Homeಮುಖಪುಟನಿಜವಾದ ದೇಶಪ್ರೇಮ ಎಂದರೆ ಅಂಧಭಕ್ತಿ ಅಲ್ಲ, ನಮ್ಮ ದೇಶವನ್ನು ಸುಧಾರಿಸುವುದಾಗಿದೆ: ಆಯುಷ್ಮಾನ್‌ ಖುರಾನ

ನಿಜವಾದ ದೇಶಪ್ರೇಮ ಎಂದರೆ ಅಂಧಭಕ್ತಿ ಅಲ್ಲ, ನಮ್ಮ ದೇಶವನ್ನು ಸುಧಾರಿಸುವುದಾಗಿದೆ: ಆಯುಷ್ಮಾನ್‌ ಖುರಾನ

- Advertisement -
- Advertisement -

ಹೊಸ ವರ್ಷವನ್ನು ಸಮಾನತೆ ಮತ್ತು ಹೆಮ್ಮೆಯಿಂದ ಸ್ವಾಗತಿಸಿರುವ ಖ್ಯಾತ ಬಾಲಿವುಟ್‌ ನಟ ಆಯುಷ್ಮಾನ್ ಖುರಾನಾ, ನಿಜವಾದ ದೇಶಪ್ರೇಮ ಎಂದರೆ ಅಂಧಭಕ್ತಿ ಅಲ್ಲ, ನಮ್ಮ ದೇಶವನ್ನು ಸುಧಾರಿಸುವುದಾಗಿದೆ ಎಂದು ಹೇಳಿದ್ದಾರೆ.

ದೇಶದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಹಿಂದೂಸ್ತಾನ್‌ ಟೈಮ್ಸ್‌ನೊಂದಿಗಿನ ಸಂದರ್ಶನದಲ್ಲಿ ಅವರು “ಸಮಾನತೆಯ ಬಗ್ಗೆ ಹೆಮ್ಮೆಪಡುವ ತಾನು ಸಾಮಾಜಿಕವಾಗಿ ಜಾಗೃತ ನಾಗರಿಕ ಎಂದು ಹೇಳಿಕೊಂಡಿದ್ದಾರೆ. ಅವರ ಸಿನೆಮಾ ಆಯ್ಕೆಯು ಯಾವಾಗಲೂ ಸಾಮಾಜಿಕವಾಗಿ ಸಂಬಂಧಿಸಿದ ವಿಷಯಗಳ ಮೇಲೆ ಅವಲಂಬಿತವಾಗಿರುತ್ತದೆ, ಅದು ಚರ್ಚೆಯನ್ನು ಪ್ರಾರಂಭಿಸುತ್ತದೆ ಎಂದು ಹೇಳಿದ್ದಾರೆ.

ಅವರ ಚೊಚ್ಚಲ ಬಾಲಿವುಡ್ ಚಿತ್ರ ’ವಿಕ್ಕಿಂಗ್ ವಿಕಿ ದಾನಿ (2012) ದಿಂದ ಅವರ ಕೊನೆಯ ತೆರೆಯ ಬಂದ ಜಾಯ್‌ರೈಡ್ ಬಾಲಾ (2019) ಮತ್ತು ಮುಂಬರುವ ಸಲಿಂಗಕಾಮದ ಕುರಿತ “ಶುಭ್ ಮಂಗಲ್ ಜ್ಯಾದ ಸಾವಧಾನ್”ವರೆಗೂ ಸಾಮಾಜಿಕ ಬದಲಾವಣೆಯು ತಮ್ಮ ಚಲನಚಿತ್ರಗಳಲ್ಲಿ ಮುಖ್ಯ ಆಧಾರವಾಗಿದೆ ಎಂದು ಆಯುಷ್ಮಾನ್ ಖುರಾನಾ ಹೇಳಿದ್ದಾರೆ.

ಚಿತ್ರವೊಂದರಲ್ಲಿಅ ವರು ಒಂದು ಕೈಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಮತ್ತೊಂದು ಕೈಯಲ್ಲಿ ಎಲ್ಜಿಬಿಟಿಕ್ ಹೆಮ್ಮೆಯ ಭಾವುಟವನ್ನು ಹಿಡಿದುಕೊಂಡಿದ್ದಾರೆ. ಇದು ಸಲಿಂಗಕಾಮ ಮತ್ತು ಎಲ್ಜಿಬಿಟಿಕ್ ಸಮುದಾಯದ ವಿಷಯಕ್ಕೆ ಬಂದಾಗ ಭಾರತವನ್ನು ಪ್ರಗತಿಪರ ನಿಲುವಿನಲ್ಲಿ ತೋರಿಸುತ್ತದೆ. ಇದು ಸೆಕ್ಷನ್ 377 (ಭಾರತೀಯ ದಂಡ ಸಂಹಿತೆಯ) ಯನ್ನು ತಾರತಮ್ಯಗೊಳಿಸಿದೆ ಮತ್ತು ನಾವು ಹೆಚ್ಚು ಹೆಮ್ಮೆಪಡುವಂತಿಲ್ಲ ಎಂದು ಅವರು ಹೇಳುತ್ತಾರೆ.

