Homeಮುಖಪುಟಡಾಬರ್ ಚ್ಯವನ್‌ಪ್ರಾಶ್ ವಿರುದ್ಧದ ಪತಂಜಲಿಯ 'ಕಳಂಕ ಜಾಹೀರಾತಿ'ಗೆ ದೆಹಲಿ ಹೈಕೋರ್ಟ್‌ನಿಂದ ನಿಷೇಧ!

ಡಾಬರ್ ಚ್ಯವನ್‌ಪ್ರಾಶ್ ವಿರುದ್ಧದ ಪತಂಜಲಿಯ ‘ಕಳಂಕ ಜಾಹೀರಾತಿ’ಗೆ ದೆಹಲಿ ಹೈಕೋರ್ಟ್‌ನಿಂದ ನಿಷೇಧ!

- Advertisement -
- Advertisement -

ನವದೆಹಲಿ: ಡಾಬರ್ ಚ್ಯವನ್‌ಪ್ರಾಶ್‌ಗೆ ಕಳಂಕ ತರುವಂತಹ ಜಾಹೀರಾತುಗಳನ್ನು ಪ್ರಸಾರ ಮಾಡದಂತೆ ಯೋಗ ಗುರು ರಾಮದೇವ್ ನೇತೃತ್ವದ ಪತಂಜಲಿ ಆಯುರ್ವೇದ್ ಸಂಸ್ಥೆಗೆ ದೆಹಲಿ ಹೈಕೋರ್ಟ್ ಗುರುವಾರ ನಿರ್ಬಂಧ ವಿಧಿಸಿದೆ ಎಂದು ಪಿಟಿಐ ವರದಿ ಮಾಡಿದೆ. ನ್ಯಾಯಮೂರ್ತಿ ಮಿನಿ ಪುಷ್ಕರ್ಣ ಅವರು, ಡಾಬರ್ ಇಂಡಿಯಾ ಸಲ್ಲಿಸಿದ್ದ ಮಧ್ಯಂತರ ಪರಿಹಾರದ ಅರ್ಜಿಯನ್ನು ಅನುಮತಿಸಿದ್ದಾರೆ. ಮುಂದಿನ ವಿಚಾರಣೆ ಜುಲೈ 14ಕ್ಕೆ ನಿಗದಿಯಾಗಿದೆ.

ತಮ್ಮ ಬ್ರ್ಯಾಂಡ್‌ಗೆ ಕಳಂಕ ಹಚ್ಚುವ ಉದ್ದೇಶದಿಂದ ಪತಂಜಲಿ ಸರಣಿ ಟಿವಿ ಜಾಹೀರಾತುಗಳನ್ನು ಪ್ರಸಾರ ಮಾಡುತ್ತಿದೆ ಎಂದು ಡಾಬರ್ ಆರೋಪಿಸಿತ್ತು. ಈ ಸಂಬಂಧ ಡಾಬರ್ ಎರಡು ಮಧ್ಯಂತರ ತಡೆಯಾಜ್ಞೆ ಅರ್ಜಿಗಳನ್ನು ಸಲ್ಲಿಸಿದ್ದು, ನ್ಯಾಯಾಲಯ ಈಗಾಗಲೇ ಡಿಸೆಂಬರ್ 2023ರಲ್ಲಿ ಪತಂಜಲಿಗೆ ಸಮನ್ಸ್ ಜಾರಿ ಮಾಡಿತ್ತು. ನ್ಯಾಯಾಲಯದ ನಿರ್ದೇಶನಗಳ ಹೊರತಾಗಿಯೂ, ಪತಂಜಲಿ ಒಂದೇ ವಾರದಲ್ಲಿ ಬರೋಬ್ಬರಿ 6,182 ಜಾಹೀರಾತುಗಳನ್ನು ಪ್ರಸಾರ ಮಾಡಿದೆ ಎಂದು ಡಾಬರ್ ತನ್ನ ಎರಡನೇ ತಡೆಯಾಜ್ಞೆ ಅರ್ಜಿಯಲ್ಲಿ ತಿಳಿಸಿದೆ.

ಡಾಬರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಸಂದೀಪ್ ಸೇಥಿ, ಪತಂಜಲಿ ತಮ್ಮ ಚ್ಯವನ್‌ಪ್ರಾಶ್‌ನಲ್ಲಿ “51ಕ್ಕೂ ಹೆಚ್ಚು ಗಿಡಮೂಲಿಕೆಗಳಿವೆ” ಎಂದು ಸುಳ್ಳು ಜಾಹೀರಾತು ನೀಡಿದೆ, ಆದರೆ ವಾಸ್ತವವಾಗಿ 47 ಗಿಡಮೂಲಿಕೆಗಳನ್ನು ಮಾತ್ರ ಬಳಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಅಷ್ಟೇ ಅಲ್ಲ, ಪತಂಜಲಿಯ ಉತ್ಪನ್ನದಲ್ಲಿ ಪಾದರಸ (ಮರ್ಕ್ಯುರಿ) ಅಂಶವಿದ್ದು, ಇದು ಮಕ್ಕಳಿಗೆ ಸೂಕ್ತವಲ್ಲ ಎಂಬ ಗಂಭೀರ ಆರೋಪವನ್ನೂ ಅವರು ಎತ್ತಿದರು.

