Homeಕರ್ನಾಟಕಪತಂಜಲಿ ಜಟಾಪಟಿ: ಆರ್‌.ಅಶೋಕ್‌ಗೆ ಸವಾಲ್ ಹಾಕಿದ ದಿನೇಶ್ ಗುಂಡೂರಾವ್

ಪತಂಜಲಿ ಜಟಾಪಟಿ: ಆರ್‌.ಅಶೋಕ್‌ಗೆ ಸವಾಲ್ ಹಾಕಿದ ದಿನೇಶ್ ಗುಂಡೂರಾವ್

- Advertisement -
- Advertisement -

ಬಾಬಾ ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಮಾಲಕತ್ವದ ‘ಪತಂಜಲಿ ಕಂಪನಿಯ’ ಉತ್ಪನ್ನಗಳ ವಿಚಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತು ಪ್ರತಿಪಕ್ಷ ನಾಯಕ ಆರ್‌. ಅಶೋಕ್ ನಡುವೆ ಜಟಾಪಟಿ ಜೋರಾಗಿದೆ.

ಸುಪ್ರೀಂ ಕೋರ್ಟ್ ಪತಂಜಲಿ ಉತ್ಪನ್ನಗಳ ಗುಣಮಟ್ಟಕ್ಕೆ ಸಂಬಂಧಪಟ್ಟಂತೆ ಬಾಬಾ ರಾಮ್‌ದೇವ್‌ ಮತ್ತು ಆಚಾರ್ಯ ಬಾಲಕೃಷ್ಣ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಹಿನ್ನೆಲೆ, ಕರ್ನಾಟಕದಲ್ಲಿ ಎಲ್ಲಾ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದರು.

ಸಚಿವರ ಈ ಹೇಳಿಕೆಯ ವರದಿಯನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಪ್ರತಿಪಕ್ಷ ನಾಯಕ ಆರ್‌. ಅಶೋಕ್, “ಈ ಹಲಾಲ್ ಕಟ್ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು, ಬಿಸಿನೆಸ್ ಗಳು ಬೆಳೆದರೆ ಸಹಿಸೋದೇ ಇಲ್ಲ. ಸಮಸ್ತ ಭಾರತೀಯರ ಅಚ್ಚುಮೆಚ್ಚಿನ ಬ್ರ್ಯಾಂಡ್ ಆಗಿ ಬೆಳೆಯುತ್ತಿರುವ ಬಾಬಾ ರಾಮದೇವ್ ಅವರ ಪತಂಜಲಿ ಮೇಲೆ ಈಗ ಕಾಂಗ್ರೆಸ್ ಸರ್ಕಾರದ ವಕ್ರದೃಷ್ಟಿ ಬಿದ್ದಿದೆ. ಮಾನ್ಯ ದಿನೇಶ್ ಗುಂಡೂರಾವ್ ಅವರೇ, ಪತಂಜಲಿ ಉತ್ಪನ್ನಗಳ ಮೇಲೆ ನಿಮಗೇಕಿಷ್ಟು ದ್ವೇಷ?” ಎಂದು ಪ್ರಶ್ನಿಸಿದ್ದರು.

“ಪತಂಜಲಿ ಹಲಾಲ್ ಅಲ್ಲ ಅಂತಲೇ? ಪತಂಜಲಿ ಕೇಸರಿ ಬಟ್ಟೆ ತೊಡುವ ಯೋಗಗುರು ಶ್ರೀ ಬಾಬಾ ರಾಮ್ ದೇವ್ ಅವರದ್ದು ಅಂತಲೇ? ಪತಂಜಲಿ ಆತ್ಮನಿರ್ಭರ ಭಾರತದ ಪ್ರತೀಕ ಅಂತಲೇ? ಈ ದ್ವೇಷ ರಾಜಕಾರಣವೇ ಕಾಂಗ್ರೆಸ್ ಪಕ್ಷವನ್ನ ಸುಡಲಿದೆ. ಈ ನಿಮ್ಮ ಹಲಾಲ್ ಮಮಕಾರವೇ ನಿಮ್ಮನ್ನ ನಾಶ ಮಾಡಲಿದೆ” ಎಂದಿದ್ದರು.

