Homeಕರ್ನಾಟಕಬೆಂಗಳೂರು: ಕನಿಷ್ಠ ವೇತನಕ್ಕೆ ಆಗ್ರಹಿಸಿ ಪೌರಕಾರ್ಮಿಕರ ಬೃಹತ್ ಪ್ರತಿಭಟನೆ

ಬೆಂಗಳೂರು: ಕನಿಷ್ಠ ವೇತನಕ್ಕೆ ಆಗ್ರಹಿಸಿ ಪೌರಕಾರ್ಮಿಕರ ಬೃಹತ್ ಪ್ರತಿಭಟನೆ

- Advertisement -
- Advertisement -

ಕನಿಷ್ಠ ವೇತನಕ್ಕಾಗಿ ಪೌರಕಾರ್ಮಿಕರು ಬುಧವಾರ ಬೆಂಗಳೂರಿನ ಕಾರ್ಮಿಕ ಭವನದ ಎದುರು ಬೃಹತ್‌‌ ಪ್ರತಿಭಟನೆ ನಡೆಸಿದರು. ಕಾನೂನಿಯ ಅನ್ವಯ ವೇತನ ಪರಿಷ್ಕರಣೆ ಮಾಡಬೇಕು ಎಂದು ಆಗ್ರಹಿಸಿದರು.

ಘನತ್ಯಾಜ್ಯ ನಿರ್ವಹಣೆಯಲ್ಲಿ ತೊಡಗಿರುವ ಪೌರಕಾರ್ಮಿಕರು ಮತ್ತು ಇತರ ಕಾರ್ಮಿಕರಿಗೆ ಪಾವತಿಸಬೇಕಾದ ಕನಿಷ್ಟ ವೇತನವನ್ನು ನಿಗದಿ ಮಾಡಬೇಕು. ನಗರ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಅಧಿಸೂಚನೆ ಅನ್ವಯ, ಕನಿಷ್ಠ ವೇತನ ಕಾಯ್ದೆ 1948ರ ಅನ್ವಯ ಪ್ರತಿ 5 ವರ್ಷಕ್ಕೊಮ್ಮೆ ವೇತನವನ್ನು ಪರಿಶೀಲಿಸಿ ಪರಿಷ್ಕರಿಸಬೇಕು ಎಂದು ಕಾರ್ಮಿಕರು ತಿಳಿಸಿದರು.

ಏಪ್ರಿಲ್‌ 8ರಂದು, 2021ರಲ್ಲಿ ಕನಿಷ್ಠ ವೇತನಗಳ ಪರಿಷ್ಕರಣೆಯನ್ನು ಖಚಿತಪಡಿಸಿಕೊಳ್ಳಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೋರಿ ಒತ್ತಾಯಿಸಿದ್ದೇವೆ. 05.08.2021ರಂದು ಪರಿಷ್ಕರಿಸಬೇಕಿದ್ದ ಕನಿಷ್ಠ ವೇತನವನ್ನು ಇನ್ನೂ ಪರಿಷ್ಕರಿಸಲಾಗಿಲ್ಲ ಎಂದು ಪ್ರತಿಭಟನಾಕಾರರು ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

