Homeಕರೋನಾ ತಲ್ಲಣಪಾಟ್ನಾ ಆಸ್ಪತ್ರೆಯಲ್ಲಿ ರೋಗಿಗಳು ಮತ್ತು ಮೃತ ದೇಹಗಳು ಒಂದೇ ವಾರ್ಡ್‌ನಲ್ಲಿವೆ!

ಪಾಟ್ನಾ ಆಸ್ಪತ್ರೆಯಲ್ಲಿ ರೋಗಿಗಳು ಮತ್ತು ಮೃತ ದೇಹಗಳು ಒಂದೇ ವಾರ್ಡ್‌ನಲ್ಲಿವೆ!

ಬಿಹಾರ ಆರೋಗ್ಯ ಸಚಿವ ಮಂಗಲ್ ಪಾಂಡೆ 'ಇದು ಕಳವಳಕ್ಕೆ ಕಾರಣವಾಗಿದೆ' ಎಂದು ಹೇಳಿದರು. ಆದರೆ "ಕೊರೊನಾ ಸೋಂಕಿಗೆ ಬಲಿಯಾದವರ ದೇಹಗಳನ್ನು ಹೇಗೆ ವಿಲೇವಾರಿ ಮಾಡುವುದು ಎಂಬ ಪ್ರೋಟೋಕಾಲ್ಗಳನ್ನು ನಾವು ಅನುಸರಿಸಬೇಕಾಗಿದೆ" ಎಂದು ಹೇಳಿದರು.

- Advertisement -
- Advertisement -

ಕೊರೊನಾ ರೋಗಿಗಳಿಗಾಗಿ ಮೀಸಲಾದ ಬಿಹಾರದ ರಾಜಧಾನಿಯ ಪ್ರಮುಖ ಆಸ್ಪತ್ರೆಯಾದ ಪಾಟ್ನಾದ ನಳಂದ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ರೋಗಿಗಳು ಮತ್ತು ಮೃತ ದೇಹಗಳು ಒಂದೇ ವಾರ್ಡ್‌ನಲ್ಲಿರುವ ವಿಡಿಯೋ ವೈರಲ್ ಆಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹುಟ್ಟುಹಾಕಿದೆ.

ವೈರಲ್ ಆದ ವೀಡಿಯೊ ಸಾಂಕ್ರಾಮಿಕ ರೋಗಕ್ಕೆ ಬಲಿಯಾದ ದೇಹಗಳ ನಿರ್ವಹಣೆಯ ಕುರಿತು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಈ ಕುರಿತು ಪ್ರತಿಕ್ರಿಯಿಸಿದ ಬಿಹಾರ ಆರೋಗ್ಯ ಸಚಿವ ಮಂಗಲ್ ಪಾಂಡೆ ‘ಇದು ಕಳವಳಕ್ಕೆ ಕಾರಣವಾಗಿದೆ’ ಎಂದು ಹೇಳಿದ್ದಾರೆ. ಆದರೆ “ಕೊರೊನಾ ಸೋಂಕಿಗೆ ಬಲಿಯಾದವರ ದೇಹಗಳನ್ನು ಹೇಗೆ ವಿಲೇವಾರಿ ಮಾಡುವುದು ಎಂಬ ಪ್ರೋಟೋಕಾಲ್‌ಗಳನ್ನು ನಾವು ಅನುಸರಿಸಬೇಕಾಗಿದೆ” ಎಂದಿದ್ದಾರೆ.

ಎರಡು ದಿನಗಳಲ್ಲಿ ಎರಡನೇ ಗೊಂದಲದ ವೀಡಿಯೊ ಇದಾಗಿದೆ. ಆಸ್ಪತ್ರೆಯ ವಾರ್ಡ್‌ಗಳಲ್ಲಿ ರೋಗಿಗಳು ಹಾಸಿಗೆಗಳ ಮೇಲೆ ಮಲಗಿದ್ದಾರೆ. ಅದರ ಪಕ್ಕದಲ್ಲೇ ಮೃತ ದೇಹಗಳೂ ಇವೆ. ಕುಟುಂಬದ ಸದಸ್ಯರೂ ಅಲ್ಲಿಯೇ ಇರುವುದು ವೀಡಿಯೋದಲ್ಲಿ ಕಂಡುಬಂದಿದೆ.

ಇತ್ತೀಚಿನ ವೀಡಿಯೊದಲ್ಲಿ, ಅದನ್ನು ಚಿತ್ರೀಕರಿಸುತ್ತಿರುವ ವ್ಯಕ್ತಿಯು ಆಸ್ಪತ್ರೆಯ ಕಾರಿಡಾರ್‌ನಲ್ಲಿ ಬಿದ್ದರುವ ದೇಹವನ್ನು ತೋರಿಸುತ್ತಾ, “ಇದು ಮೊದಲ ದೇಹ” ಎಂದು ಕ್ಯಾಮೆರಾವನ್ನು ರೋಗಿಗಳಿಂದ ತುಂಬಿದ ಕೋಣೆಗೆ ಕರೆದೊಯ್ಯುತ್ತಾರೆ.