ಅಶೋಕ್ ಅವರ ಪೋಸ್ಟ್‌ಗೆ ತಿರುಗೇಟು ಕೊಟ್ಟಿರುವ ಸಚಿವ ದಿನೇಶ್ ಗುಡೂರಾವ್, “ತಪ್ಪು ಜಾಹೀರಾತು ಮೂಲಕ ದೇಶದ ಜನರ ಆರೋಗ್ಯದ ಜೊತೆ ಚೆಲ್ಲಾಟವಾಡಿದ್ದ ಪತಂಜಲಿಯ ಬಾಬಾ ರಾಮ್‌ದೇವ್ ಹಾಗೂ ಬಾಲಕೃಷ್ಣರವರಿಗೆ ಸುಪ್ರೀಂ ಕೋರ್ಟ್ ತೆರೆದ ನ್ಯಾಯಾಲಯದಲ್ಲಿ ಛೀಮಾರಿ ಹಾಕಿ ನೀರಿಳಿಸಿದೆ. ಜೊತೆಗೆ ಈ ಇಬ್ಬರೂ ತಾವು ಮಾಡಿದ್ದ ತಪ್ಪಿಗೆ ಬೇಷರತ್ ಕ್ಷಮೆ ಯಾಚಿಸಿದ್ದರೂ ಸುಪ್ರೀಂ ಅವರ ಕ್ಷಮೆಯನ್ನು ಮಾನ್ಯ ಮಾಡಿಲ್ಲ. ಅದರರ್ಥ, ಪತಂಜಲಿ ಎಂಬ ಸಂಸ್ಥೆ ಜನರ ಅರೋಗ್ಯದ ಜೊತೆ ಆಡಿರುವ ಚೆಲ್ಲಾಟ ಕ್ಷಮೆಗೂ ಅರ್ಹವಲ್ಲ ಎಂಬುದು ಸುಪ್ರೀಂ ಅಭಿಪ್ರಾಯ ಎಂದು ಹೇಳಿದ್ದಾರೆ.

“ಇದೇ ಕಾರಣಕ್ಕಾಗಿ ರಾಜ್ಯದಲ್ಲಿ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷಿಸಲು ಆದೇಶಿಸಿದ್ದೇನೆ.
ಇಷ್ಟಕ್ಕೇ ತುರಿಕೆ ರೋಗ ಬಂದಂತೆ ವರ್ತಿಸುತ್ತಿರುವ ವಿಪಕ್ಷ ನಾಯಕ ಆರ್‌.ಅಶೋಕ್‌ ಅವರೇ, ನನಗೆ ಪತಂಜಲಿ ಉತ್ಪನ್ನಗಳ ಬಗ್ಗೆ ಯಾಕಿಷ್ಟು ದ್ವೇಷ ಎಂದು ಪ್ರಶ್ನಿಸಿದ್ದಾರೆ. ಅವರ ಪ್ರಶ್ನೆಗೆ ನಾನು ಉತ್ತರಿಸುವೆ, ನನ್ನ ಪ್ರಶ್ನೆಗಳಿಗೆ ಅವರು ಉತ್ತರಿಸಲಿ. ಇದು ಸವಾಲು‌.! ಎಂದಿದ್ದಾರೆ.

ಏನಿದು ಪತಂಜಲಿ ಪ್ರಕರಣ?

ಪತಂಜಲಿಯ ದಾರಿ ತಪ್ಪಿಸುವ ಜಾಹೀರಾತುಗಳಿಗಾಗಿ ಕಂಪನಿಯ ಸಂಸ್ಥಾಪಕರಾದ ಬಾಬಾ ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರು ಸಲ್ಲಿಸಿದ ಮತ್ತೊಂದು ಕ್ಷಮಾ ಅರ್ಜಿಯನ್ನೂ ತಿರಸ್ಕರಿಸಿದ ಸುಪ್ರೀಂ ಕೋರ್ಟ್, “ನಾವು ಕುರುಡರಲ್ಲ, ಈ ಪ್ರಕರಣದಲ್ಲಿ ಉದಾರವಾಗಿರಲು ಬಯಸುವುದಿಲ್ಲ” ಎಂದು ಇತ್ತೀಚೆಗೆ ಹೇಳಿದೆ.

ಇಷ್ಟು ದಿನ ಪತಂಜಲಿ ವಿರುದ್ಧ ಕ್ರಮಕೈಗೊಳ್ಳದ ಉತ್ತರಾಖಂಡ್ ರಾಜ್ಯದ ಔಷಧಿ ಪರವಾನಿಗಿ ಪ್ರಾಧಿಕಾರವನ್ನು ಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು, ಈ ವಿಷಯದಲ್ಲಿ ಕೇಂದ್ರದ ಉತ್ತರದಿಂದ ತೃಪ್ತರಾಗಿಲ್ಲ ಎಂದು ಅಸಮಾಧಾನ ಹೊರ ಹಾಕಿದೆ.

ಇದನ್ನೂ ಓದಿ : ರಾಜ್ಯದಲ್ಲಿ ‘ಆಪರೇಷನ್ ಕಮಲ’ಕ್ಕೆ ಯತ್ನ: ಸಿಎಂ ಸಿದ್ದರಾಮಯ್ಯ; ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿಯಿಂದ 50ಕೋಟಿ ರೂ. ಆಫರ್‌?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...