Homeಮುಖಪುಟಪತಂಜಲಿ ಕೆಂಪು ಮೆಣಸಿನ ಪುಡಿ ಹಿಂಪಡೆಯಲು ಆಹಾರ ಪ್ರಾಧಿಕಾರ ಆದೇಶ

ಪತಂಜಲಿ ಕೆಂಪು ಮೆಣಸಿನ ಪುಡಿ ಹಿಂಪಡೆಯಲು ಆಹಾರ ಪ್ರಾಧಿಕಾರ ಆದೇಶ

ಸುರಕ್ಷತಾ ಮಾನದಂಡ ಅನುಸರಿಸಲು ವಿಫಲವಾದ ರಾಮ್‌ದೇವ್ ಕಂಪೆನಿ

- Advertisement -
- Advertisement -

ಸುರಕ್ಷತಾ ಮಾನದಂಡಗಳನ್ನು ಪಾಲಿಸದ ಕಾರಣ ಪ್ಯಾಕ್ ಮಾಡಿದ ಕೆಂಪು ಮೆಣಸಿನ ಪುಡಿಯ ಬ್ಯಾಚ್ ಅನ್ನು ಹಿಂಪಡೆಯಲು ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರವು ಪತಂಜಲಿ ಫುಡ್ಸ್‌ಗೆ ಆದೇಶಿಸಿದೆ ಎಂದು ಕಂಪನಿಯು ಗುರುವಾರ ತಿಳಿಸಿದೆ. ಆಹಾರ ಸುರಕ್ಷತಾ ಪ್ರಾಧಿಕಾರವು ಜನವರಿ 13 ರಂದು ಸಂಪೂರ್ಣ ಕೆಂಪು ಮೆಣಸಿನ ಪುಡಿಯನ್ನು ಹಿಂಪಡೆಯಲು ಆದೇಶವನ್ನು ನೀಡಿದ್ದು, ಕಂಪನಿಯು ಜನವರಿ 16 ರಂದು ಆದೇಶವನ್ನು ಸ್ವೀಕರಿಸಿದೆ ವರದಿಯಾಗಿದೆ.

ಕೆಂಪು ಮೆಣಸಿನ ಪುಡಿಯ ಬ್ಯಾಚ್ ಆಹಾರ ಸುರಕ್ಷತೆ ಮತ್ತು ಮಾನದಂಡಗಳು (ಮಾಲಿನ್ಯಕಾರಕಗಳು, ವಿಷಗಳು ಮತ್ತು ಉಳಿಕೆಗಳು) ನಿಯಮಗಳು, 2011 ಅನ್ನು ಅನುಸರಿಸಲು ವಿಫಲವಾಗಿದೆ ಎಂದು ಆರೋಪಿಸಲಾಗಿದೆ. ಕಂಡುಬಂದ ಉಲ್ಲಂಘನೆಗಳ ಸ್ವರೂಪ ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಪತಂಜಲಿ ಫುಡ್ಸ್ ಕಂಪೆನಿಯು ಯೋಗ ಗುರು ರಾಮ್‌ದೇವ್ ನೇತೃತ್ವದ ಪತಂಜಲಿ ಆಯುರ್ವೇದ ಸಮೂಹದ ಭಾಗವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಏಪ್ರಿಲ್‌ನಲ್ಲಿ ಕೂಡಾ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರವು ದೇಶಾದ್ಯಂತದ ಎಲ್ಲಾ ಬ್ರಾಂಡ್‌ಗಳಿಂದ ಪುಡಿ ಮಾಡಿದ ಮಸಾಲೆಗಳ ಮಾದರಿಗಳನ್ನು ಅವುಗಳ ಗುಣಮಟ್ಟವನ್ನು ಪರಿಶೀಲಿಸಲು ಪ್ರಾರಂಭಿಸಿತ್ತು. ಪುಡಿ ಮಾಡಿದ ಮಸಾಲೆ ತಯಾರಕರಾದ ಎವರೆಸ್ಟ್ ಮತ್ತು MDH ಮಾರಾಟ ಮಾಡುವ ಉತ್ಪನ್ನಗಳಲ್ಲಿ ಎಥಿಲೀನ್ ಆಕ್ಸೈಡ್ ಇರುವ ಬಗ್ಗೆ ಹಾಂಗ್ ಕಾಂಗ್ ಮತ್ತು ಸಿಂಗಾಪುರ ಎಚ್ಚರಿಕೆ ನೀಡಿದ ನಂತರ ಪ್ರಾಧಿಕಾರವು ಈ ಪರಿಶೀಲನೆ ನಡೆಸಿದೆ.

ಏಪ್ರಿಲ್ 5 ರಂದು, ಹಾಂಗ್ ಕಾಂಗ್‌ನ ಆಹಾರ ಸುರಕ್ಷತಾ ಕೇಂದ್ರವು MDH ಮದ್ರಾಸ್ ಕರಿ ಪೌಡರ್, MDH ಸಾಂಬಾರ್ ಮಸಾಲ, MDH ಕರಿ ಪೌಡರ್ ಮತ್ತು ಎವರೆಸ್ಟ್ ಫಿಶ್ ಕರಿ ಮಸಾಲಗಳ ಮಾರಾಟವನ್ನು ನಿಷೇಧಿಸಿದ್ದು, ಅವುಗಳನ್ನು ಹಿಂಪಡೆದಿದೆ. ಮಾದರಿಗಳಲ್ಲಿ ಕೀಟನಾಶಕ ಎಥಿಲೀನ್ ಆಕ್ಸೈಡ್ ಇರುವುದು ಕಂಡುಬಂದ ನಂತರ ಈ ಕ್ರಮವನ್ನು ಕೈಗೊಂಡಿದೆ.

ಎವರೆಸ್ಟ್‌ನ ಫಿಶ್ ಕರಿ ಮಸಾಲೆ ಮಿಶ್ರಣವು ಅನುಮತಿಸಲಾದ ಮಟ್ಟಕ್ಕಿಂತ ಹೆಚ್ಚಿನ ಎಥಿಲೀನ್ ಆಕ್ಸೈಡ್ ಅನ್ನು ಹೊಂದಿದೆ ಎಂಬ ಕಾರಣಕ್ಕೆ ಸಿಂಗಾಪುರ್ ಆಹಾರ ಸಂಸ್ಥೆಯು ಅದನ್ನು ಹಿಂಪಡೆಯಿತು. ಉತ್ಪನ್ನಗಳ ಶೆಲ್ಫ್ ಜೀವಿತಾವಧಿಯನ್ನು ವಿಸ್ತರಿಸಲು ತಯಾರಕರು ಹೆಚ್ಚಾಗಿ ಎಥಿಲೀನ್ ಆಕ್ಸೈಡ್ ಅನ್ನು ಫ್ಯೂಮಿಗಂಟ್ ಮತ್ತು ಕ್ರಿಮಿನಾಶಕವಾಗಿ ಬಳಸುತ್ತಾರೆ, ಆದರೆ ಭಾರತದ ಆಹಾರ ಸುರಕ್ಷತಾ ನಿಯಂತ್ರಕವು ಅದರ ಬಳಕೆಯನ್ನು ಅನುಮತಿಸುವುದಿಲ್ಲ.

ಇದನ್ನೂಓದಿ:  ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...