Homeಮುಖಪುಟಪಾಕಿಸ್ತಾನಕ್ಕೆ ಕಾಶ್ಮೀರ ಕೊಟ್ಟು ಹೈದರಾಬಾದ್ ಪಡೆಯಲು ಸಿದ್ಧರಿದ್ದರು ಸರ್ದಾರ್ ಪಟೇಲ್; ಉಳಿಸಿದವರು ನೆಹರೂ!

ಪಾಕಿಸ್ತಾನಕ್ಕೆ ಕಾಶ್ಮೀರ ಕೊಟ್ಟು ಹೈದರಾಬಾದ್ ಪಡೆಯಲು ಸಿದ್ಧರಿದ್ದರು ಸರ್ದಾರ್ ಪಟೇಲ್; ಉಳಿಸಿದವರು ನೆಹರೂ!

ಭಾರತದ ಸೈನ್ಯ ಶ್ರೀನಗರ ತಲಪಿದ ದಿನವೇ ಪಟೇಲರ ಬೇಡಿಕೆಯನ್ನು ಮೌಂಟ್‌ಬ್ಯಾಟನ್ ಲಾಹೋರಿಗೆ ಕೊಂಡೊಯ್ದಿದ್ದರು. ಇತಿಹಾಸ ಅಥವಾ ಭೂಗೋಳದ ಗಂಧಗಾಳಿಯಿಲ್ಲದ ಲಿಯಾಕತ್ ಆಲಿ ಆಗುವುದಿಲ್ಲ ಎಂದರು- ಪತ್ರಕರ್ತ ಶೇಖರ್ ಗುಪ್ತ ಅವರ ಜೊತೆ ಮಾತನಾಡುತ್ತಾ ಹೀಗೆಂದಿದ್ದಾರೆ ಕಾಂಗ್ರೆಸ್‌ನ ಹಿರಿಯ ಮಾಜಿ ಸಚಿವ ಸೈಫುದ್ದೀನ್ ಸೋಝ್!

- Advertisement -
- Advertisement -

ಪಾಕಿಸ್ತಾನಕ್ಕೆ ಕಾಶ್ಮೀರ ಕೊಟ್ಟು ಹೈದರಾಬಾದ್ ಪಡೆಯಲು ಸಿದ್ಧರಿದ್ದವರು ಸರ್ದಾರ್ ಪಟೇಲ್; ಉಳಿಸಿದವರು ನೆಹರೂ! ಎಂದು ಮಾಜಿ ಸಚಿವ ಸೈಫುದ್ದೀನ್ ಸೋಝ್ ಹೇಳಿಕೆ ನೀಡಿದ್ದಾರೆ.

ಸ್ವತಂತ್ರ ಭಾರತದಲ್ಲಿ ಗೃಹಮಂತ್ರಿಯಾಗಿದ್ದ ‘ಉಕ್ಕಿನ ಮನುಷ್ಯ’ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರು ಹೈದರಾಬಾದಿಗೆ ಪ್ರತಿಯಾಗಿ ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಬಿಟ್ಟುಕೊಡಲು ಸಿದ್ಧರಾಗಿದ್ದರು. ಆದರೆ, ನೆಹರೂ ಅವರ ಒತ್ತಾಯದ ಮೇರೆಗೆ ಕಾಶ್ಮೀರ ಭಾರತದಲ್ಲಿ ಉಳಿಯಿತು ಎಂಬ ದಂಗುಬಡಿಸುವ ಮಾಹಿತಿಯನ್ನು ನೀಡಿದ್ದಾರೆ ಹಿಂದೆ ಕಾಂಗ್ರೆಸ್ ಸರಕಾರದಲ್ಲಿ ಸಚಿವರಾಗಿದ್ದ, ಕಾಶ್ಮೀರದವರೇ ಆದ ಸೈಫುದ್ದೀನ್ ಸೋಝ್.