ಅವನು ನೆಲದ ಮೇಲೆ ಮಲಗಿರುವ ಮಹಿಳೆಯನ್ನು ‘ಆಂಟಿ ನೀವು ಯಾವಾಗಿನಿಂದ ಇಲ್ಲಿದ್ದೀರಿ?, ಆ ಮೃತ ದೇಹ ಎಷ್ಟು ಹೊತ್ತಿನಿಂದ ಅಲ್ಲಿದೆ’ ಎಂದು ಪ್ರಶ್ನಿಸಿದ್ದಾರೆ.

“ಯಾರಾದರೂ ಬಂದಿದ್ದಾರೆಯೇ? ಅದನ್ನು ಯಾವಾಗ ತೆಗೆದುಕೊಳ್ಳಲಾಗುವುದು ಎಂದು ಯಾರಾದರೂ ಹೇಳಿದ್ದಾರಾ?” ವೀಡಿಯೋ ಮಾಡಿದವನು ಕೇಳುತ್ತಾನೆ. “ಇಲ್ಲ” ಎಂದು ಮಹಿಳೆ ದುಗುಡದ ಧ್ವನಿಯಲ್ಲಿ ಹೇಳುತ್ತಾಳೆ.

ಕಳೆದ ಎರಡು ದಿನಗಳಲ್ಲಿ, ಶವಗಳನ್ನು ತೆಗೆದುಕೊಂಡು ಹೋಗಲು ಕುಟುಂಬದ ಸದಸ್ಯರು NMCH ಆಡಳಿತದಿಂದ 12 ಗಂಟೆಗಳ ಕಾಲ ಕಾಯಬೇಕಾಗಿದೆ.

ಈ ಕುರಿತು ಪ್ರಶ್ನಿಸಿದಾಗ, “ಶವಗಳನ್ನು ಸಂಬಂಧಿಸಿದವರಿಗೆ ಹಸ್ತಾಂತರಿಸುವ ಜವಾಬ್ದಾರಿ ಜಿಲ್ಲಾಡಳಿತದ್ದು. ಅದು ಸಂಜೆ ವೇಳೆ ಶವ ನೀಡುವುದಾಗಿ ತಿಳಿಸಿದೆ. ಏಕೆಂದರೆ ಹಗಲಿನ ವೇಳೆ ಅಂತ್ಯ ಕ್ರಿಯೆ ನಡೆಸಲು ಹಲವಾರು ಕಡೆ ಸ್ಥಳೀಯರು ವಿರೋಧಿಸುತ್ತಿದ್ದಾರೆ. ಹಾಗಾಗಿ ತಡವಾಗುತ್ತಿದೆ” ಎಂಬ ಸಮರ್ಥನೆ ಬಂದಿದೆ.

ಬಿಹಾರದಲ್ಲಿ ಕೊರೊನಾ ಸಂಬಂಧಿತ ಸಾವುಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದುವರೆಗೆ 27,000 ಕೊರೊನಾ ಪ್ರಕರಣಗಳನ್ನು ದಾಖಲಿಸಿದೆ.

ಆಸ್ಪತ್ರೆ ನಿರ್ವಹಣೆಯನ್ನು ಸುವ್ಯವಸ್ಥಿತಗೊಳಿಸಲು ರಾಜ್ಯದಾದ್ಯಂತ ಹಲವಾರು ಅಧಿಕಾರಿಗಳನ್ನು ರಾಜ್ಯ ಸರ್ಕಾರವು ನಿಯೋಜಿಸಲಾಗಿದೆ, ಆದರೆ ಪರಿಸ್ಥಿತಿ ಬದಲಾಗದೆ ಉಳಿದಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಕೋವಿಡ್ ಬಿಕ್ಕಟ್ಟನ್ನು ಸರಿಯಾಗಿ ನಿರ್ವಹಿಸಿಲ್ಲ ಎಂಬ ಆರೋಪವನ್ನು ತನಿಖೆ ಮಾಡಲು ಕೇಂದ್ರದ ಮೂರು ಸದಸ್ಯರ ತಂಡವನ್ನು ಭಾನುವಾರ ಕಳುಹಿಸಲಾಗಿದೆ.


ಇದನ್ನೂ ಓದಿ: ಬಿಹಾರ: ರಾಜ್ಯದ 8 ಜಿಲ್ಲೆಗಳ 3 ಲಕ್ಷ ಜನರು ಪ್ರವಾಹ ಪೀಡಿತರು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...