Homeಕರೋನಾ ತಲ್ಲಣಪಾಟ್ನಾ ಆಸ್ಪತ್ರೆಯಲ್ಲಿ ರೋಗಿಗಳು ಮತ್ತು ಮೃತ ದೇಹಗಳು ಒಂದೇ ವಾರ್ಡ್‌ನಲ್ಲಿವೆ!

ಪಾಟ್ನಾ ಆಸ್ಪತ್ರೆಯಲ್ಲಿ ರೋಗಿಗಳು ಮತ್ತು ಮೃತ ದೇಹಗಳು ಒಂದೇ ವಾರ್ಡ್‌ನಲ್ಲಿವೆ!

ಬಿಹಾರ ಆರೋಗ್ಯ ಸಚಿವ ಮಂಗಲ್ ಪಾಂಡೆ 'ಇದು ಕಳವಳಕ್ಕೆ ಕಾರಣವಾಗಿದೆ' ಎಂದು ಹೇಳಿದರು. ಆದರೆ "ಕೊರೊನಾ ಸೋಂಕಿಗೆ ಬಲಿಯಾದವರ ದೇಹಗಳನ್ನು ಹೇಗೆ ವಿಲೇವಾರಿ ಮಾಡುವುದು ಎಂಬ ಪ್ರೋಟೋಕಾಲ್ಗಳನ್ನು ನಾವು ಅನುಸರಿಸಬೇಕಾಗಿದೆ" ಎಂದು ಹೇಳಿದರು.

- Advertisement -
- Advertisement -

ಕೊರೊನಾ ರೋಗಿಗಳಿಗಾಗಿ ಮೀಸಲಾದ ಬಿಹಾರದ ರಾಜಧಾನಿಯ ಪ್ರಮುಖ ಆಸ್ಪತ್ರೆಯಾದ ಪಾಟ್ನಾದ ನಳಂದ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ರೋಗಿಗಳು ಮತ್ತು ಮೃತ ದೇಹಗಳು ಒಂದೇ ವಾರ್ಡ್‌ನಲ್ಲಿರುವ ವಿಡಿಯೋ ವೈರಲ್ ಆಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹುಟ್ಟುಹಾಕಿದೆ.

ವೈರಲ್ ಆದ ವೀಡಿಯೊ ಸಾಂಕ್ರಾಮಿಕ ರೋಗಕ್ಕೆ ಬಲಿಯಾದ ದೇಹಗಳ ನಿರ್ವಹಣೆಯ ಕುರಿತು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಈ ಕುರಿತು ಪ್ರತಿಕ್ರಿಯಿಸಿದ ಬಿಹಾರ ಆರೋಗ್ಯ ಸಚಿವ ಮಂಗಲ್ ಪಾಂಡೆ ‘ಇದು ಕಳವಳಕ್ಕೆ ಕಾರಣವಾಗಿದೆ’ ಎಂದು ಹೇಳಿದ್ದಾರೆ. ಆದರೆ “ಕೊರೊನಾ ಸೋಂಕಿಗೆ ಬಲಿಯಾದವರ ದೇಹಗಳನ್ನು ಹೇಗೆ ವಿಲೇವಾರಿ ಮಾಡುವುದು ಎಂಬ ಪ್ರೋಟೋಕಾಲ್‌ಗಳನ್ನು ನಾವು ಅನುಸರಿಸಬೇಕಾಗಿದೆ” ಎಂದಿದ್ದಾರೆ.

ಎರಡು ದಿನಗಳಲ್ಲಿ ಎರಡನೇ ಗೊಂದಲದ ವೀಡಿಯೊ ಇದಾಗಿದೆ. ಆಸ್ಪತ್ರೆಯ ವಾರ್ಡ್‌ಗಳಲ್ಲಿ ರೋಗಿಗಳು ಹಾಸಿಗೆಗಳ ಮೇಲೆ ಮಲಗಿದ್ದಾರೆ. ಅದರ ಪಕ್ಕದಲ್ಲೇ ಮೃತ ದೇಹಗಳೂ ಇವೆ. ಕುಟುಂಬದ ಸದಸ್ಯರೂ ಅಲ್ಲಿಯೇ ಇರುವುದು ವೀಡಿಯೋದಲ್ಲಿ ಕಂಡುಬಂದಿದೆ.

ಇತ್ತೀಚಿನ ವೀಡಿಯೊದಲ್ಲಿ, ಅದನ್ನು ಚಿತ್ರೀಕರಿಸುತ್ತಿರುವ ವ್ಯಕ್ತಿಯು ಆಸ್ಪತ್ರೆಯ ಕಾರಿಡಾರ್‌ನಲ್ಲಿ ಬಿದ್ದರುವ ದೇಹವನ್ನು ತೋರಿಸುತ್ತಾ, “ಇದು ಮೊದಲ ದೇಹ” ಎಂದು ಕ್ಯಾಮೆರಾವನ್ನು ರೋಗಿಗಳಿಂದ ತುಂಬಿದ ಕೋಣೆಗೆ ಕರೆದೊಯ್ಯುತ್ತಾರೆ.