1947ರ ಅಕ್ಟೋಬರ್ ತಿಂಗಳಲ್ಲಿ ಪಾಕಿಸ್ತಾನದ ನುಸುಳುಕೋರರನ್ನು ಹಿಮ್ಮೆಟ್ಟಿಸಲು ಭಾರತೀಯ ಸೇನೆ ಶ್ರೀನಗರವನ್ನು ಪ್ರವೇಶಿಸಿದ ದಿನವೇ ಭಾರತದ ಕೊನೆಯ ವೈಸರಾಯ್ ಲಾರ್ಡ್ ಮೌಂಟ್‌ಬ್ಯಾಟನ್ ಅವರು ವಲ್ಲಭಭಾಯ್ ಪಟೇಲ್ ಅವರ ಪ್ರಸ್ತಾಪವನ್ನು ಲಾಹೋರಿಗೆ ಕೊಂಡೊಯ್ದಿದ್ದರು ಎಂದು ಸೋಝ್ ಅವರು ‘ದಿ ಪ್ರಿಂಟ್’  ಪ್ರಧಾನ ಸಂಪಾದಕ ಶೇಖರ್ ಗುಪ್ತ ಅವರಿಗೆ ಎನ್‌ಡಿಟಿವಿಯ ‘ವಾಕ್ ದ ಟಾಕ್ ಶೋ’ದಲ್ಲಿ ತಿಳಿಸಿದ್ದಾರೆ.

“ಮೊದಲ ದಿನದಿಂದಲೇ ಕಾಶ್ಮೀರವು ಪಾಕಿಸ್ತಾನಕ್ಕೆ ಹೋಗಬೇಕು ಎಂದು ಸರ್ದಾರ್ ಪಟೇಲ್ ಹಠಹಿಡಿದಿದ್ದರು. ಕಾಶ್ಮೀರವನ್ನು ತೆಗೆದುಕೊಂಡು ಹೈದರಾಬಾದ್-ದಖ್ಖಣವನ್ನು ಭಾರತಕ್ಕೆ ಬಿಟ್ಟುಕೊಡಬೇಕೆಂದು ಪಾಕ್ ನಾಯಕ ಲಿಯಾಕತ್ ಆಲಿಯವರ ಮನವೊಲಿಸಲು ಪಟೇಲ್ ಅವರು ದೇಶವಿಭಜನಾ ಮಂಡಳಿಯಲ್ಲಿ ಶತಾಯಗತಾಯ ಯತ್ನಿಸಿದ್ದರು” ಎಂದು ಸೋಝ್ ಹೇಳಿದ್ದಾರೆ.

“ಅಲ್ಲಿ ದೊಡ್ಡ ಗಲಾಟೆಯೇ ನಡೆಯಿತು. ಸರ್ದಾರ್ ಮೊಹಮ್ಮದ್ ಆಲಿ ಮತ್ತು ನಮ್ಮ ರೆಡ್ಡಿ ಉಪಸ್ಥಿತರಿದ್ದರು. ಹೈದರಾಬಾದ್-ದಖ್ಖಣದ ಬಗ್ಗೆ ಮಾತೆತ್ತುವುದೇ ಬೇಡ; ಅದು ಪಾಕಿಸ್ತಾನದ ಜೊತೆಗೆ ಸಂಬಂಧವನ್ನೇ ಹೊಂದಿಲ್ಲ. ಹೈದರಾಬಾದನ್ನು ನಮಗೆ ಬಿಡಿ. ಕಾಶ್ಮೀರವನ್ನು ತೆಗೆದುಕೊಳ್ಳಿ” ಎಂದು ಸರ್ದಾರ್ ಪಟೇಲ್ ಲಿಯಾಕತ್ ಆಲಿಯವರಿಗೆ ಹೇಳಿದರು.

