Homeಅಂಕಣಗಳುದಮನಿತರಿಗೆ ಶಿಕ್ಷಣಕ್ರಮ ಹೇಗಿರಬೇಕು?: ಪಾಲೊ ಫ್ರೇರಿಯ 'ಪೆಡಗಾಗಿ ಆಫ್ ದಿ ಅಪ್ರೆಸ್ಡ್'

ದಮನಿತರಿಗೆ ಶಿಕ್ಷಣಕ್ರಮ ಹೇಗಿರಬೇಕು?: ಪಾಲೊ ಫ್ರೇರಿಯ ‘ಪೆಡಗಾಗಿ ಆಫ್ ದಿ ಅಪ್ರೆಸ್ಡ್’

ಶಿಕ್ಷಣದ ಮೂಲಕವೇ ವ್ಯಕ್ತಿಯು ತಾರ್ಕಿಕವಾಗಿ, ಬೌದ್ಧಿಕವಾಗಿ ತನ್ನ ಬಿಡುಗಡೆಯ ದಾರಿಯನ್ನು ತುಳಿಯಬೇಕಾಗಿರುವ ಅಗತ್ಯತೆಯನ್ನು ಫ್ರೇರಿ ಈ ಪುಸ್ತಕದಲ್ಲಿ ಒತ್ತಿ ಹೇಳುತ್ತಾರೆ.

- Advertisement -
- Advertisement -

ಯಾವ ಶಿಕ್ಷಣ ವ್ಯವಸ್ಥೆಯು ವ್ಯಕ್ತಿಗಳನ್ನು ಪೋಷಿಸುವ ಬದಲು ಶೋಷಿಸುತ್ತದೆಯೋ, ಪ್ರೇರೇಪಿಸುವ ಬದಲು ಪಳಗಿಸುತ್ತದೆಯೋ, ಸಶಕ್ತಗೊಳಿಸುವ ಬದಲು ದುರ್ಬಲಗೊಳಿಸುತ್ತದೆಯೋ ಆಗ ಯಾವುದೋ ಒಂದು ವರ್ಗದ ಹಿತಾಸಕ್ತಿ ಮಾತ್ರ ಸಮಾಜದಲ್ಲಿ ಶಿಕ್ಷಣದ ಮೇಲೆ ತನ್ನ ಅಧಿಪತ್ಯವನ್ನು ಸಾಧಿಸುತ್ತಿದೆ ಎಂದು ತಿಳಿಯಬೇಕು.

ಕಾರ್ಲ್ ಮಾರ್ಕ್ಸ್ ಒಂದೆಡೆ ದಾಖಲಿಸುವಂತೆ ‘ಆಳುವ ವರ್ಗದ ವಿಚಾರಗಳು ಆಳುವ ವಿಚಾರಗಳ ಸಮಯವನ್ನೇ ಸದಾ ಜೀವಂತವಾಗಿರಿಸಲು ಯತ್ನಿಸುತ್ತದೆ. ಅಂದರೆ, ಸಮಾಜವನ್ನು ಆಳುವ ಶಕ್ತಿಯಾಗಿರುವಂತ ವರ್ಗವು ತನ್ನದೇ ಬೌದ್ಧಿಕತೆಯನ್ನು ಜ್ಞಾನವನ್ನಾಗಿ ಮುಂದಿಡುತ್ತದೆ’ ಎನ್ನುತ್ತಾರೆ.

