Homeಮುಖಪುಟಪತಂಜಲಿ ಕೆಂಪು ಮೆಣಸಿನ ಪುಡಿ ಹಿಂಪಡೆಯಲು ಆಹಾರ ಪ್ರಾಧಿಕಾರ ಆದೇಶ

ಪತಂಜಲಿ ಕೆಂಪು ಮೆಣಸಿನ ಪುಡಿ ಹಿಂಪಡೆಯಲು ಆಹಾರ ಪ್ರಾಧಿಕಾರ ಆದೇಶ

ಸುರಕ್ಷತಾ ಮಾನದಂಡ ಅನುಸರಿಸಲು ವಿಫಲವಾದ ರಾಮ್‌ದೇವ್ ಕಂಪೆನಿ

- Advertisement -
- Advertisement -

ಸುರಕ್ಷತಾ ಮಾನದಂಡಗಳನ್ನು ಪಾಲಿಸದ ಕಾರಣ ಪ್ಯಾಕ್ ಮಾಡಿದ ಕೆಂಪು ಮೆಣಸಿನ ಪುಡಿಯ ಬ್ಯಾಚ್ ಅನ್ನು ಹಿಂಪಡೆಯಲು ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರವು ಪತಂಜಲಿ ಫುಡ್ಸ್‌ಗೆ ಆದೇಶಿಸಿದೆ ಎಂದು ಕಂಪನಿಯು ಗುರುವಾರ ತಿಳಿಸಿದೆ. ಆಹಾರ ಸುರಕ್ಷತಾ ಪ್ರಾಧಿಕಾರವು ಜನವರಿ 13 ರಂದು ಸಂಪೂರ್ಣ ಕೆಂಪು ಮೆಣಸಿನ ಪುಡಿಯನ್ನು ಹಿಂಪಡೆಯಲು ಆದೇಶವನ್ನು ನೀಡಿದ್ದು, ಕಂಪನಿಯು ಜನವರಿ 16 ರಂದು ಆದೇಶವನ್ನು ಸ್ವೀಕರಿಸಿದೆ ವರದಿಯಾಗಿದೆ.

ಕೆಂಪು ಮೆಣಸಿನ ಪುಡಿಯ ಬ್ಯಾಚ್ ಆಹಾರ ಸುರಕ್ಷತೆ ಮತ್ತು ಮಾನದಂಡಗಳು (ಮಾಲಿನ್ಯಕಾರಕಗಳು, ವಿಷಗಳು ಮತ್ತು ಉಳಿಕೆಗಳು) ನಿಯಮಗಳು, 2011 ಅನ್ನು ಅನುಸರಿಸಲು ವಿಫಲವಾಗಿದೆ ಎಂದು ಆರೋಪಿಸಲಾಗಿದೆ. ಕಂಡುಬಂದ ಉಲ್ಲಂಘನೆಗಳ ಸ್ವರೂಪ ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಪತಂಜಲಿ ಫುಡ್ಸ್ ಕಂಪೆನಿಯು ಯೋಗ ಗುರು ರಾಮ್‌ದೇವ್ ನೇತೃತ್ವದ ಪತಂಜಲಿ ಆಯುರ್ವೇದ ಸಮೂಹದ ಭಾಗವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಏಪ್ರಿಲ್‌ನಲ್ಲಿ ಕೂಡಾ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರವು ದೇಶಾದ್ಯಂತದ ಎಲ್ಲಾ ಬ್ರಾಂಡ್‌ಗಳಿಂದ ಪುಡಿ ಮಾಡಿದ ಮಸಾಲೆಗಳ ಮಾದರಿಗಳನ್ನು ಅವುಗಳ ಗುಣಮಟ್ಟವನ್ನು ಪರಿಶೀಲಿಸಲು ಪ್ರಾರಂಭಿಸಿತ್ತು. ಪುಡಿ ಮಾಡಿದ ಮಸಾಲೆ ತಯಾರಕರಾದ ಎವರೆಸ್ಟ್ ಮತ್ತು MDH ಮಾರಾಟ ಮಾಡುವ ಉತ್ಪನ್ನಗಳಲ್ಲಿ ಎಥಿಲೀನ್ ಆಕ್ಸೈಡ್ ಇರುವ ಬಗ್ಗೆ ಹಾಂಗ್ ಕಾಂಗ್ ಮತ್ತು ಸಿಂಗಾಪುರ ಎಚ್ಚರಿಕೆ ನೀಡಿದ ನಂತರ ಪ್ರಾಧಿಕಾರವು ಈ ಪರಿಶೀಲನೆ ನಡೆಸಿದೆ.

ಏಪ್ರಿಲ್ 5 ರಂದು, ಹಾಂಗ್ ಕಾಂಗ್‌ನ ಆಹಾರ ಸುರಕ್ಷತಾ ಕೇಂದ್ರವು MDH ಮದ್ರಾಸ್ ಕರಿ ಪೌಡರ್, MDH ಸಾಂಬಾರ್ ಮಸಾಲ, MDH ಕರಿ ಪೌಡರ್ ಮತ್ತು ಎವರೆಸ್ಟ್ ಫಿಶ್ ಕರಿ ಮಸಾಲಗಳ ಮಾರಾಟವನ್ನು ನಿಷೇಧಿಸಿದ್ದು, ಅವುಗಳನ್ನು ಹಿಂಪಡೆದಿದೆ. ಮಾದರಿಗಳಲ್ಲಿ ಕೀಟನಾಶಕ ಎಥಿಲೀನ್ ಆಕ್ಸೈಡ್ ಇರುವುದು ಕಂಡುಬಂದ ನಂತರ ಈ ಕ್ರಮವನ್ನು ಕೈಗೊಂಡಿದೆ.

ಎವರೆಸ್ಟ್‌ನ ಫಿಶ್ ಕರಿ ಮಸಾಲೆ ಮಿಶ್ರಣವು ಅನುಮತಿಸಲಾದ ಮಟ್ಟಕ್ಕಿಂತ ಹೆಚ್ಚಿನ ಎಥಿಲೀನ್ ಆಕ್ಸೈಡ್ ಅನ್ನು ಹೊಂದಿದೆ ಎಂಬ ಕಾರಣಕ್ಕೆ ಸಿಂಗಾಪುರ್ ಆಹಾರ ಸಂಸ್ಥೆಯು ಅದನ್ನು ಹಿಂಪಡೆಯಿತು. ಉತ್ಪನ್ನಗಳ ಶೆಲ್ಫ್ ಜೀವಿತಾವಧಿಯನ್ನು ವಿಸ್ತರಿಸಲು ತಯಾರಕರು ಹೆಚ್ಚಾಗಿ ಎಥಿಲೀನ್ ಆಕ್ಸೈಡ್ ಅನ್ನು ಫ್ಯೂಮಿಗಂಟ್ ಮತ್ತು ಕ್ರಿಮಿನಾಶಕವಾಗಿ ಬಳಸುತ್ತಾರೆ, ಆದರೆ ಭಾರತದ ಆಹಾರ ಸುರಕ್ಷತಾ ನಿಯಂತ್ರಕವು ಅದರ ಬಳಕೆಯನ್ನು ಅನುಮತಿಸುವುದಿಲ್ಲ.

ಇದನ್ನೂಓದಿ:  ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...