Homeಮುಖಪುಟಪಾಕಿಸ್ತಾನಕ್ಕೆ ಕಾಶ್ಮೀರ ಕೊಟ್ಟು ಹೈದರಾಬಾದ್ ಪಡೆಯಲು ಸಿದ್ಧರಿದ್ದರು ಸರ್ದಾರ್ ಪಟೇಲ್; ಉಳಿಸಿದವರು ನೆಹರೂ!

ಪಾಕಿಸ್ತಾನಕ್ಕೆ ಕಾಶ್ಮೀರ ಕೊಟ್ಟು ಹೈದರಾಬಾದ್ ಪಡೆಯಲು ಸಿದ್ಧರಿದ್ದರು ಸರ್ದಾರ್ ಪಟೇಲ್; ಉಳಿಸಿದವರು ನೆಹರೂ!

ಭಾರತದ ಸೈನ್ಯ ಶ್ರೀನಗರ ತಲಪಿದ ದಿನವೇ ಪಟೇಲರ ಬೇಡಿಕೆಯನ್ನು ಮೌಂಟ್‌ಬ್ಯಾಟನ್ ಲಾಹೋರಿಗೆ ಕೊಂಡೊಯ್ದಿದ್ದರು. ಇತಿಹಾಸ ಅಥವಾ ಭೂಗೋಳದ ಗಂಧಗಾಳಿಯಿಲ್ಲದ ಲಿಯಾಕತ್ ಆಲಿ ಆಗುವುದಿಲ್ಲ ಎಂದರು- ಪತ್ರಕರ್ತ ಶೇಖರ್ ಗುಪ್ತ ಅವರ ಜೊತೆ ಮಾತನಾಡುತ್ತಾ ಹೀಗೆಂದಿದ್ದಾರೆ ಕಾಂಗ್ರೆಸ್‌ನ ಹಿರಿಯ ಮಾಜಿ ಸಚಿವ ಸೈಫುದ್ದೀನ್ ಸೋಝ್!

- Advertisement -
- Advertisement -

ಪಾಕಿಸ್ತಾನಕ್ಕೆ ಕಾಶ್ಮೀರ ಕೊಟ್ಟು ಹೈದರಾಬಾದ್ ಪಡೆಯಲು ಸಿದ್ಧರಿದ್ದವರು ಸರ್ದಾರ್ ಪಟೇಲ್; ಉಳಿಸಿದವರು ನೆಹರೂ! ಎಂದು ಮಾಜಿ ಸಚಿವ ಸೈಫುದ್ದೀನ್ ಸೋಝ್ ಹೇಳಿಕೆ ನೀಡಿದ್ದಾರೆ.

ಸ್ವತಂತ್ರ ಭಾರತದಲ್ಲಿ ಗೃಹಮಂತ್ರಿಯಾಗಿದ್ದ ‘ಉಕ್ಕಿನ ಮನುಷ್ಯ’ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರು ಹೈದರಾಬಾದಿಗೆ ಪ್ರತಿಯಾಗಿ ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಬಿಟ್ಟುಕೊಡಲು ಸಿದ್ಧರಾಗಿದ್ದರು. ಆದರೆ, ನೆಹರೂ ಅವರ ಒತ್ತಾಯದ ಮೇರೆಗೆ ಕಾಶ್ಮೀರ ಭಾರತದಲ್ಲಿ ಉಳಿಯಿತು ಎಂಬ ದಂಗುಬಡಿಸುವ ಮಾಹಿತಿಯನ್ನು ನೀಡಿದ್ದಾರೆ ಹಿಂದೆ ಕಾಂಗ್ರೆಸ್ ಸರಕಾರದಲ್ಲಿ ಸಚಿವರಾಗಿದ್ದ, ಕಾಶ್ಮೀರದವರೇ ಆದ ಸೈಫುದ್ದೀನ್ ಸೋಝ್.

