Homeಅಂಕಣಗಳುದಮನಿತರಿಗೆ ಶಿಕ್ಷಣಕ್ರಮ ಹೇಗಿರಬೇಕು?: ಪಾಲೊ ಫ್ರೇರಿಯ 'ಪೆಡಗಾಗಿ ಆಫ್ ದಿ ಅಪ್ರೆಸ್ಡ್'

ದಮನಿತರಿಗೆ ಶಿಕ್ಷಣಕ್ರಮ ಹೇಗಿರಬೇಕು?: ಪಾಲೊ ಫ್ರೇರಿಯ ‘ಪೆಡಗಾಗಿ ಆಫ್ ದಿ ಅಪ್ರೆಸ್ಡ್’

ಶಿಕ್ಷಣದ ಮೂಲಕವೇ ವ್ಯಕ್ತಿಯು ತಾರ್ಕಿಕವಾಗಿ, ಬೌದ್ಧಿಕವಾಗಿ ತನ್ನ ಬಿಡುಗಡೆಯ ದಾರಿಯನ್ನು ತುಳಿಯಬೇಕಾಗಿರುವ ಅಗತ್ಯತೆಯನ್ನು ಫ್ರೇರಿ ಈ ಪುಸ್ತಕದಲ್ಲಿ ಒತ್ತಿ ಹೇಳುತ್ತಾರೆ.

- Advertisement -
- Advertisement -

ಯಾವ ಶಿಕ್ಷಣ ವ್ಯವಸ್ಥೆಯು ವ್ಯಕ್ತಿಗಳನ್ನು ಪೋಷಿಸುವ ಬದಲು ಶೋಷಿಸುತ್ತದೆಯೋ, ಪ್ರೇರೇಪಿಸುವ ಬದಲು ಪಳಗಿಸುತ್ತದೆಯೋ, ಸಶಕ್ತಗೊಳಿಸುವ ಬದಲು ದುರ್ಬಲಗೊಳಿಸುತ್ತದೆಯೋ ಆಗ ಯಾವುದೋ ಒಂದು ವರ್ಗದ ಹಿತಾಸಕ್ತಿ ಮಾತ್ರ ಸಮಾಜದಲ್ಲಿ ಶಿಕ್ಷಣದ ಮೇಲೆ ತನ್ನ ಅಧಿಪತ್ಯವನ್ನು ಸಾಧಿಸುತ್ತಿದೆ ಎಂದು ತಿಳಿಯಬೇಕು.

ಕಾರ್ಲ್ ಮಾರ್ಕ್ಸ್ ಒಂದೆಡೆ ದಾಖಲಿಸುವಂತೆ ‘ಆಳುವ ವರ್ಗದ ವಿಚಾರಗಳು ಆಳುವ ವಿಚಾರಗಳ ಸಮಯವನ್ನೇ ಸದಾ ಜೀವಂತವಾಗಿರಿಸಲು ಯತ್ನಿಸುತ್ತದೆ. ಅಂದರೆ, ಸಮಾಜವನ್ನು ಆಳುವ ಶಕ್ತಿಯಾಗಿರುವಂತ ವರ್ಗವು ತನ್ನದೇ ಬೌದ್ಧಿಕತೆಯನ್ನು ಜ್ಞಾನವನ್ನಾಗಿ ಮುಂದಿಡುತ್ತದೆ’ ಎನ್ನುತ್ತಾರೆ.

