Homeಮುಖಪುಟನಿಜವಾದ ದೇಶಪ್ರೇಮ ಎಂದರೆ ಅಂಧಭಕ್ತಿ ಅಲ್ಲ, ನಮ್ಮ ದೇಶವನ್ನು ಸುಧಾರಿಸುವುದಾಗಿದೆ: ಆಯುಷ್ಮಾನ್‌ ಖುರಾನ

ನಿಜವಾದ ದೇಶಪ್ರೇಮ ಎಂದರೆ ಅಂಧಭಕ್ತಿ ಅಲ್ಲ, ನಮ್ಮ ದೇಶವನ್ನು ಸುಧಾರಿಸುವುದಾಗಿದೆ: ಆಯುಷ್ಮಾನ್‌ ಖುರಾನ

- Advertisement -
- Advertisement -

ಹೊಸ ವರ್ಷವನ್ನು ಸಮಾನತೆ ಮತ್ತು ಹೆಮ್ಮೆಯಿಂದ ಸ್ವಾಗತಿಸಿರುವ ಖ್ಯಾತ ಬಾಲಿವುಟ್‌ ನಟ ಆಯುಷ್ಮಾನ್ ಖುರಾನಾ, ನಿಜವಾದ ದೇಶಪ್ರೇಮ ಎಂದರೆ ಅಂಧಭಕ್ತಿ ಅಲ್ಲ, ನಮ್ಮ ದೇಶವನ್ನು ಸುಧಾರಿಸುವುದಾಗಿದೆ ಎಂದು ಹೇಳಿದ್ದಾರೆ.

ದೇಶದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಹಿಂದೂಸ್ತಾನ್‌ ಟೈಮ್ಸ್‌ನೊಂದಿಗಿನ ಸಂದರ್ಶನದಲ್ಲಿ ಅವರು “ಸಮಾನತೆಯ ಬಗ್ಗೆ ಹೆಮ್ಮೆಪಡುವ ತಾನು ಸಾಮಾಜಿಕವಾಗಿ ಜಾಗೃತ ನಾಗರಿಕ ಎಂದು ಹೇಳಿಕೊಂಡಿದ್ದಾರೆ. ಅವರ ಸಿನೆಮಾ ಆಯ್ಕೆಯು ಯಾವಾಗಲೂ ಸಾಮಾಜಿಕವಾಗಿ ಸಂಬಂಧಿಸಿದ ವಿಷಯಗಳ ಮೇಲೆ ಅವಲಂಬಿತವಾಗಿರುತ್ತದೆ, ಅದು ಚರ್ಚೆಯನ್ನು ಪ್ರಾರಂಭಿಸುತ್ತದೆ ಎಂದು ಹೇಳಿದ್ದಾರೆ.

ಅವರ ಚೊಚ್ಚಲ ಬಾಲಿವುಡ್ ಚಿತ್ರ ’ವಿಕ್ಕಿಂಗ್ ವಿಕಿ ದಾನಿ (2012) ದಿಂದ ಅವರ ಕೊನೆಯ ತೆರೆಯ ಬಂದ ಜಾಯ್‌ರೈಡ್ ಬಾಲಾ (2019) ಮತ್ತು ಮುಂಬರುವ ಸಲಿಂಗಕಾಮದ ಕುರಿತ “ಶುಭ್ ಮಂಗಲ್ ಜ್ಯಾದ ಸಾವಧಾನ್”ವರೆಗೂ ಸಾಮಾಜಿಕ ಬದಲಾವಣೆಯು ತಮ್ಮ ಚಲನಚಿತ್ರಗಳಲ್ಲಿ ಮುಖ್ಯ ಆಧಾರವಾಗಿದೆ ಎಂದು ಆಯುಷ್ಮಾನ್ ಖುರಾನಾ ಹೇಳಿದ್ದಾರೆ.

ಚಿತ್ರವೊಂದರಲ್ಲಿಅ ವರು ಒಂದು ಕೈಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಮತ್ತೊಂದು ಕೈಯಲ್ಲಿ ಎಲ್ಜಿಬಿಟಿಕ್ ಹೆಮ್ಮೆಯ ಭಾವುಟವನ್ನು ಹಿಡಿದುಕೊಂಡಿದ್ದಾರೆ. ಇದು ಸಲಿಂಗಕಾಮ ಮತ್ತು ಎಲ್ಜಿಬಿಟಿಕ್ ಸಮುದಾಯದ ವಿಷಯಕ್ಕೆ ಬಂದಾಗ ಭಾರತವನ್ನು ಪ್ರಗತಿಪರ ನಿಲುವಿನಲ್ಲಿ ತೋರಿಸುತ್ತದೆ. ಇದು ಸೆಕ್ಷನ್ 377 (ಭಾರತೀಯ ದಂಡ ಸಂಹಿತೆಯ) ಯನ್ನು ತಾರತಮ್ಯಗೊಳಿಸಿದೆ ಮತ್ತು ನಾವು ಹೆಚ್ಚು ಹೆಮ್ಮೆಪಡುವಂತಿಲ್ಲ ಎಂದು ಅವರು ಹೇಳುತ್ತಾರೆ.

