Homeಅಂಕಣಗಳುನೆಲದ ಜತೆ ಪಿಸು ಮಾತನಾಡುವ ಕವಿ ಚಂಸು ಪಾಟೀಲ

ನೆಲದ ಜತೆ ಪಿಸು ಮಾತನಾಡುವ ಕವಿ ಚಂಸು ಪಾಟೀಲ

- Advertisement -
- Advertisement -

ಎಲೆಮರೆ- 14

`ಐದು ಎಕರೆ ಬಳ್ಳಿ ಶೇಂಗಾ ಹಾಕಿದ್ದೆ ಕಾಯಿ ಚಲೋ ಹಿಡದಾತಿ, ಬೇರೆಯವ್ರು ಸರಕಾರಿ ಗೊಬ್ಬರ ಹಾಕಿ, ಕಳೆನಾಶಕ ಸಿಂಪಡಿಸಿದ್ರು. ನಾನು ಸೆಗಣಿಗೊಬ್ಬರ ಹಾಕಿ ಕಳೆ ತಗಸಿದ್ದೆ. ಅದಕ್ಕ ನಲ್ವತ್ ಸಾವ್ರ ಖರ್ಚಾಗಿತ್ತು. ಇದನ್ನ ನೋಡಿ ಊರವರೆಲ್ಲ ನಕ್ಕಿದ್ರು. ಈತಗ ಹುಚ್ ಹಿಡದಿರಬೇಕು, ಎರಡು ಸಾವ್ರ ಕಳೆನಾಶಕ ಹೊಡದಿದ್ರ ಸಾಕಿತ್ತು ಅಂದಿದ್ರು. ನನ್ನ ಲೆಕ್ಕ ಹೆಂಗಂದ್ರ ಕಳೆ ತಗಿಯೋರು ಬದುಕಬೇಕು ನಾನು ಬದುಕಬೇಕು ಅನ್ನೋದು. ಸೆಗಣಿ ಹಾಕಿ, ಕಳೆ ತಗಸಿದ್ದಕ್ಕ ನೆಲ ಮಿದುವು ಆಗಿ ಕಾಯಿ ಬಾಳ ಹಿಡದಾತಿ. 60-70 ಚೀಲ ಆಗಬಹುದು. ಬೇರೆಯವ್ರದ್ದು ಸರಕಾರಿ ಗೊಬ್ಬರ, ಕಳೆನಾಶಕ ಬಳಸಿದ್ದಕ್ಕ ಮಳಿನೂ ಬಾಳ ಆಗಿ ನೆಲ ಬಿಗುವು ಆಗಿ ಕಾಯಿ ಹಿಡದಿಲ್ಲ. ಅಂತ ರೈತರೆಲ್ಲಾ ಈ ಸಲ ಲಾಸ್ ಆದ್ರು. ನೀರಾವರಿಗೆ ಒಂದೆಕರೆ ಬಾಳೆ ಹಾಕೀನಿ. ಒಬ್ಬಂಟಿಗರಾಗಿ ಬಾಳ ಹೊಲ ಮಾಡಕಾಗಲ್ಲ’ ಹೀಗೆ ತಣ್ಣಗೆ ನೆಲದ ಜತೆಗಿನ ಪಿಸುಮಾತುಗಳನ್ನು ಆಡುವ ಕವಿ ಚಂಸು ಪಾಟೀಲ.

ಚಂದ್ರಶೇಖರ ಸುಭಾಶಗೌಡ ಪಾಟೀಲ ಅಂದ್ರೆ ಯಾರೀತ, ಯಾವುದೋ ರಾಜಕಾರಣೀದೋ, ದೊಡ್ ಮನ್ಷನ ಹೆಸರಿದ್ದಂಗೈತಿ ಅಂತ ಅನ್ನಿಸುತ್ತದೆ. ಇದೇ ಹೆಸರನ್ನು ಸಂಕ್ಷಿಪ್ತಗೊಳಿಸಿ ಚಂಸು ಪಾಟೀಲ ಅಂದರೆ ಸಾಹಿತ್ಯ ವಲಯದ ಹೊಸ ತಲೆಮಾರನ್ನು ಸೂಕ್ಷ್ಮವಾಗಿ ಗಮನಿಸುವ ಕೆಲವರಿಗಾದರೂ, ಅದರಲ್ಲೂ ಪೇಸ್‍ಬುಕ್‍ನ್ನು ಆಕ್ಟಿವ್ ಆಗಿ ಬಳಸುವವರಿಗೆ ಈ ಹೆಸರಿನ ಜತೆ ರೈತಾಪಿ ಮುಖದ ಚಿತ್ರವೊಂದು ಕಣ್ಮುಂದೆ ಬರಬಹುದು. ನನಗೋ ಕಾಸ್ಟವೆ ಸಿನೆಮಾದ ಕೊನೆಯಲ್ಲಿ ರೂಪಾಂತರ ಹೊಂದಿದ ನಟ ಟಾಮ್ ಹ್ಯಾಂಕ್ಸ್ ತರವೂ, ಮಲೆಗಳಲ್ಲಿ ಮದುಮಗಳು ಕಾದಂಬರಿಯ ಗುತ್ತಿಯ ಹಾಗೆಯೂ ಚಂಸು ಕಾಣಿಸುತ್ತಾನೆ.

