Homeಮುಖಪುಟಪತಂಜಲಿ ಕೆಂಪು ಮೆಣಸಿನ ಪುಡಿ ಹಿಂಪಡೆಯಲು ಆಹಾರ ಪ್ರಾಧಿಕಾರ ಆದೇಶ

ಪತಂಜಲಿ ಕೆಂಪು ಮೆಣಸಿನ ಪುಡಿ ಹಿಂಪಡೆಯಲು ಆಹಾರ ಪ್ರಾಧಿಕಾರ ಆದೇಶ

ಸುರಕ್ಷತಾ ಮಾನದಂಡ ಅನುಸರಿಸಲು ವಿಫಲವಾದ ರಾಮ್‌ದೇವ್ ಕಂಪೆನಿ

- Advertisement -
- Advertisement -

ಸುರಕ್ಷತಾ ಮಾನದಂಡಗಳನ್ನು ಪಾಲಿಸದ ಕಾರಣ ಪ್ಯಾಕ್ ಮಾಡಿದ ಕೆಂಪು ಮೆಣಸಿನ ಪುಡಿಯ ಬ್ಯಾಚ್ ಅನ್ನು ಹಿಂಪಡೆಯಲು ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರವು ಪತಂಜಲಿ ಫುಡ್ಸ್‌ಗೆ ಆದೇಶಿಸಿದೆ ಎಂದು ಕಂಪನಿಯು ಗುರುವಾರ ತಿಳಿಸಿದೆ. ಆಹಾರ ಸುರಕ್ಷತಾ ಪ್ರಾಧಿಕಾರವು ಜನವರಿ 13 ರಂದು ಸಂಪೂರ್ಣ ಕೆಂಪು ಮೆಣಸಿನ ಪುಡಿಯನ್ನು ಹಿಂಪಡೆಯಲು ಆದೇಶವನ್ನು ನೀಡಿದ್ದು, ಕಂಪನಿಯು ಜನವರಿ 16 ರಂದು ಆದೇಶವನ್ನು ಸ್ವೀಕರಿಸಿದೆ ವರದಿಯಾಗಿದೆ.

ಕೆಂಪು ಮೆಣಸಿನ ಪುಡಿಯ ಬ್ಯಾಚ್ ಆಹಾರ ಸುರಕ್ಷತೆ ಮತ್ತು ಮಾನದಂಡಗಳು (ಮಾಲಿನ್ಯಕಾರಕಗಳು, ವಿಷಗಳು ಮತ್ತು ಉಳಿಕೆಗಳು) ನಿಯಮಗಳು, 2011 ಅನ್ನು ಅನುಸರಿಸಲು ವಿಫಲವಾಗಿದೆ ಎಂದು ಆರೋಪಿಸಲಾಗಿದೆ. ಕಂಡುಬಂದ ಉಲ್ಲಂಘನೆಗಳ ಸ್ವರೂಪ ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಪತಂಜಲಿ ಫುಡ್ಸ್ ಕಂಪೆನಿಯು ಯೋಗ ಗುರು ರಾಮ್‌ದೇವ್ ನೇತೃತ್ವದ ಪತಂಜಲಿ ಆಯುರ್ವೇದ ಸಮೂಹದ ಭಾಗವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಏಪ್ರಿಲ್‌ನಲ್ಲಿ ಕೂಡಾ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರವು ದೇಶಾದ್ಯಂತದ ಎಲ್ಲಾ ಬ್ರಾಂಡ್‌ಗಳಿಂದ ಪುಡಿ ಮಾಡಿದ ಮಸಾಲೆಗಳ ಮಾದರಿಗಳನ್ನು ಅವುಗಳ ಗುಣಮಟ್ಟವನ್ನು ಪರಿಶೀಲಿಸಲು ಪ್ರಾರಂಭಿಸಿತ್ತು. ಪುಡಿ ಮಾಡಿದ ಮಸಾಲೆ ತಯಾರಕರಾದ ಎವರೆಸ್ಟ್ ಮತ್ತು MDH ಮಾರಾಟ ಮಾಡುವ ಉತ್ಪನ್ನಗಳಲ್ಲಿ ಎಥಿಲೀನ್ ಆಕ್ಸೈಡ್ ಇರುವ ಬಗ್ಗೆ ಹಾಂಗ್ ಕಾಂಗ್ ಮತ್ತು ಸಿಂಗಾಪುರ ಎಚ್ಚರಿಕೆ ನೀಡಿದ ನಂತರ ಪ್ರಾಧಿಕಾರವು ಈ ಪರಿಶೀಲನೆ ನಡೆಸಿದೆ.

ಏಪ್ರಿಲ್ 5 ರಂದು, ಹಾಂಗ್ ಕಾಂಗ್‌ನ ಆಹಾರ ಸುರಕ್ಷತಾ ಕೇಂದ್ರವು MDH ಮದ್ರಾಸ್ ಕರಿ ಪೌಡರ್, MDH ಸಾಂಬಾರ್ ಮಸಾಲ, MDH ಕರಿ ಪೌಡರ್ ಮತ್ತು ಎವರೆಸ್ಟ್ ಫಿಶ್ ಕರಿ ಮಸಾಲಗಳ ಮಾರಾಟವನ್ನು ನಿಷೇಧಿಸಿದ್ದು, ಅವುಗಳನ್ನು ಹಿಂಪಡೆದಿದೆ. ಮಾದರಿಗಳಲ್ಲಿ ಕೀಟನಾಶಕ ಎಥಿಲೀನ್ ಆಕ್ಸೈಡ್ ಇರುವುದು ಕಂಡುಬಂದ ನಂತರ ಈ ಕ್ರಮವನ್ನು ಕೈಗೊಂಡಿದೆ.

ಎವರೆಸ್ಟ್‌ನ ಫಿಶ್ ಕರಿ ಮಸಾಲೆ ಮಿಶ್ರಣವು ಅನುಮತಿಸಲಾದ ಮಟ್ಟಕ್ಕಿಂತ ಹೆಚ್ಚಿನ ಎಥಿಲೀನ್ ಆಕ್ಸೈಡ್ ಅನ್ನು ಹೊಂದಿದೆ ಎಂಬ ಕಾರಣಕ್ಕೆ ಸಿಂಗಾಪುರ್ ಆಹಾರ ಸಂಸ್ಥೆಯು ಅದನ್ನು ಹಿಂಪಡೆಯಿತು. ಉತ್ಪನ್ನಗಳ ಶೆಲ್ಫ್ ಜೀವಿತಾವಧಿಯನ್ನು ವಿಸ್ತರಿಸಲು ತಯಾರಕರು ಹೆಚ್ಚಾಗಿ ಎಥಿಲೀನ್ ಆಕ್ಸೈಡ್ ಅನ್ನು ಫ್ಯೂಮಿಗಂಟ್ ಮತ್ತು ಕ್ರಿಮಿನಾಶಕವಾಗಿ ಬಳಸುತ್ತಾರೆ, ಆದರೆ ಭಾರತದ ಆಹಾರ ಸುರಕ್ಷತಾ ನಿಯಂತ್ರಕವು ಅದರ ಬಳಕೆಯನ್ನು ಅನುಮತಿಸುವುದಿಲ್ಲ.

ಇದನ್ನೂಓದಿ:  ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...