Homeಮುಖಪುಟನಿಜವಾದ ದೇಶಪ್ರೇಮ ಎಂದರೆ ಅಂಧಭಕ್ತಿ ಅಲ್ಲ, ನಮ್ಮ ದೇಶವನ್ನು ಸುಧಾರಿಸುವುದಾಗಿದೆ: ಆಯುಷ್ಮಾನ್‌ ಖುರಾನ

ನಿಜವಾದ ದೇಶಪ್ರೇಮ ಎಂದರೆ ಅಂಧಭಕ್ತಿ ಅಲ್ಲ, ನಮ್ಮ ದೇಶವನ್ನು ಸುಧಾರಿಸುವುದಾಗಿದೆ: ಆಯುಷ್ಮಾನ್‌ ಖುರಾನ

- Advertisement -
- Advertisement -

ಹೊಸ ವರ್ಷವನ್ನು ಸಮಾನತೆ ಮತ್ತು ಹೆಮ್ಮೆಯಿಂದ ಸ್ವಾಗತಿಸಿರುವ ಖ್ಯಾತ ಬಾಲಿವುಟ್‌ ನಟ ಆಯುಷ್ಮಾನ್ ಖುರಾನಾ, ನಿಜವಾದ ದೇಶಪ್ರೇಮ ಎಂದರೆ ಅಂಧಭಕ್ತಿ ಅಲ್ಲ, ನಮ್ಮ ದೇಶವನ್ನು ಸುಧಾರಿಸುವುದಾಗಿದೆ ಎಂದು ಹೇಳಿದ್ದಾರೆ.

ದೇಶದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಹಿಂದೂಸ್ತಾನ್‌ ಟೈಮ್ಸ್‌ನೊಂದಿಗಿನ ಸಂದರ್ಶನದಲ್ಲಿ ಅವರು “ಸಮಾನತೆಯ ಬಗ್ಗೆ ಹೆಮ್ಮೆಪಡುವ ತಾನು ಸಾಮಾಜಿಕವಾಗಿ ಜಾಗೃತ ನಾಗರಿಕ ಎಂದು ಹೇಳಿಕೊಂಡಿದ್ದಾರೆ. ಅವರ ಸಿನೆಮಾ ಆಯ್ಕೆಯು ಯಾವಾಗಲೂ ಸಾಮಾಜಿಕವಾಗಿ ಸಂಬಂಧಿಸಿದ ವಿಷಯಗಳ ಮೇಲೆ ಅವಲಂಬಿತವಾಗಿರುತ್ತದೆ, ಅದು ಚರ್ಚೆಯನ್ನು ಪ್ರಾರಂಭಿಸುತ್ತದೆ ಎಂದು ಹೇಳಿದ್ದಾರೆ.

ಅವರ ಚೊಚ್ಚಲ ಬಾಲಿವುಡ್ ಚಿತ್ರ ’ವಿಕ್ಕಿಂಗ್ ವಿಕಿ ದಾನಿ (2012) ದಿಂದ ಅವರ ಕೊನೆಯ ತೆರೆಯ ಬಂದ ಜಾಯ್‌ರೈಡ್ ಬಾಲಾ (2019) ಮತ್ತು ಮುಂಬರುವ ಸಲಿಂಗಕಾಮದ ಕುರಿತ “ಶುಭ್ ಮಂಗಲ್ ಜ್ಯಾದ ಸಾವಧಾನ್”ವರೆಗೂ ಸಾಮಾಜಿಕ ಬದಲಾವಣೆಯು ತಮ್ಮ ಚಲನಚಿತ್ರಗಳಲ್ಲಿ ಮುಖ್ಯ ಆಧಾರವಾಗಿದೆ ಎಂದು ಆಯುಷ್ಮಾನ್ ಖುರಾನಾ ಹೇಳಿದ್ದಾರೆ.

ಚಿತ್ರವೊಂದರಲ್ಲಿಅ ವರು ಒಂದು ಕೈಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಮತ್ತೊಂದು ಕೈಯಲ್ಲಿ ಎಲ್ಜಿಬಿಟಿಕ್ ಹೆಮ್ಮೆಯ ಭಾವುಟವನ್ನು ಹಿಡಿದುಕೊಂಡಿದ್ದಾರೆ. ಇದು ಸಲಿಂಗಕಾಮ ಮತ್ತು ಎಲ್ಜಿಬಿಟಿಕ್ ಸಮುದಾಯದ ವಿಷಯಕ್ಕೆ ಬಂದಾಗ ಭಾರತವನ್ನು ಪ್ರಗತಿಪರ ನಿಲುವಿನಲ್ಲಿ ತೋರಿಸುತ್ತದೆ. ಇದು ಸೆಕ್ಷನ್ 377 (ಭಾರತೀಯ ದಂಡ ಸಂಹಿತೆಯ) ಯನ್ನು ತಾರತಮ್ಯಗೊಳಿಸಿದೆ ಮತ್ತು ನಾವು ಹೆಚ್ಚು ಹೆಮ್ಮೆಪಡುವಂತಿಲ್ಲ ಎಂದು ಅವರು ಹೇಳುತ್ತಾರೆ.

