Homeಮುಖಪುಟಡಾಬರ್ ಚ್ಯವನ್‌ಪ್ರಾಶ್ ವಿರುದ್ಧದ ಪತಂಜಲಿಯ 'ಕಳಂಕ ಜಾಹೀರಾತಿ'ಗೆ ದೆಹಲಿ ಹೈಕೋರ್ಟ್‌ನಿಂದ ನಿಷೇಧ!

ಡಾಬರ್ ಚ್ಯವನ್‌ಪ್ರಾಶ್ ವಿರುದ್ಧದ ಪತಂಜಲಿಯ ‘ಕಳಂಕ ಜಾಹೀರಾತಿ’ಗೆ ದೆಹಲಿ ಹೈಕೋರ್ಟ್‌ನಿಂದ ನಿಷೇಧ!

- Advertisement -
- Advertisement -

ನವದೆಹಲಿ: ಡಾಬರ್ ಚ್ಯವನ್‌ಪ್ರಾಶ್‌ಗೆ ಕಳಂಕ ತರುವಂತಹ ಜಾಹೀರಾತುಗಳನ್ನು ಪ್ರಸಾರ ಮಾಡದಂತೆ ಯೋಗ ಗುರು ರಾಮದೇವ್ ನೇತೃತ್ವದ ಪತಂಜಲಿ ಆಯುರ್ವೇದ್ ಸಂಸ್ಥೆಗೆ ದೆಹಲಿ ಹೈಕೋರ್ಟ್ ಗುರುವಾರ ನಿರ್ಬಂಧ ವಿಧಿಸಿದೆ ಎಂದು ಪಿಟಿಐ ವರದಿ ಮಾಡಿದೆ. ನ್ಯಾಯಮೂರ್ತಿ ಮಿನಿ ಪುಷ್ಕರ್ಣ ಅವರು, ಡಾಬರ್ ಇಂಡಿಯಾ ಸಲ್ಲಿಸಿದ್ದ ಮಧ್ಯಂತರ ಪರಿಹಾರದ ಅರ್ಜಿಯನ್ನು ಅನುಮತಿಸಿದ್ದಾರೆ. ಮುಂದಿನ ವಿಚಾರಣೆ ಜುಲೈ 14ಕ್ಕೆ ನಿಗದಿಯಾಗಿದೆ.

ತಮ್ಮ ಬ್ರ್ಯಾಂಡ್‌ಗೆ ಕಳಂಕ ಹಚ್ಚುವ ಉದ್ದೇಶದಿಂದ ಪತಂಜಲಿ ಸರಣಿ ಟಿವಿ ಜಾಹೀರಾತುಗಳನ್ನು ಪ್ರಸಾರ ಮಾಡುತ್ತಿದೆ ಎಂದು ಡಾಬರ್ ಆರೋಪಿಸಿತ್ತು. ಈ ಸಂಬಂಧ ಡಾಬರ್ ಎರಡು ಮಧ್ಯಂತರ ತಡೆಯಾಜ್ಞೆ ಅರ್ಜಿಗಳನ್ನು ಸಲ್ಲಿಸಿದ್ದು, ನ್ಯಾಯಾಲಯ ಈಗಾಗಲೇ ಡಿಸೆಂಬರ್ 2023ರಲ್ಲಿ ಪತಂಜಲಿಗೆ ಸಮನ್ಸ್ ಜಾರಿ ಮಾಡಿತ್ತು. ನ್ಯಾಯಾಲಯದ ನಿರ್ದೇಶನಗಳ ಹೊರತಾಗಿಯೂ, ಪತಂಜಲಿ ಒಂದೇ ವಾರದಲ್ಲಿ ಬರೋಬ್ಬರಿ 6,182 ಜಾಹೀರಾತುಗಳನ್ನು ಪ್ರಸಾರ ಮಾಡಿದೆ ಎಂದು ಡಾಬರ್ ತನ್ನ ಎರಡನೇ ತಡೆಯಾಜ್ಞೆ ಅರ್ಜಿಯಲ್ಲಿ ತಿಳಿಸಿದೆ.

ಡಾಬರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಸಂದೀಪ್ ಸೇಥಿ, ಪತಂಜಲಿ ತಮ್ಮ ಚ್ಯವನ್‌ಪ್ರಾಶ್‌ನಲ್ಲಿ “51ಕ್ಕೂ ಹೆಚ್ಚು ಗಿಡಮೂಲಿಕೆಗಳಿವೆ” ಎಂದು ಸುಳ್ಳು ಜಾಹೀರಾತು ನೀಡಿದೆ, ಆದರೆ ವಾಸ್ತವವಾಗಿ 47 ಗಿಡಮೂಲಿಕೆಗಳನ್ನು ಮಾತ್ರ ಬಳಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಅಷ್ಟೇ ಅಲ್ಲ, ಪತಂಜಲಿಯ ಉತ್ಪನ್ನದಲ್ಲಿ ಪಾದರಸ (ಮರ್ಕ್ಯುರಿ) ಅಂಶವಿದ್ದು, ಇದು ಮಕ್ಕಳಿಗೆ ಸೂಕ್ತವಲ್ಲ ಎಂಬ ಗಂಭೀರ ಆರೋಪವನ್ನೂ ಅವರು ಎತ್ತಿದರು.

