Homeಮುಖಪುಟಬಿಹಾರ ಸರ್ಕಾರದ ಜಾತಿ ಗಣತಿಗೆ ಮಧ್ಯಂತರ ತಡೆ ನೀಡಿದ ಪಾಟ್ನಾ ಹೈಕೋರ್ಟ್

ಬಿಹಾರ ಸರ್ಕಾರದ ಜಾತಿ ಗಣತಿಗೆ ಮಧ್ಯಂತರ ತಡೆ ನೀಡಿದ ಪಾಟ್ನಾ ಹೈಕೋರ್ಟ್

- Advertisement -
- Advertisement -

ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರ ನಡೆಸುತ್ತಿದ್ದ ಜಾತಿ ಆಧಾರಿತ ಗಣತಿಗೆ ಪಾಟ್ನಾ ಹೈಕೋರ್ಟ್ ಮಧ್ಯಂತರ ತಡೆ ನೀಡಿದ್ದು, ಮುಂದಿನ ವಿಚಾರಣೆಯನ್ನು ಜುಲೈ 03ಕ್ಕೆ ನಿಗಧಿಗೊಳಿಸಿದೆ.

ಬಿಹಾರದ ಮಹಾಘಟಬಂಧನ ಸರ್ಕಾರ ರಾಜ್ಯದಲ್ಲಿ ಜಾತಿ ಗಣತಿ ನಡೆಸುವ ನಿರ್ಧಾರ ಕೈಗೊಂಡಿತ್ತು. ಎರಡು ಹಂತಗಳಲ್ಲಿ ಮನೆ ಮನೆ ಸರ್ವೇ ನಡೆಸುತ್ತಿದ್ದು ಜನವರಿಯಲ್ಲಿ ಮೊದಲ ಹಂತದ ಜಾತಿಗಣತಿ ಮುಗಿದಿದ್ದು, ಈ ಏಪ್ರಿಲ್-ಮೇ ತಿಂಗಳಿನಲ್ಲಿ ಎರಡನೇ ಹಂತದ ಗಣತಿ ನಡೆಯುತ್ತಿತ್ತು. ಈ ಯೋಜನೆಗೆ ಸುಮಾರು 500 ಕೋಟಿ ರೂ ಮೀಸಲಿಡಲಾಗಿದೆ.

ಆದರೆ ಜಾತಿ ಗಣತಿ ನಡೆಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರ ಇದೆ. ಬಿಹಾರ ಸರ್ಕಾರ ಈ ಗಣತಿಯಲ್ಲಿ ಸೂಕ್ತ ನಡಾವಳಿಗಳನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರದ ಜಾತಿ ಆಧಾರಿತ ಸಮೀಕ್ಷೆಯನ್ನು ಪ್ರಶ್ನಿಸಿ ಯೂತ್ ಫಾರ್ ಈಕ್ವಾಲಿಟಿ ಸೇರಿದಂತೆ ಮೂರು ಅರ್ಜಿಗಳನ್ನು ಸಲ್ಲಿಸಲಾಗಿತ್ತು.

ಮುಖ್ಯ ನ್ಯಾಯಮೂರ್ತಿ ಕೆ ವಿನೋದ್ ಚಂದ್ರನ್ ಮತ್ತು ನ್ಯಾಯಮೂರ್ತಿ ಮಧುರೇಶ್ ಪ್ರಸಾದ್ ಅವರ ವಿಭಾಗೀಯ ಪೀಠವು ರಾಜ್ಯ ಸರ್ಕಾರವು ಅಂತಹ ಸಮೀಕ್ಷೆಯನ್ನು ನಿಯೋಜಿಸಲು ತನ್ನ ಅಧಿಕಾರವನ್ನು ಮೀರಿದೆ ಎಂದು ಕಂಡುಬಂದಲ್ಲಿ ಅರ್ಜಿದಾರರಿಗೆ ಮಧ್ಯಂತರ ಪರಿಹಾರವನ್ನು ನೀಡುವುದಾಗಿ ಬುಧವಾರವಷ್ಟೇ ಹೇಳಿತ್ತು.

ಕಾನೂನಿನ ಸರಿಯಾದ ಪ್ರಕ್ರಿಯೆಯನ್ನು ಅನುಸರಿಸದಿಲ್ಲದಿದ್ದರೆ ಅಥವಾ ಪ್ರತಿಕ್ರಿಯಿಸಿದವರ ಗೌಪ್ಯತೆಯ ಉಲ್ಲಂಘನೆಯಾಗಿದ್ದರೆ ನಾವು ನಿಮಗೆ ಮಧ್ಯಂತರ ಪರಿಹಾರವನ್ನು ನೀಡುತ್ತೇವೆ, ಇಲ್ಲದಿದ್ದರೆ ನಾವು ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ಮುಂದುವರೆಯಲು ಅವಕಾಶ ನೀಡುತ್ತೇವೆ” ಎಂದು ನ್ಯಾಯಮೂರ್ತಿ ಚಂದ್ರನ್ ಹೇಳಿದ್ದರು. ಆದರೆ ಇಂದು ತೀರ್ಪು ನೀಡಿದ್ದು ಜಾತಿ ಗಣತಿಗೆ ಮಧ್ಯಂತರ ತಡೆ ನೀಡಲಾಗಿದೆ.