1947ರ ಅಕ್ಟೋಬರ್ ತಿಂಗಳಲ್ಲಿ ಪಾಕಿಸ್ತಾನದ ನುಸುಳುಕೋರರನ್ನು ಹಿಮ್ಮೆಟ್ಟಿಸಲು ಭಾರತೀಯ ಸೇನೆ ಶ್ರೀನಗರವನ್ನು ಪ್ರವೇಶಿಸಿದ ದಿನವೇ ಭಾರತದ ಕೊನೆಯ ವೈಸರಾಯ್ ಲಾರ್ಡ್ ಮೌಂಟ್‌ಬ್ಯಾಟನ್ ಅವರು ವಲ್ಲಭಭಾಯ್ ಪಟೇಲ್ ಅವರ ಪ್ರಸ್ತಾಪವನ್ನು ಲಾಹೋರಿಗೆ ಕೊಂಡೊಯ್ದಿದ್ದರು ಎಂದು ಸೋಝ್ ಅವರು ‘ದಿ ಪ್ರಿಂಟ್’  ಪ್ರಧಾನ ಸಂಪಾದಕ ಶೇಖರ್ ಗುಪ್ತ ಅವರಿಗೆ ಎನ್‌ಡಿಟಿವಿಯ ‘ವಾಕ್ ದ ಟಾಕ್ ಶೋ’ದಲ್ಲಿ ತಿಳಿಸಿದ್ದಾರೆ.

“ಮೊದಲ ದಿನದಿಂದಲೇ ಕಾಶ್ಮೀರವು ಪಾಕಿಸ್ತಾನಕ್ಕೆ ಹೋಗಬೇಕು ಎಂದು ಸರ್ದಾರ್ ಪಟೇಲ್ ಹಠಹಿಡಿದಿದ್ದರು. ಕಾಶ್ಮೀರವನ್ನು ತೆಗೆದುಕೊಂಡು ಹೈದರಾಬಾದ್-ದಖ್ಖಣವನ್ನು ಭಾರತಕ್ಕೆ ಬಿಟ್ಟುಕೊಡಬೇಕೆಂದು ಪಾಕ್ ನಾಯಕ ಲಿಯಾಕತ್ ಆಲಿಯವರ ಮನವೊಲಿಸಲು ಪಟೇಲ್ ಅವರು ದೇಶವಿಭಜನಾ ಮಂಡಳಿಯಲ್ಲಿ ಶತಾಯಗತಾಯ ಯತ್ನಿಸಿದ್ದರು” ಎಂದು ಸೋಝ್ ಹೇಳಿದ್ದಾರೆ.

“ಅಲ್ಲಿ ದೊಡ್ಡ ಗಲಾಟೆಯೇ ನಡೆಯಿತು. ಸರ್ದಾರ್ ಮೊಹಮ್ಮದ್ ಆಲಿ ಮತ್ತು ನಮ್ಮ ರೆಡ್ಡಿ ಉಪಸ್ಥಿತರಿದ್ದರು. ಹೈದರಾಬಾದ್-ದಖ್ಖಣದ ಬಗ್ಗೆ ಮಾತೆತ್ತುವುದೇ ಬೇಡ; ಅದು ಪಾಕಿಸ್ತಾನದ ಜೊತೆಗೆ ಸಂಬಂಧವನ್ನೇ ಹೊಂದಿಲ್ಲ. ಹೈದರಾಬಾದನ್ನು ನಮಗೆ ಬಿಡಿ. ಕಾಶ್ಮೀರವನ್ನು ತೆಗೆದುಕೊಳ್ಳಿ” ಎಂದು ಸರ್ದಾರ್ ಪಟೇಲ್ ಲಿಯಾಕತ್ ಆಲಿಯವರಿಗೆ ಹೇಳಿದರು.

