅವರ ಪೋಸ್ಟ್‌ಗೆ ತಿರುಗೇಟು ಕೊಟ್ಟಿರುವ ಸಚಿವ ದಿನೇಶ್ ಗುಡೂರಾವ್, “ತಪ್ಪು ಜಾಹೀರಾತು ಮೂಲಕ ದೇಶದ ಜನರ ಆರೋಗ್ಯದ ಜೊತೆ ಚೆಲ್ಲಾಟವಾಡಿದ್ದ ಪತಂಜಲಿಯ ಬಾಬಾ ರಾಮ್‌ದೇವ್ ಹಾಗೂ ಬಾಲಕೃಷ್ಣರವರಿಗೆ ಸುಪ್ರೀಂ ಕೋರ್ಟ್ ತೆರೆದ ನ್ಯಾಯಾಲಯದಲ್ಲಿ ಛೀಮಾರಿ ಹಾಕಿ ನೀರಿಳಿಸಿದೆ. ಜೊತೆಗೆ ಈ ಇಬ್ಬರೂ ತಾವು ಮಾಡಿದ್ದ ತಪ್ಪಿಗೆ ಬೇಷರತ್ ಕ್ಷಮೆ ಯಾಚಿಸಿದ್ದರೂ ಸುಪ್ರೀಂ ಅವರ ಕ್ಷಮೆಯನ್ನು ಮಾನ್ಯ ಮಾಡಿಲ್ಲ. ಅದರರ್ಥ, ಪತಂಜಲಿ ಎಂಬ ಸಂಸ್ಥೆ ಜನರ ಅರೋಗ್ಯದ ಜೊತೆ ಆಡಿರುವ ಚೆಲ್ಲಾಟ ಕ್ಷಮೆಗೂ ಅರ್ಹವಲ್ಲ ಎಂಬುದು ಸುಪ್ರೀಂ ಅಭಿಪ್ರಾಯ ಎಂದು ಹೇಳಿದ್ದಾರೆ.

“ಇದೇ ಕಾರಣಕ್ಕಾಗಿ ರಾಜ್ಯದಲ್ಲಿ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷಿಸಲು ಆದೇಶಿಸಿದ್ದೇನೆ.
ಇಷ್ಟಕ್ಕೇ ತುರಿಕೆ ರೋಗ ಬಂದಂತೆ ವರ್ತಿಸುತ್ತಿರುವ ವಿಪಕ್ಷ ನಾಯಕ ಆರ್‌.ಅಶೋಕ್‌ ಅವರೇ, ನನಗೆ ಪತಂಜಲಿ ಉತ್ಪನ್ನಗಳ ಬಗ್ಗೆ ಯಾಕಿಷ್ಟು ದ್ವೇಷ ಎಂದು ಪ್ರಶ್ನಿಸಿದ್ದಾರೆ. ಅವರ ಪ್ರಶ್ನೆಗೆ ನಾನು ಉತ್ತರಿಸುವೆ, ನನ್ನ ಪ್ರಶ್ನೆಗಳಿಗೆ ಅವರು ಉತ್ತರಿಸಲಿ. ಇದು ಸವಾಲು‌.! ಎಂದಿದ್ದಾರೆ.

ಏನಿದು ಪತಂಜಲಿ ಪ್ರಕರಣ?

ಪತಂಜಲಿಯ ದಾರಿ ತಪ್ಪಿಸುವ ಜಾಹೀರಾತುಗಳಿಗಾಗಿ ಕಂಪನಿಯ ಸಂಸ್ಥಾಪಕರಾದ ಬಾಬಾ ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರು ಸಲ್ಲಿಸಿದ ಮತ್ತೊಂದು ಕ್ಷಮಾ ಅರ್ಜಿಯನ್ನೂ ತಿರಸ್ಕರಿಸಿದ ಸುಪ್ರೀಂ ಕೋರ್ಟ್, “ನಾವು ಕುರುಡರಲ್ಲ, ಈ ಪ್ರಕರಣದಲ್ಲಿ ಉದಾರವಾಗಿರಲು ಬಯಸುವುದಿಲ್ಲ” ಎಂದು ಇತ್ತೀಚೆಗೆ ಹೇಳಿದೆ.

ಇಷ್ಟು ದಿನ ಪತಂಜಲಿ ವಿರುದ್ಧ ಕ್ರಮಕೈಗೊಳ್ಳದ ಉತ್ತರಾಖಂಡ್ ರಾಜ್ಯದ ಔಷಧಿ ಪರವಾನಿಗಿ ಪ್ರಾಧಿಕಾರವನ್ನು ಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು, ಈ ವಿಷಯದಲ್ಲಿ ಕೇಂದ್ರದ ಉತ್ತರದಿಂದ ತೃಪ್ತರಾಗಿಲ್ಲ ಎಂದು ಅಸಮಾಧಾನ ಹೊರ ಹಾಕಿದೆ.

ಇದನ್ನೂ ಓದಿ : ರಾಜ್ಯದಲ್ಲಿ ‘ಆಪರೇಷನ್ ಕಮಲ’ಕ್ಕೆ ಯತ್ನ: ಸಿಎಂ ಸಿದ್ದರಾಮಯ್ಯ; ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿಯಿಂದ 50ಕೋಟಿ ರೂ. ಆಫರ್‌?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...