HomeUncategorizedಪಾವಗಡದ ಮೇಲೆ ಸಂಸದ ನಾರಾಯಣಸ್ವಾಮಿಯ ದಿಢೀರ್ ಮಮಕಾರದ ಮರ್ಮವೇನು ಗೊತ್ತಾ?

ಪಾವಗಡದ ಮೇಲೆ ಸಂಸದ ನಾರಾಯಣಸ್ವಾಮಿಯ ದಿಢೀರ್ ಮಮಕಾರದ ಮರ್ಮವೇನು ಗೊತ್ತಾ?

- Advertisement -
- Advertisement -

ತಿಂಗಳಿಗೆ ಕನಿಷ್ಟ ನಾಲ್ಕೈದು ಬಾರಿ ಪಾವಗಡಕ್ಕೆ ಬಂದುಹೋಗುತ್ತಿರುವ ಸಂಸದ ನಾರಾಯಣಸ್ವಾಮಿ ಅವರಿಗೆ ಪಾವಗಡದ ಮೇಲೆ ದಿಢೀರ್ ಅಂತ ಪ್ರೀತಿ ಉಕ್ಕಿ ಬರಲು ಕಾರಣವೇನಿರಬಹುದು..

 

 

 

 

ಪಾವಗಡ ವಿಧಾನಸಭಾ ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಕ್ಷೇತ್ರ. ಇಲ್ಲಿ ದಲಿತರದ್ದೇ ಮೇಲುಗೈ, ಅಂದ್ರೆ ಜನಸಂಖ್ಯೆ ಯಲ್ಲಿ ಮಾತ್ರವೇ ಹೊರತು ಅಧಿಕಾರ ಅನುಭವಿಸಲು ಅಲ್ಲ. ದಲಿತ ಸಮುದಾಯದ ಅಭ್ಯರ್ಥಿಯೇ ಶಾಸಕರಾಗಿ ಆಯ್ಕೆಯಾಗಿ ಬಂದರೂ ಪರೋಕ್ಷವಾಗಿ ಆಡಳಿತ ನಡೆಸುವವರು ಬೇರೆಯವರು. ಶಾಸಕರು ಮತ್ತು ಪಕ್ಷದ ಸಂಪೂರ್ಣ ಹಿಡಿತ ರೆಡ್ಡಿಗಳು ಮತ್ತು ಲಿಂಗಾಯತರ ಕೈಯಲ್ಲಿರುತ್ತದೆ. ಶಾಸಕರು ರಬ್ಬರ್ ಸ್ಟಾಂಪ್. ಮೇಲ್ಜಾತಿ ಮುಖಂಡರ ಮಾತು ಕೇಳದ ಶಾಸಕರು ಮುಂದಿನ ಚುನಾವಣೆಯಲ್ಲಿ ಆಯ್ಕೆಯಾಗುವುದಿಲ್ಲ ಅಥವ ಪಕ್ಷದ ಹೈಕಮಾಂಡ್‍ಗೆ ಚಾಡಿ ಹೇಳಿ ವ್ಯವಸ್ಥಿತವಾಗಿ ಟಿಕೆಟ್ ತಪ್ಪಿಸುವ ಪಿತೂರಿಯೂ ನಡೆಯುತ್ತದೆ. ಆದ್ದರಿಂದ ಇಲ್ಲಿನ ಶಾಸಕರು ಮೇಲ್ವರ್ಗದ ಮುಖಂಡರ ಜೊತೆ ಹೊಂದಿಕೊಂಡೇ ಹೋಗಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ಪಾವಗಡ ತಾಲೂಕಿನಲ್ಲಿ ಮೊದಲ ಸ್ಥಾನದಲ್ಲಿ ಎಡಗೈ ಸಮುದಾಯ, ಬೋವಿ, ಲಂಬಾಣಿ ಸಮುದಾಯ, ಗೊಲ್ಲರು ಮತ್ತು ನಾಯಕರು ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಇವರ ಮತಗಳೇ ನಿರ್ಣಾಯಕ. ಯಾವ ಅಭ್ಯರ್ಥಿ ಮೂರು ಜನಾಂಗದ ಮತ ಪಡೆಯುತ್ತಾರೋ ಅವರು ಶಾಸಕರಾಗಿ ಆಯ್ಕೆಯಾಗುವುದು ಖಚಿತ. ಹೀಗಾಗಿ ಇದುವರೆಗೆ ಎಡಗೈ ಸಮುದಾಯದವರು, ಲಂಬಾಣಿ ಮತ್ತು ಬೋವಿ ಸಮುದಾಯದಿಂದ ಶಾಸಕರಾಗಿದ್ದಾರೆ. ಹಿಂದಿನಿಂದಲೂ ಒಮ್ಮೆ ಜೆಡಿಎಸ್ ಮತ್ತೊಮ್ಮೆ ಕಾಂಗ್ರೆಸ್ ಅಭ್ಯರ್ಥಿಗಳು ಆಯ್ಕೆಯಾಗಿ ವಿಧಾನಸಭೆ ಪ್ರವೇಶಿಸುತ್ತಾ ಬಂದಿದ್ದಾರೆ.