ನನಗೆ ಕಳೆದ ಒಂದೂವರೆ ದಶಕದಿಂದ ಚಂಸು ಪಾಟೀಲ ಪರಿಚಯ. ಆತ ಸಾದಾಸೀದಾ ಜವಾರಿ ಮನ್ಷ. ಒಮ್ಮೆ ಸೊಂಡೂರು ಭೂ ಹೋರಾಟ ಪುಸ್ತಕ ಬರೆಯುವಾಗ ದಾಖಲೆಗಳನ್ನು ಹುಡುಕಿಕೊಂಡು ಹುಬ್ಬಳ್ಳಿಯ ಸಂಯುಕ್ತ ಕರ್ನಾಟಕ ಕಚೇರಿಗೆ ಹೋಗಿದ್ದೆ. ಆಗ ಸಂಯುಕ್ತ ಕರ್ನಾಟಕ ಕಚೇರಿಯಲ್ಲಿ ಐವತ್ತು ದಾಟಿದ ತಲೆ ಬಿಳಿಯಾದ ಹಿರಿಯರೇ ತುಂಬಿರುವಾಗ ಕರಿಕೂದಲಿನ ಕಡ್ಡಿಯಂಥ ಹುಡುಗ ಒಂದು ಮೂಲೆಯ ಹಳೇ ಕಂಪ್ಯೂಟರಿನಲ್ಲಿ ಕಣ್ಣು ನೆಟ್ಟು ಕೂತಿದ್ದ. ನಾನು ನನ್ನ ಹೆಸರೇಳಿ ಪರಿಚಯಿಸಿಕೊಂಡೆ, `ಹೇಯ್ ಬರ್ರಿ ಅರುಣ್ ನೀವು ನಮಗ ಗೊತ್ತು ನಿಮ್ಮ ಬರಹ ಓದೇನಿ’ ಎಂದು ಸಹಜವಾದ ಪ್ರೀತಿ ತೋರಿದ್ದ’ ಈ ಹುಡುಗನೆ ಚಂಸು ಪಾಟೀಲ. ಬಹುಶಃ ನನಗೆ ನೆನಪಿರುವಂತೆ ಅದುವೆ ಮೊದಲ ಭೇಟಿ ಇರಬೇಕು.