“ನಾನು ನಿಮಗೆ ಕುತೂಹಲಕಾರಿ ಕತೆಯೊಂದನ್ನು ಹೇಳುವೆ. ನಮ್ಮ ಸೇನೆಯು ಶ್ರೀನಗರದಲ್ಲಿ ಬಂದಿಳಿದ ಮಧ್ಯಾಹ್ನವೇ ಮೌಂಟ್‌ಬ್ಯಾಟನ್ ಲಾಹೋರಿಗೆ ಹೋದರು. ಪಾಕಿಸ್ತಾನದ ಗವರ್ನರ್ ಲಿಯಾಕತ್ ಆಲಿ ಮತ್ತು ಇತರ ನಾಲ್ವರು ಸಚಿವರ ಜೊತೆ ಔತಣ ನಡೆಯಿತು. ನಾನು ಭಾರತದ ಶಕ್ತಿಶಾಲಿ ಮನುಷ್ಯ ಸರ್ದಾರ್ ಪಟೇಲರಿಂದ ಸಂದೇಶವೊಂದನ್ನು ತಂದಿದ್ದೇನೆ. ನೀವು ಹೈದರಾಬಾದ್-ದಖ್ಖಣವನ್ನು ಮರೆತುಬಿಡಿ; ಕಾಶ್ಮೀರವನ್ನು ತೆಗೆದುಕೊಳ್ಳಿ” ಎಂದು ಮೌಂಟ್‌ಬ್ಯಾಟನ್ ಹೇಳಿದರು.

“ಆದರೆ ಸರ್ದಾರ್ ಶೌಕತ್ ಹಯಾತ್ ಖಾನ್ ಅವರು ತಮ್ಮ ಪುಸ್ತಕದಲ್ಲಿ ಬರೆದಿರುವಂತೆ, ಲಿಯಾಕತ್ ಆಲಿಯವರಿಗೆ ಇತಿಹಾಸವೂ ಗೊತ್ತಿರಲಿಲ್ಲ; ಭೂಗೋಳವೂ ಗೊತ್ತಿರಲಿಲ್ಲ. ಆದುದರಿಂದ ಅವರು ಈ ಪ್ರಸ್ತಾಪವನ್ನು ಒಪ್ಪಿಕೊಳ್ಳಲಿಲ್ಲ” ಎಂದು ಸೋಝ್ ಹೇಳಿದ್ದಾರೆ.

“ಪಟೇಲರ ಮಾತು ನಡೆಯಲಿಲ್ಲ ಏಕೆಂದರೆ ನೆಹರೂ ಬಲವಾಗಿ ನಿಂತಿದ್ದರು. ಕಾಶ್ಮೀರದ ಜೊತೆ ಅವರ ಸಂಬಂಧವೂ ಬಲವಾಗಿತ್ತು. ಕಾಶ್ಮೀರವು ಜಾತ್ಯತೀತ ಭಾರತಕ್ಕೆ ಬರಬೇಕು, ಅದು ಇಲ್ಲಿ ಸುರಕ್ಷಿತವಾಗಿರುತ್ತದೆ ಅವರು ನಂಬಿದ್ದರು. ಅವರು ನ್ಯಾಷನಲ್ ಕಾನ್ಫರೆನ್ಸ್ ಪಕ್ಷಕ್ಕೂ ತುಂಬಾ ಹತ್ತಿರವಿದ್ದರು. ಅವರು ನ್ಯಾಷನಲ್ ಕಾನ್ಫರೆನ್ಸ್‌ನ ಸೋಪುರ್ ಸಮಾವೇಶದಲ್ಲಿ ಭಾಷಣ ಕೂಡಾ ಮಾಡಿದ್ದರು. ಅವರಿಗೆ ಕಾಶ್ಮೀರದ ಇತಿಹಾಸ ಸಂಪೂರ್ಣವಾಗಿ ಗೊತ್ತಿತ್ತು” ಎಂದು ಸೋಝ್ ಹೇಳಿದ್ದಾರೆ.

