Homeಮುಖಪುಟಪತಂಜಲಿಯ ತಪ್ಪು ದಾರಿಗೆಳೆಯುವ ಜಾಹೀರಾತು: ಸಾರ್ವಜನಿಕ ಕ್ಷಮೆಯಾಚನೆಗೆ ಸಿದ್ದ ಎಂದ ಬಾಬಾ ರಾಮ್‌ದೇವ್, ಬಾಲಕೃಷ್ಣ

ಪತಂಜಲಿಯ ತಪ್ಪು ದಾರಿಗೆಳೆಯುವ ಜಾಹೀರಾತು: ಸಾರ್ವಜನಿಕ ಕ್ಷಮೆಯಾಚನೆಗೆ ಸಿದ್ದ ಎಂದ ಬಾಬಾ ರಾಮ್‌ದೇವ್, ಬಾಲಕೃಷ್ಣ

- Advertisement -
- Advertisement -

ಇಂದು (ಏ.16) ಸುಪ್ರೀಂ ಕೋರ್ಟ್‌ಗೆ ಖುದ್ದಾಗಿ ಹಾಜರಾದ ಪತಂಜಲಿ ಆಯುರ್ವೇದ ಲಿಮಿಟೆಡ್‌ನ ಸಹ-ಸಂಸ್ಥಾಪಕ ಬಾಬಾ ರಾಮ್‌ದೇವ್, ನ್ಯಾಯಾಲಯಕ್ಕೆ ನೀಡಿದ್ದ ಭರವಸೆಯನ್ನು ಉಲ್ಲಂಘಿಸಿ ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ಪ್ರಕಟಿಸಿದ್ದಕ್ಕಾಗಿ ಮತ್ತು ಅಲೋಪತಿ ಔಷಧಿಗಳ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಬೇಷರತ್ ಕ್ಷಮೆಯಾಚಿಸಿದ್ದಾರೆ.

ಪತಂಜಲಿಯ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಕೂಡ ನ್ಯಾಯಾಲಯಕ್ಕೆ ಖುದ್ದಾಗಿ ಕ್ಷಮೆ ಯಾಚಿಸಿದ್ದಾರೆ. ಪತಂಜಲಿ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು, ಪತಂಜಲಿಯ ಇಬ್ಬರೂ ಮುಖ್ಯಸ್ಥರು ಸಾರ್ವಜನಿಕವಾಗಿ ಕ್ಷಮೆಯಾಚಿಸಲು ಸಿದ್ಧರಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ನ್ಯಾಯಾಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರನ್ನೊಳಗೊಂಡ ನ್ಯಾಯಪೀಠವು ತಪ್ಪು ದಾರಿಗೆಳೆಯುವ ಜಾಹೀರಾತಿಗೆ ಸಂಬಂಧಿಸಿದಂತೆ ಪತಂಜಲಿ ಆಯುರ್ವೇದ ಲಿಮಿಟೆಡ್‌, ಆಚಾರ್ಯ ಬಾಲಕೃಷ್ಣ ಮತ್ತು ಬಾಬಾ ರಾಮ್‌ದೇವ್ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ವಿಚಾರಣೆ ನಡೆಸುತ್ತಿದೆ.

ಇಂದಿನ ವಿಚಾರಣೆಯಲ್ಲಿ, ಪೀಠವು ರಾಮ್‌ದೇವ್ ಮತ್ತು ಬಾಲಕೃಷ್ಣ ಅವರೊಂದಿಗೆ ವೈಯಕ್ತಿಕವಾಗಿ ಸಂವಾದ ನಡೆಸಿತು ಮತ್ತು ನ್ಯಾಯಾಲಯಕ್ಕೆ ನೀಡಲಾದ ಭರವಸೆಯನ್ನು ಉಲ್ಲಂಘಿಸಿದ್ದು ಏಕೆ? ಎಂದು ಪ್ರಶ್ನಿಸಿದೆ. ಪೀಠವು ವಿಚಾರಣೆಯನ್ನು ಏಪ್ರಿಲ್ 23ಕ್ಕೆ ಮುಂದೂಡಿದೆ.

