HomeUncategorizedಪಾವಗಡದ ಮೇಲೆ ಸಂಸದ ನಾರಾಯಣಸ್ವಾಮಿಯ ದಿಢೀರ್ ಮಮಕಾರದ ಮರ್ಮವೇನು ಗೊತ್ತಾ?

ಪಾವಗಡದ ಮೇಲೆ ಸಂಸದ ನಾರಾಯಣಸ್ವಾಮಿಯ ದಿಢೀರ್ ಮಮಕಾರದ ಮರ್ಮವೇನು ಗೊತ್ತಾ?

- Advertisement -
- Advertisement -

ತಿಂಗಳಿಗೆ ಕನಿಷ್ಟ ನಾಲ್ಕೈದು ಬಾರಿ ಪಾವಗಡಕ್ಕೆ ಬಂದುಹೋಗುತ್ತಿರುವ ಸಂಸದ ನಾರಾಯಣಸ್ವಾಮಿ ಅವರಿಗೆ ಪಾವಗಡದ ಮೇಲೆ ದಿಢೀರ್ ಅಂತ ಪ್ರೀತಿ ಉಕ್ಕಿ ಬರಲು ಕಾರಣವೇನಿರಬಹುದು..

 

 

 

 

ಪಾವಗಡ ವಿಧಾನಸಭಾ ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಕ್ಷೇತ್ರ. ಇಲ್ಲಿ ದಲಿತರದ್ದೇ ಮೇಲುಗೈ, ಅಂದ್ರೆ ಜನಸಂಖ್ಯೆ ಯಲ್ಲಿ ಮಾತ್ರವೇ ಹೊರತು ಅಧಿಕಾರ ಅನುಭವಿಸಲು ಅಲ್ಲ. ದಲಿತ ಸಮುದಾಯದ ಅಭ್ಯರ್ಥಿಯೇ ಶಾಸಕರಾಗಿ ಆಯ್ಕೆಯಾಗಿ ಬಂದರೂ ಪರೋಕ್ಷವಾಗಿ ಆಡಳಿತ ನಡೆಸುವವರು ಬೇರೆಯವರು. ಶಾಸಕರು ಮತ್ತು ಪಕ್ಷದ ಸಂಪೂರ್ಣ ಹಿಡಿತ ರೆಡ್ಡಿಗಳು ಮತ್ತು ಲಿಂಗಾಯತರ ಕೈಯಲ್ಲಿರುತ್ತದೆ. ಶಾಸಕರು ರಬ್ಬರ್ ಸ್ಟಾಂಪ್. ಮೇಲ್ಜಾತಿ ಮುಖಂಡರ ಮಾತು ಕೇಳದ ಶಾಸಕರು ಮುಂದಿನ ಚುನಾವಣೆಯಲ್ಲಿ ಆಯ್ಕೆಯಾಗುವುದಿಲ್ಲ ಅಥವ ಪಕ್ಷದ ಹೈಕಮಾಂಡ್‍ಗೆ ಚಾಡಿ ಹೇಳಿ ವ್ಯವಸ್ಥಿತವಾಗಿ ಟಿಕೆಟ್ ತಪ್ಪಿಸುವ ಪಿತೂರಿಯೂ ನಡೆಯುತ್ತದೆ. ಆದ್ದರಿಂದ ಇಲ್ಲಿನ ಶಾಸಕರು ಮೇಲ್ವರ್ಗದ ಮುಖಂಡರ ಜೊತೆ ಹೊಂದಿಕೊಂಡೇ ಹೋಗಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ಪಾವಗಡ ತಾಲೂಕಿನಲ್ಲಿ ಮೊದಲ ಸ್ಥಾನದಲ್ಲಿ ಎಡಗೈ ಸಮುದಾಯ, ಬೋವಿ, ಲಂಬಾಣಿ ಸಮುದಾಯ, ಗೊಲ್ಲರು ಮತ್ತು ನಾಯಕರು ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಇವರ ಮತಗಳೇ ನಿರ್ಣಾಯಕ. ಯಾವ ಅಭ್ಯರ್ಥಿ ಮೂರು ಜನಾಂಗದ ಮತ ಪಡೆಯುತ್ತಾರೋ ಅವರು ಶಾಸಕರಾಗಿ ಆಯ್ಕೆಯಾಗುವುದು ಖಚಿತ. ಹೀಗಾಗಿ ಇದುವರೆಗೆ ಎಡಗೈ ಸಮುದಾಯದವರು, ಲಂಬಾಣಿ ಮತ್ತು ಬೋವಿ ಸಮುದಾಯದಿಂದ ಶಾಸಕರಾಗಿದ್ದಾರೆ. ಹಿಂದಿನಿಂದಲೂ ಒಮ್ಮೆ ಜೆಡಿಎಸ್ ಮತ್ತೊಮ್ಮೆ ಕಾಂಗ್ರೆಸ್ ಅಭ್ಯರ್ಥಿಗಳು ಆಯ್ಕೆಯಾಗಿ ವಿಧಾನಸಭೆ ಪ್ರವೇಶಿಸುತ್ತಾ ಬಂದಿದ್ದಾರೆ.