ಆಳುವ ವ್ಯವಸ್ಥೆಯು ತನಗೆ ಅನುಕೂಲಕರವಾದ ವಿಚಾರಗಳನ್ನೇ ಶಿಕ್ಷಣದ ಮುಖವಾಡದಲ್ಲಿ ಶಾಲೆಗಳಲ್ಲಿ ತರಬೇತಿ ನೀಡುವುದು. ಶಾಲೆಯಲ್ಲಿ ಕಲಿಕೆ ಎಂಬುದು ರಾಜಕೀಯ ವ್ಯವಸ್ಥೆಯ ಉದ್ದೇಶಪೂರ್ವಕವಾದ ಸಾಮಾಜಿಕ ತರಬೇತಿಯಾಗಿರುತ್ತದೆ. ರಾಜಕೀಯ ವ್ಯವಸ್ಥೆಯ ಸೂತ್ರವನ್ನು ಹಿಡಿದಿರುವ ವರ್ಗವು ತನಗೆ ಅನುಕೂಲಕರವಾದಂತಹ ಸಾಂಸ್ಕೃತಿಕ ಮತ್ತು ಸಾಮಾಜಿಕ ಉತ್ಪನ್ನಗಳನ್ನು ತಯಾರಿಸುವಂತಹ ಕಾರ್ಖಾನೆ ಈ ಶಾಲೆಗಳಾಗುತ್ತವೆ. ಸಂಕ್ಷಿಪ್ತವಾಗಿ ಹೇಳುವುದಾದರೆ, ವ್ಯಕ್ತಿಗಳಿಗೆ ಶಿಕ್ಷಣ ನೀಡುವ ಮೂಲಕ ಅವರ ಮನಸ್ಸು ಮತ್ತು ವರ್ತನೆಗಳನ್ನು ಪಳಗಿಸುತ್ತಾ ಇಡೀ ಸಮಾಜವನ್ನು ತನ್ನ ಹತೋಟಿಯಲ್ಲಿಟ್ಟುಕೊಳ್ಳುವುದು. ಹೀಗೆ ವ್ಯಕ್ತಿಗಳ ಮೂಲಕ ಇಡೀ ಸಮಾಜವನ್ನು ಕೊಲ್ಲುವ ಯಂತ್ರವಾಗುವ ಈ ಶಿಕ್ಷಣವ್ಯವಸ್ಥೆಯು ಸಮಸಮಾಜದ ವಿರುದ್ಧವಾಗಿ ಪಿತೂರಿಯನ್ನು ಹೂಡುತ್ತದೆ.

ಫ್ರೇರಿ ಇಂತಹ ಪಿತೂರಿಯನ್ನು ಗಮನದಲ್ಲಿಟ್ಟುಕೊಂಡು Pedagogy of the Oppressed ಕೃತಿ ರಚನೆ ಮಾಡುತ್ತಾರೆ. ಅದರಲ್ಲಿ ಮುಕ್ತವಾದ ಮತ್ತು ಪ್ರಾಮಾಣಿಕವಾದ ಸಂವಾದ ನಡೆಸಲು ಸಾಧ್ಯತೆಯ ಶಿಕ್ಷಣವನ್ನು ಬಯಸುತ್ತಾರೆ. ಒತ್ತಡಕ್ಕೊಳಗಾಗಿ ದಮನಿತರಾಗುವ ಬದಲು ವ್ಯಕ್ತಿ, ಸಮುದಾಯಗಳು ಮತ್ತು ಸಮಾಜವು ಸ್ವಾತಂತ್ರ್ಯವನ್ನು ಪಡೆಯುವ ಗುರಿಯನ್ನು ಈ ಪರ್ಯಾಯ ಬೋಧನಾಕ್ರಮ ಅಥವಾ ಶಿಕ್ಷಣ ವ್ಯವಸ್ಥೆಯಲ್ಲಿ ಮುಂದಿಡುತ್ತಾರೆ.

ಕೃತಿಯು ಬೌದ್ಧಿಕವಾಗಿ ಕ್ರಾಂತಿಕಾರಕ ವಿಷಯಗಳನ್ನು ಒಳಗೊಂಡಿದೆ ಎನ್ನುವುದಕ್ಕಿಂತ, 1960ರಲ್ಲಿ ದಕ್ಷಿಣ ಅಮೆರಿಕೆಯ ವಯಸ್ಕ ರೈತರಿಗೆ ಫ್ರೇರಿ ತಾವೇ ಪಾಠ ಮಾಡುವ ಅನುಭವದಲ್ಲಿ ಕಂಡುಕೊಂಡ ವಿಷಯಗಳಿವು. ಸಮಸ್ಯೆ ಮತ್ತು ಪರಿಹಾರಗಳನ್ನು ಕೃತಿಯಲ್ಲಿ ತರ್ಕಿಸುತ್ತಾರೆ.

ಕಾರ್ಲ್ ಮಾರ್ಕ್ಸ್ ಅವರ ಸಮಾಜವಾದ ಮತ್ತು ಬೈಬಲ್ಲಿನಲ್ಲಿರುವ ಬಿಡುಗಡೆಯ ಪ್ರಧಾನವಾದ ತಾತ್ವಿಕ ಅಂಶಗಳು ಹದವಾಗಿ ಬೆರೆಯುತ್ತಾ ತನ್ನ ವಿಚಾರಗಳನ್ನು ಸಂವಾದಿಸುತ್ತದೆ.