ಸಮೀಕ್ಷೆಗೆ ವಿರೋಧ ವ್ಯಕ್ತಪಡಿಸಿರುವುದಕ್ಕೆ ಬಿಹಾರ ಸಿಎಂ ನಿತೀಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಜನರ ಸಾಮಾಜಿಕ – ಆರ್ಥಿಕ ಸ್ಥಿತಿಗತಿ ತಿಳಿದುಕೊಳ್ಳಲು ಜಾತಿ ಸಮೀಕ್ಷೆ ನಡೆಸಲಾಗುತ್ತಿದೆ. ಇದರಿಂದಾಗಿ ನೀತಿಗಳನ್ನು ರೂಪಿಸಲು ಮತ್ತು ಕಾರ್ಯಕ್ರಮಗಳನ್ನು ಆಯೋಜಿಸಲು ಸಹಾಯವಾಗುತ್ತದೆ. ಈ ಸಮೀಕ್ಷೆಯು ಬಡ ವ್ಯಕ್ತಿಗಳ ಸಂಖ್ಯೆ ಮತ್ತು ಅವರನ್ನು ಮುಖ್ಯವಾಹಿನಿಗೆ ತರಲು ಅಗತ್ಯವಿರುವ ಕಾರ್ಯಕ್ರಮಗಳನ್ನು ರೂಪಿಸಲು ಅನುಕೂಲವಾಗುತ್ತದೆ” ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಾತಿ ಗಣತಿ ಬೇಡಿಕೆಯನ್ನು ತಿರಸ್ಕರಿಸಿದ್ದು, ಇದು ತನ್ನ ನೀತಿಗೆ ವಿರುದ್ಧವಾಗಿದೆ ಮತ್ತು ಇದು ಸಾಮಾಜಿಕ ವಿಘಟನೆ ಮತ್ತು ಜಾತಿ ದ್ವೇಷಗಳಿಗೆ ಕಾರಣವಾಗುತ್ತದೆ ಎಂದು ಹೇಳಿದೆ.

ಜಾತಿ ಗಣತಿಯು ರಾಜಕೀಯ ಮತ್ತು ಅಧಿಕಾರಶಾಹಿಯಲ್ಲಿ ಮೇಲ್ಜಾತಿಗಳ ಪ್ರಾಬಲ್ಯವನ್ನು ಬಹಿರಂಗಪಡಿಸಬಹುದು ಮತ್ತು ಜಾತಿ ಹೊರತುಪಡಿಸಿ ಹಿಂದೂ ಮತಗಳನ್ನು ಕ್ರೋಢೀಕರಿಸುವ ಅದರ ಪ್ರಯತ್ನಗಳನ್ನು ದುರ್ಬಲಗೊಳಿಸಬಹುದು ಎಂದು ಬಿಜೆಪಿ ಪಕ್ಷವು ಹೆದರುತ್ತಿದೆ ಎಂದು ಆರೋಪಿಸಲಾಗಿದೆ.

“ಜಾತಿ ಗಣತಿ ಮಾಡದ ಹೊರತು, ಸಮಾಜದ ಯಾವ ಭಾಗಕ್ಕೆ ಹೆಚ್ಚಿನ ಬೆಂಬಲ ನೀಡಬೇಕು ಎಂಬುದು ತಿಳಿಯುವುದಿಲ್ಲ. ‘ಗಣತಿ ನಡೆಸುವುದು ತಾರತಮ್ಯದ ನಿರ್ಧಾರ’ ಎಂದು ಹೇಳಿದ್ದ ಅರ್ಜಿಯನ್ನು ಸುಪ್ರೀಕೋರ್ಟ್‌ ವಜಾಗೊಳಿಸಿದೆ. ಇದು ನಮಗೆ ಸಂದ ಜಯ” ಎಂದು ಈ ಹಿಂದೆ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌ ಹೇಳಿದ್ದರು.

ಇದನ್ನೂ ಓದಿ: ಜಾತಿಗಣತಿಗೆ ಸರ್ಕಾರಗಳು ಹಿಂಜರಿಯುತ್ತಿರುವುದೇಕೆ? ಕರ್ನಾಟಕದ ವರದಿ ಬಿಡುಗಡೆಯಾಗಿಲ್ಲವೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...