ಅವರ ಚಲನಚಿತ್ರಗಳ ಆಯ್ಕೆಯ ಕುರಿತು (ಆರ್ಟಿಕಲ್ 15) (ಶುಭ್ ಮಂಗಲ್ ಜ್ಯಾದ ಸಾವಧಾನ್)  ಸಾಮಾಜಿಕವಾಗಿ ಪ್ರಸ್ತುತವಾದ, ಒಂದು ಕೋಲಾಹಲವನ್ನು ಉಂಟುಮಾಡುವ ಅಥವಾ ಕೆಲವು ರೀತಿಯ ಚರ್ಚೆಯನ್ನು ಉಂಟುಮಾಡುವ ವಿಷಯಗಳನ್ನು ಆಯ್ಕೆ ಮಾಡಲು ನಾನು ಯಾವಾಗಲೂ ಬಯಸುತ್ತೇನೆ. ಹೌದು, ನಾನು ಸಾಮಾಜಿಕವಾಗಿ ಜಾಗೃತ ನಾಗರಿಕ. ನಾನು ಸಾಮಾಜಿಕವಾಗಿ ಸಂಬಂಧಿಸಿದ ಅನೇಕ ಸಮಸ್ಯೆಗಳ ಕುರಿತ ಬೀದಿ ನಾಟಕವನ್ನು ಮಾಡಿದ್ದೇನೆ ಮತ್ತು ನಾನು ಮಾಡುತ್ತಿರುವ ಸಿನೆಮಾ ನನ್ನ ರಂಗಭೂಮಿ ದಿನಗಳ ವಿಸ್ತರಣೆಯಾಗಿದೆ ಎನ್ನುತ್ತಾರೆ.

ಗಣರಾಜ್ಯೋತ್ಸವದ ಮಹತ್ವ ಮತ್ತು ದೇಶಪ್ರೇಮವನ್ನು ನೀವು ಹೇಗೆ ವ್ಯಾಖ್ಯಾನಿಸುತ್ತೀರಿ? ಎಂಬ ಪ್ರಶ್ನೆಗೆ
ಗಣರಾಜ್ಯೋತ್ಸವು ನಮ್ಮ ದೇಶದಲ್ಲಿ ಒಬ್ಬರಾಗಿ ನಮ್ಮ ದೇಶವು ಹೊಂದಿರು ಬಹು – ಸಾಂಸ್ಕೃತಿಕ ವಿಭಿನ್ನತೆಯನ್ನು ಸಂಭ್ರಮಿಸಬೆಕು. ನಿಜವಾದ ದೇಶಪ್ರೇಮ ಎಂದರೆ ಅಂಧಭಕ್ತಿ ಅಲ್ಲ, ನಮ್ಮ ದೇಶವನ್ನು ಸುಧಾರಿಸುವುದಾಗಿದೆ. ದೇಶಪ್ರೇಮವು ಒಂದು ಜವಾಬ್ದಾರಿಯೊಂದಿಗೆ ಬರುತ್ತದೆ, ನಿಮ್ಮ ದೇಶದ ಮೇಲಿನ ಪ್ರೀತಿಯು ನಾನು ಪುನರುಚ್ಚರಿಸಿದಂತೆ ಇದು ಕುರುಡು ಪ್ರೀತಿ ಆಗಿರಬಾರದು ಎನ್ನುತ್ತಾರೆ.

ನಮ್ಮ ದೇಶದಲ್ಲಿ ವೈವಿಧ್ಯತೆಯಲ್ಲಿ ಏಕತೆ ಇದೆ. ಇದು ನಮ್ಮ ಅತಿದೊಡ್ಡ ಶಕ್ತಿ ಮತ್ತು ನಮ್ಮ ದೊಡ್ಡ ದೌರ್ಬಲ್ಯವೂ ಆಗಿದೆ. ನಾವು ವೈವಿಧ್ಯಮಯರು ಜೊತೆಗೆ ನಾವು ಒಟ್ಟಾಗಿರಬೇಕು. ನಾನು ಆಚರಿಸುವುದು ಭಾರತವು ಸಂಸ್ಕೃತಿಯಾಗಿದೆ. ನಮ್ಮ ಕೊರತೆಯೆಂದರೆ ನಾವು ದೇಶವನ್ನು ಸ್ವಚ್ಛವಾಗಿಟ್ಟಿಲ್ಲ. ಸಣ್ಣ ಆರ್ಥಿಕತೆಯನ್ನು ಹೊಂದಿರುವ ದೇಶಗಳು ಸಹ ನಮಗಿಂತ ಸ್ವಚ್ಛವಾಗಿವೆ ಎನ್ನುತ್ತಾರೆ.

