Homeಮುಖಪುಟಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

- Advertisement -
- Advertisement -

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್ ಮೇಲೆ ನಡೆದಿದ್ದ ದಾಳಿ ಹಾಗೂ ಅದಕ್ಕೆ ಸಂಬಂಧಿಸಿದ ಗುಂಡಿನ ಚಕಮಕಿ ಪ್ರಕರಣದಲ್ಲಿ ಕೋರ್ಟ್ ಈ ಮಹತ್ವದ ಆದೇಶ ನೀಡಿದೆ.

ಖಾನ್ ಸರ್ ಅವರೊಂದಿಗೆ ಅವರ ಇನ್ಸ್ಟಿಟ್ಯೂಟ್‌ನ ಮೂವರು ಸಿಬ್ಬಂದಿಗೂ ಪಟ್ನಾ ಸಿವಿಲ್ ಕೋರ್ಟ್ ಮುಂಗಡ ಜಾಮೀನು ನೀಡಿದೆ. ಇದೇ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಇಬ್ಬರು ಭದ್ರತಾ ಸಿಬ್ಬಂದಿಗೆ ಸಾಮಾನ್ಯ ಜಾಮೀನು ಮಂಜೂರು ಮಾಡಲಾಗಿದೆ ಎಂದು ಪ್ರತಿವಾದಿ ಪರ ವಕೀಲ ಅರವಿಂದ್ ಕುಮಾರ್ ಮೌರ್ ತಿಳಿಸಿದ್ದಾರೆ.

“ನ್ಯಾಯಾಲಯವು ಮೊದಲು ಖಾನ್ ಸರ್ ಅವರ ಮುಂಗಡ ಜಾಮೀನು ಅರ್ಜಿಯನ್ನು ಪುರಸ್ಕರಿಸಿತು. ಆ ನಂತರ ಅವರ ಮೂವರು ಸಿಬ್ಬಂದಿಗೂ ಜಾಮೀನು ನೀಡಲಾಯಿತು. ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರು ಸೆಕ್ಯೂರಿಟಿ ಗಾರ್ಡ್‌ಗಳಿಗೂ ಕೋರ್ಟ್ ಜಾಮೀನು ಮಂಜೂರು ಮಾಡಿದೆ” ಎಂದು ವಕೀಲರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಜುಲೈ 8 ರಂದೇ ಉಭಯ ಪಕ್ಷಗಳ ಅಂತಿಮ ವಾದಗಳನ್ನು ಆಲಿಸಿದ್ದ ನ್ಯಾಯಾಲಯವು ತೀರ್ಪನ್ನು ಕಾಯ್ದಿರಿಸಿತ್ತು. ಜುಲೈ 11 ರಂದೇ ತೀರ್ಪು ಬರಬೇಕಿತ್ತಾದರೂ, ಜಿಲ್ಲಾ ನ್ಯಾಯಾಧೀಶರು ರಜೆಯಲ್ಲಿದ್ದ ಕಾರಣ ಅದನ್ನು ಜುಲೈ 13ಕ್ಕೆ (ಸೋಮವಾರ) ಮುಂದೂಡಲಾಗಿತ್ತು.

ಪ್ರಕರಣದ ಹಿನ್ನೆಲೆ ಏನು?

ಜೂನ್ 2 ರಂದು ನಡೆದಿದ್ದ ಘಟನೆಯೊಂದರಿಂದ ಈ ಇಡೀ ವಿವಾದ ಸೃಷ್ಟಿಯಾಗಿದೆ. ಅಂದು ಪಟ್ನಾದಲ್ಲಿರುವ ‘ಖಾನ್ ಗ್ಲೋಬಲ್ ಸ್ಟಡೀಸ್’ (KGS) ಕೋಚಿಂಗ್ ಸೆಂಟರ್ ಮೇಲೆ 15 ರಿಂದ 20 ಜನರ ಗುಂಪೊಂದು ಹಠಾತ್ ದಾಳಿ ನಡೆಸಿ, ಕಲ್ಲು ತೂರಾಟ ನಡೆಸಿ ಆಸ್ತಿಪಾಸ್ತಿ ಧ್ವಂಸ ಮಾಡಿತ್ತು.

