Homeಕರ್ನಾಟಕಬೆಂಗಳೂರು: ಕನಿಷ್ಠ ವೇತನಕ್ಕೆ ಆಗ್ರಹಿಸಿ ಪೌರಕಾರ್ಮಿಕರ ಬೃಹತ್ ಪ್ರತಿಭಟನೆ

ಬೆಂಗಳೂರು: ಕನಿಷ್ಠ ವೇತನಕ್ಕೆ ಆಗ್ರಹಿಸಿ ಪೌರಕಾರ್ಮಿಕರ ಬೃಹತ್ ಪ್ರತಿಭಟನೆ

- Advertisement -
- Advertisement -

ಕನಿಷ್ಠ ವೇತನಕ್ಕಾಗಿ ಪೌರಕಾರ್ಮಿಕರು ಬುಧವಾರ ಬೆಂಗಳೂರಿನ ಕಾರ್ಮಿಕ ಭವನದ ಎದುರು ಬೃಹತ್‌‌ ಪ್ರತಿಭಟನೆ ನಡೆಸಿದರು. ಕಾನೂನಿಯ ಅನ್ವಯ ವೇತನ ಪರಿಷ್ಕರಣೆ ಮಾಡಬೇಕು ಎಂದು ಆಗ್ರಹಿಸಿದರು.

ಘನತ್ಯಾಜ್ಯ ನಿರ್ವಹಣೆಯಲ್ಲಿ ತೊಡಗಿರುವ ಪೌರಕಾರ್ಮಿಕರು ಮತ್ತು ಇತರ ಕಾರ್ಮಿಕರಿಗೆ ಪಾವತಿಸಬೇಕಾದ ಕನಿಷ್ಟ ವೇತನವನ್ನು ನಿಗದಿ ಮಾಡಬೇಕು. ನಗರ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಅಧಿಸೂಚನೆ ಅನ್ವಯ, ಕನಿಷ್ಠ ವೇತನ ಕಾಯ್ದೆ 1948ರ ಅನ್ವಯ ಪ್ರತಿ 5 ವರ್ಷಕ್ಕೊಮ್ಮೆ ವೇತನವನ್ನು ಪರಿಶೀಲಿಸಿ ಪರಿಷ್ಕರಿಸಬೇಕು ಎಂದು ಕಾರ್ಮಿಕರು ತಿಳಿಸಿದರು.

ಏಪ್ರಿಲ್‌ 8ರಂದು, 2021ರಲ್ಲಿ ಕನಿಷ್ಠ ವೇತನಗಳ ಪರಿಷ್ಕರಣೆಯನ್ನು ಖಚಿತಪಡಿಸಿಕೊಳ್ಳಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೋರಿ ಒತ್ತಾಯಿಸಿದ್ದೇವೆ. 05.08.2021ರಂದು ಪರಿಷ್ಕರಿಸಬೇಕಿದ್ದ ಕನಿಷ್ಠ ವೇತನವನ್ನು ಇನ್ನೂ ಪರಿಷ್ಕರಿಸಲಾಗಿಲ್ಲ ಎಂದು ಪ್ರತಿಭಟನಾಕಾರರು ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