ಆಳುವ ವ್ಯವಸ್ಥೆಯು ತನಗೆ ಅನುಕೂಲಕರವಾದ ವಿಚಾರಗಳನ್ನೇ ಶಿಕ್ಷಣದ ಮುಖವಾಡದಲ್ಲಿ ಶಾಲೆಗಳಲ್ಲಿ ತರಬೇತಿ ನೀಡುವುದು. ಶಾಲೆಯಲ್ಲಿ ಕಲಿಕೆ ಎಂಬುದು ರಾಜಕೀಯ ವ್ಯವಸ್ಥೆಯ ಉದ್ದೇಶಪೂರ್ವಕವಾದ ಸಾಮಾಜಿಕ ತರಬೇತಿಯಾಗಿರುತ್ತದೆ. ರಾಜಕೀಯ ವ್ಯವಸ್ಥೆಯ ಸೂತ್ರವನ್ನು ಹಿಡಿದಿರುವ ವರ್ಗವು ತನಗೆ ಅನುಕೂಲಕರವಾದಂತಹ ಸಾಂಸ್ಕೃತಿಕ ಮತ್ತು ಸಾಮಾಜಿಕ ಉತ್ಪನ್ನಗಳನ್ನು ತಯಾರಿಸುವಂತಹ ಕಾರ್ಖಾನೆ ಈ ಶಾಲೆಗಳಾಗುತ್ತವೆ. ಸಂಕ್ಷಿಪ್ತವಾಗಿ ಹೇಳುವುದಾದರೆ, ವ್ಯಕ್ತಿಗಳಿಗೆ ಶಿಕ್ಷಣ ನೀಡುವ ಮೂಲಕ ಅವರ ಮನಸ್ಸು ಮತ್ತು ವರ್ತನೆಗಳನ್ನು ಪಳಗಿಸುತ್ತಾ ಇಡೀ ಸಮಾಜವನ್ನು ತನ್ನ ಹತೋಟಿಯಲ್ಲಿಟ್ಟುಕೊಳ್ಳುವುದು. ಹೀಗೆ ವ್ಯಕ್ತಿಗಳ ಮೂಲಕ ಇಡೀ ಸಮಾಜವನ್ನು ಕೊಲ್ಲುವ ಯಂತ್ರವಾಗುವ ಈ ಶಿಕ್ಷಣವ್ಯವಸ್ಥೆಯು ಸಮಸಮಾಜದ ವಿರುದ್ಧವಾಗಿ ಪಿತೂರಿಯನ್ನು ಹೂಡುತ್ತದೆ.

ಫ್ರೇರಿ ಇಂತಹ ಪಿತೂರಿಯನ್ನು ಗಮನದಲ್ಲಿಟ್ಟುಕೊಂಡು Pedagogy of the Oppressed ಕೃತಿ ರಚನೆ ಮಾಡುತ್ತಾರೆ. ಅದರಲ್ಲಿ ಮುಕ್ತವಾದ ಮತ್ತು ಪ್ರಾಮಾಣಿಕವಾದ ಸಂವಾದ ನಡೆಸಲು ಸಾಧ್ಯತೆಯ ಶಿಕ್ಷಣವನ್ನು ಬಯಸುತ್ತಾರೆ. ಒತ್ತಡಕ್ಕೊಳಗಾಗಿ ದಮನಿತರಾಗುವ ಬದಲು ವ್ಯಕ್ತಿ, ಸಮುದಾಯಗಳು ಮತ್ತು ಸಮಾಜವು ಸ್ವಾತಂತ್ರ್ಯವನ್ನು ಪಡೆಯುವ ಗುರಿಯನ್ನು ಈ ಪರ್ಯಾಯ ಬೋಧನಾಕ್ರಮ ಅಥವಾ ಶಿಕ್ಷಣ ವ್ಯವಸ್ಥೆಯಲ್ಲಿ ಮುಂದಿಡುತ್ತಾರೆ.

ಕೃತಿಯು ಬೌದ್ಧಿಕವಾಗಿ ಕ್ರಾಂತಿಕಾರಕ ವಿಷಯಗಳನ್ನು ಒಳಗೊಂಡಿದೆ ಎನ್ನುವುದಕ್ಕಿಂತ, 1960ರಲ್ಲಿ ದಕ್ಷಿಣ ಅಮೆರಿಕೆಯ ವಯಸ್ಕ ರೈತರಿಗೆ ಫ್ರೇರಿ ತಾವೇ ಪಾಠ ಮಾಡುವ ಅನುಭವದಲ್ಲಿ ಕಂಡುಕೊಂಡ ವಿಷಯಗಳಿವು. ಸಮಸ್ಯೆ ಮತ್ತು ಪರಿಹಾರಗಳನ್ನು ಕೃತಿಯಲ್ಲಿ ತರ್ಕಿಸುತ್ತಾರೆ.

ಕಾರ್ಲ್ ಮಾರ್ಕ್ಸ್ ಅವರ ಸಮಾಜವಾದ ಮತ್ತು ಬೈಬಲ್ಲಿನಲ್ಲಿರುವ ಬಿಡುಗಡೆಯ ಪ್ರಧಾನವಾದ ತಾತ್ವಿಕ ಅಂಶಗಳು ಹದವಾಗಿ ಬೆರೆಯುತ್ತಾ ತನ್ನ ವಿಚಾರಗಳನ್ನು ಸಂವಾದಿಸುತ್ತದೆ.