ಆದರೆ ಈಗ ಪಾವಗಡ ತಾಲೂಕು ಭಿನ್ನರಾಜಕೀಯ ಚಟುವಟಿಕೆಗಳಿಗೆ ವೇದಿಕೆ ಒದಗಿಸಿದಂತೆ ಕಂಡುಬರುತ್ತಿದೆ. 2019ರ ಮೇ ತಿಂಗಳಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಕ್ಷೇತ್ರದಿಂದ ಎ.ನಾರಾಯಣಸ್ವಾಮಿ ಸಂಸದರಾಗಿ ಆಯ್ಕೆಯಾಗಿದ್ದು ಕ್ಷೇತ್ರದಲ್ಲಿ ತಿರುಗಾಟ ಹೆಚ್ಚಾಗಿದೆ. ಪ್ರತಿ ತಿಂಗಳು ಕನಿಷ್ಟ ನಾಲ್ಕೈದು ಬಾರಿ ಪಾವಗಡಕ್ಕೆ ಬಂದು ಹೋಗುತ್ತಿರುವುದು ಸಂದೇಹಕ್ಕೆ ಕಾರಣವಾಗಿದೆ. ದಿಢೀರ್ ಪಾವಗಡ ತಾಲೂಕಿನ ಮೇಲೆ ಸಂಸದ ನಾರಾಯಣಸ್ವಾಮಿ ಅವರಿಗೆ ಪ್ರೀತಿ ಉಕ್ಕಿ ಬರಲು ಕಾರಣವೇನು? ಪದೇಪದೇ ಭೇಟಿ ಮಾಡುತ್ತಿರುವ ಉದ್ದೇಶವೇನು ಎಂಬ ಮಾತುಗಳ ಪತ್ರಕರ್ತವಲಯದಿಂದ ಕೇಳಿಬರತೊಡಗಿವೆ.

ಕಳೆದ ಆಗಸ್ಟ್‍ನಲ್ಲಿ ಪಾವಗಡದ ಹಳ್ಳಿಗಳಿಗೆ ಭೇಟಿ ನೀಡಿದ ನಾರಾಯಣಸ್ವಾಮಿ ಗಣೇಶ ಹಬ್ಬದಲ್ಲಿ ಯುವಕರಿಗೆ ಹಣ ಹಂಚಿ ಹೋಗಿರುವುದು ಗುಟ್ಟಾಗಿ ಉಳಿದಿಲ್ಲ. ಇದರಿಂದ ನಾರಾಯಣಸ್ವಾಮಿ ಬಗ್ಗೆ ಯುವಪೀಳಿಗೆ ಪ್ರೀತಿ ಬೆಳೆಸಿಕೊಂಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಬಂಧುವೊಬ್ಬರನ್ನು ಪಾವಗಡ ಮೀಸಲು ಕ್ಷೇತ್ರದಲ್ಲಿ ಸ್ಪರ್ಧೆಗಿಳಿಸಿ ಗೆಲ್ಲಿಸಿಕೊಳ್ಳುವ ತಯಾರಿ ನಡೆಸಿದ್ದಾರೆ. ಇದಕ್ಕೆ ಪೂರಕವೆಂಬ ಪ್ರಚಾರದ ತಂತ್ರಗಳನ್ನು ಬಳಕೆ ಮಾಡಿಕೊಳ್ಳುತ್ತಿರುವುದು ಎನ್ನುತ್ತವೆ ಸ್ಥಳೀಯ ಮೂಲಗಳು.

 

 

 

 

ಬೆಂಗಳೂರಿನ ಆನೇಕಲ್ ಮುನಿವೆಂಕಟಪ್ಪ ಲೇಔಟ್‍ನಲ್ಲಿ ವಾಸವಾಗಿರುವ ನಾರಾಯಣಸ್ವಾಮಿ ಕೋಟ್ಯಂತರ ರೂಪಾಯಿ ಒಡೆಯ. 2019ರ ಚುನಾವಣೆಯಲ್ಲಿ ಅವರೇ ಘೋಷಿಸಿಕೊಂಡಂತೆ ಒಂದು ಕೆ.ಜಿ. ಚಿನ್ನ, 5 ಕೆ.ಜಿ. ಬೆಳ್ಳಿ ಸೇರಿದಂತೆ 99,96,842 ರೂ ಮೌಲ್ಯದ ಚರಾಸ್ತಿ ಇದೆ. ರಿಲಯನ್ಸ್ ಇನ್ಸೂರೆನ್ಸ್‍ನಲ್ಲಿ ಇಟ್ಟಿರುವ ಮೊತ್ತವೂ ಇದರಲ್ಲಿ ಸೇರಿದೆ. ಸ್ಥಿರಾಸ್ತಿ ಮೌಲ್ಯ 8 ಕೋಟಿ, 65 ಲಕ್ಷದ 40 ಸಾವಿರ 842 ರೂಪಾಯಿ. ಹತ್ತಿರತ್ತಿರ ಒಂಬತ್ತು ಕೋಟಿಯ ಕುಳ. ಈ ಕಾರಣಕ್ಕಾಗಿಯೆ ನೀರಿನಂತೆ ಹಣ ಖರ್ಚು ಮಾಡುತ್ತಾರೆಂಬ ಹೆಸರೂ ಇದೆ.