ಸುಮಾರು 40 ಗಿಡಮೂಲಿಕೆಗಳಿಂದ ತಯಾರಾದ ಡಾಬರ್‌ನ ಚ್ಯವನ್‌ಪ್ರಾಶ್ ಅನ್ನು ಪತಂಜಲಿ “ಸಾಮಾನ್ಯ” ಎಂದು ಬಿಂಬಿಸಿದೆ. ಪತಂಜಲಿಯ ಉತ್ಪನ್ನ ಮಾತ್ರ ಆಯುರ್ವೇದ ತತ್ವಗಳನ್ನು ಅನುಸರಿಸುತ್ತದೆ ಎಂದು ಹೇಳುವ ಮೂಲಕ ಡಾಬರ್‌ನ ಉತ್ಪನ್ನದ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಲಾಗಿದೆ. ಇದು ಉದ್ದೇಶಪೂರ್ವಕವಾಗಿ ಕಳಂಕ ಹಚ್ಚುವ ಪ್ರಯತ್ನ ಎಂದು ಸೇಥಿ ವಾದಿಸಿದರು.

ಚ್ಯವನ್‌ಪ್ರಾಶ್ ಮಾರುಕಟ್ಟೆಯಲ್ಲಿ 61.6% ಪಾಲನ್ನು ಹೊಂದಿರುವ ಡಾಬರ್, ಪತಂಜಲಿ “ನಮ್ಮನ್ನು ಸಾಮಾನ್ಯ ಎಂದು ಉಲ್ಲೇಖಿಸುತ್ತಾರೆ. ಮಾರುಕಟ್ಟೆ ನಾಯಕನನ್ನೇ ಸಾಮಾನ್ಯಗೊಳಿಸುತ್ತಾರೆ” ಎಂದು ನ್ಯಾಯಾಲಯಕ್ಕೆ ತಿಳಿಸಿತ್ತು.

ಪತಂಜಲಿಯ ಜಾಹೀರಾತು “ಆಯುರ್ವೇದ ಮತ್ತು ವೇದಗಳ ಜ್ಞಾನವಿಲ್ಲದವರು, ಚರಕ, ಸುಶ್ರುತ, ಧನ್ವಂತರಿ ಮತ್ತು ಚ್ಯವನ ಋಷಿಗಳ ಪರಂಪರೆಯಲ್ಲಿ ‘ಮೂಲ’ ಚ್ಯವನ್‌ಪ್ರಾಶ್ ಅನ್ನು ಹೇಗೆ ತಯಾರಿಸಲು ಸಾಧ್ಯ?” ಎಂದು ಪ್ರಶ್ನಿಸಿದೆ. ಈ ಜಾಹೀರಾತಿನಲ್ಲಿ ಸ್ವತಃ ಸ್ವಾಮಿ ರಾಮದೇವ್ ಅವರೇ ಕಾಣಿಸಿಕೊಂಡು ಸ್ಪರ್ಧಾತ್ಮಕ ಉತ್ಪನ್ನಗಳ ಸತ್ಯಾಸತ್ಯತೆಯನ್ನು ಪ್ರಶ್ನಿಸಿದ್ದರು. ಡಾಬರ್‌ನ ಆಯುರ್ವೇದ ಪರಂಪರೆಯನ್ನು ಹಾಳುಮಾಡುವ ನೇರ ಪ್ರಯತ್ನ ಇದು ಎಂದು ಡಾಬರ್ ವಾದಿಸಿದೆ.

ಪತಂಜಲಿಯ ಜಾಹೀರಾತು ತಮ್ಮ ಪದಾರ್ಥಗಳ ಸಂಯೋಜನೆಯನ್ನು ತಪ್ಪಾಗಿ ನಿರೂಪಿಸುವುದು, ಡಾಬರ್‌ನ ಆಯುರ್ವೇದ ಸಂಬಂಧದ ಮೇಲೆ ದಾಳಿ ಮಾಡುವುದು ಮತ್ತು ಡಾಬರ್ ಉತ್ಪನ್ನವನ್ನು ಕೀಳು ಎಂದು ಬಿಂಬಿಸುವುದು ಸೇರಿದಂತೆ ಮೂರು ರೀತಿಯಲ್ಲಿ ಕಳಂಕ ಹಚ್ಚುತ್ತಿದೆ ಎಂದು ಡಾಬರ್ ವಿವರಿಸಿದೆ.

ಆರೋಪಗಳನ್ನು ನಿರಾಕರಿಸಿದ ಪತಂಜಲಿ ಪರ ಹಿರಿಯ ವಕೀಲ ಜಯಂತ್ ಮೆಹ್ತಾ, ಡಾಬರ್‌ನ ಎಲ್ಲಾ ಹಕ್ಕುಗಳನ್ನು ತಳ್ಳಿಹಾಕಿದರು. ಪತಂಜಲಿ ಚ್ಯವನ್‌ಪ್ರಾಶ್‌ನಲ್ಲಿರುವ ಪದಾರ್ಥಗಳು ಅನುಮೋದಿತ ಆಯುರ್ವೇದ ಸೂತ್ರೀಕರಣಗಳಿಗೆ ಸಂಪೂರ್ಣವಾಗಿ ಅನುಗುಣವಾಗಿವೆ ಮತ್ತು ಉತ್ಪನ್ನವು ಸೇವನೆಗೆ ಸುರಕ್ಷಿತವಾಗಿದೆ ಎಂದು ಅವರು ಹೇಳಿದ್ದಾರೆ. ಡಿಸೆಂಬರ್ 24ರಿಂದ ಪ್ರಾರಂಭವಾದ ಈ ಕಾನೂನು ಸಮರ ಜುಲೈ 14ರ ಮುಂದಿನ ವಿಚಾರಣೆಯಲ್ಲಿ ಹೊಸ ತಿರುವು ಪಡೆಯುವ ಸಾಧ್ಯತೆಯಿದೆ.

ಕೋಮುಭಾಷಣ: ಅಣ್ಣಾಮಲೈ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲು; ತಮಿಳುನಾಡು ರಾಜಕಾರಣದಲ್ಲಿ ಬಿರುಗಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...