ಜಗತ್ತಿನ ಯಾವುದೇ ಮೂಲೆಯಲ್ಲಿ ದಮನಿತರು ಅವರ ದೇಶ, ಧರ್ಮ, ಸಂಸ್ಕೃತಿಗಳನ್ನು ಮೀರಿ ಬರಿಯ ಶೋಷಿತ ಜೀವಿಗಳಷ್ಟೇ ಆಗಿರುತ್ತಾರೆ. ಅವರನ್ನು ಆ ಭೌಗೋಳಿಕ ಪ್ರದೇಶದಲ್ಲಿ ದಮನಿಸಲು ಜನಾಂಗವನ್ನೋ, ವರ್ಣವನ್ನೋ, ವರ್ಗವನ್ನೋ, ಧರ್ಮವನ್ನೋ, ಸಂಸ್ಕೃತಿಯನ್ನೋ, ಜಾತಿಯನ್ನೋ ಕಾರಣವಾಗಿಸಿಕೊಳ್ಳಬಹುದು. ಆದರೆ, ಪರಿಣಾಮ ಮಾತ್ರ ಶೋಷಿತರ ನೋವು, ಸ್ವಾತಂತ್ರ್ಯಹರಣ, ಅಸಮಾನತೆಯ ಕಾರಣದ ಸಂಘರ್ಷ. ಹಾಗಾಗಿ ಯಾವುದೇ ದೇಶದಲ್ಲಿ ನಡೆಯುವ ದಮನಿತರ ಪರವಾದ ಹೋರಾಟಗಳು, ಸಿದ್ಧಾಂತಗಳು, ಪ್ರೇರಣೆಗಳು ಮತ್ತಿನ್ನಾವುದೇ ಜಗತ್ತಿನ ಮೂಲೆಗೆ ಅನ್ವಯವಾಗಬಹುದು. ಕಮ್ಯುನಿಸ್ಟರ ಸಿದ್ಧಾಂತಗಳು, ಫ್ರೆಂಚರ ಕ್ರಾಂತಿ, ಅಮೆರಿಕೆಯ ವರ್ಣಭೇದ ನೀತಿಯ ವಿರುದ್ಧದ ಹೋರಾಟ ನಮ್ಮ ಭಾರತಕ್ಕೆ ಹೊಂದುವುದಿಲ್ಲ ಎನ್ನಲಾಗದು. ಯಾವುದೇ ಜೀವಪರವಾಗಿರುವ ಮತ್ತು ಸಮಾಜಮುಖಿಯಾಗಿರುವ ಹೋರಾಟಗಳು ಮತ್ತು ಸಿದ್ಧಾಂತಗಳು ಪ್ರೇರಣೆಗಳನ್ನು ನೀಡಲು ಸಾಧ್ಯ. ಪರಿಕರಗಳು, ಸಂಗತಿಗಳು ಮತ್ತು ಸನ್ನಿವೇಶಗಳಷ್ಟೇ ಬೇರೆ ಇರುತ್ತವೆ. ಆದರೆ ಆಶಯ ಜೀವಪರವಾದ ಮತ್ತು ಸಮಸಮಾಜಕ್ಕೆ ಮಿಡಿಯುವಂತದ್ದೇ ಆಗಿರುತ್ತದೆ.