ಜಗತ್ತಿನ ಯಾವುದೇ ಮೂಲೆಯಲ್ಲಿ ದಮನಿತರು ಅವರ ದೇಶ, ಧರ್ಮ, ಸಂಸ್ಕೃತಿಗಳನ್ನು ಮೀರಿ ಬರಿಯ ಶೋಷಿತ ಜೀವಿಗಳಷ್ಟೇ ಆಗಿರುತ್ತಾರೆ. ಅವರನ್ನು ಆ ಭೌಗೋಳಿಕ ಪ್ರದೇಶದಲ್ಲಿ ದಮನಿಸಲು ಜನಾಂಗವನ್ನೋ, ವರ್ಣವನ್ನೋ, ವರ್ಗವನ್ನೋ, ಧರ್ಮವನ್ನೋ, ಸಂಸ್ಕೃತಿಯನ್ನೋ, ಜಾತಿಯನ್ನೋ ಕಾರಣವಾಗಿಸಿಕೊಳ್ಳಬಹುದು. ಆದರೆ, ಪರಿಣಾಮ ಮಾತ್ರ ಶೋಷಿತರ ನೋವು, ಸ್ವಾತಂತ್ರ್ಯಹರಣ, ಅಸಮಾನತೆಯ ಕಾರಣದ ಸಂಘರ್ಷ. ಹಾಗಾಗಿ ಯಾವುದೇ ದೇಶದಲ್ಲಿ ನಡೆಯುವ ದಮನಿತರ ಪರವಾದ ಹೋರಾಟಗಳು, ಸಿದ್ಧಾಂತಗಳು, ಪ್ರೇರಣೆಗಳು ಮತ್ತಿನ್ನಾವುದೇ ಜಗತ್ತಿನ ಮೂಲೆಗೆ ಅನ್ವಯವಾಗಬಹುದು. ಕಮ್ಯುನಿಸ್ಟರ ಸಿದ್ಧಾಂತಗಳು, ಫ್ರೆಂಚರ ಕ್ರಾಂತಿ, ಅಮೆರಿಕೆಯ ವರ್ಣಭೇದ ನೀತಿಯ ವಿರುದ್ಧದ ಹೋರಾಟ ನಮ್ಮ ಭಾರತಕ್ಕೆ ಹೊಂದುವುದಿಲ್ಲ ಎನ್ನಲಾಗದು. ಯಾವುದೇ ಜೀವಪರವಾಗಿರುವ ಮತ್ತು ಸಮಾಜಮುಖಿಯಾಗಿರುವ ಹೋರಾಟಗಳು ಮತ್ತು ಸಿದ್ಧಾಂತಗಳು ಪ್ರೇರಣೆಗಳನ್ನು ನೀಡಲು ಸಾಧ್ಯ. ಪರಿಕರಗಳು, ಸಂಗತಿಗಳು ಮತ್ತು ಸನ್ನಿವೇಶಗಳಷ್ಟೇ ಬೇರೆ ಇರುತ್ತವೆ. ಆದರೆ ಆಶಯ ಜೀವಪರವಾದ ಮತ್ತು ಸಮಸಮಾಜಕ್ಕೆ ಮಿಡಿಯುವಂತದ್ದೇ ಆಗಿರುತ್ತದೆ.