ಅವರ ಚಲನಚಿತ್ರಗಳ ಆಯ್ಕೆಯ ಕುರಿತು (ಆರ್ಟಿಕಲ್ 15) (ಶುಭ್ ಮಂಗಲ್ ಜ್ಯಾದ ಸಾವಧಾನ್)  ಸಾಮಾಜಿಕವಾಗಿ ಪ್ರಸ್ತುತವಾದ, ಒಂದು ಕೋಲಾಹಲವನ್ನು ಉಂಟುಮಾಡುವ ಅಥವಾ ಕೆಲವು ರೀತಿಯ ಚರ್ಚೆಯನ್ನು ಉಂಟುಮಾಡುವ ವಿಷಯಗಳನ್ನು ಆಯ್ಕೆ ಮಾಡಲು ನಾನು ಯಾವಾಗಲೂ ಬಯಸುತ್ತೇನೆ. ಹೌದು, ನಾನು ಸಾಮಾಜಿಕವಾಗಿ ಜಾಗೃತ ನಾಗರಿಕ. ನಾನು ಸಾಮಾಜಿಕವಾಗಿ ಸಂಬಂಧಿಸಿದ ಅನೇಕ ಸಮಸ್ಯೆಗಳ ಕುರಿತ ಬೀದಿ ನಾಟಕವನ್ನು ಮಾಡಿದ್ದೇನೆ ಮತ್ತು ನಾನು ಮಾಡುತ್ತಿರುವ ಸಿನೆಮಾ ನನ್ನ ರಂಗಭೂಮಿ ದಿನಗಳ ವಿಸ್ತರಣೆಯಾಗಿದೆ ಎನ್ನುತ್ತಾರೆ.

ಗಣರಾಜ್ಯೋತ್ಸವದ ಮಹತ್ವ ಮತ್ತು ದೇಶಪ್ರೇಮವನ್ನು ನೀವು ಹೇಗೆ ವ್ಯಾಖ್ಯಾನಿಸುತ್ತೀರಿ? ಎಂಬ ಪ್ರಶ್ನೆಗೆ
ಗಣರಾಜ್ಯೋತ್ಸವು ನಮ್ಮ ದೇಶದಲ್ಲಿ ಒಬ್ಬರಾಗಿ ನಮ್ಮ ದೇಶವು ಹೊಂದಿರು ಬಹು – ಸಾಂಸ್ಕೃತಿಕ ವಿಭಿನ್ನತೆಯನ್ನು ಸಂಭ್ರಮಿಸಬೆಕು. ನಿಜವಾದ ದೇಶಪ್ರೇಮ ಎಂದರೆ ಅಂಧಭಕ್ತಿ ಅಲ್ಲ, ನಮ್ಮ ದೇಶವನ್ನು ಸುಧಾರಿಸುವುದಾಗಿದೆ. ದೇಶಪ್ರೇಮವು ಒಂದು ಜವಾಬ್ದಾರಿಯೊಂದಿಗೆ ಬರುತ್ತದೆ, ನಿಮ್ಮ ದೇಶದ ಮೇಲಿನ ಪ್ರೀತಿಯು ನಾನು ಪುನರುಚ್ಚರಿಸಿದಂತೆ ಇದು ಕುರುಡು ಪ್ರೀತಿ ಆಗಿರಬಾರದು ಎನ್ನುತ್ತಾರೆ.

ನಮ್ಮ ದೇಶದಲ್ಲಿ ವೈವಿಧ್ಯತೆಯಲ್ಲಿ ಏಕತೆ ಇದೆ. ಇದು ನಮ್ಮ ಅತಿದೊಡ್ಡ ಶಕ್ತಿ ಮತ್ತು ನಮ್ಮ ದೊಡ್ಡ ದೌರ್ಬಲ್ಯವೂ ಆಗಿದೆ. ನಾವು ವೈವಿಧ್ಯಮಯರು ಜೊತೆಗೆ ನಾವು ಒಟ್ಟಾಗಿರಬೇಕು. ನಾನು ಆಚರಿಸುವುದು ಭಾರತವು ಸಂಸ್ಕೃತಿಯಾಗಿದೆ. ನಮ್ಮ ಕೊರತೆಯೆಂದರೆ ನಾವು ದೇಶವನ್ನು ಸ್ವಚ್ಛವಾಗಿಟ್ಟಿಲ್ಲ. ಸಣ್ಣ ಆರ್ಥಿಕತೆಯನ್ನು ಹೊಂದಿರುವ ದೇಶಗಳು ಸಹ ನಮಗಿಂತ ಸ್ವಚ್ಛವಾಗಿವೆ ಎನ್ನುತ್ತಾರೆ.