ಫ್ರೇರಿ ಬಹಳ ನಾಜೂಕಾಗಿ ವಿಜ್ಞಾನದ ಸಂಸ್ಕೃತಿ ಮತ್ತು ಬಿಡುಗಡೆಯ ಭೀತಿಯನ್ನು ಮುನ್ನೆಲೆಗೆ ತರುತ್ತಾ ದಮನಿತರು ಎಂದರೆ ಯಾರು? ಅವರಿಗೆ ತಾವು ದಮನಿತರು ಎಂದು ಏಕೆ ತಿಳಿಯುವುದಿಲ್ಲ ಅಥವಾ ತಿಳಿದರೂ ‘ಇದೇ ನಮ್ಮ ಹಣೆಬರಹ’ ಎಂಬಂತೆ ಯಥಾಸ್ಥಿತಿಯನ್ನು ಒಪ್ಪಿಕೊಂಡು ಏಕೆ ಮೂಲೆಗೆ ಸೇರುತ್ತಾರೆ ಎಂಬುದನ್ನು ವಿವರಿಸುತ್ತಾರೆ. ತಾರ್ಕಿಕ ಸಾಮರ್ಥ್ಯ ಮತ್ತು ಸಂವಾದಶೀಲ ಶಿಕ್ಷಣವು ‘ಮುಕ್ತತೆಯನ್ನು ತರಬೇತುಗೊಳಿಸುವ’ ಸಾಧನವಾಗಿದೆ ಎಂದು ಬಲವಾಗಿ ಸಮರ್ಥಿಸುತ್ತಾರೆ. ತಾರ್ಕಿಕ ಸಾಮರ್ಥ್ಯದಿಂದ ಶೂನ್ಯವಾಗಿರುವ ಶಿಕ್ಷಣವನ್ನು ಪಡೆಯುವುದರಿಂದ ಬರಿಯ ಧಾರ್ಮಿಕ ಮೌಢ್ಯವನ್ನಷ್ಟೇ ಅಲ್ಲದೇ ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ವಿಷಯಗಳಲ್ಲಿಯೂ ವ್ಯಕ್ತಿಗಳು ಮತ್ತು ಸಮುದಾಯಗಳು ಮೂಢರಾಗುತ್ತಾರೆ. ಹೇರಿದ್ದನ್ನು ಹೊರುತ್ತಾರೆ. ಹಾಗಾಗಿ ಜನರಲ್ಲಿ ಜಾಗೃತಿಯನ್ನು ಉಂಟುಮಾಡುವುದು ಚಿಂತಕರ ಕೆಲಸ, ಬುದ್ಧಿಜೀವಿಗಳ ಜವಾಬ್ದಾರಿ.

ಬುದ್ಧಿಜೀವಿ ಎಂದರೆ, ಒಂದು ವಿಷಯವನ್ನು ಏಕಪ್ರಕಾರವಾಗಿ ಪ್ರಸ್ತುತಪಡಿಸುವ ಅಥವಾ ಸಾಂಪ್ರದಾಯಿಕ ಮಂಡನೆಯ ಆಯಾಮಗಳ ಹೊರತಾಗಿ ಇತರ ಆಯಾಮಗಳಿಂದ ತಾರ್ಕಿಕವಾಗಿ ಯೋಚಿಸಬಲ್ಲವನು. ಹೊರಿಸಿದ್ದನ್ನು ಹೊತ್ತು ಸಾಗುವ ಬದಲಿಗೆ ಕಾರಣ, ಪರಿಣಾಮ, ಇತಿಹಾಸ ಮತ್ತು ದೂರದೃಷ್ಟಿಗಳೆಲ್ಲದರ ಮೂಸೆಯಲ್ಲಿ ಸಂಗತಿಯನ್ನು ಬೇಯಿಸುವವನು. ಬುದ್ಧಿಜೀವಿಯ ಗುರುತರವಾದ ಈ ಜವಾಬ್ದಾರಿಯನ್ನು ಅವನು ನಿಭಾಯಿಸಲು ಯಥಾಸ್ಥಿತಿವಾದಿಗಳು ಮತ್ತು ಸಂಪ್ರದಾಯಸ್ಥರು ಬಿಡುವುದಿಲ್ಲ. ಏಕೆಂದರೆ ಅವರ ವರ್ಗಾಸಕ್ತಿ, ವರ್ಣಾಸಕ್ತಿ, ಜನಾಂಗೀಯಾಸಕ್ತಿಗಳ ಪಿತೂರಿಗಳು ಬಯಲಾಗುತ್ತವೆ. ಬುದ್ಧಿಜೀವಿಗಳನ್ನು ಅವಹೇಳನ ಮಾಡುವ ಮೂಲಕ ವಿಷ ಕಾರುತ್ತಾರೆಯೇ ಹೊರತು ತಾರ್ಕಿಕವಾಗಿ ವಾದಿಸಲು ಅವರಿಗೆ ಸಾಧ್ಯವಾಗುವುದಿಲ್ಲ. ತಾರ್ಕಿಕವಾಗಿ ಎದುರಿಸಲಾಗದಾಗ ಸೈದ್ಧಾಂತಿಕವಾಗಿ ಸೋಲುತ್ತೇವೆಂಬ ಭಯವೇ ಅವರನ್ನು ಕ್ರೋಧಾವಿಷ್ಟರನ್ನಾಗಿ ಮಾಡುವುದು.