ಸುಮಾರು 40 ಗಿಡಮೂಲಿಕೆಗಳಿಂದ ತಯಾರಾದ ಡಾಬರ್‌ನ ಚ್ಯವನ್‌ಪ್ರಾಶ್ ಅನ್ನು ಪತಂಜಲಿ “ಸಾಮಾನ್ಯ” ಎಂದು ಬಿಂಬಿಸಿದೆ. ಪತಂಜಲಿಯ ಉತ್ಪನ್ನ ಮಾತ್ರ ಆಯುರ್ವೇದ ತತ್ವಗಳನ್ನು ಅನುಸರಿಸುತ್ತದೆ ಎಂದು ಹೇಳುವ ಮೂಲಕ ಡಾಬರ್‌ನ ಉತ್ಪನ್ನದ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಲಾಗಿದೆ. ಇದು ಉದ್ದೇಶಪೂರ್ವಕವಾಗಿ ಕಳಂಕ ಹಚ್ಚುವ ಪ್ರಯತ್ನ ಎಂದು ಸೇಥಿ ವಾದಿಸಿದರು.

ಚ್ಯವನ್‌ಪ್ರಾಶ್ ಮಾರುಕಟ್ಟೆಯಲ್ಲಿ 61.6% ಪಾಲನ್ನು ಹೊಂದಿರುವ ಡಾಬರ್, ಪತಂಜಲಿ “ನಮ್ಮನ್ನು ಸಾಮಾನ್ಯ ಎಂದು ಉಲ್ಲೇಖಿಸುತ್ತಾರೆ. ಮಾರುಕಟ್ಟೆ ನಾಯಕನನ್ನೇ ಸಾಮಾನ್ಯಗೊಳಿಸುತ್ತಾರೆ” ಎಂದು ನ್ಯಾಯಾಲಯಕ್ಕೆ ತಿಳಿಸಿತ್ತು.

ಪತಂಜಲಿಯ ಜಾಹೀರಾತು “ಆಯುರ್ವೇದ ಮತ್ತು ವೇದಗಳ ಜ್ಞಾನವಿಲ್ಲದವರು, ಚರಕ, ಸುಶ್ರುತ, ಧನ್ವಂತರಿ ಮತ್ತು ಚ್ಯವನ ಋಷಿಗಳ ಪರಂಪರೆಯಲ್ಲಿ ‘ಮೂಲ’ ಚ್ಯವನ್‌ಪ್ರಾಶ್ ಅನ್ನು ಹೇಗೆ ತಯಾರಿಸಲು ಸಾಧ್ಯ?” ಎಂದು ಪ್ರಶ್ನಿಸಿದೆ. ಈ ಜಾಹೀರಾತಿನಲ್ಲಿ ಸ್ವತಃ ಸ್ವಾಮಿ ರಾಮದೇವ್ ಅವರೇ ಕಾಣಿಸಿಕೊಂಡು ಸ್ಪರ್ಧಾತ್ಮಕ ಉತ್ಪನ್ನಗಳ ಸತ್ಯಾಸತ್ಯತೆಯನ್ನು ಪ್ರಶ್ನಿಸಿದ್ದರು. ಡಾಬರ್‌ನ ಆಯುರ್ವೇದ ಪರಂಪರೆಯನ್ನು ಹಾಳುಮಾಡುವ ನೇರ ಪ್ರಯತ್ನ ಇದು ಎಂದು ಡಾಬರ್ ವಾದಿಸಿದೆ.

ಪತಂಜಲಿಯ ಜಾಹೀರಾತು ತಮ್ಮ ಪದಾರ್ಥಗಳ ಸಂಯೋಜನೆಯನ್ನು ತಪ್ಪಾಗಿ ನಿರೂಪಿಸುವುದು, ಡಾಬರ್‌ನ ಆಯುರ್ವೇದ ಸಂಬಂಧದ ಮೇಲೆ ದಾಳಿ ಮಾಡುವುದು ಮತ್ತು ಡಾಬರ್ ಉತ್ಪನ್ನವನ್ನು ಕೀಳು ಎಂದು ಬಿಂಬಿಸುವುದು ಸೇರಿದಂತೆ ಮೂರು ರೀತಿಯಲ್ಲಿ ಕಳಂಕ ಹಚ್ಚುತ್ತಿದೆ ಎಂದು ಡಾಬರ್ ವಿವರಿಸಿದೆ.

ಆರೋಪಗಳನ್ನು ನಿರಾಕರಿಸಿದ ಪತಂಜಲಿ ಪರ ಹಿರಿಯ ವಕೀಲ ಜಯಂತ್ ಮೆಹ್ತಾ, ಡಾಬರ್‌ನ ಎಲ್ಲಾ ಹಕ್ಕುಗಳನ್ನು ತಳ್ಳಿಹಾಕಿದರು. ಪತಂಜಲಿ ಚ್ಯವನ್‌ಪ್ರಾಶ್‌ನಲ್ಲಿರುವ ಪದಾರ್ಥಗಳು ಅನುಮೋದಿತ ಆಯುರ್ವೇದ ಸೂತ್ರೀಕರಣಗಳಿಗೆ ಸಂಪೂರ್ಣವಾಗಿ ಅನುಗುಣವಾಗಿವೆ ಮತ್ತು ಉತ್ಪನ್ನವು ಸೇವನೆಗೆ ಸುರಕ್ಷಿತವಾಗಿದೆ ಎಂದು ಅವರು ಹೇಳಿದ್ದಾರೆ. ಡಿಸೆಂಬರ್ 24ರಿಂದ ಪ್ರಾರಂಭವಾದ ಈ ಕಾನೂನು ಸಮರ ಜುಲೈ 14ರ ಮುಂದಿನ ವಿಚಾರಣೆಯಲ್ಲಿ ಹೊಸ ತಿರುವು ಪಡೆಯುವ ಸಾಧ್ಯತೆಯಿದೆ.

ಕೋಮುಭಾಷಣ: ಅಣ್ಣಾಮಲೈ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲು; ತಮಿಳುನಾಡು ರಾಜಕಾರಣದಲ್ಲಿ ಬಿರುಗಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...