HomeUncategorizedಪಾವಗಡದ ಮೇಲೆ ಸಂಸದ ನಾರಾಯಣಸ್ವಾಮಿಯ ದಿಢೀರ್ ಮಮಕಾರದ ಮರ್ಮವೇನು ಗೊತ್ತಾ?

ಪಾವಗಡದ ಮೇಲೆ ಸಂಸದ ನಾರಾಯಣಸ್ವಾಮಿಯ ದಿಢೀರ್ ಮಮಕಾರದ ಮರ್ಮವೇನು ಗೊತ್ತಾ?

- Advertisement -
- Advertisement -

ತಿಂಗಳಿಗೆ ಕನಿಷ್ಟ ನಾಲ್ಕೈದು ಬಾರಿ ಪಾವಗಡಕ್ಕೆ ಬಂದುಹೋಗುತ್ತಿರುವ ಸಂಸದ ನಾರಾಯಣಸ್ವಾಮಿ ಅವರಿಗೆ ಪಾವಗಡದ ಮೇಲೆ ದಿಢೀರ್ ಅಂತ ಪ್ರೀತಿ ಉಕ್ಕಿ ಬರಲು ಕಾರಣವೇನಿರಬಹುದು..

 

 

 

 

ಪಾವಗಡ ವಿಧಾನಸಭಾ ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಕ್ಷೇತ್ರ. ಇಲ್ಲಿ ದಲಿತರದ್ದೇ ಮೇಲುಗೈ, ಅಂದ್ರೆ ಜನಸಂಖ್ಯೆ ಯಲ್ಲಿ ಮಾತ್ರವೇ ಹೊರತು ಅಧಿಕಾರ ಅನುಭವಿಸಲು ಅಲ್ಲ. ದಲಿತ ಸಮುದಾಯದ ಅಭ್ಯರ್ಥಿಯೇ ಶಾಸಕರಾಗಿ ಆಯ್ಕೆಯಾಗಿ ಬಂದರೂ ಪರೋಕ್ಷವಾಗಿ ಆಡಳಿತ ನಡೆಸುವವರು ಬೇರೆಯವರು. ಶಾಸಕರು ಮತ್ತು ಪಕ್ಷದ ಸಂಪೂರ್ಣ ಹಿಡಿತ ರೆಡ್ಡಿಗಳು ಮತ್ತು ಲಿಂಗಾಯತರ ಕೈಯಲ್ಲಿರುತ್ತದೆ. ಶಾಸಕರು ರಬ್ಬರ್ ಸ್ಟಾಂಪ್. ಮೇಲ್ಜಾತಿ ಮುಖಂಡರ ಮಾತು ಕೇಳದ ಶಾಸಕರು ಮುಂದಿನ ಚುನಾವಣೆಯಲ್ಲಿ ಆಯ್ಕೆಯಾಗುವುದಿಲ್ಲ ಅಥವ ಪಕ್ಷದ ಹೈಕಮಾಂಡ್‍ಗೆ ಚಾಡಿ ಹೇಳಿ ವ್ಯವಸ್ಥಿತವಾಗಿ ಟಿಕೆಟ್ ತಪ್ಪಿಸುವ ಪಿತೂರಿಯೂ ನಡೆಯುತ್ತದೆ. ಆದ್ದರಿಂದ ಇಲ್ಲಿನ ಶಾಸಕರು ಮೇಲ್ವರ್ಗದ ಮುಖಂಡರ ಜೊತೆ ಹೊಂದಿಕೊಂಡೇ ಹೋಗಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ಪಾವಗಡ ತಾಲೂಕಿನಲ್ಲಿ ಮೊದಲ ಸ್ಥಾನದಲ್ಲಿ ಎಡಗೈ ಸಮುದಾಯ, ಬೋವಿ, ಲಂಬಾಣಿ ಸಮುದಾಯ, ಗೊಲ್ಲರು ಮತ್ತು ನಾಯಕರು ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಇವರ ಮತಗಳೇ ನಿರ್ಣಾಯಕ. ಯಾವ ಅಭ್ಯರ್ಥಿ ಮೂರು ಜನಾಂಗದ ಮತ ಪಡೆಯುತ್ತಾರೋ ಅವರು ಶಾಸಕರಾಗಿ ಆಯ್ಕೆಯಾಗುವುದು ಖಚಿತ. ಹೀಗಾಗಿ ಇದುವರೆಗೆ ಎಡಗೈ ಸಮುದಾಯದವರು, ಲಂಬಾಣಿ ಮತ್ತು ಬೋವಿ ಸಮುದಾಯದಿಂದ ಶಾಸಕರಾಗಿದ್ದಾರೆ. ಹಿಂದಿನಿಂದಲೂ ಒಮ್ಮೆ ಜೆಡಿಎಸ್ ಮತ್ತೊಮ್ಮೆ ಕಾಂಗ್ರೆಸ್ ಅಭ್ಯರ್ಥಿಗಳು ಆಯ್ಕೆಯಾಗಿ ವಿಧಾನಸಭೆ ಪ್ರವೇಶಿಸುತ್ತಾ ಬಂದಿದ್ದಾರೆ.