ವೇತನ ಆಯೋಗದ ಪ್ರಕಾರ, ಆಹಾರ ಮತ್ತು ಬಟ್ಟೆಯ ಅವಶ್ಯಕತೆಗೆ ಕನಿಷ್ಠ ರೂ. 12,000, ಕಡಿಮೆಯೆಂದರೂ ಮನೆ ಬಾಡಿಗೆ ವೆಚ್ಚವೇ 4000 ರೂ. ಬೇಕಾಗುತ್ತದೆ. ಇಂಧನ, ವಿದ್ಯುತ್‌ ಮತ್ತು ಇತರ ವಿವಿಧ ವೆಚ್ಚದ ವಸ್ತುಗಳಿಗೆ ವೇತನದ ಶೇ. 20ರಷ್ಟು ನಿಗದಿಯಾಗುತ್ತದೆ. ಮಕ್ಕಳ ಶಿಕ್ಷಣ, ವೈದ್ಯಕೀಯ ಅವಶ್ಯಕತೆಗಳು, ಹಬ್ಬಗಳು/ಸಮಾರಂಭಗಳು, ಮನರಂಜನೆ, ವೃದ್ಧಾಪ್ಯ, ಮದುವೆ ಇತ್ಯಾದಿಗಳಿಗೆ ವೇತನದ ಕನಿಷ್ಠ ಶೇ.25ರಷ್ಟು ವಿನಿಯೋಗವಾಗುತ್ತದೆ ಎಂದು ತಿಳಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಎಲ್ಲ ವೆಚ್ಚಗಳನ್ನು ಒಟ್ಟುಗೂಡಿಸಿದರೆ ಕನಿಷ್ಠ 29,090 ರೂಪಾಯಿ ಮಾಸಿಕ ವೇತನವನ್ನು ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿಗಳಲ್ಲಿ ನೀಡಬೇಕಾಗುತ್ತದೆ. ಅಂದರೆ ದಿನಕ್ಕೆ 1,118 ರೂ.ಗಳನ್ನು ಪಾವತಿಸಬೇಕಾಗುತ್ತದೆ. ಇದರ ಪ್ರಕಾರ ಬಿಬಿಎಂಪಿ ಹಾಗೂ ವಿವಿಧ ನಗರ ಪಾಲಿಕೆಗಳಲ್ಲಿ ಮಾಸಿಕ ಕನಿಷ್ಠ ವೇತನ 35,000 ರೂ.ಗಳನ್ನು ನೀಡಬೇಕು. ಅಂದರೆ ದಿನಕ್ಕೆ 1,346.15 ರೂ. ಪಾವತಿಸಬೇಕು ಎಂದು ಪೌರಕಾರ್ಮಿಕರು ಆಗ್ರಹಿಸಿದರು.

ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯು ದಿನಾಂಕ 17.04.2015ರಂದು ತನ್ನ ಸಭೆಯಲ್ಲಿ ಸರ್ವಾನುಮತದಿಂದ ಕನಿಷ್ಠ ವೇತನ ಪರಿಷ್ಕರಣೆಯ ಬಾಹ್ಯ ಮಿತಿಯನ್ನು 5 ವರ್ಷದಿಂದ 3 ವರ್ಷಕ್ಕೆ ಇಳಿಸಬೇಕೆಂದು ಶಿಫಾರಸು ಮಾಡಿದೆ ಎಂಬುದನ್ನು ದಯವಿಟ್ಟು ಗಮನಿಸಬೇಕು ಎಂದು ಒತ್ತಾಯಿಸಿದರು.

ಕನಿಷ್ಠ ವೇತನವನ್ನು ನಿಗದಿಪಡಿಸಲು ಮತ್ತು ಪರಿಷ್ಕರಿಸಲು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಅಧ್ಯಯನ ಮಾಡಲು ಹೊಸ ಸಮಿತಿಯನ್ನು ರಚಿಸುವಂತೆ ಶಿಫಾರಸು ಮಾಡಲಾಗಿದೆ. ಹಾಗಾಗಿ ಈ ಶಿಫಾರಸುಗಳನ್ನು ತಕ್ಷಣವೇ ಜಾರಿಗೊಳಿಸಬೇಕು. ಮುಂದೆ ಎಲ್ಲಾ ಪರಿಶಿಷ್ಟ ಉದ್ಯೋಗಗಳಿಗೆ ಕನಿಷ್ಠ ವೇತನ ಪರಿಷ್ಕರಣೆಗಳನ್ನು ಪ್ರತಿ 3 ವರ್ಷಗಳಿಗೊಮ್ಮೆ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.


ಇದನ್ನೂ ಓದಿರಿ: ದೇಶಕ್ಕಾಗಿ ಜೈಲಿಗೆ ಹೋಗಿ ಬಂದಿದ್ದಾರೆ: ಮುಸ್ಲಿಂ ಬಾಲಕಿಯರನ್ನು ಬೆದರಿಸಿದ ಯುವಕರಿಗೆ ಬಿಜೆಪಿ ಮುಖಂಡನ ಶ್ಲಾಘನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...