ಏಪ್ರಿಲ್ 2ರಂದು, ಪತಂಜಲಿ ಎಂಡಿ ಸಲ್ಲಿಸಿದ ಕ್ಷಮಾಪಣೆಯ ಮೊದಲ ಅಫಿಡವಿಟ್ ಅನ್ನು ಸ್ವೀಕರಿಸಲು ನ್ಯಾಯಾಲಯ ನಿರಾಕರಿಸಿತ್ತು. ಕಳೆದ ವಾರ (ಏಪ್ರಿಲ್ 10), ಪತಂಜಲಿ ಎಂಡಿ ಸಲ್ಲಿಸಿದ್ದ ಕ್ಷಮಾಪಣೆಯ ಎರಡನೇ ಅಫಿಡವಿಟ್ ಅನ್ನೂ ಸ್ವೀಕರಿಸಲು ನ್ಯಾಯಾಲಯ ನಿರಾಕರಿಸಿತ್ತು.

ನ್ಯಾಯಾಲಯದ ಮುಂದೆ ವೈಯಕ್ತಿಕವಾಗಿ ಹಾಜರಾಗುವುದನ್ನು ತಪ್ಪಿಸಲು ಬಾಲಕೃಷ್ಣ ಮತ್ತು ರಾಮ್‌ದೇವ್ ಅವರು ಅಸ್ತಿತ್ವದಲ್ಲಿಲ್ಲದ ವಿಮಾನ ಟಿಕೆಟ್‌ಗಳೊಂದಿಗೆ ಅಫಿಡವಿಟ್ ಸಲ್ಲಿಸಿದ್ದಾರೆ ಎಂದು ನ್ಯಾಯಾಲಯ ಗಮನಿಸಿತ್ತು.

ಡ್ರಗ್ಸ್ ಮತ್ತು ಮ್ಯಾಜಿಕ್ ರೆಮಿಡೀಸ್ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯ್ದೆ 1954 ರ ಅಡಿಯಲ್ಲಿ ಪತಂಜಲಿ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾದ ಉತ್ತರಾಖಂಡ ರಾಜ್ಯದ ಅಧಿಕಾರಿಗಳನ್ನು ನ್ಯಾಯಾಲಯವು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು.

ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರ ಪೀಠವು ಅಲೋಪತಿಯ ವಿರುದ್ಧದ ಪತಂಜಲಿಯ ಜಾಹೀರಾತುಗಳು ಮತ್ತು ಕೆಲ ರೋಗಗಳನ್ನು ಗುಣಪಡಿಸುವ ಬಗ್ಗೆ ಹಕ್ಕುಗಳನ್ನು ನೀಡುವುದರ ವಿರುದ್ಧ ಭಾರತೀಯ ವೈದ್ಯಕೀಯ ಸಂಘ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸುತ್ತಿದೆ.

ಕಳೆದ ವರ್ಷದ ನವೆಂಬರ್‌ನಲ್ಲಿ ನ್ಯಾಯಾಲಯಕ್ಕೆ ನೀಡಿದ್ದ ಭರವಸೆಯನ್ನು ಉಲ್ಲಂಘಿಸಿ ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ನಿರಂತರವಾಗಿ ಪ್ರಕಟಿಸಿದ್ದಕ್ಕಾಗಿ, ಸುಪ್ರೀಂ ಕೋರ್ಟ್ ವಿಭಾಗೀಯ ಪೀಠವು ಈ ಹಿಂದೆ ಪತಂಜಲಿ ಆಯುರ್ವೇದ, ಅದರ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಮತ್ತು ಬಾಬಾ ರಾಮ್‌ದೇವ್ ಅವರಿಗೆ ನ್ಯಾಯಾಂಗ ನಿಂದನೆ ನೋಟಿಸ್ ನೀಡಿತ್ತು.

ಇದನ್ನೂ ಓದಿ : ಪತಂಜಲಿ ದಾರಿ ತಪ್ಪಿಸುವ ಜಾಹೀರಾತು ಪ್ರಕರಣ; ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ರಾಮ್‌ದೇವ್‌ಗೆ ಸುಪ್ರೀಂ ತಪರಾಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...