ಪಾವಗಡದಲ್ಲಿ ನಡೆಯುವ ಪ್ರತಿ ಮೀಟಿಂಗ್‍ಗೂ ಬರುತ್ತಾರೆ. ಅತ್ಯಂತ ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳುತ್ತಾರೆ. ಇವರು ಹೀಗೆ ಚಟುವಟಿಕೆಯಿಂದ ಓಡಾಡುವುದು ನೋಡಿದರೆ ಮುಂದಿನ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎನ್ನುತ್ತಾರೆ ಸ್ಥಳೀಯ ಪತ್ರಕರ್ತರು. ನಾರಾಯಣಸ್ವಾಮಿ ಯುವಕರನ್ನು ಸಂಘಟಿಸುತ್ತಿರುವುದು ಕಾಂಗ್ರೆಸ್ ಮುಖಂಡ ಹಾಲಿ ಶಾಸಕ ವೆಂಕಟರವಣಪ್ಪ ಮತ್ತು ಜೆಡಿಎಸ್ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಅವರಲ್ಲಿ ತಳಮಳ ಶುರುವಾಗಿದೆ.

ಪ್ರಯೋಗಗಳ ಮೇಲೆ ಪ್ರಯೋಗ ನಡೆಸುತ್ತಿರುವ ಬಿಜೆಪಿ ಇಲ್ಲಿ ಖಾತೆ ತೆರೆಯಲು ಕಸರತ್ತು ನಡೆಸುತ್ತಿದೆ. ಮೊದಲ ಬಾರಿಗೆ ಬಿಜೆಪಿ ಲಂಬಾಣಿ ಸಮುದಾಯದ ಸೋಮ್ಲಾನಾಯಕ್ ಅವರನ್ನು ಕಣಕ್ಕೆ ಇಳಿಸಿತು. ಆದರೆ ಸೋಲು ಕಂಡಿತು. ಮತ್ತೆ ಕೃಷ್ಣಾನಾಯಕ್ ಅವರನ್ನು ಕಣಕ್ಕಿಳಿಸಿದಾಗಲೂ ಸೋತುಸುಣ್ಣವಾಯಿತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೋವಿ ಸಮುದಾಯದ ಬಲರಾಂ ಅವರನ್ನು ಕಣಕ್ಕಿಳಿಸಿದರೂ ಪ್ರಯೋಜನವಾಗಲಿಲ್ಲ. ಆದರೆ ಓಟಿನ ಪ್ರಮಾಣ ವರ್ಷದಿಂದ ವರ್ಷಕ್ಕೆ ಹೆಚ್ಚಾಗಿರುವುದು ಕಂಡುಬಂದಿದೆ.

ಮತ ಪ್ರಮಾಣ ಹೆಚ್ಚಾಗಲು ಕಾರಣವೂ ಇದೆ. ಆರ್.ಎಸ್.ಎಸ್. ಭಜರಂಗದಳ ಸಂಘಟನೆಗಳು ಒಳಗೊಳಗೆ ಕೆಲಸ ಮಾಡುತ್ತಿವೆ. ಈಗ ನಾರಾಯಣಸ್ವಾಮಿ ಪಾವಗಡಕ್ಕೆ ಬಂದಿರುವುದು ಬಿಜೆಪಿ ಬಲಗೊಳ್ಳಲು ಕಾರಣವಾಗಲಿದೆ. ಪರಿಶಿಷ್ಟ ಸಮುದಾಯದ ಮತಗಳನ್ನು ಹಿಡಿಗಂಟಾಗಿ ಇಟ್ಟುಕೊಂಡರೆ ಕಮಲ ಅರಳುವುದು ಖಚಿತ ಎಂದು ಭಾವಿಸಿರುವ ಸಂಸದರು ಪಾವಗಡ ಕ್ಷೇತ್ರಕ್ಕೆ ಪದೇಪದೇ ಭೇಟಿ ನೀಡುವುದು ಮಾಡುತ್ತಿದ್ದಾರೆ.
ಈ ಹಿಂದೆ ಸದ್ದುಗದ್ದಲವಿಲ್ಲದೆ ಯಾವುದೇ ಪ್ರಚಾರ ಇಲ್ಲದೇ ಕೆಲಸದಲ್ಲಿ ತೊಡಗಿದ್ದ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಮಾಜಿ ಸಚಿವ ವೆಂಕಟರವಣಪ್ಪ, ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ, ಹಾಲಿ ಸಂಸದರ ಅಬ್ಬರದ ಪ್ರಚಾರವನ್ನು ನೋಡಿ ತಳಮಳಗೊಂಡಿರುವುದಂತೂ ಸತ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....