Homeಮುಖಪುಟನಿಜವಾದ ದೇಶಪ್ರೇಮ ಎಂದರೆ ಅಂಧಭಕ್ತಿ ಅಲ್ಲ, ನಮ್ಮ ದೇಶವನ್ನು ಸುಧಾರಿಸುವುದಾಗಿದೆ: ಆಯುಷ್ಮಾನ್‌ ಖುರಾನ

ನಿಜವಾದ ದೇಶಪ್ರೇಮ ಎಂದರೆ ಅಂಧಭಕ್ತಿ ಅಲ್ಲ, ನಮ್ಮ ದೇಶವನ್ನು ಸುಧಾರಿಸುವುದಾಗಿದೆ: ಆಯುಷ್ಮಾನ್‌ ಖುರಾನ

- Advertisement -
- Advertisement -

ಹೊಸ ವರ್ಷವನ್ನು ಸಮಾನತೆ ಮತ್ತು ಹೆಮ್ಮೆಯಿಂದ ಸ್ವಾಗತಿಸಿರುವ ಖ್ಯಾತ ಬಾಲಿವುಟ್‌ ನಟ ಆಯುಷ್ಮಾನ್ ಖುರಾನಾ, ನಿಜವಾದ ದೇಶಪ್ರೇಮ ಎಂದರೆ ಅಂಧಭಕ್ತಿ ಅಲ್ಲ, ನಮ್ಮ ದೇಶವನ್ನು ಸುಧಾರಿಸುವುದಾಗಿದೆ ಎಂದು ಹೇಳಿದ್ದಾರೆ.

ದೇಶದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಹಿಂದೂಸ್ತಾನ್‌ ಟೈಮ್ಸ್‌ನೊಂದಿಗಿನ ಸಂದರ್ಶನದಲ್ಲಿ ಅವರು “ಸಮಾನತೆಯ ಬಗ್ಗೆ ಹೆಮ್ಮೆಪಡುವ ತಾನು ಸಾಮಾಜಿಕವಾಗಿ ಜಾಗೃತ ನಾಗರಿಕ ಎಂದು ಹೇಳಿಕೊಂಡಿದ್ದಾರೆ. ಅವರ ಸಿನೆಮಾ ಆಯ್ಕೆಯು ಯಾವಾಗಲೂ ಸಾಮಾಜಿಕವಾಗಿ ಸಂಬಂಧಿಸಿದ ವಿಷಯಗಳ ಮೇಲೆ ಅವಲಂಬಿತವಾಗಿರುತ್ತದೆ, ಅದು ಚರ್ಚೆಯನ್ನು ಪ್ರಾರಂಭಿಸುತ್ತದೆ ಎಂದು ಹೇಳಿದ್ದಾರೆ.

ಅವರ ಚೊಚ್ಚಲ ಬಾಲಿವುಡ್ ಚಿತ್ರ ’ವಿಕ್ಕಿಂಗ್ ವಿಕಿ ದಾನಿ (2012) ದಿಂದ ಅವರ ಕೊನೆಯ ತೆರೆಯ ಬಂದ ಜಾಯ್‌ರೈಡ್ ಬಾಲಾ (2019) ಮತ್ತು ಮುಂಬರುವ ಸಲಿಂಗಕಾಮದ ಕುರಿತ “ಶುಭ್ ಮಂಗಲ್ ಜ್ಯಾದ ಸಾವಧಾನ್”ವರೆಗೂ ಸಾಮಾಜಿಕ ಬದಲಾವಣೆಯು ತಮ್ಮ ಚಲನಚಿತ್ರಗಳಲ್ಲಿ ಮುಖ್ಯ ಆಧಾರವಾಗಿದೆ ಎಂದು ಆಯುಷ್ಮಾನ್ ಖುರಾನಾ ಹೇಳಿದ್ದಾರೆ.

ಚಿತ್ರವೊಂದರಲ್ಲಿಅ ವರು ಒಂದು ಕೈಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಮತ್ತೊಂದು ಕೈಯಲ್ಲಿ ಎಲ್ಜಿಬಿಟಿಕ್ ಹೆಮ್ಮೆಯ ಭಾವುಟವನ್ನು ಹಿಡಿದುಕೊಂಡಿದ್ದಾರೆ. ಇದು ಸಲಿಂಗಕಾಮ ಮತ್ತು ಎಲ್ಜಿಬಿಟಿಕ್ ಸಮುದಾಯದ ವಿಷಯಕ್ಕೆ ಬಂದಾಗ ಭಾರತವನ್ನು ಪ್ರಗತಿಪರ ನಿಲುವಿನಲ್ಲಿ ತೋರಿಸುತ್ತದೆ. ಇದು ಸೆಕ್ಷನ್ 377 (ಭಾರತೀಯ ದಂಡ ಸಂಹಿತೆಯ) ಯನ್ನು ತಾರತಮ್ಯಗೊಳಿಸಿದೆ ಮತ್ತು ನಾವು ಹೆಚ್ಚು ಹೆಮ್ಮೆಪಡುವಂತಿಲ್ಲ ಎಂದು ಅವರು ಹೇಳುತ್ತಾರೆ.