ಎಲ್ಜಿಬಿಟಿಕ್ ಸಮುದಾಯ ಮತ್ತು ವಿವಿಧ ಜಾತಿಯ ಜನರಿಗೆ ಸಾಂವಿಧಾನಿಕ ಸಿಂಧುತ್ವ ಇರಬಹುದು, ಆದರೆ ಅಂತಿಮವಾಗಿ ಸ್ವೀಕಾರಾರ್ಹತೆಯ ಜವಾಬ್ದಾರಿ ರಾಷ್ಟ್ರದ ಜನರ ಮೇಲಿದೆ ಎಂದು ನೀವು ನಂಬುತ್ತೀರಾ? ಎಂಬ ಪ್ರಶ್ನೆಗೆ ಅವರು ಈ ಸಮುದಾಯದ ಕುರಿತು ಯೂಟ್ಯೂಬ್‌ನಲ್ಲಿ ಟ್ರೈಲರ್‌ನಲ್‌ಇ ನಾವು ನೋಡಿದ ರೀತಿಯ ವೀಕ್ಷಣೆಗಳು ಮತ್ತು ಕಾಮೆಂಟ್‌ಗಳು ನಮ್ಮ ದೇಶದ ಪ್ರಗತಿಪರ ನಿಲುವನ್ನು ತೋರಿಸುತ್ತದೆ. ಇದು ಸಲಿಂಗಕಾಮವನ್ನು ಆಧರಿಸಿದ ಚಿತ್ರಕ್ಕಾಗಿ ಸಿದ್ಧವಾಗಿದೆ. ಚಿತ್ರದ ಟ್ರೈಲರ್ ಅನ್ನು ನಮ್ಮ ದೇಶ ಸ್ವೀಕರಿಸಿದೆ ಎಂದು ಅದು ತೋರಿಸುತ್ತದೆ. ಇದು 2020ರ ಸಲಿಂಗಕಾಮಿ ಪ್ರೇಮಕಥೆಯ ಮುಖ್ಯವಾಹಿನಿಯ ಅತಿ ದೊಡ್ಡ ಕಮರ್ಷಿಯಲ್‌ ಹಿಂದಿ ಸಿನೆಮಾವಾಗಿದೆ ಎಂದಿದ್ದಾರೆ.

ನಮ್ಮ ಚಲನಚಿತ್ರೋದ್ಯಮದ ಸಾಮಾಜಿಕ ಒಳಗೊಳ್ಳುವಿಕೆ ಸಾಕಷ್ಟಿದೆಯೇ? ಎಂಬ ಪ್ರಶ್ನೆಗೆ ಉದ್ಯಮದಲ್ಲಿ ನಾವು ಮುಕ್ತತೆಯಿಂದ ಇದ್ದೇವೆ. ನೀವು ಯಾವ ಜಾತಿ, ಬಣ್ಣ, ಧರ್ಮಕ್ಕೆ ಸೇರಿದವರು ಅಥವಾ ನಿಮ್ಮ ಲೈಂಗಿಕತೆ ಏನೆಂಬುದು ನಮಗೆ ಮುಖ್ಯವಲ್ಲ. ನಿಮ್ಮ ಪ್ರತಿಭೆಯ ಬಗ್ಗೆ ಮಾತ್ರ ನಾವು ಕಾಳಜಿ ವಹಿಸುತ್ತೇವೆ. ನೀವು ಸಾಕಷ್ಟು ಒಳ್ಳೆಯವರಾಗಿದ್ದರೆ, ನೀವು ಅಲ್ಲಿಗೆ ಹೋಗುತ್ತೀರಿ ಮತ್ತು ನಿಮಗಾಗಿ ಒಳ್ಳೆಯದನ್ನು ಮಾಡುತ್ತೀರಿ ಎಂದು ಅವರು ಹೇಳಿದ್ದಾರೆ.

ಕೃಪೆ: ಹಿಂದೂಸ್ತಾನ್‌ ಟೈಮ್ಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...