Homeಮುಖಪುಟನಿಜವಾದ ದೇಶಪ್ರೇಮ ಎಂದರೆ ಅಂಧಭಕ್ತಿ ಅಲ್ಲ, ನಮ್ಮ ದೇಶವನ್ನು ಸುಧಾರಿಸುವುದಾಗಿದೆ: ಆಯುಷ್ಮಾನ್‌ ಖುರಾನ

ನಿಜವಾದ ದೇಶಪ್ರೇಮ ಎಂದರೆ ಅಂಧಭಕ್ತಿ ಅಲ್ಲ, ನಮ್ಮ ದೇಶವನ್ನು ಸುಧಾರಿಸುವುದಾಗಿದೆ: ಆಯುಷ್ಮಾನ್‌ ಖುರಾನ

- Advertisement -
- Advertisement -

ಹೊಸ ವರ್ಷವನ್ನು ಸಮಾನತೆ ಮತ್ತು ಹೆಮ್ಮೆಯಿಂದ ಸ್ವಾಗತಿಸಿರುವ ಖ್ಯಾತ ಬಾಲಿವುಟ್‌ ನಟ ಆಯುಷ್ಮಾನ್ ಖುರಾನಾ, ನಿಜವಾದ ದೇಶಪ್ರೇಮ ಎಂದರೆ ಅಂಧಭಕ್ತಿ ಅಲ್ಲ, ನಮ್ಮ ದೇಶವನ್ನು ಸುಧಾರಿಸುವುದಾಗಿದೆ ಎಂದು ಹೇಳಿದ್ದಾರೆ.

ದೇಶದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಹಿಂದೂಸ್ತಾನ್‌ ಟೈಮ್ಸ್‌ನೊಂದಿಗಿನ ಸಂದರ್ಶನದಲ್ಲಿ ಅವರು “ಸಮಾನತೆಯ ಬಗ್ಗೆ ಹೆಮ್ಮೆಪಡುವ ತಾನು ಸಾಮಾಜಿಕವಾಗಿ ಜಾಗೃತ ನಾಗರಿಕ ಎಂದು ಹೇಳಿಕೊಂಡಿದ್ದಾರೆ. ಅವರ ಸಿನೆಮಾ ಆಯ್ಕೆಯು ಯಾವಾಗಲೂ ಸಾಮಾಜಿಕವಾಗಿ ಸಂಬಂಧಿಸಿದ ವಿಷಯಗಳ ಮೇಲೆ ಅವಲಂಬಿತವಾಗಿರುತ್ತದೆ, ಅದು ಚರ್ಚೆಯನ್ನು ಪ್ರಾರಂಭಿಸುತ್ತದೆ ಎಂದು ಹೇಳಿದ್ದಾರೆ.

ಅವರ ಚೊಚ್ಚಲ ಬಾಲಿವುಡ್ ಚಿತ್ರ ’ವಿಕ್ಕಿಂಗ್ ವಿಕಿ ದಾನಿ (2012) ದಿಂದ ಅವರ ಕೊನೆಯ ತೆರೆಯ ಬಂದ ಜಾಯ್‌ರೈಡ್ ಬಾಲಾ (2019) ಮತ್ತು ಮುಂಬರುವ ಸಲಿಂಗಕಾಮದ ಕುರಿತ “ಶುಭ್ ಮಂಗಲ್ ಜ್ಯಾದ ಸಾವಧಾನ್”ವರೆಗೂ ಸಾಮಾಜಿಕ ಬದಲಾವಣೆಯು ತಮ್ಮ ಚಲನಚಿತ್ರಗಳಲ್ಲಿ ಮುಖ್ಯ ಆಧಾರವಾಗಿದೆ ಎಂದು ಆಯುಷ್ಮಾನ್ ಖುರಾನಾ ಹೇಳಿದ್ದಾರೆ.

ಚಿತ್ರವೊಂದರಲ್ಲಿಅ ವರು ಒಂದು ಕೈಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಮತ್ತೊಂದು ಕೈಯಲ್ಲಿ ಎಲ್ಜಿಬಿಟಿಕ್ ಹೆಮ್ಮೆಯ ಭಾವುಟವನ್ನು ಹಿಡಿದುಕೊಂಡಿದ್ದಾರೆ. ಇದು ಸಲಿಂಗಕಾಮ ಮತ್ತು ಎಲ್ಜಿಬಿಟಿಕ್ ಸಮುದಾಯದ ವಿಷಯಕ್ಕೆ ಬಂದಾಗ ಭಾರತವನ್ನು ಪ್ರಗತಿಪರ ನಿಲುವಿನಲ್ಲಿ ತೋರಿಸುತ್ತದೆ. ಇದು ಸೆಕ್ಷನ್ 377 (ಭಾರತೀಯ ದಂಡ ಸಂಹಿತೆಯ) ಯನ್ನು ತಾರತಮ್ಯಗೊಳಿಸಿದೆ ಮತ್ತು ನಾವು ಹೆಚ್ಚು ಹೆಮ್ಮೆಪಡುವಂತಿಲ್ಲ ಎಂದು ಅವರು ಹೇಳುತ್ತಾರೆ.