2002 ರಲ್ಲಿ ಬೆಂಗಳೂರಿನ `ನೋಟ’ ವಾರಪತ್ರಿಕೆಯಲ್ಲಿಯೂ, 2003 ರಲ್ಲಿ ಗುಲ್ಬರ್ಗಾದ ಕ್ರಾಂತಿ ದೈನಿಕದಲ್ಲಿಯೂ, 2003 ರಿಂದ 2006 ರ ತನಕ ಹುಬ್ಬಳ್ಳಿ ಮತ್ತು ದಾವಣಗೆರೆಯಲ್ಲಿ ಸಂಯುಕ್ತ ಕರ್ನಾಟಕದಲ್ಲಿಯೂ ಚಂಸು ಪತ್ರಕರ್ತನಾಗಿ ಕೆಲಸ ಮಾಡಿದ. ಈತನ ವ್ಯಕ್ತಿ ಸ್ವಭಾವಕ್ಕೆ ಈ ಪತ್ರಕರ್ತ ಹುದ್ದೆ ಉಸಿರುಕಟ್ಟಿಸಿತು, ಮನೆಯ ಘಟನೆಗಳೂ ಪತ್ರಕರ್ತನಾಗಿ ಮುಂದುವರಿಯಲು ತೊಡಕಾದವು. ಈ ಎಲ್ಲದರ ಕಾರಣ ಹುಟ್ಟೂರಿಗೆ ಬಂದು, ತಾನು ಓದಿದ್ದೆಲ್ಲವನ್ನೂ ಮರೆತು 2007 ರಿಂದ ಕಮ್ತಕ್ಕೆ ನಿಂತ. ಆರಂಭಕ್ಕೆ ರೈತಾಪಿ ಕೆಲಸ ಸುಲಭವೇನಾಗಿರಲಿಲ್ಲ. ಹೊಲವೇ ಕಡುಕಷ್ಟಗಳನ್ನೊಡ್ಡಿ ಚಂಸುವನ್ನು ಪರೀಕ್ಷಿಸಿತು. ಈ ಎಲ್ಲಾ ಕಷ್ಟಗಳಿಗೆ ಬಂಡೆಯಂತಾಗಿ ನೆಲದ ಜತೆಗಿನ ಸಾಂಗತ್ಯವನ್ನು ಮುಂದುವರಿಸಿದ. ಬರುಬರುತ್ತಾ ನೆಲ ಚಂಸುವನ್ನು ಕೈಹಿಡಿಯತೊಡಗಿತು. ಅಹರ್ನಿಶಿ ಮತ್ತು ನಾವುನಮ್ಮಲ್ಲಿ ಬಳಗ 2018 ರಲ್ಲಿ ಪ್ರಕಟಿಸಿದ `ಬೇಸಾಯದ ಕತಿ’ ಪುಸ್ತಕದಲ್ಲಿ ಈ ಎಲ್ಲವನ್ನೂ ಅತ್ಯಂತ ಸೂಕ್ಷ್ಮವಾಗಿ ಚಂಸು ಕಟ್ಟಿಕೊಟ್ಟಿದ್ದಾರೆ. ಹಳ್ಳಿಗಳಿಗೆ ಮರಳಿ ಕೃಷಿಯಲ್ಲಿ ತೊಡಗಬೇಕು ಅಂದುಕೊಂಡ ಯುವಜನತೆಗೆ ಇದೊಂದು ಅತ್ಯಂತ ಪ್ರಾಯೋಗಿಕ ಮಾರ್ಗದರ್ಶಿ. ಈ ಕೃತಿಯನ್ನು ಹಿರಿಯ ರೈತ ಹೋರಾಟಗಾರರಾದ ಶಾಮಣ್ಣನವರು ಅಕ್ಷತಾ ಅವರಿಂದ ಪುಸ್ತಕ ಪಡೆದು ರೈತ ಸಮಾವೇಶಗಳು ನಡೆವಲ್ಲಿ ಹೋಗಿ ಸ್ವತಃ ತಾವೇ ರೈತರಿಗೆ ಮಾರಾಟ ಮಾಡಿದ್ದಾರೆ. ಬಹುಶಃ ಈ ಕೃತಿಯ ಮಹತ್ವವನ್ನು ಇದಕ್ಕಿಂತ ಬೇರೆ ರೂಪದಲ್ಲಿ ಹೇಳಲಾರೆ.

ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಕೂನಬೇವು ಗ್ರಾಮದ ಚಂಸು ನಮ್ಮ ಗ್ರಾಮೀಣ ಕೃಷಿಕರು ಮಾಡುತ್ತಿದ್ದ ಸಹಜ ಸಾವಯವ ಬೇಸಾಯ ಮಾಡುತ್ತ ಗಮನ ಸೆಳೆಯುತ್ತಿದ್ದಾರೆ. ಚಂಸು ಪಾಟೀಲರು ಮೂಲತಃ ಕವಿ. ಈ ತನಕ `ಗೆಳೆಯನಿಗೆ’ (1995), `ಕೆಂಪು ಕಂಗಳ ಹಕ್ಕಿ ಮತ್ತದರ ಹಾಡು’ (2005) `ಅದಕ್ಕೇ ಇರಬೇಕು’ (2009) ಮೂರು ಕವಿತಾ ಸಂಕಲನಗಳನ್ನು ಪ್ರಕಟಿಸಿದ್ದಾರೆ.
2007 ರ ನಂತರ ಕಮ್ತಕ್ಕೆ ಬಂದಾಗಿನಿಂದ ನೆಲದ ಜತೆಗಿನ ಪಿಸುಮಾತುಗಳ ಆಲಿಸಿಕೊಂಡು ರೈತರ ಕಣ್ಣೋಟದಲ್ಲಿ ಕವಿತೆ ಬರೆಯಲು ತೊಡಗಿದ್ದಾರೆ. ಈ ಕವಿತೆಗಳು ಚಂಸು ಅವರ ಮೊದಲ ಕವಿತೆಗಳಿಗಿಂತ ತೀರಾ ಭಿನ್ನವಾಗಿವೆ. ಈ ನೆಲದ ನಿಜದ ರೈತನ ನಾಡಿಮಿಡಿತದಂತೆ ಈ ಕವಿತೆಗಳು ಮಾತನಾಡುತ್ತವೆ. ಚಂಸು ಅವರಿಗಿರುವ ವಿಶಿಷ್ಟತೆ ಏನೆಂದರೆ ತನ್ನ ಹಳ್ಳಿ ಕೂನುಬೇವಿನ ಹೊಲದಲ್ಲಿ ಉಳುಮೆ ಮಾಡಿಕೊಂಡೇ ಪೇಸ್‍ಬುಕ್ ಮತ್ತು ಅಂತರ್ಜಾಲದಲ್ಲಿ ಲೋಕದ ವಿದ್ಯಮಾನಗಳನ್ನೂ ಸೂಕ್ಷ್ಮವಾಗಿ ನೋಡುತ್ತಿದ್ದಾರೆ. ಅಷ್ಟೇ ಅಲ್ಲ ಇದಕ್ಕೆಲ್ಲಾ ಪ್ರಖರವಾದ ವ್ಯಂಗ್ಯ ವಿಷಾದ ಸಿಟ್ಟು ತಣ್ಣನೆಯ ಪ್ರತಿರೋಧದ ಮೂಲಕ ಪ್ರತಿಕ್ರಿಯಿಸುತ್ತಿದ್ದಾರೆ. ಈ ಪ್ರತಿಕ್ರಿಯೆಯನ್ನು ದಾಟಿಸಲು ಚಂಸು ಕವಿತೆಯನ್ನು ಮಾಧ್ಯಮವನ್ನಾಗಿಸಿಕೊಂಡಿದ್ದಾರೆ.

