Homeಮುಖಪುಟಪತಂಜಲಿ ದಾರಿತಪ್ಪಿಸುವ ಜಾಹೀರಾತು ಪ್ರಕರಣ: ರಾಮ್‌ದೇವ್, ಎಂಡಿ ಬಾಲಕೃಷ್ಣ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಮುಕ್ತಾಯ

ಪತಂಜಲಿ ದಾರಿತಪ್ಪಿಸುವ ಜಾಹೀರಾತು ಪ್ರಕರಣ: ರಾಮ್‌ದೇವ್, ಎಂಡಿ ಬಾಲಕೃಷ್ಣ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಮುಕ್ತಾಯ

- Advertisement -
- Advertisement -

ದಾರಿತಪ್ಪಿಸುವ ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗ ಗುರು ಬಾಬಾ ರಾಮ್‌ದೇವ್ ಮತ್ತು ಪತಂಜಲಿ ಆಯುರ್ವೇದ ಎಂಡಿ ಆಚಾರ್ಯ ಬಾಲಕೃಷ್ಣ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ಮುಕ್ತಾಯಗೊಳಿಸಿದೆ.

ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಸಂದೀಪ್ ಮೆಹ್ತಾ ಅವರ ದ್ವಿಸದಸ್ಯ ಪೀಠವು ತೀರ್ಪು ನೀಡಿತು. ರಾಮ್‌ದೇವ್ ಮತ್ತು ಬಾಲಕೃಷ್ಣ ಅವರು ಪತಂಜಲಿ ಉತ್ಪನ್ನಗಳಿಗೆ ಸಂಬಂಧಿಸಿದಂತೆ ತಪ್ಪುದಾರಿಗೆಳೆಯುವ ಜಾಹೀರಾತುಗಳ ಪ್ರಸಾರ ನಿಲ್ಲಿಸುವುದಾಗಿ ಭರವಸೆ ನೀಡಿದ ನಂತರ ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸಿತು.

ಪತಂಜಲಿ ಆಯುರ್ವೇದ್‌ನ ಜಾಹೀರಾತುಗಳು ರಕ್ತದೊತ್ತಡ, ಮಧುಮೇಹ ಮತ್ತು ಅಸ್ತಮಾದಂತಹ ಕಾಯಿಲೆಗಳನ್ನು ಗುಣಪಡಿಸುವ ಕುರಿತು ಅಸಮರ್ಪಕ ಮತ್ತು ತಪ್ಪುದಾರಿಗೆಳೆಯುವ ಮಾಹಿತಿಯನ್ನು ಒದಗಿಸಿವೆ ಎಂದು ಆರೋಪಿಸಿ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ​​(ಐಎಂಎ) ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ.

“ಇಂತಹ ಕಾಯಿಲೆಗಳಿಗೆ ಪರಿಹಾರಗಳನ್ನು ಜಾಹೀರಾತು ಮಾಡುವುದು ಸಂಪೂರ್ಣವಾಗಿ ತಪ್ಪು” ಎಂದು ಐಎಂಎ ಹೇಳಿದೆ.

ಪತಂಜಲಿ ಆಯುರ್ವೇದ್, ರಾಮ್‌ದೇವ್ ಮತ್ತು ಬಾಲಕೃಷ್ಣ ಅವರು ಭವಿಷ್ಯದಲ್ಲಿ ಯಾವುದೇ ಕಾನೂನುಗಳನ್ನು ಉಲ್ಲಂಘಿಸುವುದಿಲ್ಲ, ವಿಶೇಷವಾಗಿ ತಮ್ಮ ಉತ್ಪನ್ನಗಳ ಜಾಹೀರಾತು ಅಥವಾ ಬ್ರ್ಯಾಂಡಿಂಗ್‌ಗೆ ಸಂಬಂಧಿಸಿದ ಕಾನೂನುಗಳನ್ನು ಉಲ್ಲಂಘಿಸುವುದಿಲ್ಲ ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿದರು.

ಮುಂಚಿನ ಆದೇಶದಲ್ಲಿ ಸುಪ್ರೀಂ ಕೋರ್ಟ್, ಮುದ್ರಣ ಮತ್ತು ಟಿವಿಯಲ್ಲಿ ಪತಂಜಲಿ ಔಷಧಿ ಜಾಹೀರಾತುಗಳಿಗೆ ತಾತ್ಕಾಲಿಕ ನಿಷೇಧವನ್ನು ವಿಧಿಸಿತು. ರಕ್ತದೊತ್ತಡ, ಮಧುಮೇಹ ಮತ್ತು ಅಸ್ತಮಾ ಸೇರಿದಂತೆ ರೋಗಗಳಿಗೆ ಸಂಬಂಧಿಸಿದ ಯಾವುದೇ ಜಾಹೀರಾತುಗಳನ್ನು ನೀಡದಂತೆ ಕಂಪನಿಯನ್ನು ನಿರ್ಬಂಧಿಸಿದೆ.

ನ್ಯಾಯಾಲಯವು 1954 ರ ಡ್ರಗ್ಸ್ ಮತ್ತು ಮ್ಯಾಜಿಕ್ ರೆಮಿಡೀಸ್ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯಿದೆಯನ್ನು ಉಲ್ಲೇಖಿಸಿದೆ ಮತ್ತು ನಿರ್ದಿಷ್ಟ ರೋಗಗಳು ಅಥವಾ ಅಸ್ವಸ್ಥತೆಗಳಿಗೆ ಚಿಕಿತ್ಸೆಯಾಗಿ ಅದರ ಉತ್ಪನ್ನಗಳನ್ನು ಜಾಹೀರಾತು ಮಾಡದಂತೆ ಪತಂಜಲಿಯನ್ನು ನಿರ್ಬಂಧಿಸಿದೆ.

ಇದನ್ನೂ ಓದಿ; ‘ಸರ್ಕಾರ ಪದಚ್ಯುತಗೊಳಿಸುವಲ್ಲಿ ಭಾಗಿಯಾಗಿಲ್ಲ..’; ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಆರೋಪ ನಿರಾಕರಿಸಿದ ಅಮೆರಿಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...