ಅವರ ಚಲನಚಿತ್ರಗಳ ಆಯ್ಕೆಯ ಕುರಿತು (ಆರ್ಟಿಕಲ್ 15) (ಶುಭ್ ಮಂಗಲ್ ಜ್ಯಾದ ಸಾವಧಾನ್)  ಸಾಮಾಜಿಕವಾಗಿ ಪ್ರಸ್ತುತವಾದ, ಒಂದು ಕೋಲಾಹಲವನ್ನು ಉಂಟುಮಾಡುವ ಅಥವಾ ಕೆಲವು ರೀತಿಯ ಚರ್ಚೆಯನ್ನು ಉಂಟುಮಾಡುವ ವಿಷಯಗಳನ್ನು ಆಯ್ಕೆ ಮಾಡಲು ನಾನು ಯಾವಾಗಲೂ ಬಯಸುತ್ತೇನೆ. ಹೌದು, ನಾನು ಸಾಮಾಜಿಕವಾಗಿ ಜಾಗೃತ ನಾಗರಿಕ. ನಾನು ಸಾಮಾಜಿಕವಾಗಿ ಸಂಬಂಧಿಸಿದ ಅನೇಕ ಸಮಸ್ಯೆಗಳ ಕುರಿತ ಬೀದಿ ನಾಟಕವನ್ನು ಮಾಡಿದ್ದೇನೆ ಮತ್ತು ನಾನು ಮಾಡುತ್ತಿರುವ ಸಿನೆಮಾ ನನ್ನ ರಂಗಭೂಮಿ ದಿನಗಳ ವಿಸ್ತರಣೆಯಾಗಿದೆ ಎನ್ನುತ್ತಾರೆ.

ಗಣರಾಜ್ಯೋತ್ಸವದ ಮಹತ್ವ ಮತ್ತು ದೇಶಪ್ರೇಮವನ್ನು ನೀವು ಹೇಗೆ ವ್ಯಾಖ್ಯಾನಿಸುತ್ತೀರಿ? ಎಂಬ ಪ್ರಶ್ನೆಗೆ
ಗಣರಾಜ್ಯೋತ್ಸವು ನಮ್ಮ ದೇಶದಲ್ಲಿ ಒಬ್ಬರಾಗಿ ನಮ್ಮ ದೇಶವು ಹೊಂದಿರು ಬಹು – ಸಾಂಸ್ಕೃತಿಕ ವಿಭಿನ್ನತೆಯನ್ನು ಸಂಭ್ರಮಿಸಬೆಕು. ನಿಜವಾದ ದೇಶಪ್ರೇಮ ಎಂದರೆ ಅಂಧಭಕ್ತಿ ಅಲ್ಲ, ನಮ್ಮ ದೇಶವನ್ನು ಸುಧಾರಿಸುವುದಾಗಿದೆ. ದೇಶಪ್ರೇಮವು ಒಂದು ಜವಾಬ್ದಾರಿಯೊಂದಿಗೆ ಬರುತ್ತದೆ, ನಿಮ್ಮ ದೇಶದ ಮೇಲಿನ ಪ್ರೀತಿಯು ನಾನು ಪುನರುಚ್ಚರಿಸಿದಂತೆ ಇದು ಕುರುಡು ಪ್ರೀತಿ ಆಗಿರಬಾರದು ಎನ್ನುತ್ತಾರೆ.

ನಮ್ಮ ದೇಶದಲ್ಲಿ ವೈವಿಧ್ಯತೆಯಲ್ಲಿ ಏಕತೆ ಇದೆ. ಇದು ನಮ್ಮ ಅತಿದೊಡ್ಡ ಶಕ್ತಿ ಮತ್ತು ನಮ್ಮ ದೊಡ್ಡ ದೌರ್ಬಲ್ಯವೂ ಆಗಿದೆ. ನಾವು ವೈವಿಧ್ಯಮಯರು ಜೊತೆಗೆ ನಾವು ಒಟ್ಟಾಗಿರಬೇಕು. ನಾನು ಆಚರಿಸುವುದು ಭಾರತವು ಸಂಸ್ಕೃತಿಯಾಗಿದೆ. ನಮ್ಮ ಕೊರತೆಯೆಂದರೆ ನಾವು ದೇಶವನ್ನು ಸ್ವಚ್ಛವಾಗಿಟ್ಟಿಲ್ಲ. ಸಣ್ಣ ಆರ್ಥಿಕತೆಯನ್ನು ಹೊಂದಿರುವ ದೇಶಗಳು ಸಹ ನಮಗಿಂತ ಸ್ವಚ್ಛವಾಗಿವೆ ಎನ್ನುತ್ತಾರೆ.