ವೇತನ ಆಯೋಗದ ಪ್ರಕಾರ, ಆಹಾರ ಮತ್ತು ಬಟ್ಟೆಯ ಅವಶ್ಯಕತೆಗೆ ಕನಿಷ್ಠ ರೂ. 12,000, ಕಡಿಮೆಯೆಂದರೂ ಮನೆ ಬಾಡಿಗೆ ವೆಚ್ಚವೇ 4000 ರೂ. ಬೇಕಾಗುತ್ತದೆ. ಇಂಧನ, ವಿದ್ಯುತ್‌ ಮತ್ತು ಇತರ ವಿವಿಧ ವೆಚ್ಚದ ವಸ್ತುಗಳಿಗೆ ವೇತನದ ಶೇ. 20ರಷ್ಟು ನಿಗದಿಯಾಗುತ್ತದೆ. ಮಕ್ಕಳ ಶಿಕ್ಷಣ, ವೈದ್ಯಕೀಯ ಅವಶ್ಯಕತೆಗಳು, ಹಬ್ಬಗಳು/ಸಮಾರಂಭಗಳು, ಮನರಂಜನೆ, ವೃದ್ಧಾಪ್ಯ, ಮದುವೆ ಇತ್ಯಾದಿಗಳಿಗೆ ವೇತನದ ಕನಿಷ್ಠ ಶೇ.25ರಷ್ಟು ವಿನಿಯೋಗವಾಗುತ್ತದೆ ಎಂದು ತಿಳಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಎಲ್ಲ ವೆಚ್ಚಗಳನ್ನು ಒಟ್ಟುಗೂಡಿಸಿದರೆ ಕನಿಷ್ಠ 29,090 ರೂಪಾಯಿ ಮಾಸಿಕ ವೇತನವನ್ನು ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿಗಳಲ್ಲಿ ನೀಡಬೇಕಾಗುತ್ತದೆ. ಅಂದರೆ ದಿನಕ್ಕೆ 1,118 ರೂ.ಗಳನ್ನು ಪಾವತಿಸಬೇಕಾಗುತ್ತದೆ. ಇದರ ಪ್ರಕಾರ ಬಿಬಿಎಂಪಿ ಹಾಗೂ ವಿವಿಧ ನಗರ ಪಾಲಿಕೆಗಳಲ್ಲಿ ಮಾಸಿಕ ಕನಿಷ್ಠ ವೇತನ 35,000 ರೂ.ಗಳನ್ನು ನೀಡಬೇಕು. ಅಂದರೆ ದಿನಕ್ಕೆ 1,346.15 ರೂ. ಪಾವತಿಸಬೇಕು ಎಂದು ಪೌರಕಾರ್ಮಿಕರು ಆಗ್ರಹಿಸಿದರು.

ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯು ದಿನಾಂಕ 17.04.2015ರಂದು ತನ್ನ ಸಭೆಯಲ್ಲಿ ಸರ್ವಾನುಮತದಿಂದ ಕನಿಷ್ಠ ವೇತನ ಪರಿಷ್ಕರಣೆಯ ಬಾಹ್ಯ ಮಿತಿಯನ್ನು 5 ವರ್ಷದಿಂದ 3 ವರ್ಷಕ್ಕೆ ಇಳಿಸಬೇಕೆಂದು ಶಿಫಾರಸು ಮಾಡಿದೆ ಎಂಬುದನ್ನು ದಯವಿಟ್ಟು ಗಮನಿಸಬೇಕು ಎಂದು ಒತ್ತಾಯಿಸಿದರು.

ಕನಿಷ್ಠ ವೇತನವನ್ನು ನಿಗದಿಪಡಿಸಲು ಮತ್ತು ಪರಿಷ್ಕರಿಸಲು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಅಧ್ಯಯನ ಮಾಡಲು ಹೊಸ ಸಮಿತಿಯನ್ನು ರಚಿಸುವಂತೆ ಶಿಫಾರಸು ಮಾಡಲಾಗಿದೆ. ಹಾಗಾಗಿ ಈ ಶಿಫಾರಸುಗಳನ್ನು ತಕ್ಷಣವೇ ಜಾರಿಗೊಳಿಸಬೇಕು. ಮುಂದೆ ಎಲ್ಲಾ ಪರಿಶಿಷ್ಟ ಉದ್ಯೋಗಗಳಿಗೆ ಕನಿಷ್ಠ ವೇತನ ಪರಿಷ್ಕರಣೆಗಳನ್ನು ಪ್ರತಿ 3 ವರ್ಷಗಳಿಗೊಮ್ಮೆ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.


ಇದನ್ನೂ ಓದಿರಿ: ದೇಶಕ್ಕಾಗಿ ಜೈಲಿಗೆ ಹೋಗಿ ಬಂದಿದ್ದಾರೆ: ಮುಸ್ಲಿಂ ಬಾಲಕಿಯರನ್ನು ಬೆದರಿಸಿದ ಯುವಕರಿಗೆ ಬಿಜೆಪಿ ಮುಖಂಡನ ಶ್ಲಾಘನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...