ಅವರ ಚಲನಚಿತ್ರಗಳ ಆಯ್ಕೆಯ ಕುರಿತು (ಆರ್ಟಿಕಲ್ 15) (ಶುಭ್ ಮಂಗಲ್ ಜ್ಯಾದ ಸಾವಧಾನ್)  ಸಾಮಾಜಿಕವಾಗಿ ಪ್ರಸ್ತುತವಾದ, ಒಂದು ಕೋಲಾಹಲವನ್ನು ಉಂಟುಮಾಡುವ ಅಥವಾ ಕೆಲವು ರೀತಿಯ ಚರ್ಚೆಯನ್ನು ಉಂಟುಮಾಡುವ ವಿಷಯಗಳನ್ನು ಆಯ್ಕೆ ಮಾಡಲು ನಾನು ಯಾವಾಗಲೂ ಬಯಸುತ್ತೇನೆ. ಹೌದು, ನಾನು ಸಾಮಾಜಿಕವಾಗಿ ಜಾಗೃತ ನಾಗರಿಕ. ನಾನು ಸಾಮಾಜಿಕವಾಗಿ ಸಂಬಂಧಿಸಿದ ಅನೇಕ ಸಮಸ್ಯೆಗಳ ಕುರಿತ ಬೀದಿ ನಾಟಕವನ್ನು ಮಾಡಿದ್ದೇನೆ ಮತ್ತು ನಾನು ಮಾಡುತ್ತಿರುವ ಸಿನೆಮಾ ನನ್ನ ರಂಗಭೂಮಿ ದಿನಗಳ ವಿಸ್ತರಣೆಯಾಗಿದೆ ಎನ್ನುತ್ತಾರೆ.

ಗಣರಾಜ್ಯೋತ್ಸವದ ಮಹತ್ವ ಮತ್ತು ದೇಶಪ್ರೇಮವನ್ನು ನೀವು ಹೇಗೆ ವ್ಯಾಖ್ಯಾನಿಸುತ್ತೀರಿ? ಎಂಬ ಪ್ರಶ್ನೆಗೆ
ಗಣರಾಜ್ಯೋತ್ಸವು ನಮ್ಮ ದೇಶದಲ್ಲಿ ಒಬ್ಬರಾಗಿ ನಮ್ಮ ದೇಶವು ಹೊಂದಿರು ಬಹು – ಸಾಂಸ್ಕೃತಿಕ ವಿಭಿನ್ನತೆಯನ್ನು ಸಂಭ್ರಮಿಸಬೆಕು. ನಿಜವಾದ ದೇಶಪ್ರೇಮ ಎಂದರೆ ಅಂಧಭಕ್ತಿ ಅಲ್ಲ, ನಮ್ಮ ದೇಶವನ್ನು ಸುಧಾರಿಸುವುದಾಗಿದೆ. ದೇಶಪ್ರೇಮವು ಒಂದು ಜವಾಬ್ದಾರಿಯೊಂದಿಗೆ ಬರುತ್ತದೆ, ನಿಮ್ಮ ದೇಶದ ಮೇಲಿನ ಪ್ರೀತಿಯು ನಾನು ಪುನರುಚ್ಚರಿಸಿದಂತೆ ಇದು ಕುರುಡು ಪ್ರೀತಿ ಆಗಿರಬಾರದು ಎನ್ನುತ್ತಾರೆ.

ನಮ್ಮ ದೇಶದಲ್ಲಿ ವೈವಿಧ್ಯತೆಯಲ್ಲಿ ಏಕತೆ ಇದೆ. ಇದು ನಮ್ಮ ಅತಿದೊಡ್ಡ ಶಕ್ತಿ ಮತ್ತು ನಮ್ಮ ದೊಡ್ಡ ದೌರ್ಬಲ್ಯವೂ ಆಗಿದೆ. ನಾವು ವೈವಿಧ್ಯಮಯರು ಜೊತೆಗೆ ನಾವು ಒಟ್ಟಾಗಿರಬೇಕು. ನಾನು ಆಚರಿಸುವುದು ಭಾರತವು ಸಂಸ್ಕೃತಿಯಾಗಿದೆ. ನಮ್ಮ ಕೊರತೆಯೆಂದರೆ ನಾವು ದೇಶವನ್ನು ಸ್ವಚ್ಛವಾಗಿಟ್ಟಿಲ್ಲ. ಸಣ್ಣ ಆರ್ಥಿಕತೆಯನ್ನು ಹೊಂದಿರುವ ದೇಶಗಳು ಸಹ ನಮಗಿಂತ ಸ್ವಚ್ಛವಾಗಿವೆ ಎನ್ನುತ್ತಾರೆ.