“ಶೇಖ್ ಅಬ್ದುಲ್ಲಾ ಅವರು ಎರಡು ದೇಶ ವಾದವನ್ನು ತಿರಸ್ಕರಿಸಿದ್ದರು. 1947ರ ಅಗಸ್ಟ್ 15ರಿಂದ ಅಕ್ಟೋಬರ್ 22ರ ತನಕ ಕಾಶ್ಮೀರ ಸ್ವತಂತ್ರ ಎಂದು ವಿಧಾನಸಭೆಯಲ್ಲಿ ಘೋಷಿಸಿದ್ದರು ಕೂಡಾ. ಆದರೆ, ಪಾಕಿಸ್ತಾನದ ದಾಳಿಕೋರರು ಒಳನುಗ್ಗಿದಾಗ ಸ್ವಾತಂತ್ರ್ಯ ಸಾಧ್ಯವಿಲ್ಲ ಎಂಬುದು ಅವರಿಗೆ ಸ್ಪಷ್ಟವಾಗಿತ್ತು” ಎಂದವರು ಹೇಳಿದ್ದಾರೆ.

“ನಮ್ಮ ನೆರೆಯಲ್ಲಿರುವ ಐದು ದೇಶಗಳಾದ ಭಾರತ, ಪಾಕಿಸ್ತಾನ, ರಷ್ಯಾ, ಚೀನಾ ಮತ್ತು ಅಫಘಾನಿಸ್ತಾನ ಕಾಶ್ಮೀರದ ಸ್ವಾತಂತ್ರ್ಯವನ್ನು ಯಾವತ್ತೂ ಒಪ್ಪುವುದಿಲ್ಲ. ಆದುದರಿಂದ ಅದು ಸಾಧ್ಯವಿಲ್ಲ ಎಂದು ಶೇಖ್ ಅಬ್ದುಲ್ಲಾ ಅವರು ತಮ್ಮ ಪುಸ್ತಕದಲ್ಲಿ ಬರೆದಿದ್ದಾರೆ” ಎಂದು ಸೋಝ್ ತಿಳಿಸಿದ್ದಾರೆ. ಅವರಿಗೆ ಭಾರತವು ಜಾತ್ಯತೀತ, ಬಹುಮುಖಿ ಮತ್ತು ಕಾಶ್ಮೀರದ ಕುರಿತು ಉದಾರಭಾವ ಹೊಂದಿರುವ ತನಕ ಭಾರತದಿಂದ ಹೊರಹೋಗುವ ಮನಸ್ಸೇ ಇರಲಿಲ್ಲ ಮತ್ತು ಇದರಿಂದಲೇ ದಿಲ್ಲಿ ಒಪ್ಪಂದ ಉಂಟಾಯಿತು ಎಂದೂ ಅವರು ಹೇಳಿದ್ದಾರೆ.

“ದುರದೃಷ್ಟವಶಾತ್ ನೆಹರೂ ಅವರಿಗೆ ಸ್ವಂತ ಸಂಪುಟದಲ್ಲಿಯೇ ಸೋಲಾಯಿತು. ಅದರಿಂದಾಗಿ ಅವರು ಶೇಖ್ ಅಬ್ದುಲ್ಲಾ ಅವರ ಸರಕಾರವನ್ನು ವಜಾಗೊಳಿಸಿ, ಅವರನ್ನು ಬಂಧನದಲ್ಲಿಡುವುದು ಅನಿವಾರ್ಯವಾಯಿತು. ಅವರಿಗೆ ಈ ಕುರಿತು ಪಶ್ಚಾತ್ತಾಪವಿತ್ತು. ಆದರೆ, ಅವರು ಏಕಾಂಗಿಯಾಗಿದ್ದರು” ಎಂದು ಸೋಝ್ ತಿಳಿಸಿದ್ದಾರೆ.