ಫ್ರೇರಿ ಬಹಳ ನಾಜೂಕಾಗಿ ವಿಜ್ಞಾನದ ಸಂಸ್ಕೃತಿ ಮತ್ತು ಬಿಡುಗಡೆಯ ಭೀತಿಯನ್ನು ಮುನ್ನೆಲೆಗೆ ತರುತ್ತಾ ದಮನಿತರು ಎಂದರೆ ಯಾರು? ಅವರಿಗೆ ತಾವು ದಮನಿತರು ಎಂದು ಏಕೆ ತಿಳಿಯುವುದಿಲ್ಲ ಅಥವಾ ತಿಳಿದರೂ ‘ಇದೇ ನಮ್ಮ ಹಣೆಬರಹ’ ಎಂಬಂತೆ ಯಥಾಸ್ಥಿತಿಯನ್ನು ಒಪ್ಪಿಕೊಂಡು ಏಕೆ ಮೂಲೆಗೆ ಸೇರುತ್ತಾರೆ ಎಂಬುದನ್ನು ವಿವರಿಸುತ್ತಾರೆ. ತಾರ್ಕಿಕ ಸಾಮರ್ಥ್ಯ ಮತ್ತು ಸಂವಾದಶೀಲ ಶಿಕ್ಷಣವು ‘ಮುಕ್ತತೆಯನ್ನು ತರಬೇತುಗೊಳಿಸುವ’ ಸಾಧನವಾಗಿದೆ ಎಂದು ಬಲವಾಗಿ ಸಮರ್ಥಿಸುತ್ತಾರೆ. ತಾರ್ಕಿಕ ಸಾಮರ್ಥ್ಯದಿಂದ ಶೂನ್ಯವಾಗಿರುವ ಶಿಕ್ಷಣವನ್ನು ಪಡೆಯುವುದರಿಂದ ಬರಿಯ ಧಾರ್ಮಿಕ ಮೌಢ್ಯವನ್ನಷ್ಟೇ ಅಲ್ಲದೇ ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ವಿಷಯಗಳಲ್ಲಿಯೂ ವ್ಯಕ್ತಿಗಳು ಮತ್ತು ಸಮುದಾಯಗಳು ಮೂಢರಾಗುತ್ತಾರೆ. ಹೇರಿದ್ದನ್ನು ಹೊರುತ್ತಾರೆ. ಹಾಗಾಗಿ ಜನರಲ್ಲಿ ಜಾಗೃತಿಯನ್ನು ಉಂಟುಮಾಡುವುದು ಚಿಂತಕರ ಕೆಲಸ, ಬುದ್ಧಿಜೀವಿಗಳ ಜವಾಬ್ದಾರಿ.

ಬುದ್ಧಿಜೀವಿ ಎಂದರೆ, ಒಂದು ವಿಷಯವನ್ನು ಏಕಪ್ರಕಾರವಾಗಿ ಪ್ರಸ್ತುತಪಡಿಸುವ ಅಥವಾ ಸಾಂಪ್ರದಾಯಿಕ ಮಂಡನೆಯ ಆಯಾಮಗಳ ಹೊರತಾಗಿ ಇತರ ಆಯಾಮಗಳಿಂದ ತಾರ್ಕಿಕವಾಗಿ ಯೋಚಿಸಬಲ್ಲವನು. ಹೊರಿಸಿದ್ದನ್ನು ಹೊತ್ತು ಸಾಗುವ ಬದಲಿಗೆ ಕಾರಣ, ಪರಿಣಾಮ, ಇತಿಹಾಸ ಮತ್ತು ದೂರದೃಷ್ಟಿಗಳೆಲ್ಲದರ ಮೂಸೆಯಲ್ಲಿ ಸಂಗತಿಯನ್ನು ಬೇಯಿಸುವವನು. ಬುದ್ಧಿಜೀವಿಯ ಗುರುತರವಾದ ಈ ಜವಾಬ್ದಾರಿಯನ್ನು ಅವನು ನಿಭಾಯಿಸಲು ಯಥಾಸ್ಥಿತಿವಾದಿಗಳು ಮತ್ತು ಸಂಪ್ರದಾಯಸ್ಥರು ಬಿಡುವುದಿಲ್ಲ. ಏಕೆಂದರೆ ಅವರ ವರ್ಗಾಸಕ್ತಿ, ವರ್ಣಾಸಕ್ತಿ, ಜನಾಂಗೀಯಾಸಕ್ತಿಗಳ ಪಿತೂರಿಗಳು ಬಯಲಾಗುತ್ತವೆ. ಬುದ್ಧಿಜೀವಿಗಳನ್ನು ಅವಹೇಳನ ಮಾಡುವ ಮೂಲಕ ವಿಷ ಕಾರುತ್ತಾರೆಯೇ ಹೊರತು ತಾರ್ಕಿಕವಾಗಿ ವಾದಿಸಲು ಅವರಿಗೆ ಸಾಧ್ಯವಾಗುವುದಿಲ್ಲ. ತಾರ್ಕಿಕವಾಗಿ ಎದುರಿಸಲಾಗದಾಗ ಸೈದ್ಧಾಂತಿಕವಾಗಿ ಸೋಲುತ್ತೇವೆಂಬ ಭಯವೇ ಅವರನ್ನು ಕ್ರೋಧಾವಿಷ್ಟರನ್ನಾಗಿ ಮಾಡುವುದು.