ಎಲ್ಜಿಬಿಟಿಕ್ ಸಮುದಾಯ ಮತ್ತು ವಿವಿಧ ಜಾತಿಯ ಜನರಿಗೆ ಸಾಂವಿಧಾನಿಕ ಸಿಂಧುತ್ವ ಇರಬಹುದು, ಆದರೆ ಅಂತಿಮವಾಗಿ ಸ್ವೀಕಾರಾರ್ಹತೆಯ ಜವಾಬ್ದಾರಿ ರಾಷ್ಟ್ರದ ಜನರ ಮೇಲಿದೆ ಎಂದು ನೀವು ನಂಬುತ್ತೀರಾ? ಎಂಬ ಪ್ರಶ್ನೆಗೆ ಅವರು ಈ ಸಮುದಾಯದ ಕುರಿತು ಯೂಟ್ಯೂಬ್‌ನಲ್ಲಿ ಟ್ರೈಲರ್‌ನಲ್‌ಇ ನಾವು ನೋಡಿದ ರೀತಿಯ ವೀಕ್ಷಣೆಗಳು ಮತ್ತು ಕಾಮೆಂಟ್‌ಗಳು ನಮ್ಮ ದೇಶದ ಪ್ರಗತಿಪರ ನಿಲುವನ್ನು ತೋರಿಸುತ್ತದೆ. ಇದು ಸಲಿಂಗಕಾಮವನ್ನು ಆಧರಿಸಿದ ಚಿತ್ರಕ್ಕಾಗಿ ಸಿದ್ಧವಾಗಿದೆ. ಚಿತ್ರದ ಟ್ರೈಲರ್ ಅನ್ನು ನಮ್ಮ ದೇಶ ಸ್ವೀಕರಿಸಿದೆ ಎಂದು ಅದು ತೋರಿಸುತ್ತದೆ. ಇದು 2020ರ ಸಲಿಂಗಕಾಮಿ ಪ್ರೇಮಕಥೆಯ ಮುಖ್ಯವಾಹಿನಿಯ ಅತಿ ದೊಡ್ಡ ಕಮರ್ಷಿಯಲ್‌ ಹಿಂದಿ ಸಿನೆಮಾವಾಗಿದೆ ಎಂದಿದ್ದಾರೆ.

ನಮ್ಮ ಚಲನಚಿತ್ರೋದ್ಯಮದ ಸಾಮಾಜಿಕ ಒಳಗೊಳ್ಳುವಿಕೆ ಸಾಕಷ್ಟಿದೆಯೇ? ಎಂಬ ಪ್ರಶ್ನೆಗೆ ಉದ್ಯಮದಲ್ಲಿ ನಾವು ಮುಕ್ತತೆಯಿಂದ ಇದ್ದೇವೆ. ನೀವು ಯಾವ ಜಾತಿ, ಬಣ್ಣ, ಧರ್ಮಕ್ಕೆ ಸೇರಿದವರು ಅಥವಾ ನಿಮ್ಮ ಲೈಂಗಿಕತೆ ಏನೆಂಬುದು ನಮಗೆ ಮುಖ್ಯವಲ್ಲ. ನಿಮ್ಮ ಪ್ರತಿಭೆಯ ಬಗ್ಗೆ ಮಾತ್ರ ನಾವು ಕಾಳಜಿ ವಹಿಸುತ್ತೇವೆ. ನೀವು ಸಾಕಷ್ಟು ಒಳ್ಳೆಯವರಾಗಿದ್ದರೆ, ನೀವು ಅಲ್ಲಿಗೆ ಹೋಗುತ್ತೀರಿ ಮತ್ತು ನಿಮಗಾಗಿ ಒಳ್ಳೆಯದನ್ನು ಮಾಡುತ್ತೀರಿ ಎಂದು ಅವರು ಹೇಳಿದ್ದಾರೆ.

ಕೃಪೆ: ಹಿಂದೂಸ್ತಾನ್‌ ಟೈಮ್ಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...