ಆದರೆ ಈಗ ಪಾವಗಡ ತಾಲೂಕು ಭಿನ್ನರಾಜಕೀಯ ಚಟುವಟಿಕೆಗಳಿಗೆ ವೇದಿಕೆ ಒದಗಿಸಿದಂತೆ ಕಂಡುಬರುತ್ತಿದೆ. 2019ರ ಮೇ ತಿಂಗಳಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಕ್ಷೇತ್ರದಿಂದ ಎ.ನಾರಾಯಣಸ್ವಾಮಿ ಸಂಸದರಾಗಿ ಆಯ್ಕೆಯಾಗಿದ್ದು ಕ್ಷೇತ್ರದಲ್ಲಿ ತಿರುಗಾಟ ಹೆಚ್ಚಾಗಿದೆ. ಪ್ರತಿ ತಿಂಗಳು ಕನಿಷ್ಟ ನಾಲ್ಕೈದು ಬಾರಿ ಪಾವಗಡಕ್ಕೆ ಬಂದು ಹೋಗುತ್ತಿರುವುದು ಸಂದೇಹಕ್ಕೆ ಕಾರಣವಾಗಿದೆ. ದಿಢೀರ್ ಪಾವಗಡ ತಾಲೂಕಿನ ಮೇಲೆ ಸಂಸದ ನಾರಾಯಣಸ್ವಾಮಿ ಅವರಿಗೆ ಪ್ರೀತಿ ಉಕ್ಕಿ ಬರಲು ಕಾರಣವೇನು? ಪದೇಪದೇ ಭೇಟಿ ಮಾಡುತ್ತಿರುವ ಉದ್ದೇಶವೇನು ಎಂಬ ಮಾತುಗಳ ಪತ್ರಕರ್ತವಲಯದಿಂದ ಕೇಳಿಬರತೊಡಗಿವೆ.

ಕಳೆದ ಆಗಸ್ಟ್‍ನಲ್ಲಿ ಪಾವಗಡದ ಹಳ್ಳಿಗಳಿಗೆ ಭೇಟಿ ನೀಡಿದ ನಾರಾಯಣಸ್ವಾಮಿ ಗಣೇಶ ಹಬ್ಬದಲ್ಲಿ ಯುವಕರಿಗೆ ಹಣ ಹಂಚಿ ಹೋಗಿರುವುದು ಗುಟ್ಟಾಗಿ ಉಳಿದಿಲ್ಲ. ಇದರಿಂದ ನಾರಾಯಣಸ್ವಾಮಿ ಬಗ್ಗೆ ಯುವಪೀಳಿಗೆ ಪ್ರೀತಿ ಬೆಳೆಸಿಕೊಂಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಬಂಧುವೊಬ್ಬರನ್ನು ಪಾವಗಡ ಮೀಸಲು ಕ್ಷೇತ್ರದಲ್ಲಿ ಸ್ಪರ್ಧೆಗಿಳಿಸಿ ಗೆಲ್ಲಿಸಿಕೊಳ್ಳುವ ತಯಾರಿ ನಡೆಸಿದ್ದಾರೆ. ಇದಕ್ಕೆ ಪೂರಕವೆಂಬ ಪ್ರಚಾರದ ತಂತ್ರಗಳನ್ನು ಬಳಕೆ ಮಾಡಿಕೊಳ್ಳುತ್ತಿರುವುದು ಎನ್ನುತ್ತವೆ ಸ್ಥಳೀಯ ಮೂಲಗಳು.

 

 

 

 

ಬೆಂಗಳೂರಿನ ಆನೇಕಲ್ ಮುನಿವೆಂಕಟಪ್ಪ ಲೇಔಟ್‍ನಲ್ಲಿ ವಾಸವಾಗಿರುವ ನಾರಾಯಣಸ್ವಾಮಿ ಕೋಟ್ಯಂತರ ರೂಪಾಯಿ ಒಡೆಯ. 2019ರ ಚುನಾವಣೆಯಲ್ಲಿ ಅವರೇ ಘೋಷಿಸಿಕೊಂಡಂತೆ ಒಂದು ಕೆ.ಜಿ. ಚಿನ್ನ, 5 ಕೆ.ಜಿ. ಬೆಳ್ಳಿ ಸೇರಿದಂತೆ 99,96,842 ರೂ ಮೌಲ್ಯದ ಚರಾಸ್ತಿ ಇದೆ. ರಿಲಯನ್ಸ್ ಇನ್ಸೂರೆನ್ಸ್‍ನಲ್ಲಿ ಇಟ್ಟಿರುವ ಮೊತ್ತವೂ ಇದರಲ್ಲಿ ಸೇರಿದೆ. ಸ್ಥಿರಾಸ್ತಿ ಮೌಲ್ಯ 8 ಕೋಟಿ, 65 ಲಕ್ಷದ 40 ಸಾವಿರ 842 ರೂಪಾಯಿ. ಹತ್ತಿರತ್ತಿರ ಒಂಬತ್ತು ಕೋಟಿಯ ಕುಳ. ಈ ಕಾರಣಕ್ಕಾಗಿಯೆ ನೀರಿನಂತೆ ಹಣ ಖರ್ಚು ಮಾಡುತ್ತಾರೆಂಬ ಹೆಸರೂ ಇದೆ.