ಸರ್ದಾರ್ ಎ ರಿಯಾಸತ್ ಎಂದು ಕರೆಯಲ್ಪಡುವ  ಡಾ. ಕರಣ್ ಸಿಂಗ್ ಅವರು 1953ರಲ್ಲಿ ತನ್ನ ವಿರುದ್ಧ ಸಂಚು ಹೂಡಿದವರಲ್ಲಿ ಒಬ್ಬರು ಎಂದೂ ಶೇಖ್ ಅಬ್ದುಲ್ಲಾ ತನ್ನ ಪುಸ್ತಕದಲ್ಲಿ ಬರೆದಿರುವುದಾಗಿ ಅವರು ತಿಳಿಸಿದ್ದಾರೆ.

“ಕಾಶ್ಮೀರದ ಸಾಂವಿಧಾನಿಕ ವಿಧಾನಸಭೆಯನ್ನು ಮುಂದುವರಿಯಲು ಬಿಡಬೇಕಿತ್ತು. ನೀವು ಬೇಕಾದರೆ ರಾಮ್ ಜೇಠ್ಮಲಾನಿಯವರನ್ನು ಕೇಳಿ. ಅವರು ಕೂಡಾ ಅದನ್ನು ನಂಬಿದ್ದಾರೆ” ಎಂದು ಅವರು ಹೇಳಿದ್ದಾರೆ.

ಕಾಶ್ಮೀರದ ಪರಿಸ್ಥಿತಿಯು ರಫಿ ಆಹ್ಮದ್ ಕಿದ್ವಾಯಿ, ಅಜಿತ್ ಪ್ರಸಾದ್ ಜೈನ್ ಮುಂತಾದ ಅಲ್ಪ ಮನಸ್ಸುಗಳು ನೆಹರೂ ಅವರ ಸುತ್ತಲಿನ ವಾತಾವರಣವನ್ನು ವಿಷಮಯ ಮಾಡಿದುದರಿಂದಾಗಿ ಕೆಟ್ಟುಹೋಯಿತು ಎಂದೂ ಸೋಝ್ ಹೇಳಿದ್ದಾರೆ. ಆಗ ರಾಜಕೀಯ ಕೆಲಸವನ್ನು ಗುಪ್ತಚರ ಸಂಸ್ಥೆಗಳ ಅದಕ್ಕಿಂತಲೂ ಅಲ್ಪ ಮನಸ್ಸುಗಳಿಗೆ ವಹಿಸಲಾಗುತ್ತಿದ್ದು, ಅದು ಈಗಲೂ ಮುಂದುವರಿದಿದೆ ಎಂದು ಸೋಝ್ ವಿಷಾದಿಸಿದ್ದಾರೆ.

ಈಗಲೂ ಸಮಸ್ಯೆಗೆ ಪರಿಹಾರ ಎಂದರೆ ಹುರಿಯತ್ ನಾಯಕರ ಜೊತೆ ಮಾತನಾಡುವುದು ಮಾತ್ರ ಎಂದು ಹೇಳಿರುವ ಸೈಫುದ್ದೀನ್ ಸೋಝ್, ಯುವ ಕಾಶ್ಮೀರಿಗಳು ಕೋಪಗೊಂಡಿದ್ದಾರೆ; ಕುಟುಂಬದ ಇಬ್ಬರು ಮಕ್ಕಳು ಈಗಾಗಲೇ ಸತ್ತು, ಮೂರನೆಯವನು ಉಗ್ರಗಾಮಿಗಳ ಜೊತೆ ಹೋಗಿರುವಾಗ ಬಲಪ್ರಯೋಗದಿಂದ ಯಾವುದೇ ಪ್ರಯೋಜನವಿಲ್ಲ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

ಕೃಪೆ: ದಿ ಪ್ರಿಂಟ್

ಅನುವಾದ: ನಿಖಿಲ್ ಕೋಲ್ಪೆ

ಇದನ್ನೂ ಓದಿ: ಪೆರಿಯಾರ್ ಹೇಳಿಕೆ ಉಲ್ಲೇಖಿಸಿ 370 ನೇ ವಿಧಿ ರದ್ದತಿಯನ್ನು ಖಂಡಿಸಿದ ನಟ ವಿಜಯ್ ಸೇತುಪಥಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...