Homeಕರೋನಾ ತಲ್ಲಣಪಾಟ್ನಾ ಆಸ್ಪತ್ರೆಯಲ್ಲಿ ರೋಗಿಗಳು ಮತ್ತು ಮೃತ ದೇಹಗಳು ಒಂದೇ ವಾರ್ಡ್‌ನಲ್ಲಿವೆ!

ಪಾಟ್ನಾ ಆಸ್ಪತ್ರೆಯಲ್ಲಿ ರೋಗಿಗಳು ಮತ್ತು ಮೃತ ದೇಹಗಳು ಒಂದೇ ವಾರ್ಡ್‌ನಲ್ಲಿವೆ!

ಬಿಹಾರ ಆರೋಗ್ಯ ಸಚಿವ ಮಂಗಲ್ ಪಾಂಡೆ 'ಇದು ಕಳವಳಕ್ಕೆ ಕಾರಣವಾಗಿದೆ' ಎಂದು ಹೇಳಿದರು. ಆದರೆ "ಕೊರೊನಾ ಸೋಂಕಿಗೆ ಬಲಿಯಾದವರ ದೇಹಗಳನ್ನು ಹೇಗೆ ವಿಲೇವಾರಿ ಮಾಡುವುದು ಎಂಬ ಪ್ರೋಟೋಕಾಲ್ಗಳನ್ನು ನಾವು ಅನುಸರಿಸಬೇಕಾಗಿದೆ" ಎಂದು ಹೇಳಿದರು.

- Advertisement -
- Advertisement -

ಕೊರೊನಾ ರೋಗಿಗಳಿಗಾಗಿ ಮೀಸಲಾದ ಬಿಹಾರದ ರಾಜಧಾನಿಯ ಪ್ರಮುಖ ಆಸ್ಪತ್ರೆಯಾದ ಪಾಟ್ನಾದ ನಳಂದ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ರೋಗಿಗಳು ಮತ್ತು ಮೃತ ದೇಹಗಳು ಒಂದೇ ವಾರ್ಡ್‌ನಲ್ಲಿರುವ ವಿಡಿಯೋ ವೈರಲ್ ಆಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹುಟ್ಟುಹಾಕಿದೆ.

ವೈರಲ್ ಆದ ವೀಡಿಯೊ ಸಾಂಕ್ರಾಮಿಕ ರೋಗಕ್ಕೆ ಬಲಿಯಾದ ದೇಹಗಳ ನಿರ್ವಹಣೆಯ ಕುರಿತು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಈ ಕುರಿತು ಪ್ರತಿಕ್ರಿಯಿಸಿದ ಬಿಹಾರ ಆರೋಗ್ಯ ಸಚಿವ ಮಂಗಲ್ ಪಾಂಡೆ ‘ಇದು ಕಳವಳಕ್ಕೆ ಕಾರಣವಾಗಿದೆ’ ಎಂದು ಹೇಳಿದ್ದಾರೆ. ಆದರೆ “ಕೊರೊನಾ ಸೋಂಕಿಗೆ ಬಲಿಯಾದವರ ದೇಹಗಳನ್ನು ಹೇಗೆ ವಿಲೇವಾರಿ ಮಾಡುವುದು ಎಂಬ ಪ್ರೋಟೋಕಾಲ್‌ಗಳನ್ನು ನಾವು ಅನುಸರಿಸಬೇಕಾಗಿದೆ” ಎಂದಿದ್ದಾರೆ.

ಎರಡು ದಿನಗಳಲ್ಲಿ ಎರಡನೇ ಗೊಂದಲದ ವೀಡಿಯೊ ಇದಾಗಿದೆ. ಆಸ್ಪತ್ರೆಯ ವಾರ್ಡ್‌ಗಳಲ್ಲಿ ರೋಗಿಗಳು ಹಾಸಿಗೆಗಳ ಮೇಲೆ ಮಲಗಿದ್ದಾರೆ. ಅದರ ಪಕ್ಕದಲ್ಲೇ ಮೃತ ದೇಹಗಳೂ ಇವೆ. ಕುಟುಂಬದ ಸದಸ್ಯರೂ ಅಲ್ಲಿಯೇ ಇರುವುದು ವೀಡಿಯೋದಲ್ಲಿ ಕಂಡುಬಂದಿದೆ.

ಇತ್ತೀಚಿನ ವೀಡಿಯೊದಲ್ಲಿ, ಅದನ್ನು ಚಿತ್ರೀಕರಿಸುತ್ತಿರುವ ವ್ಯಕ್ತಿಯು ಆಸ್ಪತ್ರೆಯ ಕಾರಿಡಾರ್‌ನಲ್ಲಿ ಬಿದ್ದರುವ ದೇಹವನ್ನು ತೋರಿಸುತ್ತಾ, “ಇದು ಮೊದಲ ದೇಹ” ಎಂದು ಕ್ಯಾಮೆರಾವನ್ನು ರೋಗಿಗಳಿಂದ ತುಂಬಿದ ಕೋಣೆಗೆ ಕರೆದೊಯ್ಯುತ್ತಾರೆ.