“ನಾನು ನಿಮಗೆ ಕುತೂಹಲಕಾರಿ ಕತೆಯೊಂದನ್ನು ಹೇಳುವೆ. ನಮ್ಮ ಸೇನೆಯು ಶ್ರೀನಗರದಲ್ಲಿ ಬಂದಿಳಿದ ಮಧ್ಯಾಹ್ನವೇ ಮೌಂಟ್‌ಬ್ಯಾಟನ್ ಲಾಹೋರಿಗೆ ಹೋದರು. ಪಾಕಿಸ್ತಾನದ ಗವರ್ನರ್ ಲಿಯಾಕತ್ ಆಲಿ ಮತ್ತು ಇತರ ನಾಲ್ವರು ಸಚಿವರ ಜೊತೆ ಔತಣ ನಡೆಯಿತು. ನಾನು ಭಾರತದ ಶಕ್ತಿಶಾಲಿ ಮನುಷ್ಯ ಸರ್ದಾರ್ ಪಟೇಲರಿಂದ ಸಂದೇಶವೊಂದನ್ನು ತಂದಿದ್ದೇನೆ. ನೀವು ಹೈದರಾಬಾದ್-ದಖ್ಖಣವನ್ನು ಮರೆತುಬಿಡಿ; ಕಾಶ್ಮೀರವನ್ನು ತೆಗೆದುಕೊಳ್ಳಿ” ಎಂದು ಮೌಂಟ್‌ಬ್ಯಾಟನ್ ಹೇಳಿದರು.

“ಆದರೆ ಸರ್ದಾರ್ ಶೌಕತ್ ಹಯಾತ್ ಖಾನ್ ಅವರು ತಮ್ಮ ಪುಸ್ತಕದಲ್ಲಿ ಬರೆದಿರುವಂತೆ, ಲಿಯಾಕತ್ ಆಲಿಯವರಿಗೆ ಇತಿಹಾಸವೂ ಗೊತ್ತಿರಲಿಲ್ಲ; ಭೂಗೋಳವೂ ಗೊತ್ತಿರಲಿಲ್ಲ. ಆದುದರಿಂದ ಅವರು ಈ ಪ್ರಸ್ತಾಪವನ್ನು ಒಪ್ಪಿಕೊಳ್ಳಲಿಲ್ಲ” ಎಂದು ಸೋಝ್ ಹೇಳಿದ್ದಾರೆ.

“ಪಟೇಲರ ಮಾತು ನಡೆಯಲಿಲ್ಲ ಏಕೆಂದರೆ ನೆಹರೂ ಬಲವಾಗಿ ನಿಂತಿದ್ದರು. ಕಾಶ್ಮೀರದ ಜೊತೆ ಅವರ ಸಂಬಂಧವೂ ಬಲವಾಗಿತ್ತು. ಕಾಶ್ಮೀರವು ಜಾತ್ಯತೀತ ಭಾರತಕ್ಕೆ ಬರಬೇಕು, ಅದು ಇಲ್ಲಿ ಸುರಕ್ಷಿತವಾಗಿರುತ್ತದೆ ಅವರು ನಂಬಿದ್ದರು. ಅವರು ನ್ಯಾಷನಲ್ ಕಾನ್ಫರೆನ್ಸ್ ಪಕ್ಷಕ್ಕೂ ತುಂಬಾ ಹತ್ತಿರವಿದ್ದರು. ಅವರು ನ್ಯಾಷನಲ್ ಕಾನ್ಫರೆನ್ಸ್‌ನ ಸೋಪುರ್ ಸಮಾವೇಶದಲ್ಲಿ ಭಾಷಣ ಕೂಡಾ ಮಾಡಿದ್ದರು. ಅವರಿಗೆ ಕಾಶ್ಮೀರದ ಇತಿಹಾಸ ಸಂಪೂರ್ಣವಾಗಿ ಗೊತ್ತಿತ್ತು” ಎಂದು ಸೋಝ್ ಹೇಳಿದ್ದಾರೆ.