ಎಲ್ಜಿಬಿಟಿಕ್ ಸಮುದಾಯ ಮತ್ತು ವಿವಿಧ ಜಾತಿಯ ಜನರಿಗೆ ಸಾಂವಿಧಾನಿಕ ಸಿಂಧುತ್ವ ಇರಬಹುದು, ಆದರೆ ಅಂತಿಮವಾಗಿ ಸ್ವೀಕಾರಾರ್ಹತೆಯ ಜವಾಬ್ದಾರಿ ರಾಷ್ಟ್ರದ ಜನರ ಮೇಲಿದೆ ಎಂದು ನೀವು ನಂಬುತ್ತೀರಾ? ಎಂಬ ಪ್ರಶ್ನೆಗೆ ಅವರು ಈ ಸಮುದಾಯದ ಕುರಿತು ಯೂಟ್ಯೂಬ್‌ನಲ್ಲಿ ಟ್ರೈಲರ್‌ನಲ್‌ಇ ನಾವು ನೋಡಿದ ರೀತಿಯ ವೀಕ್ಷಣೆಗಳು ಮತ್ತು ಕಾಮೆಂಟ್‌ಗಳು ನಮ್ಮ ದೇಶದ ಪ್ರಗತಿಪರ ನಿಲುವನ್ನು ತೋರಿಸುತ್ತದೆ. ಇದು ಸಲಿಂಗಕಾಮವನ್ನು ಆಧರಿಸಿದ ಚಿತ್ರಕ್ಕಾಗಿ ಸಿದ್ಧವಾಗಿದೆ. ಚಿತ್ರದ ಟ್ರೈಲರ್ ಅನ್ನು ನಮ್ಮ ದೇಶ ಸ್ವೀಕರಿಸಿದೆ ಎಂದು ಅದು ತೋರಿಸುತ್ತದೆ. ಇದು 2020ರ ಸಲಿಂಗಕಾಮಿ ಪ್ರೇಮಕಥೆಯ ಮುಖ್ಯವಾಹಿನಿಯ ಅತಿ ದೊಡ್ಡ ಕಮರ್ಷಿಯಲ್‌ ಹಿಂದಿ ಸಿನೆಮಾವಾಗಿದೆ ಎಂದಿದ್ದಾರೆ.

ನಮ್ಮ ಚಲನಚಿತ್ರೋದ್ಯಮದ ಸಾಮಾಜಿಕ ಒಳಗೊಳ್ಳುವಿಕೆ ಸಾಕಷ್ಟಿದೆಯೇ? ಎಂಬ ಪ್ರಶ್ನೆಗೆ ಉದ್ಯಮದಲ್ಲಿ ನಾವು ಮುಕ್ತತೆಯಿಂದ ಇದ್ದೇವೆ. ನೀವು ಯಾವ ಜಾತಿ, ಬಣ್ಣ, ಧರ್ಮಕ್ಕೆ ಸೇರಿದವರು ಅಥವಾ ನಿಮ್ಮ ಲೈಂಗಿಕತೆ ಏನೆಂಬುದು ನಮಗೆ ಮುಖ್ಯವಲ್ಲ. ನಿಮ್ಮ ಪ್ರತಿಭೆಯ ಬಗ್ಗೆ ಮಾತ್ರ ನಾವು ಕಾಳಜಿ ವಹಿಸುತ್ತೇವೆ. ನೀವು ಸಾಕಷ್ಟು ಒಳ್ಳೆಯವರಾಗಿದ್ದರೆ, ನೀವು ಅಲ್ಲಿಗೆ ಹೋಗುತ್ತೀರಿ ಮತ್ತು ನಿಮಗಾಗಿ ಒಳ್ಳೆಯದನ್ನು ಮಾಡುತ್ತೀರಿ ಎಂದು ಅವರು ಹೇಳಿದ್ದಾರೆ.

ಕೃಪೆ: ಹಿಂದೂಸ್ತಾನ್‌ ಟೈಮ್ಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...