ಹೀಗಾಗಿ ಶಿಕ್ಷಣದ ಮೂಲಕವೇ ವ್ಯಕ್ತಿಯು ತಾರ್ಕಿಕವಾಗಿ, ಬೌದ್ಧಿಕವಾಗಿ ತನ್ನ ಬಿಡುಗಡೆಯ ದಾರಿಯನ್ನು ತುಳಿಯಬೇಕಾಗಿರುವ ಅಗತ್ಯತೆಯನ್ನು ಫ್ರೇರಿ ಒತ್ತಿ ಹೇಳುತ್ತಾರೆ.

ಇದು ಆದಾಗ ಮಾಡೋಣ ಎಂಬಂತಹ ವಿಷಯವಲ್ಲ. ಅತಿ ತುರ್ತಾದ ಅಗತ್ಯವೆಂದು ಫ್ರೇರಿ ಒತ್ತಾಯಿಸುತ್ತಾರೆ. ಏಕೆಂದರೆ, ಶಿಕ್ಷಣ ವ್ಯವಸ್ಥೆಯು ತನ್ನ ಪಠ್ಯಕ್ರಮದಲ್ಲಿ, ಬೋಧನಾ ಕ್ರಮದಲ್ಲಿ ಮಾಡುವಂತಹ ಹಡಾವಿಡಿಗಳನ್ನು ಈಗ ಅದರಿಂದ ಶಿಕ್ಷಣ ಪಡೆದು ಹೋದ ವಿದ್ಯಾರ್ಥಿಗಳಲ್ಲಿ ಸರಿಪಡಿಸಲು ಸಾಧ್ಯವಾಗುವುದಿಲ್ಲ. ಅವರೆಲ್ಲಾ ಸಮಾಜದಲ್ಲಿ ವಯಸ್ಕ ಪ್ರಜೆಗಳಾಗಿ ಬಹುಬೇಗ ರೂಪುಗೊಳ್ಳುತ್ತಾರೆ.

ಹಾಗಾದರೆ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಿಸಬಹುದಾದ ತುರ್ತಿನ ಕ್ರಮಗಳೇನು ಎಂಬುದನ್ನೂ ಅವರು ಚರ್ಚಿಸುತ್ತಾರೆ. ಏಕಮುಖಿ ಶಿಕ್ಷಣವನ್ನು ರೂಢಿಸಿಕೊಂಡಿರುವ ಶಿಕ್ಷಕ ತನ್ನ ಬೋಧನಾ ಕ್ರಮದಲ್ಲಿ ಮಾಡಿಕೊಳ್ಳಬೇಕಾದ ಮಾರ್ಪಾಡುಗಳೇನು ಎಂಬುದನ್ನೂ ಕೂಡಾ ಫ್ರೇರಿ ಸೂಚಿಸುತ್ತಾರೆ.

ಮನುಷ್ಯನ ಆರ್ಥಿಕ ಸಬಲೀಕರಣಕ್ಕೆ ತಡೆಯಾಗಿರುವುದೇನು? ಅದನ್ನು ದಾಟಿ ಮಾಡಬೇಕಾಗಿರುವುದೇನು ಎಂದು ವಿವರವಾಗಿ ನೋಡಬೇಕೆಂದರೆ ದಮನಿತರಿಗಾಗಿ ಶಿಕ್ಷಣಕ್ರಮವನ್ನು ಹೇಗೆ ರೂಪಿಸಿಕೊಳ್ಳಬೇಕೆಂಬುದನ್ನು ಓದಬೇಕು. ಇದರಿಂದ ಈಗ ಹೊಸ ಶಿಕ್ಷಣನೀತಿಯನ್ನು ಹೊಂದಿರುವ ಭಾರತದ ಸದ್ಯದ ಪರಿಸ್ಥಿತಿಗೆ ಸಿಗುವುದು ನಕಾಶೆಯಲ್ಲ. ಆದರೆ ಪ್ರೇರಣೆ. ಮತ್ತೊಂದು ಆಯಾಮದಿಂದ ವಿಚಾರ ಮಾಡಲು ಪ್ರಚೋದನೆ.


ಇದನ್ನೂ ಓದಿ: ದೇವಿಪ್ರಸಾದ್ ಚಟ್ಟೋಪಾಧ್ಯಾಯರ ’ಲೋಕಾಯತ’ವನ್ನು ಏಕೆ ಓದಬೇಕೆಂದರೆ.. : ಯೋಗೇಶ್ ಮಾಸ್ಟರ್‌
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...