ಅವನು ನೆಲದ ಮೇಲೆ ಮಲಗಿರುವ ಮಹಿಳೆಯನ್ನು ‘ಆಂಟಿ ನೀವು ಯಾವಾಗಿನಿಂದ ಇಲ್ಲಿದ್ದೀರಿ?, ಆ ಮೃತ ದೇಹ ಎಷ್ಟು ಹೊತ್ತಿನಿಂದ ಅಲ್ಲಿದೆ’ ಎಂದು ಪ್ರಶ್ನಿಸಿದ್ದಾರೆ.

“ಯಾರಾದರೂ ಬಂದಿದ್ದಾರೆಯೇ? ಅದನ್ನು ಯಾವಾಗ ತೆಗೆದುಕೊಳ್ಳಲಾಗುವುದು ಎಂದು ಯಾರಾದರೂ ಹೇಳಿದ್ದಾರಾ?” ವೀಡಿಯೋ ಮಾಡಿದವನು ಕೇಳುತ್ತಾನೆ. “ಇಲ್ಲ” ಎಂದು ಮಹಿಳೆ ದುಗುಡದ ಧ್ವನಿಯಲ್ಲಿ ಹೇಳುತ್ತಾಳೆ.

ಕಳೆದ ಎರಡು ದಿನಗಳಲ್ಲಿ, ಶವಗಳನ್ನು ತೆಗೆದುಕೊಂಡು ಹೋಗಲು ಕುಟುಂಬದ ಸದಸ್ಯರು NMCH ಆಡಳಿತದಿಂದ 12 ಗಂಟೆಗಳ ಕಾಲ ಕಾಯಬೇಕಾಗಿದೆ.

ಈ ಕುರಿತು ಪ್ರಶ್ನಿಸಿದಾಗ, “ಶವಗಳನ್ನು ಸಂಬಂಧಿಸಿದವರಿಗೆ ಹಸ್ತಾಂತರಿಸುವ ಜವಾಬ್ದಾರಿ ಜಿಲ್ಲಾಡಳಿತದ್ದು. ಅದು ಸಂಜೆ ವೇಳೆ ಶವ ನೀಡುವುದಾಗಿ ತಿಳಿಸಿದೆ. ಏಕೆಂದರೆ ಹಗಲಿನ ವೇಳೆ ಅಂತ್ಯ ಕ್ರಿಯೆ ನಡೆಸಲು ಹಲವಾರು ಕಡೆ ಸ್ಥಳೀಯರು ವಿರೋಧಿಸುತ್ತಿದ್ದಾರೆ. ಹಾಗಾಗಿ ತಡವಾಗುತ್ತಿದೆ” ಎಂಬ ಸಮರ್ಥನೆ ಬಂದಿದೆ.

ಬಿಹಾರದಲ್ಲಿ ಕೊರೊನಾ ಸಂಬಂಧಿತ ಸಾವುಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದುವರೆಗೆ 27,000 ಕೊರೊನಾ ಪ್ರಕರಣಗಳನ್ನು ದಾಖಲಿಸಿದೆ.

ಆಸ್ಪತ್ರೆ ನಿರ್ವಹಣೆಯನ್ನು ಸುವ್ಯವಸ್ಥಿತಗೊಳಿಸಲು ರಾಜ್ಯದಾದ್ಯಂತ ಹಲವಾರು ಅಧಿಕಾರಿಗಳನ್ನು ರಾಜ್ಯ ಸರ್ಕಾರವು ನಿಯೋಜಿಸಲಾಗಿದೆ, ಆದರೆ ಪರಿಸ್ಥಿತಿ ಬದಲಾಗದೆ ಉಳಿದಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಕೋವಿಡ್ ಬಿಕ್ಕಟ್ಟನ್ನು ಸರಿಯಾಗಿ ನಿರ್ವಹಿಸಿಲ್ಲ ಎಂಬ ಆರೋಪವನ್ನು ತನಿಖೆ ಮಾಡಲು ಕೇಂದ್ರದ ಮೂರು ಸದಸ್ಯರ ತಂಡವನ್ನು ಭಾನುವಾರ ಕಳುಹಿಸಲಾಗಿದೆ.


ಇದನ್ನೂ ಓದಿ: ಬಿಹಾರ: ರಾಜ್ಯದ 8 ಜಿಲ್ಲೆಗಳ 3 ಲಕ್ಷ ಜನರು ಪ್ರವಾಹ ಪೀಡಿತರು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...