ಪಾವಗಡದಲ್ಲಿ ನಡೆಯುವ ಪ್ರತಿ ಮೀಟಿಂಗ್‍ಗೂ ಬರುತ್ತಾರೆ. ಅತ್ಯಂತ ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳುತ್ತಾರೆ. ಇವರು ಹೀಗೆ ಚಟುವಟಿಕೆಯಿಂದ ಓಡಾಡುವುದು ನೋಡಿದರೆ ಮುಂದಿನ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎನ್ನುತ್ತಾರೆ ಸ್ಥಳೀಯ ಪತ್ರಕರ್ತರು. ನಾರಾಯಣಸ್ವಾಮಿ ಯುವಕರನ್ನು ಸಂಘಟಿಸುತ್ತಿರುವುದು ಕಾಂಗ್ರೆಸ್ ಮುಖಂಡ ಹಾಲಿ ಶಾಸಕ ವೆಂಕಟರವಣಪ್ಪ ಮತ್ತು ಜೆಡಿಎಸ್ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಅವರಲ್ಲಿ ತಳಮಳ ಶುರುವಾಗಿದೆ.

ಪ್ರಯೋಗಗಳ ಮೇಲೆ ಪ್ರಯೋಗ ನಡೆಸುತ್ತಿರುವ ಬಿಜೆಪಿ ಇಲ್ಲಿ ಖಾತೆ ತೆರೆಯಲು ಕಸರತ್ತು ನಡೆಸುತ್ತಿದೆ. ಮೊದಲ ಬಾರಿಗೆ ಬಿಜೆಪಿ ಲಂಬಾಣಿ ಸಮುದಾಯದ ಸೋಮ್ಲಾನಾಯಕ್ ಅವರನ್ನು ಕಣಕ್ಕೆ ಇಳಿಸಿತು. ಆದರೆ ಸೋಲು ಕಂಡಿತು. ಮತ್ತೆ ಕೃಷ್ಣಾನಾಯಕ್ ಅವರನ್ನು ಕಣಕ್ಕಿಳಿಸಿದಾಗಲೂ ಸೋತುಸುಣ್ಣವಾಯಿತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೋವಿ ಸಮುದಾಯದ ಬಲರಾಂ ಅವರನ್ನು ಕಣಕ್ಕಿಳಿಸಿದರೂ ಪ್ರಯೋಜನವಾಗಲಿಲ್ಲ. ಆದರೆ ಓಟಿನ ಪ್ರಮಾಣ ವರ್ಷದಿಂದ ವರ್ಷಕ್ಕೆ ಹೆಚ್ಚಾಗಿರುವುದು ಕಂಡುಬಂದಿದೆ.

ಮತ ಪ್ರಮಾಣ ಹೆಚ್ಚಾಗಲು ಕಾರಣವೂ ಇದೆ. ಆರ್.ಎಸ್.ಎಸ್. ಭಜರಂಗದಳ ಸಂಘಟನೆಗಳು ಒಳಗೊಳಗೆ ಕೆಲಸ ಮಾಡುತ್ತಿವೆ. ಈಗ ನಾರಾಯಣಸ್ವಾಮಿ ಪಾವಗಡಕ್ಕೆ ಬಂದಿರುವುದು ಬಿಜೆಪಿ ಬಲಗೊಳ್ಳಲು ಕಾರಣವಾಗಲಿದೆ. ಪರಿಶಿಷ್ಟ ಸಮುದಾಯದ ಮತಗಳನ್ನು ಹಿಡಿಗಂಟಾಗಿ ಇಟ್ಟುಕೊಂಡರೆ ಕಮಲ ಅರಳುವುದು ಖಚಿತ ಎಂದು ಭಾವಿಸಿರುವ ಸಂಸದರು ಪಾವಗಡ ಕ್ಷೇತ್ರಕ್ಕೆ ಪದೇಪದೇ ಭೇಟಿ ನೀಡುವುದು ಮಾಡುತ್ತಿದ್ದಾರೆ.
ಈ ಹಿಂದೆ ಸದ್ದುಗದ್ದಲವಿಲ್ಲದೆ ಯಾವುದೇ ಪ್ರಚಾರ ಇಲ್ಲದೇ ಕೆಲಸದಲ್ಲಿ ತೊಡಗಿದ್ದ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಮಾಜಿ ಸಚಿವ ವೆಂಕಟರವಣಪ್ಪ, ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ, ಹಾಲಿ ಸಂಸದರ ಅಬ್ಬರದ ಪ್ರಚಾರವನ್ನು ನೋಡಿ ತಳಮಳಗೊಂಡಿರುವುದಂತೂ ಸತ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...