“ಶೇಖ್ ಅಬ್ದುಲ್ಲಾ ಅವರು ಎರಡು ದೇಶ ವಾದವನ್ನು ತಿರಸ್ಕರಿಸಿದ್ದರು. 1947ರ ಅಗಸ್ಟ್ 15ರಿಂದ ಅಕ್ಟೋಬರ್ 22ರ ತನಕ ಕಾಶ್ಮೀರ ಸ್ವತಂತ್ರ ಎಂದು ವಿಧಾನಸಭೆಯಲ್ಲಿ ಘೋಷಿಸಿದ್ದರು ಕೂಡಾ. ಆದರೆ, ಪಾಕಿಸ್ತಾನದ ದಾಳಿಕೋರರು ಒಳನುಗ್ಗಿದಾಗ ಸ್ವಾತಂತ್ರ್ಯ ಸಾಧ್ಯವಿಲ್ಲ ಎಂಬುದು ಅವರಿಗೆ ಸ್ಪಷ್ಟವಾಗಿತ್ತು” ಎಂದವರು ಹೇಳಿದ್ದಾರೆ.

“ನಮ್ಮ ನೆರೆಯಲ್ಲಿರುವ ಐದು ದೇಶಗಳಾದ ಭಾರತ, ಪಾಕಿಸ್ತಾನ, ರಷ್ಯಾ, ಚೀನಾ ಮತ್ತು ಅಫಘಾನಿಸ್ತಾನ ಕಾಶ್ಮೀರದ ಸ್ವಾತಂತ್ರ್ಯವನ್ನು ಯಾವತ್ತೂ ಒಪ್ಪುವುದಿಲ್ಲ. ಆದುದರಿಂದ ಅದು ಸಾಧ್ಯವಿಲ್ಲ ಎಂದು ಶೇಖ್ ಅಬ್ದುಲ್ಲಾ ಅವರು ತಮ್ಮ ಪುಸ್ತಕದಲ್ಲಿ ಬರೆದಿದ್ದಾರೆ” ಎಂದು ಸೋಝ್ ತಿಳಿಸಿದ್ದಾರೆ. ಅವರಿಗೆ ಭಾರತವು ಜಾತ್ಯತೀತ, ಬಹುಮುಖಿ ಮತ್ತು ಕಾಶ್ಮೀರದ ಕುರಿತು ಉದಾರಭಾವ ಹೊಂದಿರುವ ತನಕ ಭಾರತದಿಂದ ಹೊರಹೋಗುವ ಮನಸ್ಸೇ ಇರಲಿಲ್ಲ ಮತ್ತು ಇದರಿಂದಲೇ ದಿಲ್ಲಿ ಒಪ್ಪಂದ ಉಂಟಾಯಿತು ಎಂದೂ ಅವರು ಹೇಳಿದ್ದಾರೆ.

“ದುರದೃಷ್ಟವಶಾತ್ ನೆಹರೂ ಅವರಿಗೆ ಸ್ವಂತ ಸಂಪುಟದಲ್ಲಿಯೇ ಸೋಲಾಯಿತು. ಅದರಿಂದಾಗಿ ಅವರು ಶೇಖ್ ಅಬ್ದುಲ್ಲಾ ಅವರ ಸರಕಾರವನ್ನು ವಜಾಗೊಳಿಸಿ, ಅವರನ್ನು ಬಂಧನದಲ್ಲಿಡುವುದು ಅನಿವಾರ್ಯವಾಯಿತು. ಅವರಿಗೆ ಈ ಕುರಿತು ಪಶ್ಚಾತ್ತಾಪವಿತ್ತು. ಆದರೆ, ಅವರು ಏಕಾಂಗಿಯಾಗಿದ್ದರು” ಎಂದು ಸೋಝ್ ತಿಳಿಸಿದ್ದಾರೆ.

