Homeಮುಖಪುಟಪತಂಜಲಿಯ ಪತನ ಶುರು: 'ಸೋನ್ ಪಾಪ್ಡಿ'ಯಿಂದ ಮೂವರಿಗೆ ಜೈಲು ಶಿಕ್ಷೆ

ಪತಂಜಲಿಯ ಪತನ ಶುರು: ‘ಸೋನ್ ಪಾಪ್ಡಿ’ಯಿಂದ ಮೂವರಿಗೆ ಜೈಲು ಶಿಕ್ಷೆ

- Advertisement -
- Advertisement -

ಪತಂಜಲಿ ನವರತ್ನ ಎಲೈಚಿ ಸೋನ್ ಪಾಪ್ಡಿ(ಸಾಂಪ್ರದಾಯಿಕ ಸಿಹಿತಿಂಡಿ) ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾದ ಹಿನ್ನೆಲೆ ಉತ್ತರಾಖಂಡದ ನ್ಯಾಯಾಲಯವು ಪತಂಜಲಿ ಆಯರ್ವೇದ ಲಿಮಿಟೆಡ್‍ನ ಸಹಾಯಕ ವ್ಯವಸ್ಥಾಪಕ ಸೇರಿದಂತೆ ಮೂರು ಮಂದಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

ಉತ್ಪನ್ನದ ಬಗ್ಗೆ ಕಳವಳ ವ್ಯಕ್ತವಾದ ಹಿನ್ನೆಲೆ 2019ರ ಸೆಪ್ಟಂಬರ್‌ನಲ್ಲಿ ಪಿಥೋರಗಢದ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಬೆರಿನಾಗ್ ಮಾರುಕಟ್ಟೆಯ ಅಂಗಡಿಯಿಂದ ಮಾದರಿಗಳನ್ನು ಸಂಗ್ರಹಿಸಿದ್ದರು. ಉಧಾಮ್‍ಸಿಂಗ್‍ನಗರ ಜಿಲ್ಲೆಯ ರುದ್ರಾಪುರದ ರಾಜ್ಯ ಆಹಾರ ಮತ್ತು ಔಷಧ ಪರೀಕ್ಷಾ ಪ್ರಯೋಗಾಲಯದಲ್ಲಿ 2019ರ ಮೇ 18ರಂದು ಗುಣಮಟ್ಟ ಪರೀಕ್ಷೆ ನಡೆದಿತ್ತು. ಪರೀಕ್ಷಾ ಫಲಿತಾಂಶಗಳು ಕಳಪೆ ಗುಣಮಟ್ಟವನ್ನು ಬಹಿರಂಗಪಡಿಸಿದ್ದವು, ನಂತರ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಮೂವರ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದರು.

ಪಿಥೋರಗಢ್‌ನ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಸಂಜಯ್ ಸಿಂಗ್ ಅವರು ಪತಂಜಲಿ ಫುಡ್ ಅಂಡ್ ಹರ್ಬಲ್ ಪಾರ್ಕ್, ಲಕ್ಸಾರ್‌ನ ಸಹಾಯಕ ಜನರಲ್ ಮ್ಯಾನೇಜರ್ ಅಭಿಷೇಕ್ ಕುಮಾರ್, ಕನ್ಹಾ ಜಿ ಡಿಸ್ಟ್ರಿಬ್ಯೂಟರ್ ಪ್ರೈವೇಟ್ ಲಿಮಿಟೆಡ್ ರಾಮನಗರದ ಸಹಾಯಕ ವ್ಯವಸ್ಥಾಪಕ ಅಜಯ್ ಜೋಶಿ ಮತ್ತು ಸ್ಟೋರ್‌ ಕೀಪರ್‌ ಲೀಲಾಧರ್ ಪಾಠಕ್ ಅವರಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆ 2006ರ ಸೆಕ್ಷನ್ 59ರ ಅಡಿಯಲ್ಲಿ 6 ತಿಂಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸಿದೆ.

ನ್ಯಾಯಾಲಯವು ಪತಂಜಲಿ ಆಯುರ್ವೇದ ಲಿಮಿಟೆಡ್ ಮತ್ತು ಅಜಯ್ ಜೋಶಿಗೆ ತಲಾ 10,000 ರೂ. ದಂಡ ವಿಧಿಸಿದರೆ, ಅಭಿಷೇಕ್ ಕುಮಾರ್ 25,000 ರೂ. ಮತ್ತು ಪಾಠಕ್‌ಗೆ 5,000 ರೂ.ದಂಡವನ್ನು ಕೂಡ ವಿಧಿಸಿದೆ.

ಮೂವರು ಆರೋಪಿಗಳು ತಮ್ಮ ಶಿಕ್ಷೆಯನ್ನು ಪೂರೈಸಲು ವಿಫಲವಾದರೆ, ಹೆಚ್ಚುವರಿ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ ಎಂದು ಮುಖ್ಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಹೇಳಿದೆ.

ದಾರಿತಪ್ಪಿಸುವ ಜಾಹೀರಾತು ಪ್ರಕರಣದಲ್ಲಿ ಪತಂಜಲಿ ಸಿಲುಕಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಯೋಗ ಗುರು ಬಾಬಾ ರಾಮ್‌ದೇವ್ ಮತ್ತು ಇತರರಿಗೆ ನೀಡಿರುವ ನ್ಯಾಯಾಂಗ ನಿಂದನೆ ನೋಟಿಸ್‌ಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿದೆ.

ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (IMA) 2022ರಲ್ಲಿ ಪತಂಜಲಿಯ ಜಾಹೀರಾತುಗಳಲ್ಲಿ “ಸುಳ್ಳು” ಮತ್ತು “ದಾರಿ ತಪ್ಪಿಸುವ” ಅಂಶಗಳನ್ನು ಹೊಂದಿದೆ ಎಂದು ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ಅಲೋಪತಿ ಔಷಧಗಳ ಕುರಿತು ಅಪಪ್ರಚಾರ ಮಾಡುತ್ತಿರುವ ಕಾರಣ ಬಾಬಾ ರಾಮದೇವ್‌ ಮತ್ತು ಪತಂಜಲಿ ಆಯುರ್ವೇದ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ನಡೆಸುತ್ತಿದೆ. ಹಲವು ಕಾಯಿಲೆಗಳ ಚಿಕಿತ್ಸೆ ಮತ್ತು ಔಷಧಿಗಳಿಗೆ ಸಂಬಂಧಿಸಿದಂತೆ ಸುಳ್ಳು ಮತ್ತು ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಪತಂಜಲಿ ಆರ್ಯುವೇದ ನೀಡುತ್ತಿರುವುದರ ವಿರುದ್ಧ ನವೆಂಬರ್‌ನಲ್ಲಿಯೇ ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿತ್ತು.

ಇದನ್ನು ಓದಿ: ಲೋಕಸಭೆ ಚುನಾವಣೆ: ಮುಸ್ಲಿಂ ಸಮುದಾಯಕ್ಕೆ ಕಡಿಮೆ ಪ್ರಾತನಿಧ್ಯ ನೀಡಿದ ರಾಜಕೀಯ ಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...