ಆದರೆ ಈಗ ಪಾವಗಡ ತಾಲೂಕು ಭಿನ್ನರಾಜಕೀಯ ಚಟುವಟಿಕೆಗಳಿಗೆ ವೇದಿಕೆ ಒದಗಿಸಿದಂತೆ ಕಂಡುಬರುತ್ತಿದೆ. 2019ರ ಮೇ ತಿಂಗಳಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಕ್ಷೇತ್ರದಿಂದ ಎ.ನಾರಾಯಣಸ್ವಾಮಿ ಸಂಸದರಾಗಿ ಆಯ್ಕೆಯಾಗಿದ್ದು ಕ್ಷೇತ್ರದಲ್ಲಿ ತಿರುಗಾಟ ಹೆಚ್ಚಾಗಿದೆ. ಪ್ರತಿ ತಿಂಗಳು ಕನಿಷ್ಟ ನಾಲ್ಕೈದು ಬಾರಿ ಪಾವಗಡಕ್ಕೆ ಬಂದು ಹೋಗುತ್ತಿರುವುದು ಸಂದೇಹಕ್ಕೆ ಕಾರಣವಾಗಿದೆ. ದಿಢೀರ್ ಪಾವಗಡ ತಾಲೂಕಿನ ಮೇಲೆ ಸಂಸದ ನಾರಾಯಣಸ್ವಾಮಿ ಅವರಿಗೆ ಪ್ರೀತಿ ಉಕ್ಕಿ ಬರಲು ಕಾರಣವೇನು? ಪದೇಪದೇ ಭೇಟಿ ಮಾಡುತ್ತಿರುವ ಉದ್ದೇಶವೇನು ಎಂಬ ಮಾತುಗಳ ಪತ್ರಕರ್ತವಲಯದಿಂದ ಕೇಳಿಬರತೊಡಗಿವೆ.

ಕಳೆದ ಆಗಸ್ಟ್‍ನಲ್ಲಿ ಪಾವಗಡದ ಹಳ್ಳಿಗಳಿಗೆ ಭೇಟಿ ನೀಡಿದ ನಾರಾಯಣಸ್ವಾಮಿ ಗಣೇಶ ಹಬ್ಬದಲ್ಲಿ ಯುವಕರಿಗೆ ಹಣ ಹಂಚಿ ಹೋಗಿರುವುದು ಗುಟ್ಟಾಗಿ ಉಳಿದಿಲ್ಲ. ಇದರಿಂದ ನಾರಾಯಣಸ್ವಾಮಿ ಬಗ್ಗೆ ಯುವಪೀಳಿಗೆ ಪ್ರೀತಿ ಬೆಳೆಸಿಕೊಂಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಬಂಧುವೊಬ್ಬರನ್ನು ಪಾವಗಡ ಮೀಸಲು ಕ್ಷೇತ್ರದಲ್ಲಿ ಸ್ಪರ್ಧೆಗಿಳಿಸಿ ಗೆಲ್ಲಿಸಿಕೊಳ್ಳುವ ತಯಾರಿ ನಡೆಸಿದ್ದಾರೆ. ಇದಕ್ಕೆ ಪೂರಕವೆಂಬ ಪ್ರಚಾರದ ತಂತ್ರಗಳನ್ನು ಬಳಕೆ ಮಾಡಿಕೊಳ್ಳುತ್ತಿರುವುದು ಎನ್ನುತ್ತವೆ ಸ್ಥಳೀಯ ಮೂಲಗಳು.

 

 

 

 

ಬೆಂಗಳೂರಿನ ಆನೇಕಲ್ ಮುನಿವೆಂಕಟಪ್ಪ ಲೇಔಟ್‍ನಲ್ಲಿ ವಾಸವಾಗಿರುವ ನಾರಾಯಣಸ್ವಾಮಿ ಕೋಟ್ಯಂತರ ರೂಪಾಯಿ ಒಡೆಯ. 2019ರ ಚುನಾವಣೆಯಲ್ಲಿ ಅವರೇ ಘೋಷಿಸಿಕೊಂಡಂತೆ ಒಂದು ಕೆ.ಜಿ. ಚಿನ್ನ, 5 ಕೆ.ಜಿ. ಬೆಳ್ಳಿ ಸೇರಿದಂತೆ 99,96,842 ರೂ ಮೌಲ್ಯದ ಚರಾಸ್ತಿ ಇದೆ. ರಿಲಯನ್ಸ್ ಇನ್ಸೂರೆನ್ಸ್‍ನಲ್ಲಿ ಇಟ್ಟಿರುವ ಮೊತ್ತವೂ ಇದರಲ್ಲಿ ಸೇರಿದೆ. ಸ್ಥಿರಾಸ್ತಿ ಮೌಲ್ಯ 8 ಕೋಟಿ, 65 ಲಕ್ಷದ 40 ಸಾವಿರ 842 ರೂಪಾಯಿ. ಹತ್ತಿರತ್ತಿರ ಒಂಬತ್ತು ಕೋಟಿಯ ಕುಳ. ಈ ಕಾರಣಕ್ಕಾಗಿಯೆ ನೀರಿನಂತೆ ಹಣ ಖರ್ಚು ಮಾಡುತ್ತಾರೆಂಬ ಹೆಸರೂ ಇದೆ.