ಸರ್ದಾರ್ ಎ ರಿಯಾಸತ್ ಎಂದು ಕರೆಯಲ್ಪಡುವ  ಡಾ. ಕರಣ್ ಸಿಂಗ್ ಅವರು 1953ರಲ್ಲಿ ತನ್ನ ವಿರುದ್ಧ ಸಂಚು ಹೂಡಿದವರಲ್ಲಿ ಒಬ್ಬರು ಎಂದೂ ಶೇಖ್ ಅಬ್ದುಲ್ಲಾ ತನ್ನ ಪುಸ್ತಕದಲ್ಲಿ ಬರೆದಿರುವುದಾಗಿ ಅವರು ತಿಳಿಸಿದ್ದಾರೆ.

“ಕಾಶ್ಮೀರದ ಸಾಂವಿಧಾನಿಕ ವಿಧಾನಸಭೆಯನ್ನು ಮುಂದುವರಿಯಲು ಬಿಡಬೇಕಿತ್ತು. ನೀವು ಬೇಕಾದರೆ ರಾಮ್ ಜೇಠ್ಮಲಾನಿಯವರನ್ನು ಕೇಳಿ. ಅವರು ಕೂಡಾ ಅದನ್ನು ನಂಬಿದ್ದಾರೆ” ಎಂದು ಅವರು ಹೇಳಿದ್ದಾರೆ.

ಕಾಶ್ಮೀರದ ಪರಿಸ್ಥಿತಿಯು ರಫಿ ಆಹ್ಮದ್ ಕಿದ್ವಾಯಿ, ಅಜಿತ್ ಪ್ರಸಾದ್ ಜೈನ್ ಮುಂತಾದ ಅಲ್ಪ ಮನಸ್ಸುಗಳು ನೆಹರೂ ಅವರ ಸುತ್ತಲಿನ ವಾತಾವರಣವನ್ನು ವಿಷಮಯ ಮಾಡಿದುದರಿಂದಾಗಿ ಕೆಟ್ಟುಹೋಯಿತು ಎಂದೂ ಸೋಝ್ ಹೇಳಿದ್ದಾರೆ. ಆಗ ರಾಜಕೀಯ ಕೆಲಸವನ್ನು ಗುಪ್ತಚರ ಸಂಸ್ಥೆಗಳ ಅದಕ್ಕಿಂತಲೂ ಅಲ್ಪ ಮನಸ್ಸುಗಳಿಗೆ ವಹಿಸಲಾಗುತ್ತಿದ್ದು, ಅದು ಈಗಲೂ ಮುಂದುವರಿದಿದೆ ಎಂದು ಸೋಝ್ ವಿಷಾದಿಸಿದ್ದಾರೆ.

ಈಗಲೂ ಸಮಸ್ಯೆಗೆ ಪರಿಹಾರ ಎಂದರೆ ಹುರಿಯತ್ ನಾಯಕರ ಜೊತೆ ಮಾತನಾಡುವುದು ಮಾತ್ರ ಎಂದು ಹೇಳಿರುವ ಸೈಫುದ್ದೀನ್ ಸೋಝ್, ಯುವ ಕಾಶ್ಮೀರಿಗಳು ಕೋಪಗೊಂಡಿದ್ದಾರೆ; ಕುಟುಂಬದ ಇಬ್ಬರು ಮಕ್ಕಳು ಈಗಾಗಲೇ ಸತ್ತು, ಮೂರನೆಯವನು ಉಗ್ರಗಾಮಿಗಳ ಜೊತೆ ಹೋಗಿರುವಾಗ ಬಲಪ್ರಯೋಗದಿಂದ ಯಾವುದೇ ಪ್ರಯೋಜನವಿಲ್ಲ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

ಕೃಪೆ: ದಿ ಪ್ರಿಂಟ್

ಅನುವಾದ: ನಿಖಿಲ್ ಕೋಲ್ಪೆ

ಇದನ್ನೂ ಓದಿ: ಪೆರಿಯಾರ್ ಹೇಳಿಕೆ ಉಲ್ಲೇಖಿಸಿ 370 ನೇ ವಿಧಿ ರದ್ದತಿಯನ್ನು ಖಂಡಿಸಿದ ನಟ ವಿಜಯ್ ಸೇತುಪಥಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...