ಹೀಗಾಗಿ ಶಿಕ್ಷಣದ ಮೂಲಕವೇ ವ್ಯಕ್ತಿಯು ತಾರ್ಕಿಕವಾಗಿ, ಬೌದ್ಧಿಕವಾಗಿ ತನ್ನ ಬಿಡುಗಡೆಯ ದಾರಿಯನ್ನು ತುಳಿಯಬೇಕಾಗಿರುವ ಅಗತ್ಯತೆಯನ್ನು ಫ್ರೇರಿ ಒತ್ತಿ ಹೇಳುತ್ತಾರೆ.

ಇದು ಆದಾಗ ಮಾಡೋಣ ಎಂಬಂತಹ ವಿಷಯವಲ್ಲ. ಅತಿ ತುರ್ತಾದ ಅಗತ್ಯವೆಂದು ಫ್ರೇರಿ ಒತ್ತಾಯಿಸುತ್ತಾರೆ. ಏಕೆಂದರೆ, ಶಿಕ್ಷಣ ವ್ಯವಸ್ಥೆಯು ತನ್ನ ಪಠ್ಯಕ್ರಮದಲ್ಲಿ, ಬೋಧನಾ ಕ್ರಮದಲ್ಲಿ ಮಾಡುವಂತಹ ಹಡಾವಿಡಿಗಳನ್ನು ಈಗ ಅದರಿಂದ ಶಿಕ್ಷಣ ಪಡೆದು ಹೋದ ವಿದ್ಯಾರ್ಥಿಗಳಲ್ಲಿ ಸರಿಪಡಿಸಲು ಸಾಧ್ಯವಾಗುವುದಿಲ್ಲ. ಅವರೆಲ್ಲಾ ಸಮಾಜದಲ್ಲಿ ವಯಸ್ಕ ಪ್ರಜೆಗಳಾಗಿ ಬಹುಬೇಗ ರೂಪುಗೊಳ್ಳುತ್ತಾರೆ.

ಹಾಗಾದರೆ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಿಸಬಹುದಾದ ತುರ್ತಿನ ಕ್ರಮಗಳೇನು ಎಂಬುದನ್ನೂ ಅವರು ಚರ್ಚಿಸುತ್ತಾರೆ. ಏಕಮುಖಿ ಶಿಕ್ಷಣವನ್ನು ರೂಢಿಸಿಕೊಂಡಿರುವ ಶಿಕ್ಷಕ ತನ್ನ ಬೋಧನಾ ಕ್ರಮದಲ್ಲಿ ಮಾಡಿಕೊಳ್ಳಬೇಕಾದ ಮಾರ್ಪಾಡುಗಳೇನು ಎಂಬುದನ್ನೂ ಕೂಡಾ ಫ್ರೇರಿ ಸೂಚಿಸುತ್ತಾರೆ.

ಮನುಷ್ಯನ ಆರ್ಥಿಕ ಸಬಲೀಕರಣಕ್ಕೆ ತಡೆಯಾಗಿರುವುದೇನು? ಅದನ್ನು ದಾಟಿ ಮಾಡಬೇಕಾಗಿರುವುದೇನು ಎಂದು ವಿವರವಾಗಿ ನೋಡಬೇಕೆಂದರೆ ದಮನಿತರಿಗಾಗಿ ಶಿಕ್ಷಣಕ್ರಮವನ್ನು ಹೇಗೆ ರೂಪಿಸಿಕೊಳ್ಳಬೇಕೆಂಬುದನ್ನು ಓದಬೇಕು. ಇದರಿಂದ ಈಗ ಹೊಸ ಶಿಕ್ಷಣನೀತಿಯನ್ನು ಹೊಂದಿರುವ ಭಾರತದ ಸದ್ಯದ ಪರಿಸ್ಥಿತಿಗೆ ಸಿಗುವುದು ನಕಾಶೆಯಲ್ಲ. ಆದರೆ ಪ್ರೇರಣೆ. ಮತ್ತೊಂದು ಆಯಾಮದಿಂದ ವಿಚಾರ ಮಾಡಲು ಪ್ರಚೋದನೆ.


ಇದನ್ನೂ ಓದಿ: ದೇವಿಪ್ರಸಾದ್ ಚಟ್ಟೋಪಾಧ್ಯಾಯರ ’ಲೋಕಾಯತ’ವನ್ನು ಏಕೆ ಓದಬೇಕೆಂದರೆ.. : ಯೋಗೇಶ್ ಮಾಸ್ಟರ್‌
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...