ಪೊಲೀಸರ ಪ್ರಕಾರ, ದಾಳಿಯ ಸಂದರ್ಭದಲ್ಲಿ ಇನ್ಸ್ಟಿಟ್ಯೂಟ್‌ನ ಇಬ್ಬರು ಭದ್ರತಾ ಸಿಬ್ಬಂದಿ ಗುಂಡು ಹಾರಿಸಿದ್ದರು. ಆ ನಂತರ ಆ ಇಬ್ಬರು ಗಾರ್ಡ್‌ಗಳನ್ನು ಪೊಲೀಸರು ಬಂಧಿಸಿದ್ದರು. ತನಿಖೆ ವೇಳೆ ಭದ್ರತಾ ಸಿಬ್ಬಂದಿ, “ನಾವು ಖಾನ್ ಸರ್ ಅವರ ಸೂಚನೆ ಮೇರೆಗೆ ಗುಂಡು ಹಾರಿಸಿದ್ದೆವು” ಎಂದು ಹೇಳಿಕೆ ನೀಡಿದ್ದರು ಎನ್ನಲಾಗಿದೆ. ಈ ಹೇಳಿಕೆಯನ್ನೇ ಆಧರಿಸಿ ಪೊಲೀಸರು ಎಫ್‌ಐಆರ್‌ನಲ್ಲಿ (FIR) ಕೊಲೆ ಯತ್ನ ಹಾಗೂ ಆರ್ಮ್ಸ್ ಆಕ್ಟ್ (ಆಯುಧ ಕಾಯ್ದೆ) ಅಡಿಯಲ್ಲಿ ಖಾನ್ ಸರ್ ಹೆಸರನ್ನು ಸೇರಿಸಿದ್ದರು. ಗುಂಡು ಹಾರಿಸಲು ಬಳಸಲಾಗಿದ್ದ ಆಯುಧಗಳನ್ನು ಪೊಲೀಸರು ಜಪ್ತಿ ಮಾಡಿ ವಿಧಿವಿಜ್ಞಾನ (Forensic) ಪರೀಕ್ಷೆಗೆ ಕಳುಹಿಸಿದ್ದಾರೆ.

ಇನ್ಸ್ಟಿಟ್ಯೂಟ್‌ಗಳ ನಡುವಿನ ಪೈಪೋಟಿ?

ಖಾನ್ ಸರ್ ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ಸಂಪೂರ್ಣವಾಗಿ ನಿರಾಕರಿಸಿದ್ದಾರೆ. “ನಮ್ಮ ಸಂಸ್ಥೆಯ ಮೇಲೆ ದಾಳಿ ನಡೆದಾಗ ಭದ್ರತಾ ಸಿಬ್ಬಂದಿ ಕೇವಲ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ನನ್ನ ಹೆಸರಿಗೆ ಮಸಿ ಬಳಿಯಲು ನಡೆಸಿರುವ ವ್ಯವಸ್ಥಿತ ಪಿತೂರಿ ಇದು” ಎಂದು ಅವರು ವಾದಿಸಿದ್ದಾರೆ.

ಘಟನೆ ನಡೆದ ತಕ್ಷಣ ಪ್ರತಿಕ್ರಿಯಿಸಿದ್ದ ಖಾನ್ ಸರ್, ತಮ್ಮ ಪ್ರತಿಸ್ಪರ್ಧಿ ಕೋಚಿಂಗ್ ಇನ್ಸ್ಟಿಟ್ಯೂಟ್ ಸೇರಿರುವ ಜನರೇ ಈ ದಾಳಿಯ ಹಿಂದೆ ಇದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು. ಆದರೆ, ಪ್ರತಿಸ್ಪರ್ಧಿ ಸಂಸ್ಥೆಯ ಸದಸ್ಯರು ಈ ಆರೋಪವನ್ನು ತಳ್ಳಿಹಾಕಿದ್ದು, ಖಾನ್ ಸರ್ ಅವರೇ ಪ್ರಚಾರಕ್ಕಾಗಿ ಈ ಘಟನೆಯನ್ನು ಸೃಷ್ಟಿಸಿದ್ದಾರೆ (Staged) ಎಂದು ಪ್ರತಿಯೋಪ ಮಾಡಿದ್ದಾರೆ. ಸದ್ಯ ಪೊಲೀಸರು ಧ್ವಂಸ ಪ್ರಕರಣ, ಸೆಕ್ಯೂರಿಟಿ ಗಾರ್ಡ್‌ಗಳ ಗುಂಡಿನ ದಾಳಿ ಹಾಗೂ ಎರಡೂ ಕಡೆಯವರು ಮಾಡಿರುವ ಆರೋಪ-ಪ್ರತ್ಯಾರೋಪಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...