ಎಲ್ಜಿಬಿಟಿಕ್ ಸಮುದಾಯ ಮತ್ತು ವಿವಿಧ ಜಾತಿಯ ಜನರಿಗೆ ಸಾಂವಿಧಾನಿಕ ಸಿಂಧುತ್ವ ಇರಬಹುದು, ಆದರೆ ಅಂತಿಮವಾಗಿ ಸ್ವೀಕಾರಾರ್ಹತೆಯ ಜವಾಬ್ದಾರಿ ರಾಷ್ಟ್ರದ ಜನರ ಮೇಲಿದೆ ಎಂದು ನೀವು ನಂಬುತ್ತೀರಾ? ಎಂಬ ಪ್ರಶ್ನೆಗೆ ಅವರು ಈ ಸಮುದಾಯದ ಕುರಿತು ಯೂಟ್ಯೂಬ್‌ನಲ್ಲಿ ಟ್ರೈಲರ್‌ನಲ್‌ಇ ನಾವು ನೋಡಿದ ರೀತಿಯ ವೀಕ್ಷಣೆಗಳು ಮತ್ತು ಕಾಮೆಂಟ್‌ಗಳು ನಮ್ಮ ದೇಶದ ಪ್ರಗತಿಪರ ನಿಲುವನ್ನು ತೋರಿಸುತ್ತದೆ. ಇದು ಸಲಿಂಗಕಾಮವನ್ನು ಆಧರಿಸಿದ ಚಿತ್ರಕ್ಕಾಗಿ ಸಿದ್ಧವಾಗಿದೆ. ಚಿತ್ರದ ಟ್ರೈಲರ್ ಅನ್ನು ನಮ್ಮ ದೇಶ ಸ್ವೀಕರಿಸಿದೆ ಎಂದು ಅದು ತೋರಿಸುತ್ತದೆ. ಇದು 2020ರ ಸಲಿಂಗಕಾಮಿ ಪ್ರೇಮಕಥೆಯ ಮುಖ್ಯವಾಹಿನಿಯ ಅತಿ ದೊಡ್ಡ ಕಮರ್ಷಿಯಲ್‌ ಹಿಂದಿ ಸಿನೆಮಾವಾಗಿದೆ ಎಂದಿದ್ದಾರೆ.

ನಮ್ಮ ಚಲನಚಿತ್ರೋದ್ಯಮದ ಸಾಮಾಜಿಕ ಒಳಗೊಳ್ಳುವಿಕೆ ಸಾಕಷ್ಟಿದೆಯೇ? ಎಂಬ ಪ್ರಶ್ನೆಗೆ ಉದ್ಯಮದಲ್ಲಿ ನಾವು ಮುಕ್ತತೆಯಿಂದ ಇದ್ದೇವೆ. ನೀವು ಯಾವ ಜಾತಿ, ಬಣ್ಣ, ಧರ್ಮಕ್ಕೆ ಸೇರಿದವರು ಅಥವಾ ನಿಮ್ಮ ಲೈಂಗಿಕತೆ ಏನೆಂಬುದು ನಮಗೆ ಮುಖ್ಯವಲ್ಲ. ನಿಮ್ಮ ಪ್ರತಿಭೆಯ ಬಗ್ಗೆ ಮಾತ್ರ ನಾವು ಕಾಳಜಿ ವಹಿಸುತ್ತೇವೆ. ನೀವು ಸಾಕಷ್ಟು ಒಳ್ಳೆಯವರಾಗಿದ್ದರೆ, ನೀವು ಅಲ್ಲಿಗೆ ಹೋಗುತ್ತೀರಿ ಮತ್ತು ನಿಮಗಾಗಿ ಒಳ್ಳೆಯದನ್ನು ಮಾಡುತ್ತೀರಿ ಎಂದು ಅವರು ಹೇಳಿದ್ದಾರೆ.

ಕೃಪೆ: ಹಿಂದೂಸ್ತಾನ್‌ ಟೈಮ್ಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...