ಅವರ ಚಲನಚಿತ್ರಗಳ ಆಯ್ಕೆಯ ಕುರಿತು (ಆರ್ಟಿಕಲ್ 15) (ಶುಭ್ ಮಂಗಲ್ ಜ್ಯಾದ ಸಾವಧಾನ್)  ಸಾಮಾಜಿಕವಾಗಿ ಪ್ರಸ್ತುತವಾದ, ಒಂದು ಕೋಲಾಹಲವನ್ನು ಉಂಟುಮಾಡುವ ಅಥವಾ ಕೆಲವು ರೀತಿಯ ಚರ್ಚೆಯನ್ನು ಉಂಟುಮಾಡುವ ವಿಷಯಗಳನ್ನು ಆಯ್ಕೆ ಮಾಡಲು ನಾನು ಯಾವಾಗಲೂ ಬಯಸುತ್ತೇನೆ. ಹೌದು, ನಾನು ಸಾಮಾಜಿಕವಾಗಿ ಜಾಗೃತ ನಾಗರಿಕ. ನಾನು ಸಾಮಾಜಿಕವಾಗಿ ಸಂಬಂಧಿಸಿದ ಅನೇಕ ಸಮಸ್ಯೆಗಳ ಕುರಿತ ಬೀದಿ ನಾಟಕವನ್ನು ಮಾಡಿದ್ದೇನೆ ಮತ್ತು ನಾನು ಮಾಡುತ್ತಿರುವ ಸಿನೆಮಾ ನನ್ನ ರಂಗಭೂಮಿ ದಿನಗಳ ವಿಸ್ತರಣೆಯಾಗಿದೆ ಎನ್ನುತ್ತಾರೆ.

ಗಣರಾಜ್ಯೋತ್ಸವದ ಮಹತ್ವ ಮತ್ತು ದೇಶಪ್ರೇಮವನ್ನು ನೀವು ಹೇಗೆ ವ್ಯಾಖ್ಯಾನಿಸುತ್ತೀರಿ? ಎಂಬ ಪ್ರಶ್ನೆಗೆ
ಗಣರಾಜ್ಯೋತ್ಸವು ನಮ್ಮ ದೇಶದಲ್ಲಿ ಒಬ್ಬರಾಗಿ ನಮ್ಮ ದೇಶವು ಹೊಂದಿರು ಬಹು – ಸಾಂಸ್ಕೃತಿಕ ವಿಭಿನ್ನತೆಯನ್ನು ಸಂಭ್ರಮಿಸಬೆಕು. ನಿಜವಾದ ದೇಶಪ್ರೇಮ ಎಂದರೆ ಅಂಧಭಕ್ತಿ ಅಲ್ಲ, ನಮ್ಮ ದೇಶವನ್ನು ಸುಧಾರಿಸುವುದಾಗಿದೆ. ದೇಶಪ್ರೇಮವು ಒಂದು ಜವಾಬ್ದಾರಿಯೊಂದಿಗೆ ಬರುತ್ತದೆ, ನಿಮ್ಮ ದೇಶದ ಮೇಲಿನ ಪ್ರೀತಿಯು ನಾನು ಪುನರುಚ್ಚರಿಸಿದಂತೆ ಇದು ಕುರುಡು ಪ್ರೀತಿ ಆಗಿರಬಾರದು ಎನ್ನುತ್ತಾರೆ.

ನಮ್ಮ ದೇಶದಲ್ಲಿ ವೈವಿಧ್ಯತೆಯಲ್ಲಿ ಏಕತೆ ಇದೆ. ಇದು ನಮ್ಮ ಅತಿದೊಡ್ಡ ಶಕ್ತಿ ಮತ್ತು ನಮ್ಮ ದೊಡ್ಡ ದೌರ್ಬಲ್ಯವೂ ಆಗಿದೆ. ನಾವು ವೈವಿಧ್ಯಮಯರು ಜೊತೆಗೆ ನಾವು ಒಟ್ಟಾಗಿರಬೇಕು. ನಾನು ಆಚರಿಸುವುದು ಭಾರತವು ಸಂಸ್ಕೃತಿಯಾಗಿದೆ. ನಮ್ಮ ಕೊರತೆಯೆಂದರೆ ನಾವು ದೇಶವನ್ನು ಸ್ವಚ್ಛವಾಗಿಟ್ಟಿಲ್ಲ. ಸಣ್ಣ ಆರ್ಥಿಕತೆಯನ್ನು ಹೊಂದಿರುವ ದೇಶಗಳು ಸಹ ನಮಗಿಂತ ಸ್ವಚ್ಛವಾಗಿವೆ ಎನ್ನುತ್ತಾರೆ.