ಟಿ.ಕೆ.ತ್ಯಾಗರಾಜ್ ಅವರು ಸಂಪಾದಕರಾಗಿರುವ `ದ ಡೆಕ್ಕನ್ ನ್ಯೂಸ್’ ಅಂತರ್ಜಾಲ ಪತ್ರಿಕೆಯಲ್ಲಿ ಚಂಸು `ಭಪ್ಪರೇ ಶವ್ವಾ’ ಎನ್ನುವ ಅಂಕಣ ಬರೆಯುತ್ತಾರೆ. ಬಯಲಾಟ ದೊಡ್ಡಾಟದಲ್ಲಿ ಪರಸ್ಪರ ಹೊಗಳುವ ಸಂದರ್ಭದಲ್ಲಿ ಅಲೆಲೆಲೆ ಭಪ್ಪರೇ ಶವ್ವಾ..! ಎನ್ನುವ ನುಡಿಗಟ್ಟನ್ನು ಬಳಸುತ್ತಾರೆ. ಹಾಗಾಗಿಯೇ ಚಂಸು ಸಾಮಾನ್ಯ ಜನರ ಬದುಕಿನ ಅಪರೂಪದ ಘಟನೆಗಳ ಕುರಿತು ಬರೆಯಲು `ಭಪ್ಪರೇ ಶವ್ವಾ..!’ ಎಂದು ಹೆಸರುಕೊಟ್ಟುಕೊಂಡಿದ್ದಾರೆ.

ಈ ಅಂಕಣವು ಲಘು ಹಾಸ್ಯಮಿಶ್ರಿತ ವ್ಯಂಗ್ಯ ನೋವು ಸಂಕಟ ಎಲ್ಲವನ್ನೂ ಬೆರೆಸಿದಂತಿದೆ. ಹೊಸ ತಲೆಮಾರು ಬರೆವ ಬರಹದಲ್ಲಿ ಇದು ವಿಶಿಷ್ಟವಾಗಿದೆ. ಗ್ರಾಮೀಣ ಚಿತ್ರಕಲಾವಿದ ಮುರಿಗೆಜ್ಜಪ್ಪ, ಅಪ್ಪಣ್ಣ, ಉಪ್ಪಾರ ಗುಡ್ಡಪ್ಪ, ಬಯಲಾಟದ ಅನುಭವ, ಶಿಶುನಾಳ ಶರೀಫರ ಹಾಡುಗಳು ನೆಲೆಗೊಂಡ ಬಗೆ, ರಂಗಭೂಮಿಯ ನಂಟು ಭಜನೆಯ ಒಡನಾಟ ಹೀಗೆ ಹಾವೇರಿ, ರಾಣೇಬೆನ್ನೂರು ಭಾಗದ ಸಾಂಸ್ಕøತಿಕ ಗುರುತುಗಳನ್ನು ಬೆರೆಸಿ ಅಲ್ಲಿಯದ್ದೇ ಆದ ಉಪಭಾಷೆಯ ನುಡಿಗಟ್ಟನ್ನು ಬಳಸಿ ವಿಶಿಷ್ಟ ಸಂಕಥನದಂತೆ ಈ ಅಂಕಣ ಬರೆಯುತ್ತಿದ್ದಾರೆ.