ಅವನು ನೆಲದ ಮೇಲೆ ಮಲಗಿರುವ ಮಹಿಳೆಯನ್ನು ‘ಆಂಟಿ ನೀವು ಯಾವಾಗಿನಿಂದ ಇಲ್ಲಿದ್ದೀರಿ?, ಆ ಮೃತ ದೇಹ ಎಷ್ಟು ಹೊತ್ತಿನಿಂದ ಅಲ್ಲಿದೆ’ ಎಂದು ಪ್ರಶ್ನಿಸಿದ್ದಾರೆ.

“ಯಾರಾದರೂ ಬಂದಿದ್ದಾರೆಯೇ? ಅದನ್ನು ಯಾವಾಗ ತೆಗೆದುಕೊಳ್ಳಲಾಗುವುದು ಎಂದು ಯಾರಾದರೂ ಹೇಳಿದ್ದಾರಾ?” ವೀಡಿಯೋ ಮಾಡಿದವನು ಕೇಳುತ್ತಾನೆ. “ಇಲ್ಲ” ಎಂದು ಮಹಿಳೆ ದುಗುಡದ ಧ್ವನಿಯಲ್ಲಿ ಹೇಳುತ್ತಾಳೆ.

ಕಳೆದ ಎರಡು ದಿನಗಳಲ್ಲಿ, ಶವಗಳನ್ನು ತೆಗೆದುಕೊಂಡು ಹೋಗಲು ಕುಟುಂಬದ ಸದಸ್ಯರು NMCH ಆಡಳಿತದಿಂದ 12 ಗಂಟೆಗಳ ಕಾಲ ಕಾಯಬೇಕಾಗಿದೆ.

ಈ ಕುರಿತು ಪ್ರಶ್ನಿಸಿದಾಗ, “ಶವಗಳನ್ನು ಸಂಬಂಧಿಸಿದವರಿಗೆ ಹಸ್ತಾಂತರಿಸುವ ಜವಾಬ್ದಾರಿ ಜಿಲ್ಲಾಡಳಿತದ್ದು. ಅದು ಸಂಜೆ ವೇಳೆ ಶವ ನೀಡುವುದಾಗಿ ತಿಳಿಸಿದೆ. ಏಕೆಂದರೆ ಹಗಲಿನ ವೇಳೆ ಅಂತ್ಯ ಕ್ರಿಯೆ ನಡೆಸಲು ಹಲವಾರು ಕಡೆ ಸ್ಥಳೀಯರು ವಿರೋಧಿಸುತ್ತಿದ್ದಾರೆ. ಹಾಗಾಗಿ ತಡವಾಗುತ್ತಿದೆ” ಎಂಬ ಸಮರ್ಥನೆ ಬಂದಿದೆ.

ಬಿಹಾರದಲ್ಲಿ ಕೊರೊನಾ ಸಂಬಂಧಿತ ಸಾವುಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದುವರೆಗೆ 27,000 ಕೊರೊನಾ ಪ್ರಕರಣಗಳನ್ನು ದಾಖಲಿಸಿದೆ.

ಆಸ್ಪತ್ರೆ ನಿರ್ವಹಣೆಯನ್ನು ಸುವ್ಯವಸ್ಥಿತಗೊಳಿಸಲು ರಾಜ್ಯದಾದ್ಯಂತ ಹಲವಾರು ಅಧಿಕಾರಿಗಳನ್ನು ರಾಜ್ಯ ಸರ್ಕಾರವು ನಿಯೋಜಿಸಲಾಗಿದೆ, ಆದರೆ ಪರಿಸ್ಥಿತಿ ಬದಲಾಗದೆ ಉಳಿದಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಕೋವಿಡ್ ಬಿಕ್ಕಟ್ಟನ್ನು ಸರಿಯಾಗಿ ನಿರ್ವಹಿಸಿಲ್ಲ ಎಂಬ ಆರೋಪವನ್ನು ತನಿಖೆ ಮಾಡಲು ಕೇಂದ್ರದ ಮೂರು ಸದಸ್ಯರ ತಂಡವನ್ನು ಭಾನುವಾರ ಕಳುಹಿಸಲಾಗಿದೆ.


ಇದನ್ನೂ ಓದಿ: ಬಿಹಾರ: ರಾಜ್ಯದ 8 ಜಿಲ್ಲೆಗಳ 3 ಲಕ್ಷ ಜನರು ಪ್ರವಾಹ ಪೀಡಿತರು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...