ಪಾವಗಡದಲ್ಲಿ ನಡೆಯುವ ಪ್ರತಿ ಮೀಟಿಂಗ್‍ಗೂ ಬರುತ್ತಾರೆ. ಅತ್ಯಂತ ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳುತ್ತಾರೆ. ಇವರು ಹೀಗೆ ಚಟುವಟಿಕೆಯಿಂದ ಓಡಾಡುವುದು ನೋಡಿದರೆ ಮುಂದಿನ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎನ್ನುತ್ತಾರೆ ಸ್ಥಳೀಯ ಪತ್ರಕರ್ತರು. ನಾರಾಯಣಸ್ವಾಮಿ ಯುವಕರನ್ನು ಸಂಘಟಿಸುತ್ತಿರುವುದು ಕಾಂಗ್ರೆಸ್ ಮುಖಂಡ ಹಾಲಿ ಶಾಸಕ ವೆಂಕಟರವಣಪ್ಪ ಮತ್ತು ಜೆಡಿಎಸ್ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಅವರಲ್ಲಿ ತಳಮಳ ಶುರುವಾಗಿದೆ.

ಪ್ರಯೋಗಗಳ ಮೇಲೆ ಪ್ರಯೋಗ ನಡೆಸುತ್ತಿರುವ ಬಿಜೆಪಿ ಇಲ್ಲಿ ಖಾತೆ ತೆರೆಯಲು ಕಸರತ್ತು ನಡೆಸುತ್ತಿದೆ. ಮೊದಲ ಬಾರಿಗೆ ಬಿಜೆಪಿ ಲಂಬಾಣಿ ಸಮುದಾಯದ ಸೋಮ್ಲಾನಾಯಕ್ ಅವರನ್ನು ಕಣಕ್ಕೆ ಇಳಿಸಿತು. ಆದರೆ ಸೋಲು ಕಂಡಿತು. ಮತ್ತೆ ಕೃಷ್ಣಾನಾಯಕ್ ಅವರನ್ನು ಕಣಕ್ಕಿಳಿಸಿದಾಗಲೂ ಸೋತುಸುಣ್ಣವಾಯಿತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೋವಿ ಸಮುದಾಯದ ಬಲರಾಂ ಅವರನ್ನು ಕಣಕ್ಕಿಳಿಸಿದರೂ ಪ್ರಯೋಜನವಾಗಲಿಲ್ಲ. ಆದರೆ ಓಟಿನ ಪ್ರಮಾಣ ವರ್ಷದಿಂದ ವರ್ಷಕ್ಕೆ ಹೆಚ್ಚಾಗಿರುವುದು ಕಂಡುಬಂದಿದೆ.

ಮತ ಪ್ರಮಾಣ ಹೆಚ್ಚಾಗಲು ಕಾರಣವೂ ಇದೆ. ಆರ್.ಎಸ್.ಎಸ್. ಭಜರಂಗದಳ ಸಂಘಟನೆಗಳು ಒಳಗೊಳಗೆ ಕೆಲಸ ಮಾಡುತ್ತಿವೆ. ಈಗ ನಾರಾಯಣಸ್ವಾಮಿ ಪಾವಗಡಕ್ಕೆ ಬಂದಿರುವುದು ಬಿಜೆಪಿ ಬಲಗೊಳ್ಳಲು ಕಾರಣವಾಗಲಿದೆ. ಪರಿಶಿಷ್ಟ ಸಮುದಾಯದ ಮತಗಳನ್ನು ಹಿಡಿಗಂಟಾಗಿ ಇಟ್ಟುಕೊಂಡರೆ ಕಮಲ ಅರಳುವುದು ಖಚಿತ ಎಂದು ಭಾವಿಸಿರುವ ಸಂಸದರು ಪಾವಗಡ ಕ್ಷೇತ್ರಕ್ಕೆ ಪದೇಪದೇ ಭೇಟಿ ನೀಡುವುದು ಮಾಡುತ್ತಿದ್ದಾರೆ.
ಈ ಹಿಂದೆ ಸದ್ದುಗದ್ದಲವಿಲ್ಲದೆ ಯಾವುದೇ ಪ್ರಚಾರ ಇಲ್ಲದೇ ಕೆಲಸದಲ್ಲಿ ತೊಡಗಿದ್ದ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಮಾಜಿ ಸಚಿವ ವೆಂಕಟರವಣಪ್ಪ, ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ, ಹಾಲಿ ಸಂಸದರ ಅಬ್ಬರದ ಪ್ರಚಾರವನ್ನು ನೋಡಿ ತಳಮಳಗೊಂಡಿರುವುದಂತೂ ಸತ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...