ಎಲ್ಜಿಬಿಟಿಕ್ ಸಮುದಾಯ ಮತ್ತು ವಿವಿಧ ಜಾತಿಯ ಜನರಿಗೆ ಸಾಂವಿಧಾನಿಕ ಸಿಂಧುತ್ವ ಇರಬಹುದು, ಆದರೆ ಅಂತಿಮವಾಗಿ ಸ್ವೀಕಾರಾರ್ಹತೆಯ ಜವಾಬ್ದಾರಿ ರಾಷ್ಟ್ರದ ಜನರ ಮೇಲಿದೆ ಎಂದು ನೀವು ನಂಬುತ್ತೀರಾ? ಎಂಬ ಪ್ರಶ್ನೆಗೆ ಅವರು ಈ ಸಮುದಾಯದ ಕುರಿತು ಯೂಟ್ಯೂಬ್‌ನಲ್ಲಿ ಟ್ರೈಲರ್‌ನಲ್‌ಇ ನಾವು ನೋಡಿದ ರೀತಿಯ ವೀಕ್ಷಣೆಗಳು ಮತ್ತು ಕಾಮೆಂಟ್‌ಗಳು ನಮ್ಮ ದೇಶದ ಪ್ರಗತಿಪರ ನಿಲುವನ್ನು ತೋರಿಸುತ್ತದೆ. ಇದು ಸಲಿಂಗಕಾಮವನ್ನು ಆಧರಿಸಿದ ಚಿತ್ರಕ್ಕಾಗಿ ಸಿದ್ಧವಾಗಿದೆ. ಚಿತ್ರದ ಟ್ರೈಲರ್ ಅನ್ನು ನಮ್ಮ ದೇಶ ಸ್ವೀಕರಿಸಿದೆ ಎಂದು ಅದು ತೋರಿಸುತ್ತದೆ. ಇದು 2020ರ ಸಲಿಂಗಕಾಮಿ ಪ್ರೇಮಕಥೆಯ ಮುಖ್ಯವಾಹಿನಿಯ ಅತಿ ದೊಡ್ಡ ಕಮರ್ಷಿಯಲ್‌ ಹಿಂದಿ ಸಿನೆಮಾವಾಗಿದೆ ಎಂದಿದ್ದಾರೆ.

ನಮ್ಮ ಚಲನಚಿತ್ರೋದ್ಯಮದ ಸಾಮಾಜಿಕ ಒಳಗೊಳ್ಳುವಿಕೆ ಸಾಕಷ್ಟಿದೆಯೇ? ಎಂಬ ಪ್ರಶ್ನೆಗೆ ಉದ್ಯಮದಲ್ಲಿ ನಾವು ಮುಕ್ತತೆಯಿಂದ ಇದ್ದೇವೆ. ನೀವು ಯಾವ ಜಾತಿ, ಬಣ್ಣ, ಧರ್ಮಕ್ಕೆ ಸೇರಿದವರು ಅಥವಾ ನಿಮ್ಮ ಲೈಂಗಿಕತೆ ಏನೆಂಬುದು ನಮಗೆ ಮುಖ್ಯವಲ್ಲ. ನಿಮ್ಮ ಪ್ರತಿಭೆಯ ಬಗ್ಗೆ ಮಾತ್ರ ನಾವು ಕಾಳಜಿ ವಹಿಸುತ್ತೇವೆ. ನೀವು ಸಾಕಷ್ಟು ಒಳ್ಳೆಯವರಾಗಿದ್ದರೆ, ನೀವು ಅಲ್ಲಿಗೆ ಹೋಗುತ್ತೀರಿ ಮತ್ತು ನಿಮಗಾಗಿ ಒಳ್ಳೆಯದನ್ನು ಮಾಡುತ್ತೀರಿ ಎಂದು ಅವರು ಹೇಳಿದ್ದಾರೆ.

ಕೃಪೆ: ಹಿಂದೂಸ್ತಾನ್‌ ಟೈಮ್ಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...