`ಪ್ರತಿದಿನವೂ/ವಲಸೆ ಬರುವ/ ಸೂರ್ಯ ಚಂದ್ರರಿಗೆ/ ಸಿಕ್ಕಬಹುದೇ? ಪೌರತ್ವದ ಕೊಡುಗೆ ! ಆದರೂ ನಿತ್ಯ/ ಈ ಅತಿಕ್ರಮಣವನ್ನು ಸಹಿಸುವುದು ಹೇಗೆ?/ ಕೊರಳುಪಟ್ಟಿ/ ಹಿಡಿದು ದಬ್ಬಿರವರನು/ಹೊರಗೆ’ ಎಂದು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಹೀಗೆ ಕವಿತೆ ಬರೆವ ಚಂಸು, ಸಾಸಿವೆ ಕಾಳಿನಷ್ಟು ಬರೆದು ಬೆಟ್ಟದಷ್ಟು ಪ್ರಚಾರ ಬಯಸುವ ಈ ಕಾಲದ ಹೊಸತಲೆಮಾರಿನ ಕವಯಿತ್ರಿ ಕವಿಗಳಿಗಿಂತ ನೂರುಪಾಲು ಎತ್ತರದಲ್ಲಿದ್ದಾರೆ. ರೈತರ ಆತ್ಮವಿಶ್ವಾಸವನ್ನು ಹೆಚ್ಚಿಸುವ ಕಾಯಕದಲ್ಲಿ ತೊಡಗಿ ಬೇಸಾಯದ ಕತಿ ಹೇಳುವ ಚಂಸುಗೆ ಒಳಿತಾಗಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...

ಒಡಿಶಾ| ಸಹಾಯಕಿಯಾಗಿ ದಲಿತ ಮಹಿಳೆ ನೇಮಕ; ಮೂರು ತಿಂಗಳ ಕಾಲ ಮುಚ್ಚಿದ ಅಂಗನವಾಡಿ

ಭಾರತೀಯ ಸಮಾಜದಲ್ಲಿ ಆಳವಾಗಿ ಈಗಲೂ ಬೇರೂರಿರುವ ಜಾತಿ ಪೂರ್ವಾಗ್ರಹದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಒಡಿಶಾ ರಾಜ್ಯದ ಕೇಂದ್ರಪಾರ ಜಿಲ್ಲೆಯ ರಾಜನಗರ ಬ್ಲಾಕ್‌ನ ಹಳ್ಳಿಯ ನಿವಾಸಿಗಳು ಸುಮಾರು ಮೂರು ತಿಂಗಳ ಹಿಂದೆ, ದಲಿತ...

ಆತ್ಮಕಥೆ ಜಟಾಪಟಿ: ನಕಲಿ ಪುಸ್ತಕ ಬಳಸಿ ರಾಷ್ಟ್ರೀಯ ಭದ್ರತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್ ಕ್ಷಮೆಯಾಚಿಸಬೇಕು: ಬಿಜೆಪಿ ಒತ್ತಾಯ

ನವದೆಹಲಿ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ತಮ್ಮ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ" ಪ್ರಕಾಶಕರು ಬಿಡುಗಡೆ ಮಾಡಿದ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕೆ ರಾಹುಲ್ ಗಾಂಧಿ ಅವರ ಮುಖ...

ಆತ್ಮಕಥೆ ಜಟಾಪಟಿ : ಅಂದು ಪುಸ್ತಕ ಪ್ರಿ- ಆರ್ಡರ್ ಮಾಡಿ ಎಂದಿದ್ದ ನರವಾಣೆ, ಇಂದು ಪ್ರಕಟವೇ ಆಗಿಲ್ಲ ಎನ್ನುತ್ತಿದ್ದಾರೆ

ಕಳೆದ ಹತ್ತು ದಿನಗಳಿಂದ ದೇಶದಾದ್ಯಂತ ಚರ್ಚೆಯಲ್ಲಿರುವ ತನ್ನ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ಆತ್ಮಕಥೆಯ ಕುರಿತು ಮಾಜಿ ಭೂ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಮೌನ ಮುರಿದಿದ್ದಾರೆ. "ಪುಸ್ತಕದ ಮುದ್ರಿತ ಅಥವಾ...

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...